Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ

ರಿಪ್ಪನ್ ಪೇಟೆ | ಕಾಡಾನೆ ದಾಳಿ ಪ್ರದೇಶಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ – ಸೂಕ್ತ ಪರಿಹಾರದ ಭರವಸೆ ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ವಿಷಯ ತಿಳಿಯುತಿದ್ದಂತೆ ಹೊಸನಗರ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಸೂಕ್ತ ಪರಿಹಾರಕ್ಕೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ…

Read More

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…

Read More

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಭರತ್ ರಾಜ್ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದೊರೆಯುತ್ತಿರುವ ಆರೋಗ್ಯ ಸೇವೆಗಳ ಸ್ಥಿತಿಯನ್ನು ಪರಿಶೀಲಿಸಲು ಹೊಸನಗರ ತಾಲೂಕು ತಹಶೀಲ್ದಾರ್ ಭರತ್ ರಾಜ್ ಇಂದು ದಿಡೀರ್ ಭೇಟಿ ನೀಡಿದರು. ತಹಶೀಲ್ದಾರ್ ಮೊದಲು ಆಸ್ಪತ್ರೆಗೆ ಬಂದಿದ್ದ ಹೊರ ರೋಗಿಗಳೊಂದಿಗೆ ಮಾತನಾಡಿ ಚಿಕಿತ್ಸೆ, ಔಷಧಿ ಲಭ್ಯತೆ ಕುರಿತಂತೆ ಮಾಹಿತಿ ಪಡೆದರು. ನಂತರ ವೈದ್ಯಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಆಸ್ಪತ್ರೆಯ ದಿನ ನಿತ್ಯದ ಕಾರ್ಯವೈಖರಿ ಹಾಗೂ…

Read More

ಉರುಳಿಗೆ ಸಿಲುಕಿ ಚಿರತೆ ಸಾವು

ಉರುಳಿಗೆ ಸಿಲುಕಿ ಚಿರತೆ ಸಾವು ಶಿವಮೊಗ್ಗ: ಅರಣ್ಯದ ಅಂಚಿನಲ್ಲಿ ಅಕ್ರಮವಾಗಿ ಹಾಕಲಾಗಿದ್ದ ಪ್ರಾಣಿಹಿಡಿಯುವ ಉರುಳಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಶಿರಾಳಕೊಪ್ಪ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ತಾಳಗುಂದ ರಾಜ್ಯ ಅರಣ್ಯ ಪ್ರದೇಶಕ್ಕೆ ಸೇರುವ ಖಾಸಗಿ ಜಮೀನಿನ ಅಂಚಿನಲ್ಲಿರುವ ಕಾಡಿನ ದಾರಿಯಲ್ಲಿ ಈ ಉರುಳು ಅಳವಡಿಸಲಾಗಿದೆ ಎಂದು ಅರಣ್ಯ ಇಲಾಖೆ ಪ್ರಾಥಮಿಕ ಅಂದಾಜು ವ್ಯಕ್ತಪಡಿಸಿದೆ. ಕೆಲವು ದಿನಗಳಿಂದ ದುರ್ವಾಸನೆ ಕಾಣುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲನೆ ನಡೆಸಿದಾಗ, ಉರುಳಿಗೆ ಸಿಲುಕಿ ಕೊಳೆತ ಸ್ಥಿತಿಯಲ್ಲಿ ಮಲಗಿದ್ದ ಚಿರತೆಯ ದೇಹ ಕಣ್ಣಿಗೆ ಬಿದ್ದಿದೆ….

Read More

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ರಿಪ್ಪನ್ ಪೇಟೆ: ಪಟ್ಟಣದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಡಿಸೆಂಬರ್ 7 ರಿಂದ 14 ವರೆಗೆ ಗೃಹ ಸಂಪರ್ಕ ಅಭಿಯಾನದ ನಿಮಿತ್ತ ಹೊಸನಗರ ತಾಲೂಕಿನ ಪ್ರತಿ ಮನೆ ಮನೆಗೆ ಕಾರ್ಯಕರ್ತರು ಭೇಟಿ ನೀಡಿ ಆರೆಸೆಸ್ಸ್ ವಿಚಾರಧಾರೆಗಳನ್ನು ಮತ್ತು 100 ವರ್ಷದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಲಿದ್ದೆವೆ ಎಂದು ತಾಲೂಕು ಕಾರ್ಯವಾಹ ಅಶ್ವಥ್ ತಿಳಿಸಿದರು. ಭಾರತ…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ

ಮುತ್ಸದಿ ರಾಜಕಾರಣಿ , ಮಾಜಿ ಶಾಸಕ ಬಿ ಸ್ವಾಮಿರಾವ್ ಗೆ ಪತ್ನಿ ವಿಯೋಗ ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಪತ್ನಿ ಪುಣ್ಯವತಿ (76) ಇಂದು ವಿಧಿವಶರಾದರು. ವಿನಯಶೀಲತೆ, ಧಾರ್ಮಿಕತೆ ಮತ್ತು ಕುಟುಂಬಮುಖಿ ಸ್ವಭಾವಕ್ಕಾಗಿ ಪರಿಚಿತರಾಗಿದ್ದ ಪುಣ್ಯವತಿ ರವರು ಸಾರ್ವಜನಿಕ ಕ್ಷೇತ್ರದಲ್ಲಿ ತಮ್ಮ ಪತಿಯ ರಾಜಕೀಯ ಜೀವನಕ್ಕೆ ನಿಶ್ಶಬ್ದ ಶಕ್ತಿಯಾಗಿ ನಿಂತಿದ್ದರು. ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಕುಟುಂಬದಲ್ಲಿ ಅವರು ಎಲ್ಲರನ್ನೂ ಒಗ್ಗೂಡಿಸುವ ಅಸ್ತಿತ್ವವಾಗಿದ್ದರು. ಸರಳತೆ, ಸತ್ಯನಿಷ್ಠೆ ಮತ್ತು ಕುಟುಂಬ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದ ಪುಣ್ಯವತಿ…

Read More

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು

ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತ – ಹೆದ್ದಾರಿಪುರದ ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಹರತಾಳು ಸಮೀಪದ ಕೋಡ್ರಿಗೆ ಹೊಳೆಯ ಸಮೀಪದ ತಿರುವೊಂದರಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತವಾದ ಹಿನ್ನೆಲೆಯಲ್ಲಿ ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಹೆದ್ದಾರಿಪುರ ಸಮೀಪದ ಗಿಣಸೆ ಗ್ರಾಮದ ಮಂಜುನಾಥ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮೃತ ಮಂಜುನಾಥ್ ಹಾಗೂ ಆತನ ಸ್ನೇಹಿತನಾದ ಲೋಹಿತ್ (29) ಹರತಾಳು ಗ್ರಾಮದಿಂದ ಹೆದ್ದಾರಿಪುರಕ್ಕೆ ಹಿರೋ ಹೊಂಡಾ ಸ್ಪೆಂಡರ್ ಬೈಕ್ ನಲ್ಲಿ ಬರುತಿದ್ದಾಗ…

Read More

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More