Headlines

postmannews

ಚಂದ್ರಗುತ್ತಿ: ರೇಣುಕಾಂಬ ದೇವಸ್ಥಾನದ ಪ್ರಧಾನ ಅರ್ಚಕರಾದ ಅರ್ಚಕ್ ದತ್ತಾತ್ರೇಯ ಭಟ್ ನಿಧನ:

ಚಂದ್ರಗುತ್ತಿ: ಇಲ್ಲಿನ ಪುರಾಣ ಹಾಗೂ ಐತಿಹಾಸಿಕ ಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದ ಅರ್ಚಕ್ ದತ್ತಾತ್ರೇಯ ಭಟ್ (80) ಭಾನುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಶನಿವಾರ ತೀವ್ರವಾದ ಎದೆನೋವು ಕಾಣಿಕೊಂಡಿತ್ತು, ತಕ್ಷಣವೇ ಶಿರಸಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮೃತರು ಪುತ್ರರಾದ ಅರ್ಚಕ ಅರವಿಂದ್ ಭಟ್, ಅರ್ಚಕ ನಿರಂಜನ್ ಭಟ್ ಸೇರಿದಂತೆ ಪತ್ನಿ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ:  ಶ್ರೀ…

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More

ಧರೆ ಕುಸಿತ ಪ್ರದೇಶಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ:

ರಿಪ್ಪನ್ ಪೇಟೆ: ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಬಾರಿ ಮಳೆಗೆ ವಿಪರೀತ ಹಾನಿಯಾಗಿತ್ತು ಈ ಹಿನ್ನಲೆ ಯಲ್ಲಿ  ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ  ದೊಂಬೆಕೊಪ್ಪದ  ಗ್ರಾಮದ ಹುಚ್ಚಪ್ಪ ನವರ ಮನೆ ಸಮೀಪದಲ್ಲಿ ಅತಿವೃಷ್ಟಿಯಿಂದ ಧರೆ ಕುಸಿದಿರುವ ಪ್ರದೇಶಕ್ಕೆ ಎಂಐಎಸ್ಎಲ್ ಅಧ್ಯಕ್ಷ ಹಾಗು ಸಾಗರ ವಿಧಾನ ಸಭೆ ಶಾಸಕ ಹರತಾಳು ಹಾಲಪ್ಪನವರು ಇಂದು ಮಧ್ಯಾಹ್ನ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಶಾಸಕರು ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆ ಪರಿಹರಿಸುವಂತೆ ಸೂಚಿಸಿದರು. ಈ…

Read More

ಇಂದಿನಿಂದ ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು:  ರಾಜ್ಯದಲ್ಲಿ ಕೊರೋನಾ 3ನೇ ಅಲೆ ಭೀತಿ ಇತ್ತೀಚೆಗೆ ಏರುಗತಿಯಲ್ಲಿ ಸಾಗಲು ಆರಂಭಿಸಿದ್ದು ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಇಂದು ಕೋವಿಡ್ ಟಫ್ ರೂಲ್ಸ್ ಜಾರಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5ರವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಇನ್ನು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ನಿರ್ಧರಿಸಲಾಗಿದೆ…

Read More

ಭದ್ರಾವತಿ ಮಹಿಳಾ ಸಮಾಜದಿಂದ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳಿಗೆ ಸನ್ಮಾನ:

ಭದ್ರಾವತಿ:ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರವನ್ನು ಉಚಿತವಾಗಿ ನೆರೆವೆರಿಸುವ ಮೂಲಕ ಮಾನವೀಯತೆ ಮೆರೆಯುತ್ತಿರುವ ಬಜರಂಗದಳ ಸಂಘಟನೆಯ ಕರೋನಾ ವಾರಿಯರ್ಸ್ ಗಳನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.      ಕರೋನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರೆವೇರಿಸಲು ಕುಟುಂಬ ವರ್ಗದವರೇ ಹಿಂದೆ ಮುಂದೆ ನೋಡುವ ಸಂದರ್ಭದಲ್ಲಿ ಅದರಲ್ಲೂ ಉಚಿತವಾಗಿ ಮೃತ ದೇಹಗಳ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಂಕಷ್ಟದ ಸಮಯದಲ್ಲಿ ನೆರವಾಗಿ ನಿಂತಿರುವ ಬಜರಂಗದಳ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದ್ದು, ಈ ಯುವಕರ ಸೇವೆಯನ್ನು ನಗರದ ವಿವಿಧ ಸಂಘ-ಸಂಸ್ಥೆಗಳು…

Read More

ರಿಪ್ಪನ್ ಪೇಟೆ: ಬ್ಯಾಂಕಿನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ: ರಾಮ ನಾಯಕ್

 ರಿಪ್ಪನ್ ಪೇಟೆ: ಕೆನರಾ ಬ್ಯಾಂಕ್ ರಾಷ್ಟ್ರದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿದ್ದು. ವಾಣಿಜ್ಯ ಕೃಷಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ  ಗಣನೀಯ ಸೇವೆಯನ್ನು ನೀಡುತ್ತಿದೆ ಇದರ ಸದುಪಯೋಗವನ್ನು ಗ್ರಾಹಕರು ಪಡೆದುಕೊಳ್ಳಬೇಕೆಂದು ಕೆನರಾ ಬ್ಯಾಂಕ್ ಡಿವಿಜನಲ್ ಮ್ಯಾನೇಜರ್ ರಾಮ ನಾಯಕ್ ಹೇಳಿದರು.  ಶುಕ್ರವಾರ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ನೂತನವಾಗಿ ನಿರ್ಮಿಸಲಾದ ಬಂಗಾರ ಸಾಲದ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆನರಾ ಬ್ಯಾಂಕ್ ಗ್ರಾಹಕರ ಪರವಾಗಿ ಹಗಲಿರುಳು ಶ್ರಮಿಸುತ್ತಿದ್ದು ಎಲ್ಲ ಗ್ರಾಹಕರಿಗೂ ಬ್ಯಾಂಕಿನ ಸೌಲಭ್ಯಗಳು ಸಿಗಲೇಬೇಕೆಂಬ ಸದುದ್ದೇಶದಿಂದ  ಕಾರ್ಯನಿರ್ವಹಿಸುತ್ತಿದೆ. ಕೇಂದ್ರ…

Read More

ಕೊಳಕು ಮಂಡಲ ಹಾವು ಕಚ್ಚಿ ಜೀವನದ ಅತ್ಯಂತ ಹೀನಾಯ ಸ್ಥಿತಿಯಲ್ಲಿ ಸರಗುಂದದ ಬಡ ವಿದ್ಯಾರ್ಥಿಯ ಬದುಕು:

ಆನಂದಪುರ: ಓದಿ ಜೀವನದಲ್ಲಿ ಉನ್ನತ ಹುದ್ದೆಗೇರುವ ಕನಸು ಕಂಡಿದ್ದಂತಹ ವಿದ್ಯಾರ್ಥಿಯ ಬದುಕಲ್ಲಿ ಇದೀಗ ಕತ್ತಲು ಆವರಿಸಿದಂತಾಗಿದೆ. ಇತರ ವಿದ್ಯಾರ್ಥಿಗಳಂತೆ ಆಟ ಪಾಠ ಕಲಿಯೋಣವೆಂದರೆ ನಡೆಯಲು ಬಾರದ ಪರಿಸ್ಥಿತಿಗೆ ಈ ವಿದ್ಯಾರ್ಥಿ ಈಗ ತಲುಪಿದ್ದಾನೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಸರಗುಂದ ಗ್ರಾಮದ ವಿದ್ಯಾರ್ಥಿ ಸ್ಕಂದನ ಎಂಬ ಹತ್ತನೇ ತರಗತಿ ಓದುತ್ತಿದ್ದ ಆ ವಿದ್ಯಾರ್ಥಿ ಮನೆಯ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಕೊಳಕುಮಂಡಲ ಹಾವು ಕಚ್ಚಿ ಇದೀಗ ಕಾಲು ಕೊಳೆಯುವಂತಹ ಸ್ಥಿತಿ ಬಂದಿದೆ. ಮನೆಯಲ್ಲಿ ನೋಡಿದರೆ ಆರ್ಥಿಕ ಸ್ಥಿತಿ…

Read More

ರಿಪ್ಪನ್ ಪೇಟೆ: ಅನೈತಿಕ ಚಟುವಟಿಕೆಯ ತಾಣವಾದ ಸ್ತ್ರೀಶಕ್ತಿ ಸಮುದಾಯ ಭವನ.

ರಿಪ್ಪನ್ ಪೇಟೆ: ಪಟ್ಟಣಕ್ಕೆ  ಹೊಂದಿಕೊಂಡಂತೆ ಇರುವ ದೊಡ್ಡಿನಕೊಪ್ಪ ಬಡಾವಣೆಯಲ್ಲಿರುವ ಸ್ತ್ರೀಶಕ್ತಿ ಸಮುದಾಯಭವನ ಸರಿಯಾದ ನಿರ್ವಹಣೆ ಇಲ್ಲದೇ ಅನೈತಿಕ ಚಟುವಟಿಕೆಯ ತಾಣವಾಗಿದೆ.ಲಕ್ಷಾಂತರ ರೂಪಾಯಿ ಮೊತ್ತದ ಅನುದಾನದಲ್ಲಿ ತಲೆಯೆತ್ತಿ ನಿಂತ  ಸ್ತ್ರೀ ಶಕ್ತಿ ಸಮುದಾಯಭವನ ಇದೀಗ ಪಾಳುಬಿದ್ದು ಹಾಗೂ ಪುಡಾರಿಗಳ ನೆಚ್ಚಿನ ಅನೈತಿಕ ತಾಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. 2011-12ರಲ್ಲಿ ಅಂದಿನ ಶಾಸಕರಾಗಿದ್ದ ಬೇಳೂರು ಗೋಪಾಲಕೃಷ್ಣರವರ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸ್ತ್ರೀ ಶಕ್ತಿ ಸಮುದಾಯ ಭವನವನ್ನು  ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಿತ್ತು. ಈಗ ಸ್ತ್ರೀಶಕ್ತಿ…

Read More

ಜಿಲ್ಲಾ ಉಸ್ತುವಾರಿ ಸಚಿವ ಕೆ ಎಸ್ ಈಶ್ವರಪ್ಪ ನಾಳೆ ರಿಪ್ಪನ್ ಪೇಟೆಗೆ:

ರಿಪ್ಪನ್ ಪೇಟೆ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಕೆ ಎಸ್ ಈಶ್ವರಪ್ಪ ರವರು ನಾಳೆ ರಿಪ್ಪನ್ ಪೇಟೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಈಶ್ವರಪ್ಪರವರು ರಿಪ್ಪನ್ ಪೇಟೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ವರದಿ : ಸಬಾಸ್ಟಿನ್ ಮ್ಯಾಥ್ಯೂಸ್‌…

Read More

ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಕುಗ್ರಾಮದ ಗ್ರಾಮಸ್ಥರಿಂದ ಉಗ್ರ ಹೋರಾಟದ ಎಚ್ಚರಿಕೆ:

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಗ್ರಾಮಸ್ಥರು ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ದ ಗದ್ದೆಯಂತಾದ ರಸ್ತೆಯಲ್ಲಿ ನಾಟಿ ಮಾಡುವ ಮೂಲಕ ವಿಭಿನ್ನ ಪ್ರತಿಭಟನೆಯನ್ನು ನಡೆಸಿದ ಘಟನೆ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ  ಎಂಬ ಅವಳಿ ಗ್ರಾಮದಲ್ಲಿ ನಡೆದಿದೆ. ಒಂದಗದ್ದೆ ಹಾಗೂ ನೀರೇರಿ ಗ್ರಾಮಗಳು ಅವಳಿ ಗ್ರಾಮಗಳಾಗಿವೆ. ಈ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಬೀದಿದೀಪ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ.  ಈ ಮೂಲಭೂತ ಸೌಕರ್ಯಗಳ…

Read More