Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ : ಯುವ ಕಾಂಗ್ರೆಸ್ ವತಿಯಿಂದ ಗೃಹ ಸಚಿವರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರು :

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಗೃಹಸಚಿವ ಆರಗ ಜ್ಞಾನೇಂದ್ರ ಕೋಮುಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ್ದಾರೆ ಈ ಕಾರಣಕ್ಕೆ ಆದಷ್ಟು ಬೇಗ ರಾಜೀನಾಮೆ ಕೊಟ್ಟು ತೀರ್ಥಹಳ್ಳಿಯ ಗೌರವ ಕಾಪಾಡಿ ಎಂದು ಇಂದು ತೀರ್ಥಹಳ್ಳಿಯ ತಾಲೂಕು ಕಛೇರಿ ಮುಂಭಾಗ ನೆಡದ ಪ್ರತಿಭಟನೆ ಕಾರ್ಯಕ್ರಮದಲ್ಲಿ ಕಿಮ್ಮನೆ ರತ್ನಾಕರ್ ವಾಗ್ದಾಳಿ ನೆಡೆಸಿದರು.  ಅವರೊಬ್ಬ ರಾಜ್ಯದ ಗೃಹಸಚಿವ, ರಾಜ್ಯದಲ್ಲಿ  ಶಾಂತಿ ಕಾಪಾಡುವಂತೆ ಮಾಡುವ ಕೆಲಸ ಅವರದ್ದು  ಯಾವುದೇ ಕೇಸ್ ಗೆ ಸಂಬಂಧಪಟ್ಟ ವಿಷಯವಾದರೂ ತನಿಖೆ ನೆಡೆಯುವದರೊಳಗೆ ಹೇಳಿಕೆ ನೀಡಬಾರದು. ಆದರೆ ಗೃಹಸಚಿವರು ವಿಷಯ…

Read More

ಹೊಳೆಬಾಗಿಲು ಸಮೀಪ ಮೀನು ಹಿಡಿಯಲು ಹೋದ ವ್ಯಕ್ತಿ ಸಾವು :

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಳೆಬಾಗಿಲು ಸಮೀಪದ ಕಣಿಕೆ ಗ್ರಾಮದಲ್ಲಿ  ತೆಪ್ಪದಲ್ಲಿ ಮೀನು ಹಿಡಿಯಲು ಹೋಗಿ ತೆಪ್ಪ ಮಗುಚಿದ ಕಾರಣ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿನ್ನೆ ಸಂಜೆ ವೇಳೆಗೆ ಯಲ್ಲಪ್ಪ ( 55 ) ಮೀನು ಹಿಡಿಯಲು ಕಣಿಕೆ ಗ್ರಾಮದ ಶರಾವತಿ ಹಿನ್ನೀರಿಗೆ ತೆರಳಿದ್ದಾರೆ.ದುರದೃಷ್ಟವಶಾತ್ ಮೀನು ಹಿಡಿಯಲು ಹೋದಾಗ ತೆಪ್ಪ ಮಗುಚಿ ಬಿದ್ದಿದ್ದರಿಂದ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಣಿಕೆ ಗ್ರಾಮದ ಬಳಿ ಶವ ತೇಲಿ ಬಂದಿದೆ. ಸಾಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ…

Read More

ಸಾಗರ ತಾಲ್ಲೂಕು ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಬೈಕ್ ಅಪಘಾತದಲ್ಲಿ ಸಾವು :

ಸಾಗರ ತಾಲೂಕಿನ ಯಳವರಸಿಯ ರೈಲ್ವೆ ಗೇಟ್ ಬಳಿ ಚಲಿಸುತ್ತಿದ್ದ ಬೈಕ್​ನಿಂದ ಬಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿದೆ.  ತ್ಯಾಗರ್ತಿ ನಿವಾಸಿ ಹಾಗೂ ಬಿಜೆಪಿ ತಾಲ್ಲೂಕು S.C ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಪರಶುರಾಮ್ ಇಂದು ಬೈಕ್ ಅಪಘಾತದಲ್ಲಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ.  ಬೈಕ್ ಚಲಾಯಿಸುತ್ತಿದ್ದ ಬೈಕ್ ಚಾಲಕ ಮಂಜುಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಗಾಯಾಳುವಿಗೆ ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಂಜು ಹಾಗೂ ಪರಾಶುರಾಮ್ ಬೈಕ್ ನಲ್ಲಿ ಸಾಗರಕ್ಕೆ ಬರುತ್ತಿದ್ದಾಗ ರೈಲ್ವೆ ಗೇಟ್ ಬಳಿ…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

ಕೋಣಂದೂರು ಸಮೀಪ ರಸ್ತೆ ಅಪಘಾತ : ಚಾಲಕರ ನಡುವಿನ ಗಲಾಟೆಯಲ್ಲಿ ಮೂರನೇ ವ್ಯಕ್ತಿಯಿಂದ ಚಿನ್ನದ ಸರ ಕಳವು

ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವಿನ ಅಪಘಾತ ನೆಡಿದಿದ್ದು ಅಪಘಾತ ನೆಡದ ಸ್ಥಳದಲ್ಲಿ ಗಲಾಟೆ ನೆಡೆದು ಆ ಸಂದರ್ಭದಲ್ಲಿ ಚಿನ್ನದ ಸರ ಕಳ್ಳತನ ನೆಡೆದಿರುವ ವಿಚಿತ್ರ ಘಟನೆ ತಾಲೂಕಿನ ಕೋಣಂದೂರು ಸಮೀಪ ನೆಡೆದಿದೆ.  KA – 14 M 4592 ಸಂಖ್ಯೆಯ ಕಾರೊಂದು ಹಿರೇಬೈಲಿನಿಂದ ಹೆಗ್ಗಡಿಗೆರೆಗೆ ಹೋಗುವಾಗ ಮಲ್ಲಿಗೆಕಟ್ಟೆಯಲ್ಲಿ ಬೈಕ್ ಅಡ್ಡ ಬಂದು ಅಪಘಾತವಾಗಿದೆ.  ಕಾರು ಹಾಗೂ ಬೈಕ್ ಚಾಲಕನ ಮಧ್ಯೆ ಗಲಾಟೆ ನೆಡೆಯುವಾಗ ಮೂರನೇ ವ್ಯಕ್ತಿಯೊಬ್ಬ ಬಂದು ಹಲ್ಲೆ ನೆಡೆಸಿ ಕಾರಿನ ಚಾಲಕನ ಕೊರಳಲ್ಲಿ…

Read More

ಕಾರು ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ : ಕಾರು ಚಾಲಕ ಸಾವು

ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸತೀಶ್ ಕಾಡವಳ್ಳಿ (52) ಸಾವನ್ನಪಿದ್ದಾರೆ. class=”separator” style=”clear: both; text-align: center;”> ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ  ಚಾಲಕರಾದ ಸತೀಶ್ ಕಾಡವಳ್ಳಿ ಪ್ರಯಾಣ ಮಾಡುತ್ತಿದ್ದರು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು. ಮೃತ ಸತೀಶ್ ಕಾಡವಳ್ಳಿ ರವರು…

Read More

ಗೃಹ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ತೀರ್ಥಹಳ್ಳಿ ಗೌರವ ಉಳಿಸಿ : ಕಿಮ್ಮನೆ ರತ್ನಾಕರ್

ಆರಗ ಜ್ಞಾನೇಂದ್ರ ಅವರಿಗೆ ಗೃಹ ಖಾತೆ ಸಿಕ್ಕಿದಾಗ ನಮ್ಮ ಕ್ಷೇತ್ರಕ್ಕೆ ಒಳ್ಳೆಯ ಹುದ್ದೆ ಸಿಕ್ಕಿದೆ ಎಂದು ಖುಷಿಪಟ್ಟಿದ್ದೆ. ನಾನೇ ಸನ್ಮಾನ ಮಾಡಿದ್ದೆ. ತೀರ್ಥಹಳ್ಳಿ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ. ಶಾಂತವೇರಿ ಗೋಪಾಲಗೌಡರ ಹೆಸರು ಹೇಳದೆ ಅಧಿವೇಶನ ಸಹ ನಡೆಯುವುದಿಲ್ಲ. ಆದರೆ, ಇಂದು ಜ್ಞಾನೇಂದ್ರ ನಮ್ಮ ಕ್ಷೇತ್ರಕ್ಕೆ ಕಳಂಕ ತರುತ್ತಿದ್ದಾರೆ. ರಾಜ್ಯದ ಜನರು ಅವರಿಗೂ, ತೀರ್ಥಹಳ್ಳಿ ಕ್ಷೇತ್ರಕ್ಕೂ ಬೈಯುತ್ತಿದ್ದಾರೆ. ಹೀಗಾಗಿ ಆರಗ ಜ್ಞಾನೇಂದ್ರ ರಾಜೀನಾಮೆ ಕೊಟ್ಟು ತೀರ್ಥಹಳ್ಳಿ ಗೌರವವನ್ನು ಉಳಿಸಬೇಕು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More
Exit mobile version