Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಾಗೋಡು ಪುತ್ರಿ ರಾಜನಂದಿನಿ ಸಿಡಿಸಿದ ಹೊಸ ಬಾಂಬ್ : ಜಿಕೆಬಿ ಗೆ ಟಿಕೆಟ್ ತಪ್ಪಿಸಲು ಉರುಳಿಸಿದ ಹೊಸ ಅಸ್ತ್ರವೇ ????

ಕರ್ನಾಟಕ ವಿಧಾನಸಭಾ ಚುನಾವಣೆ ಮುಂದಿನ ವರ್ಷ ನಡೆಯಲಿದೆ  ಪ್ರಬಲ ಆಕಾಂಕ್ಷಿಗಳು ಕೂಡ ತಮಗೆ ಟಿಕೆಟ್ ಸಿಗಬಹುದೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಜನ ಇದ್ದಾರೆ. ಸಾಗರದಿಂದಲೂ ಹಲವಾರು ಆಕಾಂಕ್ಷಿಗಳು ಕಾಂಗ್ರೆಸ್ ನಿಂದ ಟಿಕೆಟ್ ಪಡೆದುಕೊಳ್ಳಲು ಜೋರು ತಯಾರಿ ಕೂಡಾ  ನಡೆಸುತ್ತಿದ್ದಾರೆ. ಆದರೆ ಇವತ್ತು ಸಾಗರದಲ್ಲಿ  ಮಾತನಾಡಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾಗೋಡು ತಿಮ್ಮಪ್ಪನವರು ಸ್ಪರ್ಧಿಸಲಿದ್ದಾರೆ ಅವರಿಗೆ ಟಿಕೆಟ್ ಸಿಗಲಿದೆ ಹಾಗೂ ಅವರು ಇನ್ನೂ ಜನಸೇವೆ ಮಾಡುವ…

Read More

ಬಡಮಕ್ಕಳ ಶಿಕ್ಷಣದಿಂದ ಸಮಾಜ ಸುಶಿಕ್ಷಿತ : ಕೋಣಂದೂರು ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

ರಿಪ್ಪನ್‌ಪೇಟೆ: ಬಡಮಕ್ಕಳಿಗೆ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಎಂಬ ಕಲ್ಪನೆಯಲ್ಲಿ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೊಂದಿದ್ದರು ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಿದ್ಧಗಂಗಾ ಶ್ರೀಗಳ ಭಕ್ತವೃಂದದವತಿಯಿಂದ ಇಂದು ಶ್ರೀ ಡಾ. ಶಿವಕುಮಾರಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಆಶೀರ್ವಚನ ನೀಡಿ ಆರ್ಥಿಕ ಸಬಲರಲ್ಲದ ಗ್ರಾಮೀಣ ಭಾಗದ  ಮಕ್ಕಳಿಗೆ ಶಿಕ್ಷಣ ದುರ್ಲಬವಾಗಿದ್ದ ಸಂದರ್ಭದಲ್ಲಿ ಸ್ವಾಮೀಜಗೆ ಶ್ರೀಮಠದಲ್ಲಿ ವಿದ್ಯಾ ಕೇಂದ್ರವನ್ನು ತೆರೆದು ತನ್ಮೂಲಕ, ಅನ್ನ, ಅಕ್ಷರ…

Read More

ಹೊಸನಗರದಲ್ಲಿ ವೀರಶೈವ ಸಮಾಜಕ್ಕೆ ಜಾಗ ಮಂಜೂರು ಮಾಡುವಂತೆ ಒತ್ತಾಯಿಸಿ ವೀರಶೈವ-ಲಿಂಗಾಯಿತ ಪರಿಷತ್ ನಿಂದ ತಹಶೀಲ್ದಾರರಿಗೆ ಮನವಿ:

ಹೊಸನಗರ : ತಾಲೂಕು ವೀರಶೈವ-ಲಿಂಗಾಯಿತ ಪರಿಷತ್ ನಿಂದ ಹೊಸನಗರ ವೀರಶೈವ ಸಮಾಜಕ್ಕೆ ಹೊಸನಗರದಲ್ಲಿ  ಜಾಗವನ್ನು ಮಂಜೂರು ಮಾಡಿ ಕೊಡಬೇಕೆಂದು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು. ತಾಲೂಕ್ ವ್ಯಾಪ್ತಿಯಲ್ಲಿ ವೀರಶೈವ ಸಮಾಜಕ್ಕೆ ಜಾಗವನ್ನು ಮಂಜೂರು ಮಾಡುವುದರ ಮೂಲಕ ಸಮಾಜದ ಬೆಳವಣಿಗೆಗೆ ಅನುಕೂಲ ಮಾಡಿಕೊಡಬೇಕೆಂದು ತಾಲೂಕ್ ವೀರಶೈವ-ಲಿಂಗಾಯಿತ ಪರಿಷತ್ ನ ಅಧ್ಯಕ್ಷರಾದ ಮೆಣಸೆ ಆನಂದ್ ರವರ ನೇತೃತ್ವದಲ್ಲಿ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ ರವರಿಗೆ ಮನವಿ ಸಲ್ಲಿಸಿದರು ಈ ಸಂಧರ್ಭದಲ್ಲಿ ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್…

Read More

ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ತುಮಕೂರಿನ  ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ   115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ…

Read More

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದವರಿಂದ ಹಲ್ಲೆ: ಪ್ರಕರಣ ದಾಖಲು

ಹಲಾಲ್ ಮಾಂಸ ಮಾರಾಟಗಾರನ ಮೇಲೆ ಬಜರಂಗದಳದ ಸದಸ್ಯರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ವಿಭಜನೆ ಬಿಕ್ಕಟ್ಟು ದಿನಕಳೆದಂತೆ ಹೆಚ್ಚಾಗುತ್ತಿದೆ. ಹಿಜಾಬ್, ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಭಹಿಷ್ಕಾರ, ಹಲಾಲ್ ಕಟ್-ಜಟ್ಕಾ ಕಟ್ ವಿವಾದಗಳು ಒಂದಾದ ಮೇಲೊಂದರಂತೆ ಸಮಾಜದಲ್ಲಿ ಶಾಂತಿಯನ್ನು ಕದಡುತ್ತಿವೆ. ಇದರ ಬೆನ್ನಲ್ಲೆ ಹಲಾಲ್ ಮಾಂಸ ಮಾರಾಟಗಾರನ ಮೇಲೆ ಹಲ್ಲೆ ಮಾಡಿರುವುದು ಹಿಂಸಾಚಾರವನ್ನು ಭುಗಿಲೇಳಲಿದೆ. ಇದಕ್ಕೆ ಬಿಜೆಪಿ ಪ್ರಚೋದನೆ ನೀಡುತ್ತಿದೆ ಎನ್ನುವ ಆರೋಪಗಳನ್ನು ವಿಪಕ್ಷಗಳು ಮಾಡುತ್ತಿವೆ. ಹೀಗಾಗಿ ರಾಜ್ಯದಲ್ಲಿ ಧಾರ್ಮಿಕ…

Read More

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

ಎಸಿಬಿ ಬಲೆಗೆ ಬಿದ್ದ ಪಿಡಿಒ ವಿರುದ್ದ ದೂರು ಕೊಟ್ಟ ವ್ಯಕ್ತಿಗೆ ಬೆದರಿಕೆ ಹಾಕಿದ ಗ್ರಾಪಂ ಸದಸ್ಯ

ಹೊಸನಗರ  ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಎಂ ಗುಡ್ಡೆಕೊಪ್ಪದ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದರು. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು‌ 9  ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್ ಕೆಲಸಕ್ಕೆ ಪಿಡಿಒ ಮುರುಗೇಶ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಈ ಸಂಬಂಧ ಎಸಿಬಿ ಮೊರೆ…

Read More

ಪರೀಕ್ಷಾ ಶುಲ್ಕ ಕಡಿತಗೊಳಿಸುವಂತೆ ಒತ್ತಾಯಿಸಿ ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ :

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಪದವಿಯ ತೃತೀಯ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ಪರೀಕ್ಷ ಶುಲ್ಕ ಕಟ್ಟಲು ಸೂಚಿಸಿರುವ ಹಿನ್ನೆಲೆಯಲ್ಲಿ ಪರೀಕ್ಷ ವಿಭಾಗದ ಮುಂಭಾಗದಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಪ್ರತಿಭಟನೆಗೆ ಇಳಿದಿದ್ದಾರೆ. ಪರೀಕ್ಷಾ ಶುಲ್ಕವನ್ನು ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ. ಹಿಂದಿನ ಸೆಮಿಸ್ಟರ್ ನಲ್ಲಿ ಸಂಪೂರ್ಣ ಪರೀಕ್ಷಾ ಶುಲ್ಕ ಪಾವತಿಸಿದ್ದು ಕೋವಿಡ್  ಕಾರಣ ಪರೀಕ್ಷೆ ನಡೆದಿರುವುದಿಲ್ಲ, ಕೇವಲ ಅಂಕ ಪಟ್ಟಿಯನ್ನು ಮಾತ್ರ ನಿಂತಿರುತ್ತಾರೆ ಈ ಕಾರಣದಿಂದ ಈ ಬಾರಿ ಪರೀಕ್ಷಾ ಶುಲ್ಕದ ಬಾಕಿಯನ್ನು ಕಳೆದ ಬಾರಿ ಕಟ್ಟಿರುವ ಶುಲ್ಕಕ್ಕೆ ಜಮಾ ಮಾಡಿಕೊಂಡು ವಿದ್ಯಾರ್ಥಿಗಳ…

Read More

ತರಕಾರಿ ಸಾಗಾಣಿಕೆ ವಾಹನ ಬೈಕ್ ಗೆ ಢಿಕ್ಕಿ: ಇಬ್ಬರು ಸಾವು

ಸೊರಬ: ತರಕಾರಿ ಸಾಗಾಣಿಕೆ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕರ್ಜಿಕೊಪ್ಪ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಶಿಕಾರಿಪುರ ತಾಲೂಕಿನ ಕರ್ನಲ್ಲಿ ಗ್ರಾಮದ ರುದ್ರಗೌಡ ಮಲ್ಲೇಶಗೌಡ(50) ಹಾಗೂ ಭರಮಗೌಡ ಚಂದ್ರಪ್ಪ ( 35) ಮೃತ ದುರ್ದೈವಿಗಳು. ಶಿರಾಳಕೊಪ್ಪ ಮಾರ್ಗವಾಗಿ ಸಾಗರದೆಡೆಗೆ ತೆರಳಿತ್ತಿದ್ದ ತರಕಾರಿ ಸಾಗಾಣಿಕೆ ವಾಹನ ಎದುರಿಗೆ ಬರದುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ಜನಮನ್ನಣೆ ಗಳಿಸಿರುವ ತೀರ್ಥಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಸುಧಾಕರ್ ರವರಿಗೆ ಎರಡನೆ ಬಾರಿ ಒಲಿದ ಮುಖ್ಯಮಂತ್ರಿ ಪದಕ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್  ಸೇವೆ ಸಲ್ಲಿಸುತ್ತಿರುವ ಸುಧಾಕರ್ ಅವರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ ಮುಖ್ಯಮಂತ್ರಿಗಳ ಪದಕದ ಗೌರವ ಲಭಿಸಿದೆ .ಈ ಪದಕ ಅವರಿಗೆ ಎರಡನೇ ಬಾರಿ ಲಭಿಸುತ್ತಿರುವುದು  ಹೆಮ್ಮೆಯ ವಿಚಾರವಾಗಿದೆ . ಸುಧಾಕರ್ ರವರು ತೀರ್ಥಹಳ್ಳಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಅನೇಕ ಪ್ರಕರಣಗಳಲ್ಲಿ ಕ್ರಿಮಿನಲ್  ಆರೋಪಿಗಳನ್ನು ಪತ್ತೆ ಹಚ್ಚಲು  ಹೆಚ್ಚಿನ ಶ್ರಮವಹಿಸಿದವರಾಗಿದ್ದಾರೆ .ತೀರ್ಥಹಳ್ಳಿಯ  ವ್ಯಾಪ್ತಿಯ ಹತ್ತಾರು ಗಂಭೀರವಾದ ಕ್ರೈಮ್  ಪ್ರಕರಣಗಳಲ್ಲಿ ಕ್ಷಣಮಾತ್ರದಲ್ಲಿ ವಿಷಯವನ್ನು ಸಂಗ್ರಹಿಸಿ ತನಿಖೆಗೆ ಸಹಕರಿಸುವ ವಂತಾಗಲು ,ಆರೋಪಿಗಳನ್ನು…

Read More
Exit mobile version