Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ

ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ  ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….

Read More

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು

ಹಸಿರುಮಕ್ಕಿ ಸೇತುವೆ ಇನ್ನೂ ಮೂರು ತಿಂಗಳಲ್ಲಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ – ಶಾಸಕ ಬೇಳೂರು ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ | ನಿಟ್ಟೂರು : ಬಹುದಿನಗಳಿಂದ ಸ್ಥಳೀಯರ ನಿರೀಕ್ಷೆಯಲ್ಲಿದ್ದ ಹಸಿರುಮಕ್ಕಿ ಸೇತುವೆ ಕಾಮಗಾರಿ ಇನ್ನೇನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಕೈಗಳಿಂದ ಸೇತುವೆ ಉದ್ಘಾಟನೆ ನಡೆಯಲಿದೆ ಎಂದು ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ. ನಿಟ್ಟೂರು ಕಾಂಗ್ರೆಸ್ ಘಟಕದ ಕಾರ್ಯಕರ್ತರ…

Read More

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು

RIPPONPETE | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಸನಗರ ರಸ್ತೆಯ ತಾವರೆಕೆರೆಗೆ ಉರುಳಿಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಹಾಸನದಿಂದ ಕೊಲ್ಲೂರಿಗೆ ತೆರಳುತಿದ್ದ ಮಾರುತಿ ಆಲ್ಟೋ ಕಾರು ಹೊಸನಗರ ರಸ್ತೆಯ ತಾವರೆಕೆರೆ ಬಳಿಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿಬಿದ್ದಿರುವ ಘಟನೆ ನಡೆದಿದೆ.ಕಾರಿನಲ್ಲಿ ಮೂವರು ಪ್ರಯಾಣಿಸುತಿದ್ದು ಅದೃಷ್ಟವಶಾತ್ ಘಟನೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರು ಏಕಾಏಕಿ ಕೆರೆಗೆ ಉರುಳುತಿದ್ದಂತೆ ಸ್ಥಳೀಯರು ಸಹಾಯಕ್ಕೆ…

Read More

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ

ಆನ್‌ಲೈನ್‌ನಲ್ಲಿ 1000 ಬ್ಯಾಗ್ ಸಿಮೆಂಟ್‌ಗೆ ಆರ್ಡರ್ –  4.15 ಲಕ್ಷ ಕಳೆದುಕೊಂಡ  ಸಾಗರದ ವ್ಯಕ್ತಿ ಶಿವಮೊಗ್ಹ:  ಆನ್‌ಲೈನ್‌ನಲ್ಲಿ ವಸ್ತುಗಳನ್ನು ತಲುಪಿಸುವ ನೆಪದಲ್ಲಿ ಹಣ ಪಡೆದು ಮೋಸ ಮಾಡುವ ಜಾಲಗಳು ಸಕ್ರಿಯವಾಗಿದ್ದು ಇಂತಹ ವಂಚನೆಗೆ ಸಾಗರದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಸಿಮೆಂಟ್ ಖರೀದಿಯ ನೆಪದಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಕಾಮಗಾರಿ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ 1000 ಬ್ಯಾಗ್ ಸಿಮೆಂಟ್‌ ಅಗತ್ಯವಿತ್ತು. ಆದರೆ, ಅವರು ಯಾವಾಗಲೂ ಖರೀದಿ ಮಾಡುತ್ತಿದ್ದ ಸಿಮೆಂಟ್ ಅಂಗಡಿಯಲ್ಲಿ ಸ್ಟಾಕ್ ಲಭ್ಯವಿರದ ಕಾರಣ, ಆನ್‌ಲೈನ್‌ನಲ್ಲಿ ಖರೀದಿಸಲು ಮುಂದಾಗಿದ್ದಾರೆ….

Read More

ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು

ಅಪಘಾತವಾಗಿ ಬಿದ್ದವರ ಮೇಲೆ ಟ್ರ್ಯಾಕ್ಟರ್ ಹರಿದು ಯುವಕರಿಬ್ಬರು ಸಾವು ಶಿವಮೊಗ್ಗ:  ಆಯನೂರು ಮತ್ತು ಹಾರನಹಳ್ಳಿ ಮಾರ್ಗ ಮಧ್ಯೆ ಶುಕ್ರವಾರ ಸಂಜೆ ಟ್ರ್ಯಾಕ್ಟರ್ ಹರಿದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಲ್ಲಾಪುರ ಗ್ರಾಮದ ಆಕೀಬ್ (25) ಮತ್ತು ಚಾಂದ್ ಪೀರ್ (18) ಮೃತಪಟ್ಟವರು. ಘಟನೆಯಲ್ಲಿ ಎರಡು ಬೈಕುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ, ಬೈಕ್ ಚಾಲಕ ಮತ್ತು ಹಿಂಬದಿ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದರು. ಇದೇ ಸಂದರ್ಭದಲ್ಲಿ  ಹಿಂದೆ ಬರುತ್ತಿದ್ದ ಟ್ರ್ಯಾಕ್ಟರ್ ಕೆಳಕ್ಕೆ ಬಿದ್ದವರ ಮೇಲೆ ಹರಿದಿದೆ. ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ…

Read More

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read More

T20 ವಿಶ್ವಕಪ್ ಚಾಂಪಿಯನ್ ಕಾವ್ಯಾರವರಿಗೆ ಸ್ನೇಹ ಬಳಗದ ವತಿಯಿಂದ ಸನ್ಮಾನ

T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಸ್ನೇಹ ಬಳಗದ ವತಿಯಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಪ್ರಮುಖ ಪಾತ್ರವಹಿಸಿದ್ದರು. ಈ ಅಂತರಾಷ್ಟ್ರೀಯ ಪ್ರಶಸ್ತಿಯಿಂದ ದೇಶವನ್ನು ಬೆಳಗಿಸಿದ ಗೌರವದ ಸಾಧನೆಗೆ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ 95-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಬರುವೆ ಗ್ರಾಮದ ಬ್ರಹ್ಮೇಶ್ವರ ದೇವಸ್ಥಾನ ಆವರಣದಲ್ಲಿ ದೇವಸ್ಥಾನದ ಸಮಿತಿಯವರು ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ ರಿಪ್ಪನ್‌ಪೇಟೆ : ಆಂಧ್ರಪ್ರದೇಶದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 10 ರಿಂದ 14 ರವರೆಗೆ ಆಂಧ್ರಪ್ರದೇಶದ ಖಾಕಿನಾಡ ನಗರದಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಮಹಮ್ಮದ್ ಝಿಯಾದ್ ಎಂ , ಆದರ್ಶ್…

Read More

ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ

ಶ್ರೀಗಂಧ ಮರ ಕಡಿತಲೆ : ಪೊಲೀಸ್ ಅರಣ್ಯ ಸಂಚಾರಿ ದಳ ದಾಳಿ , ಓರ್ವನ ಬಂಧನ ಸಾಗರ: ಸಾಗರ ಪೊಲೀಸ್ ಅರಣ್ಯ ಸಂಚಾರ ದಳ ಮತ್ತು ವಲಯ ಅರಣ್ಯಾಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಯಲ್ಲಿ, ಬರದವಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಶ್ರೀಗಂಧ ಮರವನ್ನು ಕಡಿದಿದ್ದ ಆರೋಪದ ಮೇಲೆ ಒಬ್ಬರನ್ನು ಬಂಧಿಸಿದ್ದಾರೆ. ಮುಬಾರಕ್ ಬಿನ್ ಮಹಮ್ಮದ್ ಪಾಷಾ (ಎಸ್‌ಎನ್ ನಗರ, ಸಾಗರ) ಅವರನ್ನು ಸ್ಥಳದಲ್ಲೇ ಬಂಧಿಸಲಾಗಿದ್ದು, ಅವರ ಬಳಿಯಿಂದ 35.107 ಕೆ.ಜಿ. ಶ್ರೀಗಂಧದ ತುಂಡುಗಳು, ಒಂದು ಕೈ ಗರಗಸ ಮತ್ತು ದ್ವಿಚಕ್ರ…

Read More

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ

ಅವ್ಯಹಾರ ಆರೋಪ : ಗ್ರಾ.ಪಂ. ಕಚೇರಿಗೆ ಬೀಗ ಜಡಿದು ಸದಸ್ಯರ ಪ್ರತಿಭಟನೆ ಶಿಕಾರಿಪುರ  :  ತೆರಿಗೆ ಸಂಗ್ರಹ ಹಣ ಅಂದೇ ಬ್ಯಾಂಕ್‌ಗೆ ಜಮೆ ಮಾಡದೆ ಅವ್ಯವಹಾರ ನಡೆಸಿದ್ದಾರೆ, ನೀರುಗಂಟಿ ಹುದ್ದೆಯಲ್ಲಿದ್ದವರಿಗೆ ಬಿಲ್‌ಕಲೆಕ್ಟರ್ ಹುದ್ದೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿ ಗೊದ್ದನಕೊಪ್ಪ ಗ್ರಾ.ಪಂ. ಸದಸ್ಯರು ಕಚೇರಿಗೆ ಬೀಗಹಾಕಿ ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯಿತಿ ಪ್ರಭಾರ ಪಿಡಿಒ ಆಗಿದ್ದ ಇಮ್ತಿಯಾಜ್ ಅಹಮದ್ ನಾಲ್ಕು ಹಳ್ಳಿಗಳ ತೆರಿಗೆ ಸಂಗ್ರಹ ಹಣ ಬ್ಯಾಂಕ್‌ಗೆ ಕಟ್ಟದೇ  ೮ರಿಂದ ೩೦ದಿನದವರೆಗೂ ಹಣ ಕೈಯಲ್ಲಿ ಇಟ್ಟುಕೊಂಡಿರುವ ದಾಖಲೆಗಳಿವೆ,…

Read More