Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ.

ರಿಪ್ಪನ್ ಪೇಟೆ: ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ದ್ವಿತೀಯ  ಪಿಯುಸಿ  ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿ ಪಡೆದ  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಉಪನ್ಯಾಸಕ ವೃಂದ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರಿಂದ  ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜ್ ಹತ್ ಉಲ್ಲಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ …

Read More

ಕನ್ನಡದ ಪ್ರಖ್ಯಾತ ನಟ,ನಿರ್ದೇಶಕ ರಿಷಬ್ ಶೆಟ್ಟಿ ರವರ ನೂತನ ಚಲನಚಿತ್ರಕ್ಕೆ ನಾಳೆ ಶಿವಮೊಗ್ಗದಲ್ಲಿ ಆಡಿಷನ್ :

ಶಿವಮೊಗ್ಗ: ಚಿತ್ರನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರೊಡಕ್ಷನ್ಸ್ ನ ನೂತನ ಚಲನಚಿತ್ರಕ್ಕೆ ಕಲಾವಿದರ ಆಯ್ಕೆ ಮಾಡಿಕೊಳ್ಳಲು ಶಿವಮೊಗ್ಗ ನಗರದಲ್ಲಿ ಆಡಿಷನ್ ನಡೆಯಲಿದೆ. ಜೂ.21ರ ಮಂಗಳವಾರ ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪಕ್ಕದ ಕೋಟೆ ಬಯಲು ರಂಗಮಂದಿರದಲ್ಲಿ ನಡೆಯುವುದು. 5 ರಿಂದ 10 ವರ್ಷದೊಳಗಿನ ಬಾಲ ಕಲಾವಿದರು, 20ರಿಂದ 30, 50 ರಿಂದ 65 ವರ್ಷದ ಪುರುಷರು ಪೋಷಕ ಪಾತ್ರಕ್ಕೆ ಹಾಗೂ 20 ರಿಂದ 35 ವರ್ಷದ ವಯಸ್ಸಿನ…

Read More

ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ಹಳ್ಳಿಗಾಡಿನ ಪ್ರತಿಭೆ : ಗರ್ತಿಕೆರೆ ಗ್ರಾಮದ ಕಾವ್ಯಾ ಳಿಗೆ ಒಲಿದ ರಾಷ್ಟ್ರ ಮಟ್ಟದ ಬೆಳ್ಳಿ ಪದಕ

ನವದೆಹಲಿಯಲ್ಲಿ ಸೋಮವಾರ ಮುಕ್ತಾಯಗೊಂಡ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಾವ್ಯ ಕೆ ಎನ್ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ಗಳಿಸಿದ್ದು ಕರ್ನಾಟಕ ರಾಜ್ಯದ ಹೆಸರನ್ನು ಮೆರೆದಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಕಾವ್ಯ ಕೆ ಎನ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಈ ಪ್ರತಿಭಾವಂತೆ ರಾಷ್ಟ್ರ ಮಟ್ಟದಲ್ಲಿ 5 ಬಾರಿ ಪ್ರಥಮ ಸ್ಥಾನವನ್ನು, 4…

Read More

ರಿಪ್ಪನ್ ಪೇಟೆ ಸುತ್ತಮುತ್ತ ಮೊಬೈಲ್ ನೆಟ್ ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿರುವ ಮೊಬೈಲ್ ಗ್ರಾಹಕರುಗಳು….!ಸಿಡಿದೆದ್ದು ಮೊಬೈಲ್ ಸೇವಾ ಕೇಂದ್ರಗಳಿಗೆ ಬೀಗ ಜಡಿಯಲು ಸನ್ನದ್ಧರಾಗುತ್ತಿರುವ ಗ್ರಾಹಕರುಗಳು..!!???

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರಮುಖ ಪಟ್ಟಣಗಳಲ್ಲಿ ಒಂದಾದ ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮದ ಮೊಬೈಲ್ ಗ್ರಾಹಕರುಗಳು  ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಆಕಾಶವನ್ನು ನೋಡುತ್ತಿದ್ದಾರೆ.  ಗ್ರಾಹಕರ ಸಮಸ್ಯೆಗೆ ಸ್ಪಂದಿಸದ ಸೇವಾ ಕೇಂದ್ರಗಳು :  ರಿಪ್ಪನ್ ಪೇಟೆ ಯಲ್ಲಿ ಖಾಸಗಿ ಮೊಬೈಲ್ ಕಂಪನಿಗಳಾದ ಏರ್ ಟೆಲ್, ಜಿಯೋ ಸೇರಿದಂತೆ ಬಿಎಸ್ಎನ್ಎಲ್  ಸೇವಾ ಕೇಂದ್ರಗಳು ಇದ್ದರೂ ಸಹ ದಿನನಿತ್ಯ ನೂರಾರು ಬಾರಿ ಮೊಬೈಲ್ ನೆಟ್ವರ್ಕ್ ಗಳ ಸಮಸ್ಯೆಗಳು ಉಂಟಾಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಸೇವಾಕೇಂದ್ರದ…

Read More

ಕ್ರಿಕೆಟ್ ಆಡುವಾಗ ಕುಸಿದು ಬಿದ್ದು ನಗರಸಭೆ ಕಾರ್ಮಿಕ ಸಾವು :

 ಭದ್ರಾವತಿಯ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾದ ಕ್ರಿಕೆಟ್‌ ಪಂದ್ಯಾವಳಿಯ ಸಂದರ್ಭದಲ್ಲಿ ದುರ್ಘನೆಯೊಂದು ನಡೆದಿದೆ. ಭದ್ರಾವತಿ ನಗರಸಭೆ ವತಿಯಿಂದ ಕಾರ್ಮಿಕರು ಹಾಗು ಸಿಬ್ಬಂದಿಯವರಿಗೆ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕ್ರಿಕೆಟ್ ಆಡುವ ವೇಳೆ ದಿನೇಶ್‌ರಾವ್ (38) ಎಂಬುವವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿಯೇ ಇದ್ದ ಆರೋಗ್ಯ ಸಿಬ್ಬಂದಿಯಿಂದ ದಿನೇಶ್ ತಪಾಸಣೆ ನಡೆಸಲಾಗಿದ್ದರೂ, ಕುಸಿದು ಬಿದ್ದ ತಕ್ಷಣವೇ ದಿನೇಶ್ ಮೃತಪಟ್ಟ ಬಗ್ಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಸ್ಪಷ್ಟಪಡಿಸಿದ್ದಾರೆ. ನಂತರ ಮೃತದೇಹವನ್ನು ಸರಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಹೊಸನಗರ ತಾಲೂಕಿನ ಕುಗ್ರಾಮ ನಿಟ್ಟೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪಿಯುಸಿ ಯಲ್ಲಿ ಶೇಕಡ 91.93 ಫಲಿತಾಂಶ.

ನಿಟ್ಟೂರು: ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿದ್ದಾರೆ ಆದರೆ ಅವಕಾಶಗಳಿಲ್ಲ. ಉತ್ತಮ ಅವಕಾಶ ದೊರೆತರೆ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಹೊಸನಗರ ತಾಲೂಕಿನ ಕುಗ್ರಾಮದಲ್ಲಿರುವ  ಸಂಪೆಕಟ್ಟೆ  ನಿಟ್ಟೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2021 -22 ನೇ ಸಾಲಿನಲ್ಲಿ ನಡೆದ ದ್ವಿತೀಯ  ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ್ದಾರೆ. ಸ್ನೇಹಮಯಿ ಮತ್ತು ಕರ್ತವ್ಯ ನಿಷ್ಠೆ ಇರುವ ಉಪನ್ಯಾಸಕರುಗಳಿದ್ದು ಒಳ್ಳೆಯ ಮಾರ್ಗದರ್ಶನ ನೀಡಿದರೆ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಾರೆ ಎನ್ನುವುದಕ್ಕೆ  ನಿಟ್ಟೂರು ಸರಕಾರಿ…

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ ಶವ ಪತ್ತೆ :

ರಾಜಾಕಾಲುವೆಯಲ್ಲಿ ಕೊಚ್ಚಿಹೋದ ಸಾಗರ ಸಮೀಪದ ಅದರಂತೆ ಗ್ರಾಮದ ಯುವಕ ಮಿಥಿನ್(26) ಶವ ಪತ್ತೆಯಾಗಿದೆ. ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಯುವಕನ ಶವ ರಾಜಾಕಾಲುವೆಗೆ ಬಿದ್ದ ಸ್ಥಳದಿಂದ 1.5 ಕಿಮೀ ದೂರದಲ್ಲಿ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಸ್ವಗ್ರಾಮವಾದ ಸಾಗರದ ಅದರಂತೆ ಗ್ರಾಮಕ್ಕೆ ಕರೆತರಲಾಗುತ್ತಿದೆ. ರಾಜಾಕಾಲುವೆಯಲ್ಲಿ ಸಾಗರದ ಯುವಕ ಮಿಥಿನ್ ಕೊಚ್ಚಿಹೋದ ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಶಾಸಕ ಹರತಾಳು ಹಾಲಪ್ಪ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಪ್ರತ್ಯಕ್ಷದರ್ಶಿ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ಪಡೆದು…

Read More

ಪಿಯುಸಿ ಪಲಿತಾಂಶ 2022 : ಶಿವಮೊಗ್ಗ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಇಲ್ಲಿದೆ ನೋಡಿ

ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟವಾಗಿದ್ದು, ಶಿವಮೊಗ್ಗದಲ್ಲಿ 66.15% ಫಲಿತಾಂಶ ಬಂದಿರುವ ಬೆನ್ನಲ್ಲೇ ಜಿಲ್ಲೆಯ ಟಾಪರ್ಸ್ ಗಳ ಪಟ್ಟಿ ಪ್ರಕಟಗೊಂಡಿದೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಯಲ್ಲಿ ಒಟ್ಟು 19033 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, ಇದರಲ್ಲಿ 12590 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಅದರಂತೆ ಪ್ರತಿ ಮೂರು ವಿಭಾಗದಲ್ಲಿ 10 ಜನ ಟಾಪರ್ಸ್ ಎಂದು ಗುರುತಿಸಲಾಗಿದೆ. ಕಲಾ ವಿಬಾಗ : ವಾಣಿಜ್ಯ ವಿಭಾಗ : ವಿಜ್ಞಾನ ವಿಭಾಗ :

Read More

ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋದ ಸಾಗರದ ಸಿವಿಲ್ ಇಂಜಿನಿಯರ್ :

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ಸಾಗರದ ಯುವಕನೊಬ್ಬ ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಸಾಗರ ಸಮೀಪದ ಅದರಂತೆ ಗ್ರಾಮದ ಸಿವಿಲ್ ಇಂಜಿನಿಯರ್ ಮಿಥಿನ್ (26) ಎಂಬುವರು ರಾಜಾಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದು ಯುವಕನ‌ ಮನೆಯಲ್ಲಿ ಆಕ್ರಂಧನ ಮುಗಿಲು ಮುಟ್ಟಿದೆ. ಬೆಂಗಳೂರಿನ ಕೆ.ಆರ್ ಪುರಂನಲ್ಲಿ ಮಿಥಿನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.ಆ ಮನೆಯ ಕಾಂಪೌಂಡ್ ರಾಜಾಕಾಲುವೆಯ ಮೇಲೆ ಇದ್ದು  ನಿನ್ನೆ ರಾತ್ರಿ 11 ಗಂಟೆಗೆ ಬಾಡಿಗೆ ಮನೆಯ ಕಾಂಪೌಂಡ್ ರಾಜಾಕಾಲುವೆಯಲ್ಲಿ ಹರಿದು ಬಂದ ನೀರಿನ ರಭಸಕ್ಕೆ…

Read More
Exit mobile version