Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸಲಾಗುವುದು : ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟವನ್ನು ಪ್ರವಾಸಿ ತಾಣವನ್ನಾಗಿಸುವುದರೊಂದಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅಧ್ಯತೆ ನೀಡುವುದಾಗಿ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದರು. ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಎರಡನೇ ದಿನದ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ದೇವಸ್ಥಾನ ಸಮಿತಿಯವರೊಂದಿಗೆ ಸಮಾಲೋಚನಾ ಸಭೆ ನಡೆಸಿ ಇದೊಂದು ಧಾರ್ಮೀಕ ಐತಿಹಾಸಿಕ ಕ್ಷೇತ್ರವಾಗಿದ್ದ ವರ್ಷಧಲ್ಲಿ ಭಾದ್ರಪದ ಮಾಸದ ಪಿತೃಪಕ್ಷದಲ್ಲಿ ಮಂಗಳವಾರ ಮತ್ತು ಶುಕ್ರವಾರದ ಜಾತ್ರಾಮಹೋತ್ಸವ ಮತ್ತು ನಾಡಿನ ಮೈಸೂರು…

Read More

ಬೈಕ್ ಅಪಘಾತ : ಗಾಯಾಳುವಿಗೆ ಸ್ಪಂದಿಸಿ ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ

ಹುoಚದ ಕಟ್ಟೆ: ಇಲ್ಲಿನ ಸಮೀಪದ ಗುಂಡಿಬೈಲಿನ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಗೆ ಹಸು ಅಡ್ಡ ಬಂದು ವ್ಯಕ್ತಿಯೊಬ್ಬರಿಗೆ ಗಾಯವಾದ ಘಟನೆ ನಡೆದಿತ್ತು. ಇದೇ ಸಂಧರ್ಭದಲ್ಲಿ ಅದೇ ದಾರಿಯಲ್ಲಿ ಸಾಗುತಿದ್ದ ಕರ್ನಾಟಕ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಕ್ಷಣ ವಾಹನವನ್ನು ನಿಲ್ಲಿಸಿ ಗಾಯಾಳುವನ್ನು ಸಂತೈಸಿ ಕೂಡಲೇ ಹೆಚ್ಚಿನ ಚಿಕಿತ್ಸೆಗೆ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ತಮ್ಮ ಬೆಂಗಾವಲು ವಾಹನದಲ್ಲಿ ಕಳುಹಿಸಿಕೊಟ್ಟರು.  ಸಾಗರದ ಬರದಹಳ್ಳಿಯ ಹಾಲಸ್ವಾಮಿ ಎನ್ನುವ ವ್ಯಕ್ತಿ ಅಪಘಾತವಾಗಿದ್ದು ಇವರನ್ನು ಹೆಚ್ಚಿನ ಚಿಕಿತ್ಸೆಗೆ ಸಚಿವ ಆರಗ ಜ್ಞಾನೇಂದ್ರ ರವರ…

Read More

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ. ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು…

Read More

ಕೋಳಿ ಕದಿಯುತ್ತಿದ್ದ ಎನ್ನುವ ಕಾರಣಕ್ಕೆ ಮೃಗವಧೆ ರಾಜು ಎಂಬಾತನನ್ನು ಬಡಿದು ಕೊಂದು ಬಿಟ್ರಾ ದುಷ್ಕರ್ಮಿಗಳು..!!!!!!!????

ಅಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಡಿದು ಕೊಂದಿರುವಂತಹ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆಯಲ್ಲಿ ನಡೆದಿದೆ ಎನ್ನಲಾಗುತ್ತಿದೆ.  ಮೃಗವಧೆಯ ರಾಜು ಹೇಗೆ ಸಾವನ್ನಪ್ಪಿರುವ ವಿಚಾರ ಇದೀಗ ಹೊರಕ್ಕೆ ಬಂದಿದೆ. ಆ ಊರು ಹಾಗೂ ಅಲ್ಲಿನ ಸ್ಥಳಿಯರು ಹೇಳುವ ಪ್ರಕಾರ ಆತ ಅಡಿಕೆ ಗೊನೆ ತೆಗೆಯುವವನಾಗಿದ್ದು ಹಾಗೂ ಮದ್ಯ ವ್ಯಸನಿಯಾಗಿದ್ದ. ಕಳೆದ ಮೂರು ದಿನಗಳಿಂದ ರಾಜು ಮನೆಯಲ್ಲಿರಲಿಲ್ಲ.  ಕೋಳಿಯಂಗಡಿಗಳಲ್ಲಿ ಕೋಳಿ ಕದಿಯುತ್ತಿದ್ದ ಎಂಬ ಕಾರಣಕ್ಕೆ ಆತನ ಮೇಲೆ ಶಿಶಿರ, ಶಿವು ಮತ್ತು ವಿಜಯೇಂದ್ರ ಎಂಬ ಆರೋಪಿಗಳು ಹಲ್ಲೆ…

Read More

ಅನಾರೋಗ್ಯ ಪೀಡಿತ ವ್ಯಕ್ತಿಗೆ ಆರ್ಥಿಕ ನೆರವು ನೀಡಿದ ಶಾಸಕ ಹರತಾಳು ಹಾಲಪ್ಪ

 ಹೊಸನಗರ ತಾಲೂಕ್ ವೀರಶೈವ ಲಿಂಗಾಯಿತ ಪರಿಷತ್ ನ ಮಾಸಿಕ ಸಭೆ ಆಲಗೇರಿ ಮಂಡ್ರಿಯ ದಯಾಕರ ಎಂಬುವವರ ಮನೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೊಸನಗರ ತಾಲೂಕ್ ವೀರಶೈವ ಲಿಂಗಾಯತ ಪರಿಷತ್ ನಡೆಸುತ್ತಿರುವ ಸಮಾಜಮುಖಿ ಕಾರ್ಯವನ್ನು ಪ್ರಶಂಸಿದರು. ನಂತರ ಇತ್ತೀಚೆಗೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ಅಕಸ್ಮಿಕವಾಗಿ ಅವಘಡ ಸಂಭವಿಸಿ ಓಡಾಡದಂತಹ ಸ್ಥಿತಿಯಲ್ಲಿರುವ ರೈತ ಉಮೇಶ್ ಎಂಬುವರಿಗೆ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ವೈಯಕ್ತಿಕವಾಗಿ…

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!

ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…

Read More

ಕಾಂಗ್ರೆಸ್ ಪಕ್ಷಕ್ಕೆ ರಾಜು ತಲ್ಲೂರು ರಾಜೀನಾಮೆ : ಮುಂದಿನ ನಡೆ ಬಗ್ಗೆ ಗೌಪ್ಯತೆ…!!!!!

ಶಿವಮೊಗ್ಗ: ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಾನು ಇವತ್ತು ರಾಜಿನಾಮೆ ನೀಡುತ್ತಿರುವುದಾಗಿ ಸೊರಬ ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದ ರಾಜು ತಲ್ಲೂರು ಘೋಷಿಸಿದ್ದಾರೆ. ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸಂಪೂರ್ಣ ನಿಷ್ಕ್ರಿಯ ರಾಗಿದ್ದಾರೆ. ಜಿಲ್ಲೆಯಲ್ಲಿ ಅವರಿಂದ ಪಕ್ಷ ಚೇತರಿಕೆ ಕಾಣದು. ವ್ಯಕ್ತಿಪೂಜೆಯಲ್ಲಿ ಅವರು‌ ನಿರತರಾಗಿದ್ದಾರೆ. ಪಕ್ಷಕ್ಕೆ ಹೊಸ ಪದಾಧಿಕಾರಿಗಳನ್ನು ನೇಮಿಸಿಲ್ಲ ಎಂದು ಆರೋಪಿಸಿದರು. ಜಿಲ್ಲಾ ಕಾಂಗ್ರೆಸಿನಲ್ಲಿ ಒಗ್ಗಟ್ಟಿಲ್ಲ. ಈ ಬಗ್ಗೆ ರಾಜ್ಯದ ಮುಖಂಡರಿಗೆ ಮಾಹಿತಿ ನೀಡಿದ್ದೆ. ಕೆಲಸ ಮಾಡಲು‌ ಮನಸ್ಸಿಲ್ಲದವರು ಪಕ್ಷದಲ್ಲಿದ್ದಾರೆ.  ಇದರಿಂದ…

Read More

ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

 ಹಸುವಿಗೆ ನೀರು ಕುಡಿಸಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ‌ ನಡೆದಿದೆ. ಬೀರನಕೆರೆ ಗ್ರಾಮದ ರವಿ ನಾಯ್ಕ(18) ಮೃತ ಯುವಕ. ರವಿನಾಯ್ಕ ಭಾನುವಾರ ಮಧ್ಯಾಹ್ನ ಹಸುವಿಗೆ ನೀರು ಕುಡಿಸಲು ಗ್ರಾಮದ ಎಂಪಿಎಂ ಕಟ್ಟೆಯ ಬಳಿ‌ ಹೋದಾಗ, ಹಸು ನೀರಿಗೆ ಇಳಿದಿದೆ. ಈ ವೇಳೆ ಹಸು‌ ನೀರಿನ ಆಳಕ್ಕೆ ಹೋದಾಗ ಹಸುವನ್ನು ಕರೆದುಕೊಂಡು ಬರಲು ಹೋಗಿ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಸು ಮನೆಗೆ ಬಂದಿದೆ. ಆದರೆ ರವಿ ಮನೆಗೆ ಬಾರದೆ…

Read More

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು : ಅಭಿಷೇಕ್ ಹುಂಚ

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು ಸ್ಮರಣೀಯರು. ಅವರು ದೇಶದ ಸ್ವಾಭಿಮಾನ, ಸಮಾನತೆ, ಸೋದರ ಭಾವನೆಗಳನ್ನು ಬೆಳೆಸುವ ಸನ್ಮಾರ್ಗಕ್ಕೆ ಬೆಳಕಾಗಿದ್ದರು ಎಂದು ಯುವ ಮುಖಂಡ ಅಭಿಷೇಕ್ ಹುಂಚ ಹೇಳಿದರು. ಹುಂಚದಲ್ಲಿ(HUMCHA) ಇಂದು ಪಂಡಿತ್ ದೀನ್ ದಯಾಳ್ ಜೀ ಅವರ ಜನ್ಮದಿನಾಚರಣೆ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ದೀನ್ ದಯಾಳ್ ಅಧಿಕಾರಕ್ಕಾಗಿ ಆಸೆ ಪಟ್ಟವರಲ್ಲ. ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವ ಕಳಕಳಿ ಹೊಂದಿದ್ದರು. ಸಮಾಜದಲ್ಲಿ ಮೇಲು-ಕೀಳು ಭಾವನೆ ದೂರವಾಗಬೇಕೆಂದು ಬಯಸಿದ್ದರು. ಸರಕಾರಿ ಯೋಜನೆಗಳು…

Read More

ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಸಾವು : ಜಮೀನು ಮಾಲೀಕ ವಶಕ್ಕೆ….

  ವಿದ್ಯುತ್ ಸ್ಪರ್ಶದಿಂದ ಎರಡು ಕಾಡಾನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆ ವನ್ಯಜೀವಿ ವಲಯದಲ್ಲಿ ನಡೆದಿದೆ. ರವಿವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ಸಮೀಪದ ಆನೆಸರದ ಮೂಲಕ ಚನ್ನಹಳ್ಳಿಯ ಹೊಲಕ್ಕೆ ಹೋಗಿವೆ.ಅಲ್ಲಿ ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕಟ್ಟಿದ್ದಾರೆನ್ನಲಾದ ಐಬಿಕ್ಸ್ ವಿದ್ಯುತ್ ತಂತಿಯನ್ನು ಆನೆಗಳು ತುಳಿದು ವಿದ್ಯುತ್ ಪ್ರವಹಿಸಿದೆ ಎಂದು ತಿಳಿದು ಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಜಮೀನು ಮಾಲಕ ಚಂದ್ರನಾಯ್ಕ್…

Read More