Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ಟ್ರಾಕ್ಟರ್ ಕಳ್ಳತನದ ಇಬ್ಬರು ಆರೋಪಿಗಳ ಬಂಧನ

ರಿಪ್ಪನ್‌ಪೇಟೆ :ಟ್ರ್ಯಾಕ್ಟರ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪ್ಪನ್ ಪೇಟೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮಂಗಳವಾರ ರಾತ್ರಿ ಇಬ್ಬರು ಅರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.  ಬಂಧಿತ ಅರೋಪಿಗಳು ಆನಂದಪುರದ ದಾಸನಕೊಪ್ಪ ವಾಸಿ ಸಂದೀಪ (30) ಹಾಗೂ ಟ್ರ್ಯಾಕ್ಟರ್‌ ಚಾಲಕ ಹಾವೇರಿ ಜಿಲ್ಲೆಯ ಗುಡ್ಡಪ್ಪ (28) ಎನ್ನಲಾಗಿದೆ.  ಶನಿವಾರದಂದು ಸಾಗರ ರಸ್ತೆಯ ವಡಗೆರೆಯ ವೆಂಕಪ್ಪ ಶೆಟ್ಟಿ ಅವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.  ಈ ಪ್ರಕರಣದ ಪ್ರಮುಖ ಆರೋಪಿ ವಡಗೆರೆ –ಚಂದಾಳದಿಂಬದ ವಾಸಿ ಪ್ರತಾಪ್‌ಸಿಂಗ್‌ ಮಂಗಳವಾರ…

Read More

SSLC ಪಲಿತಾಂಶಕ್ಕೆ ಕ್ಷಣಗಣನೆ : ಪಲಿತಾಂಶ ಮೊಬೈಲ್ ನಲ್ಲಿ ನೋಡುವುದು ಹೇಗೆ???? ಈ ಸುದ್ದಿ ನೋಡಿ!!!!

2021- 22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ  ಮೇ 19 ರಂದು  ಪ್ರಕಟವಾಗಲಿದೆ.  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮೇ 19 ರ ಗುರುವಾರ  ಮಧ್ಯಾಹ್ನ 12.30ಕ್ಕೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪಕಟಿಸಲಿದ್ದಾರೆ. ಬಳಿಕ ವಿವಿಧ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ರಜೆಗಳು…

Read More

ಗ್ರಾಮ ಲೆಕ್ಕಾಧಿಕಾರಿ ವರ್ಷಿಣಿ ರವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ :

ರಿಪ್ಪನ್ ಪೇಟೆ ನಾಡಕಚೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕೆಂಚನಾಲ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರ್ಷಿಣಿ ರವರು ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ಕೆಂಚನಾಲ ಗ್ರಾಮ ಪಂಚಾಯಿತ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ವರ್ಷಿಣಿ ರವರು ಕಳೆದ 6 ವರ್ಷಗಳಿಂದ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಲೆಕ್ಕಿಗರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರ ಅನುಪಮ ಸೇವೆ ಹಾಗೂ ಕರ್ತವ್ಯಕ್ಕೆ ಗೌರವಸೂಚಕವಾಗಿ ಇಲ್ಲಿನ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಅಧಿಕಾರಿ ವರ್ಗದವರು ಇಂದು ವರ್ಷಿಣಿ ರವರಿಗೆ ಸನ್ಮಾನಿಸಿ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ. ಈ…

Read More

ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”

ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ‌ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…

Read More

ರಿಪ್ಪನ್ ಪೇಟೆ ಸಮೀಪದಲ್ಲಿ ಟಿಪ್ಪರ್ ಲಾರಿ ಅಪಘಾತ : ತಪ್ಪಿದ ಭಾರೀ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಅಪಘಾತವಾದ ಘಟನೆ ರಿಪ್ಪನ್ ಪೇಟೆ ಸಮೀಪದ ಶೆಟ್ಟಿಬೀಡು ಗ್ರಾಮದಲ್ಲಿ ನಡೆದಿದೆ. ಹೊಸನಗರದಿಂದ ರಿಪ್ಪನ್ ಪೇಟೆಗೆ ತೆರಳುತ್ತಿದ್ದ KA55 3809 ಟಿಪ್ಪರ್ ಲಾರಿಯು ಶೆಟ್ಟಿಬೀಡು ಸಮೀಪದಲ್ಲಿ ಬ್ರೇಕ್ ಜಾಮ್ ಆಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ  ಧರೆಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ನ ಮುಂಭಾಗ ನಜ್ಜುಗುಜ್ಜಾಗಿದೆ.ಅದೃಷ್ಟವಶಾತ್ ಚಾಲಕನಿಗೆ ಯಾವುದೇ  ಗಂಭೀರ ಗಾಯಗಳಾಗಿಲ್ಲ. ಶೆಟ್ಟಿಬೀಡು ಕ್ರಾಸ್ ನಲ್ಲಿ ಬ್ರೇಕ್ ಜಾಮ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಎಸ್ಕೇಪ್!!!!!!

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿದ್ದ ಕಳ್ಳತನದ ಆರೋಪಿಯೊಬ್ಬ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.  ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್…

Read More

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವ ಪತ್ತೆ :

ಸಾಗರದ ಗಣಪತಿ ಕೆರೆಯಲ್ಲಿ ಯುವತಿಯ ಶವವೊಂದು ಪತ್ತೆಯಾಗಿದೆ.ಗಣಪತಿ ಕೆರೆಯ ದಡದ ನೀರಿನಲ್ಲಿ ಶವ ತೇಲುತ್ತಿತ್ತು, ಮೂಲಗಳ ಪ್ರಕಾರ ಮೃತಪಟ್ಟವರು  ಬೆಳಲಮಕ್ಕಿ ವಾಸಿ ರಕ್ಷಿತಾ ಎಂದು ಹೇಳಲಾಗುತ್ತಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಕ್ಷಿತಾ ಸಾವು ಕೊಲೆಯೋ, ಆತ್ಮಹತ್ಯೆಯೋ ಎಂಬ ನಿಗೂಢ ಅಂಶಗಳು ಪೊಲೀಸರ ತನಿಖೆಯಿಂದ ಹೊರಬರಬೇಕಾಗಿದೆ. ಇತ್ತೀಚಿಗೆ  ಸಾಗರದ ಕೇಶವ ಜ್ಯುವೆಲ್ಲರ್ಸ್ ನ ಸುಚಿತ್ರ ಸಾವಿನ ಪ್ರಕರಣದ ಹಿಂದೆಯೇ ರಕ್ಷಿತಾ ಪ್ರಕರಣವು ನಡೆದಿದ್ದು ಸುಚಿತ್ರ ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎನ್ನುವುದು ಇನ್ನೂ ಬಗೆಹರಿದಿಲ್ಲ . ಇದು ಯಾವ ಹಂತಕ್ಕೆ…

Read More

ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ

ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ. ರಿಪ್ಪನ್‌ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ. ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ…

Read More

ತೀರ್ಥಹಳ್ಳಿಯ ನೂತನ ಸಿಪಿಐ ಆಗಿ ಅಶ್ವಥ್ ಗೌಡ ನೇಮಕ :

ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ  ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ  ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ‌ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್‌ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ…

Read More

ರಿಪ್ಪನ್‌ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ  ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…

Read More