Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಾರದಾ ರಾಮಕೃಷ್ಣ ವಿದ್ಯಾ ಶಾಲೆಯ ಮಕ್ಕಳ ಉತ್ತಮ ಸಾಧನೆ

ರಿಪ್ಪನ್ ಪೇಟೆ : ಇಲ್ಲಿನ ಶಾರದಾ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ರಿಪ್ಪನ್ ಪೇಟೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಿಲೇ ಸ್ಪರ್ಧೆಯಲ್ಲಿ ಬಾಲಕ ಬಾಲಕಿಯರು ದ್ವಿತೀಯ ಹಾಗು ತೃತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ 1500 ಹಾಗೂ 800 ಮೀಟರ್ ಓಟದಲ್ಲಿ…

Read More

ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪೋಷಣ್ ಅಭಿಯಾನ: ಚಂದ್ರಕಲಾ | ಗರ್ಭಿಣಿಯರು ಧನಾತ್ಮಕವಾಗಿ ಆಲೋಚಿಸಲಿ : ಉಬೇದುಲ್ಲಾ ಷರೀಫ್

ರಿಪ್ಪನ್‌ಪೇಟೆ: ಸಮಾಜದ ಪ್ರತಿಯೊಬ್ಬರು ಆರೋಗ್ಯವಾಗಿದ್ದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಪ್ರಸ್ತುತ ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ  ಹೇಳಿದರು.        ಸಮೀಪದ ಮೂಗುಡ್ತಿ ಸಭಾಭವನದಲ್ಲಿ ಬುಧವಾರ ಗ್ರಾಮ ಪಂಚಾಯತಿ ಹೆದ್ದಾರಿಪುರ ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ…

Read More

ಪಡಿತರದಾರರ ದಿಕ್ಕು ತಪ್ಪಿಸುತ್ತಿರುವ ಅನಾಮಧೇಯ ಕರಪತ್ರ : ನ್ಯಾಯಬೆಲೆ ಅಂಗಡಿ‌ ಮಾಲೀಕನ ಆಕ್ರೋಶ

ರಿಪ್ಪನ್‌ಪೇಟೆ; ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿ ಕಳೆದ 34 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಈ ನ್ಯಾಯಬೆಲೆ ಅಂಗಡಿಯ ಕಾರ್ಡ್‌ದಾರರನ್ನು ಪಕ್ಕದ ನ್ಯಾಯಬೆಲೆ ಅಂಗಡಿಯವರು ತಮ್ಮ ಕಡೆ ಸೆಳೆಯುವ ಉದ್ದೇಶದಲ್ಲಿ ಅನಾಮಿಕವಾದ ಕರಪತ್ರವನ್ನು ಹಂಚಿ ಪಡಿತರ ಫಲಾನುಭವಿಗಳ ದಿಕ್ಕು ತಪ್ಪಿಸುವ ಕಾರ್ಯದಲ್ಲಿ ತೊಡಗಿದ್ದಾರೆಂದು ಹೆದ್ದಾರಿಪುರ ನ್ಯಾಯಬೆಲೆ ಅಂಗಡಿ ಮಾಲೀಕ ಹೆಜ್‌ ಕೆ ನಾಗರಾಜ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ ಇತ್ತೇಚೆಗೆ ವಡ ಹೊಸಳ್ಳಿ ಗ್ರಾಮದಲ್ಲಿ ಹೊಸದಾಗಿ ತರೆಯಲಾಗಿರುವ ನ್ಯಾಯಬೆಲೆ ಅಂಗಡಿಗೆ ಹೆದ್ದಾರಿಪುರ ನ್ಯಾಯಬೆಲೆ ಅಂಗಡಿಯಿಂದ ವರ್ಗಾವಣೆ ಮಾಡಿದ…

Read More

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :

…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್‌ ಸರ್ಕಲ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…

Read More

ನಾರಾಯಣ ಗುರು ವಿಚಾರ ವೇದಿಕೆ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಪುನೀತ್ ಬೆಳ್ಳೂರು ನೇಮಕ :

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಶಿವಮೊಗ್ಗ ಜಿಲ್ಲಾ ಸಂಘಟನ ಕಾರ್ಯದರ್ಶಿಯಾಗಿ ಪತ್ರಕರ್ತ ಪುನೀತ್ ಬೆಳ್ಳೂರು ಅವರನ್ನ ಆಯ್ಕೆ ಮಾಡಿ   ರಾಜ್ಯ ಅಧ್ಯಕ್ಷರಾದ ಸತ್ಯಜಿತ್‌ ಸುರತ್ಕಲ್ ಅದೇಶ ಹೊರಡಿಸಿದ್ದಾರೆ. ನೂತನ ಹುದ್ದೆ ಅಲಂಕರಿಸಿದ ಪುನೀತ್ ಬೆಳ್ಳೂರು ಪೋಸ್ಟ್ ಮ್ಯಾನ್ ಸುದ್ದಿ ಬಳಗದೊಂದಿಗೆ ಮಾತನಾಡಿ ಸಂಘಟನೆಯು ನನಗೆ ಅತ್ಯಂತ ಜವಾಬ್ದಾರಿ ಹುದ್ದೆಯನ್ನ ನೀಡಿದೆ,ಹಾಗೂ ನನ್ನನ್ನು ಗುರುತಿಸಿದ ಶಿವಮೊಗ್ಗ ಜಿಲ್ಲಾ ಸಮಿತಿಗೆ ನಾನು ಧನ್ಯವಾದ ತಿಳಿಸುತ್ತೇನೆ,ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಈಗಾಗಲೇ ಹಲವು ಸಮಾಜ ಮುಖಿ ಕೆಲಸ ಮಾಡುತ್ತ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿರಾಯ : ಆರೋಪಿ ಬಂಧನ

ಪತ್ನಿಯನ್ನು ಚಾಕುವಿನಿಂದ ಇರಿದು ಪತಿಯೇ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಇಂದು ನಡೆದಿದೆ. ಕೊಲೆಗೆ ಕೌಟುಂಬಿಕ ಕಲಹ ಕಾರಣವೆಂದು ಶಂಕಿಸಲಾಗಿದೆ. ಕರುಣಾಕರ ಎಂಬ 33 ವರ್ಷದ ಎಂಬಿಎ ಪದವೀಧರ ಎರಡು ವರೆ ವರ್ಷದ ಹಿಂದೆ ಬುಳ್ಳಾಪುರದ ಯುವತಿ ಅಮಿತಾ(26) ಎಂಬಾಕೆಯೊಂದಿಗೆ ಮದುವೆಯಾಗಿದ್ದ. ಮದುವೆಯಾಗಿ ಎರಡೂವರೆ ವರ್ಷ ಕಳೆದಿದ್ದರು ಮಕ್ಕಳಾಗಿರಲಿಲ್ಲ. ಆದರೆ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿಲ್ಲವೆಂದು ಗ್ರಾಮಸ್ಥರು ಸ್ಪಷ್ಟಪಡಿಸಿದ್ದಾರೆ. ಪದೇ ಪದೇ ಜಗಳವಾಡುತ್ತಿದ್ದ ಪತಿಪತ್ನಿ ಕಳೆದ ವರ್ಷ ಗಂಡನ ಮನೆ ತೊರೆದು ಪತ್ನಿ ಅಮಿತಾ ತವರು ಮನೆ…

Read More

ಹೊಸನಗರ ತಾಲೂಕಿನಲ್ಲಿ ಮಕ್ಕಳ ಅಪಹರಣಕ್ಕೆ ಪ್ರಯತ್ನ ಸುಳ್ಳು ಸುದ್ದಿ | ತಪ್ಪು ಸಂದೇಶ ರವಾನಿಸುವವರ ಮೇಲೆ ಕಠಿಣ ಕ್ರಮ : ಸಿಪಿಐ ಗಿರೀಶ್ ಖಡಕ್ ಎಚ್ಚರಿಕೆ

ಹೊಸನಗರ: ಹೊಸನಗರ ಗ್ರಾಮದಲ್ಲಿ ಮಕ್ಕಳ ಕಳ್ಳ ಸಿಕ್ಕಿಬಿದ್ದು ಓಡಿ ಹೋಗಿದ್ದಾನೆ ಈತ ಸಿಕ್ಕಿದರೆ ಪೊಲೀಸರಿಗೆ ತಿಳಿಸಿ ಎಂಬ ಮಾಹಿತಿ ಸಹಿತ ವ್ಯಕ್ತಿಯೊಬ್ಬನ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಜನರ ಆತಂಕಕ್ಕೆ ಕಾರಣವಾಗಿದೆ. ಈ ಬಗ್ಗೆ ಹೊಸನಗರ ಸರ್ಕಲ್ ಇನ್ಸಪೆಕ್ಟರ್ ಗಿರೀಶ್ ಬಿ ಸಿ  ಸ್ಪಷ್ಟನೆ ನೀಡಿದ್ದು ಇಂತಹ ಯಾವುದೇ ಪ್ರಕರಣ ತಾಲೂಕಿನಲ್ಲಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ಇಂತಹ ಮಾಹಿತಿಗಳ ಸತ್ಯಾಸತ್ಯತೆ ಅರಿಯಬೇಕು. ಮಾಹಿತಿ ಅರಿಯದೆ ಬೇರೆ ವ್ಯಕ್ತಿಗಳಿಗೆ, ಜಾಲತಾಣದ ಗ್ರೂಪ್ ಗಳಿಗೆ ಫಾರ್ ವರ್ಡ್ (FORWORD) ಮಾಡುವುದು…

Read More

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಮಲೆನಾಡಿನಲ್ಲಿ ಉಗ್ರರ ಕರಿನೆರಳು!!!! : ಶಿವಮೊಗ್ಗದಲ್ಲಿ ಎಂಜಿನಿಯರ್ ಯಾಸಿನ್ ಸಹಿತ ಇಬ್ಬರು ಶಂಕಿತ ಉಗ್ರರ ಬಂಧನ – ಇನ್ನಿಬ್ಬರಿಗೆ ಶೋಧ

ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION…

Read More

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More