Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅಧ್ಯಕ್ಷರ ರಾಜಿನಾಮೆ ಪ್ರಹಸನದಿಂದ ಹುಂಚಾ ಸೊಸೈಟಿಗೆ ಬಿತ್ತು ಎರಡು ಲಕ್ಷ ಬಡ್ಡಿ…..!!! ಕಟ್ಟೋದ್ಯಾರು ಆಡಳಿತ ಮಂಡಳಿನಾ ?? ರೈತರಿಗೆ ಗುನ್ನಾನಾ???ಹುಂಚಾ ಸೊಸೈಟಿಯಲ್ಲಿ ಬಗೆಹರಿಯದ ಗೊಂದಲ!!!!!!

ಹುಂಚ : ಇತ್ತೀಚೆಗೆ ಹುಂಚಾ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ಪ್ರಹಸನ ಸುಖಾಂತ್ಯವಾಯಿತು ಎನ್ನುವ ಮೊದಲು ಡಿಸಿಸಿ ಬ್ಯಾಂಕ್ ಈಗ ಸುಸ್ತಿದಾರ ಸೊಸೈಟಿ ಎಂದು ಘೋಷಿಸಿ ಎರಡು ಲಕ್ಷಕ್ಕೂ ಹೆಚ್ಚು ಬಡ್ಡಿ ವಿಧಿಸಿದ್ದಾರೆಂದು ತಿಳಿದು ಬಂದಿದೆ. ಹುಂಚಾ ವ್ಯವಸಾಯ ಸಹಕಾರಿಯ ಆಡಿಟ್ ವರದಿಯಲ್ಲಿ ಐವತ್ತು ಲಕ್ಷಕ್ಕೂ ಹೆಚ್ಚೂ ವ್ಯತ್ಯಾಸವಾಗಿದೆ ಎಂಬ ಸುದ್ದಿಗೆ ಬೆದರಿ ಅಧ್ಯಕ್ಷರು ಸೇರಿದಂತೆ ಐವರು ನಿರ್ದೇಶಕರು ರಾಜಿನಾಮೆ ನೀಡಿದ್ದರು . ಉಳಿದ ನಿರ್ದೇಶಕರು ಎದ್ದು ಬಿದ್ದು ಆಡಿಟರ್ ರಿಂದ…

Read More

ತಾತ್ಕಾಲಿಕ ಮಿನಿ ಅಂಗನವಾಡಿ ಶೆಡ್ ತೆರವಿಗೆ ಮುಂದಾದ ಅರಣ್ಯಾಧಿಕಾರಿಗಳು : ಗ್ರಾಮಸ್ಥರಿಂದ ಪ್ರತಿಭಟನೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೊಟ್ಯಾಳಪುರ ಗ್ರಾಮದ ಮಿನಿ ಅಂಗನವಾಡಿ ನಿರ್ಮಾಣಕ್ಕೆ ಅರಣ್ಯಾಧಿಕಾರಿಗಳು ಅಡ್ಡಗಾಲು ಹಾಕುತ್ತಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ಸುಮಾರು ಐದಾರು ವರ್ಷಗಳ ಹಿಂದೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಮಜರೆ ಹೊಟ್ಯಾಳಪುರ ಮಿನಿ ಅಂಗನವಾಡಿಯಲ್ಲಿ  ಮಗುವೊಂದಕ್ಕೆ ಹಾವು ಕಡಿದು ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಸರ್ಕಾರದಿಂದ ಸುಸಜ್ಜಿತ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿತ್ತು ಆದರೆ ಜಾಗ ಇಲ್ಲದೆ ಕಟ್ಟಡ…

Read More

ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು ,ಇನ್ನೊಬ್ಬ ಗಂಭೀರ

ಪೋಸ್ಟ್ ಮ್ಯಾನ್ ನ್ಯೂಸ್ ಡೆಸ್ಕ್ …………………ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ ಸಮೀಪದಲ್ಲಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಚಿಕ್ಕಮಗಳೂರು ನಿಂದ ಕಾರವಾರಕ್ಕೆ ಹೊರಟ ಸರ್ಕಾರಿ ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ದೇವಯ್ಯಾ ಜೈನ್ ಮೃತರಾಗಿದ್ದಾರೆ.ಇವರು ನಿವೃತ್ತ ಕೆಪಿಸಿ ಉದ್ಯೋಗಿಯಾಗಿದ್ದರು. ಸಹ ಪ್ರಯಾಣಿಕ ರಾಜೇಂದ್ರ ಜಯಂತ್ ಸ್ವಾಮೀಜಿ ರವರ ತಲೆಗೆ…

Read More

ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ಎನ್ ಐಎ(NIA) ದಾಳಿ : ಶಿವಮೊಗ್ಗದಲ್ಲಿಯೂ ಕೆಲ ಸಂಘಟನೆಯ ಮುಖಂಡರ ಮನೆ ಮೇಲೆ ದಾಳಿ

 ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಇವತ್ತು ಬೆಂಗಳೂರು, ಮಂಗಳೂರು ಮತ್ತು ಶಿವಮೊಗ್ಗ ಸೇರಿದಂತೆ ದೇಶಾದ್ಯಂತ 100ಕ್ಕೂ ಹೆಚ್ಚು ಕಡೆ ದಾಳಿ ನಡೆಸಿದ್ದಾರೆ. ವಿವಿಧ ಸಂಘಟನೆಗೆ ಸೇರಿದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ಬೆಳಗಿನ ಜಾವ ಎನ್ ಐಎ(NIA) ದಾಳಿ ನಡೆದಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಷ್ಕರ್ ಮೊಹಲ್ಲಾದ ಮನೆಯೊಂದರ ಮೇಲೆ ಬೆಳಗಿನ ಜಾವ ದಾಳಿಯಾಗಿದೆ. ಸಂಘಟನೆಯೊಂದರ ಮುಖಂಡನ್ನು ವಶಕ್ಕೆ ಪಡೆದು, ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಎರಡು ತಂಡವಾಗಿ ದಾಳಿ ನಡೆಸಿದ ಎನ್ಐಎ…

Read More

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.        ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ…

Read More

ಪಡಿತರದಾರರ ದಿಕ್ಕು ತಪ್ಪಿಸುತ್ತಿರುವ ಅನಾಮಧೇಯ ಕರಪತ್ರ : ನ್ಯಾಯಬೆಲೆ ಅಂಗಡಿ‌ ಮಾಲೀಕನ ಆಕ್ರೋಶ

ರಿಪ್ಪನ್‌ಪೇಟೆ; ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಕಳೆದ 34 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಈ ನ್ಯಾಯಬೆಲೆ ಅಂಗಡಿಯ ಕಾರ್ಡ್‌ದಾರರನ್ನು ಪಕ್ಕದ ನ್ಯಾಯಬೆಲೆ ಅಂಗಡಿಯವರು ತಮ್ಮ ಕಡೆ ಸೆಳೆಯುವ ಉದ್ದೇಶದಲ್ಲಿ ಅನಾಮಿಕವಾದ ಕರಪತ್ರವನ್ನು ಹಂಚಿ ಪಡಿತರ ಫಲಾನುಭವಿಗಳ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೆದ್ದಾರಿಪುರ ನ್ಯಾಯಬೆಲೆ ಅಂಗಡಿ ಮಾಲೀಕ ಹೆಜ್‌ ಕೆ ನಾಗರಾಜ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಇತ್ತೇಚೆಗೆ ವಡ ಹೊಸಳ್ಳಿ ಗ್ರಾಮದಲ್ಲಿ ಹೊಸದಾಗಿ ತರೆಯಲಾಗಿರುವ ನ್ಯಾಯಬೆಲೆ ಅಂಗಡಿಗೆ ಹೆದ್ದಾರಿಪುರ ನ್ಯಾಯಬೆಲೆ ಅಂಗಡಿಯಿಂದ ವರ್ಗಾವಣೆ ಮಾಡಿದ…

Read More

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :

…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್‌ ಸರ್ಕಲ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿರಾಯ : ಆರೋಪಿ ಬಂಧನ

ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಇಂದು ನಡೆದಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣವೆಂದು ಶಂಕಿಸಲಾಗಿದೆ. ಕರುಣಾಕರ ಎಂಬ 33 ವರ್ಷದ ಎಂಬಿಎ ಪದವೀಧರ ಎರಡು ವರೆ ವರ್ಷದ ಹಿಂದೆ ಬುಳ್ಳಾಪುರದ ಯುವತಿ ಅಮಿತಾ(26) ಎಂಬಾಕೆಯೊಂದಿಗೆ ಮದುವೆಯಾಗಿದ್ದ. ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದರು ಮಕ್ಕಳಾಗಿರಲಿಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿಲ್ಲವೆಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ. ಪದೇ ಪದೇ ಜಗಳವಾಡುತ್ತಿದ್ದ ಪತಿಪತ್ನಿ ಕಳೆದ ವರ್ಷ ಗಂಡನ ಮನೆ ತೊರೆದು ಪತ್ನಿ ಅಮಿತಾ ತವರು ಮನೆ…

Read More