Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More

ಹುಂಚ ಸಮೀಪದಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಗಂಭೀರ ಗಾಯಗೊಂಡ ಯುವಕ : ಆಸ್ಪತ್ರೆಗೆ ದಾಖಲು

ಹುಂಚ :  ಇಲ್ಲಿನ ನಾಗರಹಳ್ಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಮರವೊಂದು  ಬಿದ್ದು ವ್ಯಕ್ತಿಯೋರ್ವನಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಹಾಲಂದೂರು ವಾಸಿ ಗುರುರಾಜ ನಿನ್ನೆ ರಾತ್ರಿ ಹುಂಚ-ನಾಗರಹಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿರುವಾಗ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ನೆಟ್ಟಿರುವ ಅಕೇಶಿಯ ಮರ ಏಕಾಏಕಿ ಬಿದ್ದು ಎಡಗೈ ತುಂಡಾಗಿ ಗಂಭೀರ ಗಾಯಗೊಂಡಿದ್ದಾನೆ.ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹತ್ತಿರದಲ್ಲಿಯೇ ಇರುವ ಆಟೋ ಚಾಲಕ ಅನಂತಭಟ್ ರವರ ಮನೆಯವರೆಗೆ ಗಾಯಾಳು ತೆವಳುತ್ತಾ ಬಂದು ಸಹಾಯಕ್ಕೆ ಕೂಗಿದ್ದಾರೆ.ಕೂಡಲೇ ಆಟೋ ಚಾಲಕ ಅನಂತ್ ಭಟ್ ರವರು ಗಾಯಾಳು ಗುರುರಾಜ್…

Read More

ಅಣೆ ಪ್ರಮಾಣದ ತಪ್ಪು ಕಾಣಿಕೆ ಸಲ್ಲಿಸಲು ಹಾಲಪ್ಪ ಧರ್ಮಸ್ಥಳಕ್ಕೆ ಭೇಟಿ : ಬೇಳೂರು ಅನುಮಾನ /// ಕೆಲವರಿಗೆ ಆಪಾದನೆ ಮಾಡುವುದೇ ಕೆಲಸ : ಹಾಲಪ್ಪ ತಿರುಗೇಟು

ಸಾಗರ: ಈಗ ಶಾಸಕ ಹಾಲಪ್ಪ ಅವರಿಗೆ ಜ್ಞಾನೋದಯ ಆಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದು ತಪ್ಪಾಗಿದೆ ಎಂಬ ಕಾರಣಕ್ಕೆ ಅವರು ತಪ್ಪುದಂಡ ಸಲ್ಲಿಸಲು ಅಲ್ಲಿಗೆ ಹೋಗಿರಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಂಕೆ ವ್ಯಕ್ತಪಡಿಸಿದರು. ಇಲ್ಲಿನ ಮಲೆನಾಡು ಸಿರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ವಿಪರೀತ ಮಳೆಯಿಂದ ಮನೆಗಳು ಕುಸಿದು ಹೋಗಿದೆ. ತೋಟದ ಮಣ್ಣು ಕೊಚ್ಚಿ ಹೋಗಿದ್ದರೆ ಗದ್ದೆಗಳ ಮೇಲೆ ನೆರೆಯಿಂದ ಮಣ್ಣು ತುಂಬಿಕೊಂಡಿದೆ. ರೈತರು…

Read More

ಮಂಡಗದ್ದೆ ಸಮೀಪ ಭೀಕರ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ತೀರ್ಥಹಳ್ಳಿ : ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ತೀರ್ಥಹಳ್ಳಿ ನಡುವಿನ ಮಂಡಗದ್ದೆ ಸಮೀಪ ಸಿಂಗನಬಿದರೆ ಕ್ರಾಸ್ ನಲ್ಲಿ ಸ್ಕೂಟಿ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನೆಡೆದಿದೆ. ಮೃತಪಟ್ಟ ವ್ಯಕ್ತಿ ಶಿವಮೊಗ್ಗ ಸಮೀಪದ ಹೊಸಮನೆ ಗಿರೀಶ್ ಎಂದು ತಿಳಿದುಬಂದಿದೆ. ಈತ ಮಂಡಗದ್ದೆಯಲ್ಲಿ ಊಟ ಮಾಡಿ ಶಿವಮೊಗ್ಗದ ಕಡೆ ತೆರಳುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ ಶಾಸಕ ಹರತಾಳು ಹಾಲಪ್ಪ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಸಾಗರ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಸಾಂತ್ವಾನ ಹೇಳಿ ಆರ್ಥಿಕ ಧನಸಹಾಯ ಮಾಡಿದರು. ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿದ ಅವರು ಸಾಂತ್ವನ ಹೇಳಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದ್ದು, ನ್ಯಾಯ ಸಿಗಲಿದೆ ಎಂಬ ಭರವಸೆ ನೀಡಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶಾಂತಿ ಕೋರಿದರು. ಈ ಸಂಧರ್ಭದಲ್ಲಿ ಸಾಗರ-ಹೊಸನಗರ ತಾಲೂಕ್ ಬಿಲ್ಲವ ಸಮಾಜದ ಬಾಂಧವರು ಹಾಗೂ ಪಕ್ಷದ ಪ್ರಮುಖರು ಇದ್ದರು. ರಾಜ್ಯಸಭಾ…

Read More

ರಿಪ್ಪನ್‌ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಜಾಗೃತಿ ಮೂಡಿಸಿದ ಶಾಲಾ ಯುವ ಸಂಸತ್ ಚುನಾವಣೆ

ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲಾ ಯುವ ಸಂಸತ್ ಚುನಾವಣೆಯನ್ನು ವಿಭಿನ್ನವಾಗಿ ರಿಪ್ಪನ್ ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಚರಿಸಲಾಯಿತು. ಮತದಾನಕ್ಕೆ ಸರ್ಕಾರ ಹದಿನೆಂಟು ವಯೋಮಿತಿ ನಿಗದಿ ಪಡಿಸಿದೆ ಆದರೆ ಮೊದಲ ಮತದಾನ ಮಾಡುವಾಗ ಯುವ ಮತದಾರರಲ್ಲಿ ಆತಂಕ ದುಗುಡ ಎದ್ದುಕಾಣುತ್ತದೆ ಕೆಲವರು ಅಂಜಿಕೆಯಿಂದಲೇ ಮತದಾನದಿಂದ ಹಿಂದೆ ಜರುಗುವುದು ಹೆಚ್ಚು ಇದನ್ನು ಗಮನದಲ್ಲಿಟ್ಟುಕೊಂಡು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರು ವಿದ್ಯಾರ್ಥಿದೆಸೆಯಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ತರಗತಿ…

Read More

ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಉದ್ಘಾಟಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ: ತಾಲೂಕಿನ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ಕೊರತೆಯಿತ್ತು. ಅದರಲ್ಲಿ ಮುಖ್ಯವಾಗಿ ಐಸಿಯು ಸಮಸ್ಯೆ ಮತ್ತು ಆಸ್ಪತ್ರೆಯ ಐಸಿಯು ತೀವ್ರ ನಿಗಾ ಘಟಕ ಮತ್ತು ಶಸ್ತ್ರಚಿಕಿತ್ಸಾ ಕೊಠಡಿಯು ಮಳೆಯಿಂದ ಸೋರುತ್ತಿದ್ದು ಈ  ಕೊಠಡಿ ಸೋರದಂತೆ ಮೇಲ್ಛಾವಣಿ ಶೀಟ್‌ಗಳನ್ನು ಅಳವಡಿಸಿಲಾಗಿದ್ದು ಅದನ್ನು ಮಂಗಳವಾರ ಗೃಹಸಚಿವ ಆರಗ ಜ್ಞಾನೇಂದ್ರ ಉದ್ಘಾಟನೆ ಮಾಡಿದರು. ನಂತರ ಮಾತನಾಡಿದ ಸಚಿವರು ನನಗೆ ಇದೊಂದು ಸಂತೋಷದ ವಿಚಾರ. ಸಾರ್ವಜನಿಕ ಆಸ್ಪತ್ರೆಗೆ ಹಣ ಬಿಡುಗಡೆ ಮಾಡಿಸುವ ಮತ್ತು ಸಾರ್ವಜನಿಕರ ಸಮಸ್ಯೆ ಪರಿಹರಿಸುವ ಪ್ರಯತ್ನ ನೆಡೆಯುತ್ತಿದೆ….

Read More

ಹೆದ್ದಾರಿಪುರದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಭಾರಿ ಗಾಳಿ ಮಳೆಗೆ ಇಲ್ಲಿನ ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದ ಕಾರಣ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ರಿಪ್ಪನ್ ಪೇಟೆಯಿಂದ  ತೀರ್ಥಹಳ್ಳಿಗೆ ಹೋಗುವ ರಸ್ತೆ ಮಧ್ಯ ಹೆದ್ದಾರಿಪುರ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದಿಂದ ರಿಪ್ಪನ್ ಪೇಟೆ – ತೀರ್ಥಹಳ್ಳಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಖಾಸಗಿ ಬಸ್ ಹಾಗೂ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಿದವು. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಧಿಕಾರಿ ತಾವರ್ಯ ನಾಯ್ಕ್ ಹಾಗೂ ಅಕ್ಷಯ್ ಕುಮಾರ್…

Read More