Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ನಾಳೆ (21-07-2022) ರಿಪ್ಪನ್‌ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ

ರಿಪ್ಪನ್‌ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್‌ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳು 7 ದಿನ ಪೊಲೀಸ್ ಕಸ್ಟಡಿಗೆ : ಹಂದಿ ಅಣ್ಣಿ ಹಂತಕರ ಫೋಟೋಗಳು ವೈರಲ್

ಶಿವಮೊಗ್ಗ : ಹಂದಿ ಅಣ್ಣಿ ಕೊಲೆ ಪ್ರಕರದ 8 ಜನ ಆರೋಪಿಗಳನ್ನ ಇಂದು ಶಿವಮೊಗ್ಗದ ನ್ಯಾಯಾಲಯದ ಮುಂದೆ ಹಾಜರಿ ಪಡಿಸಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು. 5 ನೇ ಹೆಚ್ಚುವರಿ ವ್ಯವಹಾರ ನ್ಯಾಯಾಧೀಶರ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳಾದ ಶಿವು ಕುಮಾರ್ ಜಿ.ಎನ್ ಮುಂದೆ ಇಂದು ಮಧ್ಯಾಹ್ನ ವಿನೋಬ‌ನಗರ ಪೊಲೀಸರು ಅಣ್ಣಿ ಹತ್ಯೆಯ ಆರೋಪಿಗಳನ್ನ ಹಾಜರಿಪಡಿಸಿದರು. ಆರೋಪಿಗಳನ್ನ ಒಂದು ವಾರ ಪೊಲೀಸ್ ಕಸ್ಟಡಿಗೆ ಮಾನ್ಯ ನ್ಯಾಯಾಧೀಶರು ನೀಡಿ ಆದೇಶಿಸಿದ್ದಾರೆ. ಜು. 27 ರಂದು ಮಧ್ಯಾಹ್ನ 3 ಗಂಟೆಗೆ…

Read More

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ : ಮಾಜಿ ಸಚಿವ ಈಶ್ವರಪ್ಪರಿಗೆ ಬಿಗ್ ರಿಲೀಫ್

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪರಿಗೆ ಕ್ಲೀನ್ ಚೀಟ್ ಸಿಕ್ಕ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾನು ಮೊದಲೇ ಹೇಳಿದ್ದೆ ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಗೆದ್ದು ಬರುತ್ತೇನೆ ಎಂದಿದ್ದೆ. ಇದೀಗ ಹಾಗೆ ಆಗಿದೆ. ದೇವರು ನನ್ನ ಪರವಾಗಿರುವುದಕ್ಕೆ ಸಂತೋಷವಾಗಿದೆ ಎಂದರು. ನನ್ನಿಂದಾಗಿ ನನ್ನ ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರಿಗೆ ಮುಜುಗರವಾಗಿತ್ತಲ್ಲ ಎಂಬ ನೋವಿತ್ತು. ಏನೂ ತಪ್ಪು ಮಾಡದ…

Read More

ನಿಟ್ಟೂರು ಸಮೀಪದ ಹೊಳೆಯಲ್ಲಿ ಪುರುಷನ ಶವ ಪತ್ತೆ :

ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟುಕ ಗ್ರಾಮದ ಸೇತುವೆ ಬಳಿ ಪುರುಷನೊಬ್ಬನ ಶವ ಪತ್ತೆಯಾಗಿದೆ. ನಿಟ್ಟೂರು ಸಮೀಪದ ಮರಕುಟುಕ ಸೇತುವೆ ಬಳಿಯ ಹೊಳೆಯಲ್ಲಿ ಪುರುಷನೊಬ್ಬನ ಶವ ಗಿಡಗಂಟಿಯಲ್ಲಿ ಸಿಲುಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯವರು ಎಂದು ಶಂಕಿಸಲಾಗಿದ್ದು,ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ತೆರಳಿದ್ದು ತನಿಖೆ ಕೈಗೊಂಡಿದ್ದಾರೆ.

Read More

ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಮರು ತನಿಖೆ ನಡೆಸುವಂತೆ ಆಗ್ರಹ

ಸಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ವಿಧ್ಯಾರ್ಥಿನಿಯೊಬ್ಬರ ಮೇಲೆ ಹಿರಿಯ ವೈದ್ಯರೊಬ್ಬರಿಂದ ನಡೆದಿರುವ ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ಮುಚ್ಚಿಹಾಕಲಾಗಿದ್ದು, ಈ ಕೂಡಲೆ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರ ವಿರುದ್ಧ ಕಠಿಣ ಕ್ರಮವನ್ನು ಕೈಗೊಂಡು ಪೀಪಲ್ಸ್ ಲಾಯರ್ ಗಿಲ್ಡ್ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಕಳೆದ ಶುಕ್ರವಾರ ಅಂದರೆ ದಿನಾಂಕ:15-07-2022 ರಂದು ಸಿಮ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಹಿರಿಯ ಶಸ್ತ್ರ ಚಿಕಿತ್ಸೆ ವೈದ್ಯರಾದ ಆಶ್ವಿನ್ ಹೆಬ್ಬಾರ್, ಎಂಬುವರಿಂದ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಉತ್ತರಭಾರತೀಯ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸಿಮ್ಸ್  ನಿರ್ದೇಶಕರಿಗೆ ಲಿಖಿತ ದೂರನ್ನು…

Read More

ರೌಡಿಶೀಟರ್ ಹಂದಿ ಅಣ್ಣಿ ಯ ಬರ್ಬರ ಹತ್ಯೆ ಮಾಡಿದ್ದ ಆರೋಪಿಗಳು ಚಿಕ್ಕಮಗಳೂರು ಎಸ್ ಪಿ ಎದುರು ಶರಣಾಗತಿ :

ಶಿವಮೊಗ್ಗದ ವಿನೋಬ ನಗರದಲ್ಲಿ ಹಾಡುಹಗಲೇ ರೌಡಿಶೀಟರ್ ಹಂದಿ ಅಣ್ಣಿ ಯ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳು ಚಿಕ್ಕಮಗಳೂರಿನ ಎಸ್ ಪಿ ಎದುರಲ್ಲಿ ಶರಣಾಗಿದ್ದಾರೆ. 8 ಜನ ಆರೋಪಿಗಳು ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಮುಂದೆ ಶರಣಾಗಿರುವುದಾಗಿ ತಿಳಿದು ಬಂದಿದೆ.ತಡರಾತ್ರಿ 8 ಜನ ಆರೋಪಿಗಳು ಚಿಕ್ಕಮಗಳೂರು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಬಂದು ಶರಣಾಗಿರುವುದಾಗಿ ತಿಳಿದು ಬಂದಿದೆ. ಎಸ್ಪಿ ಮುಂದೆ 8 ಜನರು ಆರೋಪಿಗಳು ಹಂದಿ ಅಣ್ಣಿಯನ್ನ ಕೊಲೆ ಮಾಡಿದವರು ನಾವೇ ಎಂದು ತಪ್ಪೊಪ್ಪಿಕೊಂಡಿದ್ದಾರೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ…

Read More

ತೀರ್ಥಹಳ್ಳಿ ತಾಲ್ಲೂಕಿನ ದರಲಗೋಡು “ನೆಸ್ಟ್ ಹೋಂ ಸ್ಟೇ” ಮೇಲೆ ದಾಳಿ : 9 ಜನರ ವಿರುದ್ಧ ಎಫ್ಐಆರ್‌ ದಾಖಲು !

ತೀರ್ಥಹಳ್ಳಿ : ತಾಲೂಕಿನ ದರಲಗೋಡಿನಲ್ಲಿರುವ  ನೆಸ್ಟ್ ಹೋಮ್ ಸ್ಟೇ‌ಯಲ್ಲಿ ಜೂಜಾಡುತ್ತಿದ್ದವರ ಮೇಲೆ ತೀರ್ಥಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ‌ಯಲ್ಲಿ 9 ಜನರಿದ್ದು ಅವರ ಮೊಬೈಲ್ ಮತ್ತು ಇಸ್ಪೀಟ್ ಆಟಕ್ಕೆ ಪಣವಾಗಿಟ್ಟಿದ್ದ 30,270 ರೂ. ಹಣವನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ.  ದರಲಗೋಡಿನ ನೆಸ್ಟ್ ಹೋಮ್ ಸ್ಟೇಯಲ್ಲಿ ಇಸ್ಪೀಟ್ ಆಟವಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ  ತೀರ್ಥಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮ ಅವರ ನೇತೃತ್ವದಲ್ಲಿ ಭಾನುವಾರ ಸಂಜೆ ದಾಳಿ ನಡೆಸಲಾಗಿದೆ. ಪರವಾನಗಿ ಇಲ್ಲದೆ ಇಸ್ಪೀಟ್ ಆಟವಾಡಲು ಅವಕಾಶ ಮಾಡಿಕೊಟ್ಟ ಕಾರಣ…

Read More