Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆಯಲ್ಲಿ ಕಾಳಸಂತೆಯಲ್ಲಿ ಪಡಿತರ ಮಾರಾಟ : ಆಟೋ ಸಮೇತ ಅಕ್ಕಿ ಹಿಡಿದ ಸಾರ್ವಜನಿಕರು

ರಿಪ್ಪನ್ ಪೇಟೆ : ಇಲ್ಲಿನ ಹಾಸ್ಟೆಲ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮಾಲೀಕರು ಅಕ್ರಮವಾಗಿ ಬಡವರಿಗೆ ನೀಡಬೇಕಾಗಿದ್ದ ಸರ್ಕಾರದ ಉಚಿತ ಪಡಿತರ ಸುಮಾರು ಏಳು ಕ್ವಿಂಟಾಲ್ 50 ಕೆಜಿ ಅಕ್ಕಿಯನ್ನು ಕದ್ದು ಆಟೋದಲ್ಲಿ ಅಕ್ರಮವಾಗಿ ಸಾಗಿಸುವಾಗ ಸಾರ್ವಜನಿಕರು ಶಿವಮೊಗ್ಗ ರಸ್ತೆಯ ಖಾಸಗಿ ರೈಸ್ ಮಿಲ್ ನ ಆವರಣದಲ್ಲಿ ತಡೆಹಿಡಿದು ನಿಲ್ಲಿಸಿದ ಪ್ರಸಂಗ ಇಂದು ಮಧ್ಯಾಹ್ನ ನಡೆದಿದೆ. ಇಂದು ಮದ್ಯಾಹ್ನ ಖಾಸಗಿ ಆಟೋ ಗೆ 25 ಕೆಜಿ ಪ್ರಮಾಣದಲ್ಲಿ 30 ಚೀಲ ಪಡಿತರ ಅಕ್ಕಿಯನ್ನು ತುಂಬುತ್ತಿರುವುದನ್ನು ಗಮನಿಸಿದ ವಿನಾಯಕ ನಗರದ…

Read More

ಸಮಾಜದ ಮಹಿಳಾ ವರ್ಗಕ್ಕೆ ಸ್ಪೂರ್ತಿಯ ಚಿಲುಮೆಯಾಗಿರುವ ಹೊಸನಗರದ ಸೀಮಾ ಕಿರಣ್ ತೆಂಡೂಲ್ಕರ್ :

ಹೊಸನಗರ, ತಾಲ್ಲೂಕಿನ ಕೊಡಚಾದ್ರಿ ಜೆಸಿಐ ಸಂಸ್ಥೆಯ ನೂತನ ಅಧ್ಯಕ್ಷೆ ಸೀಮಾ ಶರಾವ್ ರವರ ಸಮಾಜ ಮುಖಿ ಕೆಲಸಗಳಿಗೆ ಸಾರ್ವಜನಿಕರ ಗಮನ ಸೆಳೆದಿದೆಯಲ್ಲದೇ ತಾಲ್ಲೂಕಿನ ಜಿಲ್ಲೆಯ ಹಾಗೂ ರಾಜ್ಯದ ವಿವಿಧ ಸಂಘ ಸಂಸ್ಥೆಗಳು  ಮೆಚ್ಚುಗೆ ವ್ಯಕ್ತಪಡಿಸಿ ಸನ್ಮಾನ ಮಾಡಲಾಗಿದೆ. ಸೀಮಾ ಕಿರಣ್ ತೆಂಡೂಲ್ಕರ್ ರವರು ಹಲವು ವರ್ಷಗಳಿಂದ ಸದಸ್ಯರಾಗಿದ್ದ ಹೊಸನಗರದ ಕೊಡಚಾದ್ರಿ ಜೆಸಿಐ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗಿ ಮೂರೇ ತಿಂಗಳಲ್ಲಿ ಸಾಮಾಜಿಕ ಕಳಕಳಿಯನ್ನು ಹೊತ್ತು ಅನೇಕ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅತ್ಯುತ್ತಮ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಹೊಸನಗರ…

Read More

ಆನಂದಪುರ ಸಮೀಪ ಭೀಕರ ಕಾರು ಅಪಘಾತ : ಓರ್ವ ಸಾವು,ನಾಲ್ವರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲು

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚನ್ನಕೊಪ್ಪ ಗ್ರಾಮದಲ್ಲಿ ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಕಾರು ಎದುರು ಭಾಗದಲ್ಲಿ ಯಾವುದೋ ಗಾಡಿ ಬಂದಿರುವ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ರಸ್ತೆಯಿಂದ ಹತ್ತು ಅಡಿ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಚಾಲಕನ ಪಕ್ಕದ ಸೀಟಿನಲ್ಲಿ ಕುಳಿತಿದ್ದ 65…

Read More

ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿ !!!

ಸಾಗರ ತಾಲೂಕಿನ ಬ್ರಾಹ್ಮಣ ಮಂಚಾಲೆ ಬಳಿ ಅಪರಿಚಿತ ವ್ಯಕ್ತಿಯೋರ್ವ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ಶಿಕ್ಷಕಿಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ನಡೆದಿದೆ. ಬ್ರಾಹ್ಮಣ ಮಂಚಾಲೆ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಬಸ್ಸಿನಿಂದ ಇಳಿದು ಶಾಲೆಗೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಕುತ್ತಿಗೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೌಲ್ಯದ 35 ಗ್ರಾಂ ಬಂಗಾರದ ಮಾಂಗಲ್ಯ ಸರ ಹಾಗೂ ಒಂದು ಸರ ಕಿತ್ತುಕೊಂಡು ಶಿಕ್ಷಕಿಯನ್ನು ತಳ್ಳಿ ಪರಾರಿಯಾಗಿದ್ದಾನೆ.  ಇದರಿಂದಾಗಿ ಪ್ರಭಾವತಿಯವರ ತಲೆ ಭಾಗದಲ್ಲಿ ತೀವ್ರ…

Read More

ರಿಪ್ಪನ್ ಪೇಟೆ ಸುತ್ತಮುತ್ತ ತಪ್ಪದ ಕಾಡಾನೆ ಉಪಟಳ : ಮತ್ತೆ ಮತ್ತೆ ದಾಳಿ ಮಾಡಿ ರೈತರನ್ನು ಕಂಗೆಡಿಸಿರುವ ಕಾಡಾನೆಗಳು

ರಿಪ್ಪನ್‌ಪೇಟೆ: ಕಳೆದ ಕೆಲವು ತಿಂಗಳುಗಳಿಂದ ಹೆದ್ದಾರಿಪುರ, ಅರಸಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲಭಾಗದಲ್ಲಿ ತೋಟಗಳಿಗೆ ದಾಳಿಯಿಟ್ಟು ಜನರಿಗೆ ನಿದ್ರೆಗೆಡಿಸಿದ್ದ ಕಾಡಾನೆಗಳು ಈಗ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳ ರೈತರಿಗೆ ಉಪಟಳ ನೀಡುತ್ತಿವೆ.  ಸೋಮವಾರ ರಾತ್ರಿ ನರ‍್ಲಿಗೆಯ ರೈತರೊಬ್ಬರ ಬಾಳೆ ತೋಟದಲ್ಲಿ ಪ್ರತ್ಯಕ್ಷವಾದ ಕಾಡಾನೆ ಅರಣ್ಯ ಇಲಾಖೆ ಸಿಬ್ಬಂದಿ ರಾತ್ರಿ ಗಸ್ತಿನಲ್ಲಿದ್ದ ವಾಹನದತ್ತ ಕಾಡಾನೆ ಧಾವಿಸಿದ್ದು, ಸಿಬ್ಬಂದಿಗಳು ಬೆದರು ಗುಂಡುಗಳನ್ನು ಹಾರಿಸುವ  ಮೂಲಕ ಆನೆಯನ್ನು ಓಡಿಸಿದ್ದಾರೆ. ಬೆದರಿಸಿರುವ ಕಾರಣದಿಂದ ಮುಂದೆ ಸಾಗಿ ಚಾಣಬೈಲು ಗ್ರಾಮದ ದಿನೇಶ್‌ರವರ ತೋಟಕ್ಕೆ…

Read More

ಕೆರೆಯಲ್ಲಿ ಮುಳುಗಿ ಯುವಕ ಸಾವು :

ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಇಂದು ನಡೆದಿದೆ. ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂಧನ (23) ಮೃತ ದುರ್ಧೈವಿ. ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂಧನ್ ನೀರಿನಲ್ಲಿ ಮುಳುಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ…

Read More

ಶಾಸಕ ಹರತಾಳು ಹಾಲಪ್ಪ ವರ್ಚಸ್ಸಿಗೆ ಧಕ್ಕೆ ತರಲು ಕಾಂಗ್ರೆಸ್ ಷಡ್ಯಂತ್ರ : ರಾಜೇಂದ್ರ ಆವಿನಹಳ್ಳಿ

ಸಾಗರ: ಎಲ್‌ಬಿ ಕಾಲೇಜಿನ ಆವರಣದಲ್ಲಿ ನಡೆದ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ೫೬ನೇ ಸರ್ವಸದಸ್ಯರ ಸಭೆಯಲ್ಲಿ ನಡೆದ ಗಲಾಟೆಗೂ ಶಾಸಕ ಹಾಲಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಕಾಲೇಜಿಗೆ ಜಮೀನು ನೀಡಿದ ಕುಟುಂಬದ ಎಚ್.ಎಂ.ಬಸವರಾಜ್‌ಗೌಡ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಷ್ಠಾನದ ಉಪಾಧ್ಯಕ್ಷರಾಗಿದ್ದ ಶ್ರೀಪಾದ ಹೆಗಡೆ ನಿಸ್ರಾಣಿ ನಡೆಸುತ್ತಿದ್ದ ಆಡಳಿತ ವಿರೋಧಿ ನಿಲುವಿನ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ನನ್ನನ್ನು ಪ್ರತಿಷ್ಠಾನದ ಸದಸ್ಯತ್ವದಿಂದಲೇ ವಜಾ ಮಾಡಲಾಗಿತ್ತು ಎಂದರು. ಸರ್ವಸದಸ್ಯರ ಸಭೆ ನಡೆಯುತ್ತಿದ್ದ ಮಾ. 17ರಂದು ಬೆಳಿಗ್ಗೆ ನಾನು…

Read More

ಕೂರಂಬಳ್ಳಿ ಗ್ರಾಮದ ಅಬಕಾರಿ ನಿರೀಕ್ಷಕ ಗಿರೀಶ್ ರವರಿಗೆ ಮಾತೃವಿಯೋಗ :

ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂರಂಬಳ್ಳಿ ಗ್ರಾಮದ ಸೀತಮ್ಮ(64) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತಿ ಚೂಡಪ್ಪ ಮಕ್ಕಳಾದ ಕೆ ಸಿ ಗಿರೀಶ್ , ಅಬಕಾರಿ ನಿರೀಕ್ಷಕರು ಉಡುಪಿ. ಮತ್ತೋರ್ವ ಮಗ ಪ್ರಕಾಶ್ ಪುತ್ರಿ ಚೇತನಾ ಹಾಗೂ ಸಹೋದರ ಸಹೋದರಿಯರನ್ನು ಬಿಟ್ಟು ಅಗಲಿದ್ದಾರೆ  ಮೃತರ ಅಂತ್ಯಕ್ರಿಯೆಯು ನಾಳೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಕೂರಂಬಳ್ಳಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

Read More

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು !!!!

ತೀರ್ಥಹಳ್ಳಿ: ತೀರ್ಥಹಳ್ಳಿಯ  ತುಂಗಾ ನದಿಯ ರಾಮ ಮಂಟಪದ ಬಳಿ ನಿನ್ನೆ ಮಧ್ಯಾಹ್ನ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದು ಇಂದು ಶವ ಪತ್ತೆಯಾಗಿದೆ. ತುಂಗಾ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಥಮ ಬಿಎ ವಿದ್ಯಾರ್ಥಿ ಅರಳಸುರಳಿ ಸಮೀಪದ ಬಂದ್ಯಾ ಎಂಬ ಊರಿನ ವರ್ಧನ್  (19) ಹಾಗೂ ಸೊನಲೆಯ  ಮಂಜು (20) ನೀರು ಪಾಲಾದವರು ಎಂದು ತಿಳಿದು ಬಂದಿದೆ. ನಿನ್ನೆ ಮಧ್ಯಾಹ್ನ  ಇಬ್ಬರೂ ತುಂಗ ನದಿಯಲ್ಲಿ ಈಜಲು ಹೋಗಿದ್ದರು. ನಂತರ ಅವರ  ಮೊಬೈಲ್ ಲೊಕೇಶನ್ ಮೂಲಕ ಪತ್ತೆ ಮಾಡಲಾಗಿದ್ದು ಸ್ಥಳದಲ್ಲಿ…

Read More

ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಗೌರವ ಡಾಕ್ಟರೇಟ್​ ಪ್ರದಾನ :

ಮೈಸೂರು ವಿಶ್ವವಿದ್ಯಾಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ಗೆ ಮರಣೋತ್ತರಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಸ್ವೀಕರಿಸಿದ್ದಾರೆ. ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್​ ಸ್ಟಾರ್ ಪುನೀತ್ ರಾಜ್‍ಕುಮಾರ್​ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಮೂರು ಜನ ಸಾಧಕರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ನಟ…

Read More