Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…

Read More

ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ

 1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ…

Read More

80 ಸಾವಿರ ರೂ ಸಾಲಕ್ಕೆ ಹೆದರಿ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ !!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಬ್ಯಾಡರ ಕೊಪ್ಪದ ರೈತ  ಮರಿಯಪ್ಪ ಸಾವನ್ನಪ್ಪಿರುವ ದುರ್ದೈವಿ ರೈತ. ಶುಂಠಿಗೆ ಹೊಡೆಯುವ ಕಳೆನಾಶಕವನ್ನು ಸೇವಿಸಿದ್ದ ಮರಿಯಪ್ಪ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ಎಂಬತ್ತು ಸಾವಿರ ರೂಪಾಯಿ ಸಾಲ ಮಾಡಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ಇವರ ಮಗ ಲಿಂಗರಾಜು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ಮಲೆನಾಡಿನಲ್ಲಿ ಮತ್ತೆ ಶುರುವಾಯಿತಾ ಮಂಗನ ಕಾಯಿಲೆ ಆತಂಕ..!

 ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಕಾಡಿನಲ್ಲಿ ದರಗು ತರಲು ಹೋಗಿದ್ದು ಅಲ್ಲಿಯೇ ಸೋಂಕು ತಗುಲಿದೆ. ಕುಡುವಳ್ಳಿ ಗ್ರಾಮದ ಸುಶೀಲಮ್ಮ (69) ಹಾಗೂ ಹಿರೇಬೈಲು ಗ್ರಾಮದ ಉಷಾ (47) ಸೋಂಕಿತರು. ಈ ಇಬ್ಬರೂ ಸ್ಥಳೀಯರೇ ಆಗಿದ್ದಾರೆ. ಒಬ್ಬರನ್ನು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಈ ವರ್ಷದ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ….

Read More

ಕರ್ತವ್ಯ ನಿರತವಾಗಿದ್ದಲೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಟ್ರಾನ್ಸ್ ಫಾರ್ಮರ್ ತೊಂದರೆಯಿಂದಾಗಿ ದುರಸ್ಥಿ ಕಾರ್ಯದಲ್ಲಿ ತೊಡಗಿದ್ದಂತ ಸಂದರ್ಭದಲ್ಲಿಯೇ ವಿದ್ಯುತ್ ಪ್ರವಹಿಸಿ, ಲೈನ್ ಮ್ಯಾನ್ ಸಾವನ್ನಪ್ಪಿರೋ ಘಟನೆ, ಸೊರಬ ತಾಲೂಕಿನ ಉಳವಿ ಹತ್ತಿರದ ದೂಗೂರು ಬಳಿಯ ಭದ್ರಾಪುರದಲ್ಲಿ ನಡೆದಿದೆ. ಸೊರಬ ತಾಲೂಕಿನ ದೂಗೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಭದ್ರಾಪುರದಲ್ಲಿ ವಿದ್ಯುತ್ ಸಮಸ್ಯೆಯಿಂದಾಗಿ ನಿನ್ನೆ ಟ್ರಾನ್ಸ್ ಫಾರ್ಮರ್ ಬಳಿಯಲ್ಲಿ ಉಳವಿ ಮೆಸ್ಕಾಂ ಶಾಖೆಯ ಲೈನ್ ಮ್ಯಾನ್, ಗದಗ ಜಿಲ್ಲೆಯ ಗಜೇಂದ್ರಗಡದ ರವಿ ಬೀರಪ್ಪ ಚವ್ಹಾಣ್ (32) ಕೆಲಸ ನಿರತರಾಗಿದ್ದರು. ಈ ವೇಳೆ 11 ಕೆವಿ ಮಾರ್ಗದ ವಿದ್ಯುತ್…

Read More

ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್

ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ   ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ   ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.  ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್  ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

ಸಾಗರದಲ್ಲಿ ಆರ್‌ಸಿಬಿ ಕ್ರೇಜ್‌ ಜೋರು..! ಈ ಸಲ ಕಪ್‌ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ

ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್, ನ  ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ  ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ.  ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್‌ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್‌ಗಳು ಒಂದಲ್ಲ ಒಂದು ರೀತಿ…

Read More

ಮನೆ ಮಾರಾಟ ಮಾಡಿ ನಂತರ ನಕಲಿ ದಾಖಲೆ ಎಂದು ಪೊಲೀಸರಿಗೆ ಯಾಮಾರಿಸುತ್ತಿರುವ ಮನೆ ಒಡತಿ :

ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ. ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ…

Read More