Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಉನ್ನತ ಶಿಕ್ಷಣಕ್ಕಾಗಿ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ |Credit

ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ವಿದೇಶಿ ವಿಶ್ವ ವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಶೈಕ್ಷಣಿಕ ಸಾಲ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಾಸ್ಟರ್ ಡಿಗ್ರಿ, ಪಿ.ಹೆಚ್.ಡಿ. ಹಾಗೂ ಪೋಸ್ಟ್ ಡಾಕ್ಟರಲ್ ಕೋರ್ಸ್‍ಗಳ ವ್ಯಾಸಂಗಕ್ಕೆ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದಿರುವ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 3.50 ಲಕ್ಷಗಳಂತೆ ಕೋರ್ಸ್‍ನ ಅವಧಿಗೆ ಗರಿಷ್ಟ ರೂ. 10.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ವಿದ್ಯಾರ್ಥಿ ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರಬೇಕು. ಮಂಜೂರು ಮಾಡುವ…

Read More

ಮೋದಿಯವರ ಹೆಸರೇ ನಮಗೆ ಸ್ಪೂರ್ತಿ : ಗೃಹ ಸಚಿವ ಆರಗ ಜ್ಞಾನೇಂದ್ರ|Humcha

ಭವ್ಯ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹೆಸರೇ ನಮಗೆ ಸ್ಪೂರ್ತಿಯಾಗಿದೆ ಅಂತಹ ಮಹಾನ್ ವ್ಯಕ್ತಿತ್ವ ಅವರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪ್ರಧಾನಿ ಮೋದಿ ಯವರ 72 ನೇ ಹುಟ್ಟುಹಬ್ಬದ ಅಂಗವಾಗಿ ಶಿವಮೊಗ್ಗ ಜಿಲ್ಲಾ ರೈತ ಮೋರ್ಚಾ ಹುಂಚದಲ್ಲಿ ನಡೆಸಿದ್ದ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿನ ಬಗ್ಗೆ ಹುಂಚ ಅಂಬೇಡ್ಕರ್ ಭವನದಲ್ಲಿ ಭಾನುವಾರ ಸಂಜೆ ಜಿಲ್ಲಾ ಬಿಜೆಪಿ ರೈತ ಮೋರ್ಚಾ ದವರು ಅಯೋಜಿಸಿದ್ದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿ ಕಾರ್ಯಕ್ರಮ ಯಶಸ್ವಿಯಾಗಿ…

Read More

ರಿಪ್ಪನ್‌ಪೇಟೆ : ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ|tammadikoppa

ರಿಪ್ಪನ್‌ಪೇಟೆ;-ಅರಸಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಹೊಟ್ಯಾಳಪುರದಲ್ಲಿ ಮಿನಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು ಜಾಗ ಇಲ್ಲದೆ ಗ್ರಾಮಸ್ಥರು ಊರ ಬಳಿಯಲ್ಲಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ತಾತ್ಕಾಲಿಕವಾಗಿ ಸೆಡ್ ನಿರ್ಮಿಸಿಲಾಗಿ ಅರಣ್ಯ ಇಲಾಖೆಯವರು ತೆರವುಗೊಳಿಸಲು ಮುಂದಾದಾಗ ಪ್ರತಿಭಟನೆ ನಡೆಸಲಾಗಿದ್ದು ಶಾಸಕರ ಗಮನಕ್ಕೆ ತರಲಾಗಿ ಭಾನುವಾರದಂದು ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಗ್ರಾಮಸ್ಥರ ಬೇಡಿಕೆಯಂತೆ ಕಟ್ಟಡ ನಿರ್ಮಾಣಕ್ಕೆ ಅನುವು ಮಾಡಿಕೊಡುವುದರೊಂದಿಗೆ…

Read More

ಏಕಾಏಕಿ 200 ಮನೆ ತೆರವಿಗೆ ಮುಂದಾದ ಅಧಿಕಾರಿಗಳು : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ – ಹಲವರನ್ನು ವಶಕ್ಕೆ ಪಡೆದ ಪೊಲೀಸ್|Shivamogga

ಶಿವಮೊಗ್ಗದ ಮಲ್ಲಿಗೇನಹಳ್ಳಿಯಲ್ಲಿ ಅಕ್ರಮ ಮನೆ ತೆರವು ಕಾರ್ಯಚರಣೆ ನಡೆಸಿ ಮನೆಗಳನ್ನ ನೆಲಸಮ ಗೊಳಿಸಲಾಗಿದೆ. ಕಾರ್ಯಾಚರಣೆಗೆ ಅಡ್ಡ ಬಂದವರನ್ನು ವಶಕ್ಕೆ ಪಡೆದು ತೆರವು ಕಾರ್ಯಚರಣೆ ನಡೆಸಲಾಗುತ್ತಿದೆ. ಮಲ್ಲಿಗೇನಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ಅಪ್ಪರ್ ತುಂಗ ಜಾಗದಲ್ಲಿ ಇಲ್ಲಿನ ಹಕ್ಲಿಪಿಕ್ಕಿ ಜನ ಅಕ್ರಮ ಮನೆ ನಿರ್ಮಿಸಿಕೊಂಡಿದ್ದು ಅವರನ್ನು ತೆರವುಗೊಳಿಸಲು ಯುಟಿಪಿ ಇಲಾಖೆ ಅನೇಕ ಬಾರಿ ನೋಟೀಸ್ ನೀಡಲಾಗಿತ್ತು.ಆದರೆ ನೋಟೀಸ್ ಗೆ ಉತ್ತರ ನೀಡಿಲ್ಲವೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಮಗೆ 6 ತಿಂಗಳು ಕಾಲಾವಕಾಶಕೊಡಿ ಕಾಲಾವಕಾಶ ನೀಡಿದ ನಂತರ ವಸತಿ ಸಚಿವರಿಂದಲೇ ಅನುಮತಿ ತರಲಿದ್ದೇವೆ…

Read More

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ತಮ್ಮ ಕಾರಿನಲ್ಲಿ ಕರೆದೊಯ್ದ ಶಿವಮೊಗ್ಗ ಹೆಚ್ಚುವರಿ ಎಸ್ ಪಿ : ವಿಧಿಯಾಟಕ್ಕೆ ವ್ಯಕ್ತಿ ಸಾವು|shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಓರ್ವರನ್ನು ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಎಸ್​ಪಿ) ವಿಕ್ರಂ ಆಮ್ಟೆ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗ ನಗರದ ಹೊರವಲಯದ ಹರಿಗೆ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಇರ್ಫಾನ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದರು. ಸಾರ್ವಜನಿಕರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ಆಂಬ್ಯುಲೆನ್ಸ್​ಗಾಗಿ ಕಾಯುತ್ತಿದ್ದರು. ಕಾರ್ಯ ನಿಮಿತ್ತ ಭದ್ರಾವತಿಗೆ ತೆರಳಿ ಅದೇ ಮಾರ್ಗವಾಗಿ ಶಿವಮೊಗ್ಗಕ್ಕೆ ಹಿಂದಿರುಗುತ್ತಿದ್ದ ಹೆಚ್ಚುವರಿ ಎಎಸ್​ಪಿ ವಿಕ್ರಂ ಆಮ್ಟೆ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಗೃಹಸಚಿವರ ತವರಿನಲ್ಲೇ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿ !!!!!!!?|Guddekoppa

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರು ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಗುಡ್ಡೆಕೊಪ್ಪ ಸಮೀಪದ ತಲವಡ್ಕದ ಕುಟ್ರ ಎಂಬ ಹಳ್ಳಿಯಲ್ಲಿ ಅಕ್ರಮ ಮದ್ಯಕ್ಕೆ ವ್ಯಕ್ತಿ ಬಲಿಯಾದ ಘಟನೆ ಶನಿವಾರ ರಾತ್ರಿ ನೆಡೆದಿದೆ. ಕೆಲವು ದಿನಗಳ ಹಿಂದೆ ಊರಿನ ಗ್ರಾಮಸ್ಥರೆಲ್ಲರೂ ಸೇರಿ ದೈವ ಸಾನಿಧ್ಯದಲ್ಲಿ ನಮ್ಮ ಊರಿನ ಯಾವುದೇ ಅಂಗಡಿ, ಮಳಿಗೆ, ಮನೆ, ಕೈಚೀಲ, ಮತ್ತು ಹೊರ ಊರಿನಿಂದ ಅಥವಾ ಬೇರೆ ಯಾವ ವ್ಯಕ್ತಿಯೂ ಹೊರಗಡೆಯಿಂದ ಮದ್ಯವನ್ನು ತಂದು ಈ ಊರಿನಲ್ಲಿ ಮಾರಾಟ ಮಾಡಬಾರದೆಂದು ದೈವ  ನ…

Read More

ಭೀಕರ ಕಾರು ಅಪಘಾತ : ಹೊಸನಗರ ಮೂಲದ ಮಾಜಿ ಯೋಧ ಸಾವು – ಇಬ್ಬರ ಸ್ಥಿತಿ ಗಂಭೀರ|accident

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮಾವಿನಹೊಳೆ ನಿವಾಸಿ ಪ್ರಗತಿಪರ ರೈತ ಹಾಗೂ ಮಾಜಿ ಸೈನಿಕ ಚನ್ನಪ್ಪ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾಗಿದ್ದಾರೆ. ಬೆಂಗಳೂರಿನಿಂದ ಮನೆಗೆ ವಾಪಸ್ಸಾಗುವಾಗ ಶಿವಮೊಗ್ಗ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮರಣ ಹೊಂದಿರುವುದಾಗಿ ಎಂದು ತಿಳಿದು ಬಂದಿದೆ. ಈ ಅಪಘಾತದಲ್ಲಿ ಮೃತರ ಪತ್ನಿ ಮತ್ತು ಪುತ್ರಿಗೂ ಗಂಭೀರ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪುತ್ರಿಯನ್ನು ಬೆಂಗಳೂರಿಗೆ ತನ್ನ ಮಾರುತಿ ಆಲ್ಟೊ 800 ಕಾರಿನಲ್ಲಿ ಕರೆದುಕೊಂಡು ಹೋಗಿ…

Read More

ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru

ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು‌ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…

Read More

ಕೋಟಿ ಹಣವಿದ್ದರೂ ತುತ್ತು ಅನ್ನಕ್ಕೆ ಪರದಾಟ : ಆಸ್ತಿ ಪಡೆದು ಕೈಕೊಟ್ಟ ಮಕ್ಕಳು – ಅನ್ನಕ್ಕಾಗಿ ಅಂಗಲಾಚುತ್ತಿರುವ ವೃದ್ದ|sadstory

ಹೊಸನಗರ : ಮನುಷ್ಯ ತನ್ನ ಜೀವನದಲ್ಲಿ ಹಲವಾರು ಅಡೆತಡೆಗಳನ್ನು ಎದುರಿಸಿ ಆಸ್ತಿಪಾಸ್ತಿಗಳನ್ನು ಗಳಿಸುವುದು ತನ್ನ ಮಕ್ಕಳು ತಾನು ಪಟ್ಟ ಕಷ್ಟ ಅನುಭವಿಸದಿರಲಿ ಹಾಗೂ ತಮ್ಮ ವೃದ್ದಾಪ್ಯ ಸ್ಥಿತಿಯಲ್ಲಿ ಆಸರೆಯಾಗಿ ಇರಲಿ ಎಂದು ತಾನೇ…ಆದರೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಳ್ಳಿಯೊಂದರಲ್ಲಿ ತಾನು ಗಳಿಸಿದ ಆಸ್ತಿಯೇ ವೃದ್ದರೊಬ್ಬರಿಗೆ ಮುಳುವಾಗಿ ತುತ್ತು ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಹೌದು ಹೊಸನಗರ ಪಟ್ಟಣದಿಂದ ಸುಮಾರು 12 ಕಿಮೀ ದೂರದಲ್ಲಿರುವ ಮಳಲಿ ಗ್ರಾಮದ ಅತೀ ಶ್ರೀಮಂತರಾಗಿ ಬಾಳಿ ಬದುಕಿದ್ದ ಮಳಲಿ ಶೀನಯ್ಯನವರು ತಮ್ಮ…

Read More