Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ

ಕಾಲು ಜಾರಿ ಬಿದ್ದು ಪೊಲೀಸ್ ದಫೇದಾರ್ ದುರ್ಮರಣ ಭದ್ರಾವತಿ – ನಗರದ ಹೊಸಮನೆ ಪ್ರದೇಶದ ನಿವಾಸಿ ಹಾಗೂ ಶಿವಮೊಗ್ಗದ ಕೆಎಸ್‌ಆರ್‌ಪಿ ಬೆಟಾಲಿಯನ್‌ನ ದಫೇದಾರ್ ಚಂದ್ರಶೇಖರ್ (44) ಅವರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅವರು ಬಾರಂದೂರು ಬೈಪಾಸ್ ಉಜ್ಜಿನೀಪುರದ ನಗರಸಭೆಯ ಪಂಪ್‌ಹೌಸ್ ಬಳಿ ಇರುವ ಭದ್ರಾ ನದಿ ಸೇತುವೆಯ ಕೆಳಭಾಗಕ್ಕೆ ಬಹಿರ್ದೆಸೆಗೆ ತೆರಳಿದಾಗ, ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಒಬ್ಬ ಗಂಡು ಮತ್ತು…

Read More

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ

ಹಾಸ್ಯ ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ – ಶೂಟಿಂಗ್ ನಲ್ಲಿದ್ದಾಗಲೇ ನಡೆಯಿತು ದುರಂತ ಹಾಸ್ಯ ಕಲಾವಿದ, ತಮ್ಮ ಕಾಮಿಡಿ ಮೂಲಕವೇ ಉತ್ತರ ಕರ್ನಾಟಕದಲ್ಲಿ ನಗುವಿನ ಹೊನಲು ಹರಿಸಿದ್ದ ರಾಜು ತಾಳಿಕೋಟೆ ನಿಧನರಾಗಿದ್ದಾರೆ. ಉತ್ತರ ಕರ್ನಾಟಕಕ್ಕೆ ನಗುವಿನ ಹುಚ್ಚು ಹಿಡಿಸಿದ್ದ, ಕಲಿಯುಗದ ಕುಡುಕ ಖ್ಯಾತಿಯ ನಟ ರಾಜು ತಾಳಿಕೋಟೆ ಮೃತಪಟ್ಟಿದ್ದಾರೆ. ಉಡುಪಿಯ ಮಣಿಪಾಲ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ನಟ ಶೈನ್ ಶೆಟ್ಟಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದ ರಾಜು ತಾಳಿಕೋಟೆ, ಸಿನಿಮಾ ಶೂಟಿಂಗ್​ ಗೆ…

Read More

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ.

ಯಕ್ಷಗಾನ ಕಲಾವಿದರಿಗೆ ರಾಜಾಶ್ರಯ ಸದಾ ಅವಶ್ಯ: ಹಿರಿಯ ಕಲಾವಿದ ಪುರಂದರ ಹೆಗಡೆ ಅಭಿಮತ. ಹೊಸನಗರ: ದೇಶದ ಸಾಂಸ್ಕೃತಿಕ ಪರಂಪರೆಯ ಹಿರಿಯ ಕಲಾ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆ ಆರಾಧಕರಾದ ಯಕ್ಷ ಕಲಾವಿದರಿಗೆ ರಾಜಾಶ್ರಯ ಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಸಾಧಕ ಪ್ರತಿಭಾವಂತ ಹಿರಿಯ ಕಲಾವಿದರನ್ನು ಗೌರವಿಸುವ ಕೆಲಸ ಮಾಡಬೇಕಾಗಿದೆ ಎಂದು ಹಿರಿಯ ಕಲಾವಿದ ಪುರಂದರ ಹೆಗಡೆ ಹೇಳಿದರು. ತಾಲ್ಲೂಕಿನ ಕಾರ್ಗಿಲ್ ಸಿದ್ಧಿವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ನಡೆದ ಹೆರಂಜಾಲು ಷಷ್ಠಬ್ಬಿ ಯಕ್ಷ ಕಾರ್ಯಕ್ರಮದಲ್ಲಿ ಕೂಡ ಮಾಡುವ ಹೆರಂಜಾಲು ಗೌರವ…

Read More

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್‌ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು. ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ…

Read More

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ

ರಿಪ್ಪನ್‌ಪೇಟೆ ಹೆಸರಿನ ಮೂಲ – ಲಾರ್ಡ್ ರಿಪ್ಪನ್ ಅವರ ಒಳ್ಳೆತನದ ಸ್ಮರಣೆ ಬದಲಾಯಿಸಬೇಕಾಗಿರುವುದು ಊರಿನ ಹೆಸರನ್ನಲ್ಲ .. ಈ ಊರಿನ ವ್ಯವಸ್ಥೆಯನ್ನು..!!! ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಣ್ಯಸೌಂದರ್ಯದಿಂದ ಕಂಗೊಳಿಸುವ ಪಟ್ಟಣಗಳಲ್ಲಿ ಒಂದಾದ ರಿಪ್ಪನ್‌ಪೇಟೆ, ಇತಿಹಾಸ ಮತ್ತು ಸಂಸ್ಕೃತಿಯ ಅದ್ಭುತ ಮಿಶ್ರಣವಾಗಿದೆ. ಈ ಊರಿನ ಹೆಸರಿನ ಹಿಂದಿರುವ ಕಥೆ ಅತ್ಯಂತ ಆಸಕ್ತಿದಾಯಕ. ಜನಪ್ರಚಲಿತವಾದ ನಂಬಿಕೆಯ ಪ್ರಕಾರ, ಈ ಸ್ಥಳಕ್ಕೆ “ರಿಪ್ಪನ್‌ಪೇಟೆ” ಎಂಬ ಹೆಸರು ಬ್ರಿಟಿಷ್ ಕಾಲದ ಲಾರ್ಡ್ ರಿಪ್ಪನ್ ( ಜಾರ್ಜ್ ಫ್ರೆಡೆರಿಕ್ ರಾಬಿನ್ಸನ್ )…

Read More

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ

ಅರಣ್ಯ ಭೂಮಿ ಸಾಗುವಳಿದಾರರಿಗೆ ಗುಡ್ ನ್ಯೂಸ್: ರೈತರಿಗೆ ತೊಂದರೆ ಕೊಟ್ಟು ಒಕ್ಕಲೆಬ್ಬಿಸದಂತೆ ಸಚಿವ ಮಧು ಬಂಗಾರಪ್ಪ ಸೂಚನೆ ಬಹು ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ಅರಣ್ಯ ಭಾಗದ ರೈತರಿಗೆ ತೊಂದರೆ ನೀಡಿ ಒಕ್ಕಲೆಬ್ಬಿಸಬಾರದು ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿಯಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಕೆಆರ್‌ಐಡಿಎಲ್, ನೀರಾವರಿ ಇಲಾಖೆಗಳ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ…

Read More

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…

Read More

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ. ಎ.ಚಂದ್ರಶೇಖರ (೨೮) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ…

Read More

ಬಿಸ್ಕೆಟ್ ಪ್ಯಾಕ್ ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ

ಬಿಸ್ಕೆಟ್ ಪ್ಯಾಕ್ನಲ್ಲಿ ಜೈಲಿಗೆ ಗಾಂಜಾ : ಇಬ್ಬರ ಬಂಧನ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳಾಗಿದ್ದಾರೆ. ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಯುವಕರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು…

Read More

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ

ಸಾಲಬಾಧೆಗೆ ಬೇಸತ್ತು ರೈತ ಆತ್ಮ*ಹತ್ಯೆ ಶಿವಮೊಗ್ಗ : ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ರೈತ ಗಾಮಪ್ಪ ಅವರು ಗ್ರಾಮದ ಗಾಮಪ್ಪ  ತಮ್ಮ ಜಮೀನಿನಲ್ಲಿ ಅಡಿಕೆ, ಕಬ್ಬು, ಶುಂಠಿ, ಭತ್ತ, ಅಡಿಕೆ ಬೆಳೆಯನ್ನು ಬೆಳೆದಿದ್ದರು. ಆದರೆ  ಈ ವರ್ಷ ಸುರಿದ ಭಾರೀ ಮಳೆಯಿಂದ ಅಡಿಕೆಗೆ ಕೊಳೆ ರೋಗ ಹಾಗೂ ಶುಂಠಿಗೆ ಎಲೆಚುಕ್ಕಿ ರೋಗ ಬಂದು ಬೆಳೆ ನಾಶವಾಗಿದೆ….

Read More