Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ…

Read More

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರಿಂದ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಸಲ್ಲಿಸಿದ ಮನವಿಯಲ್ಲಿ ತಾಲ್ಲೂಕಿನಾಧ್ಯಂತ ಮರಳು ಮಾಫಿಯವಾಗಲಿ, ಡ್ರಕ್ಸ್ ಮಾಫಿಯಾ, ಹೆಣ್ಣುಮಕ್ಕಳಿಗೆ ಕೆಲಸದ ಆಮಿಷ ತೋರಿಸಿ ಅನೈತಿಕ ಸಂಬಂಧಗಳಿಗೆ ಬಳಸುವಂತಹಾ ಕ್ರೂರಿಗಳಿಗೆ, ಕಲ್ಲು ಕೋರೆ, ಗಾಂಜಾ ಸೇರಿದಂತೆ ವಿವಿಧ ರೀತಿಯ ಕಳ್ಳ ದಂದೆಯಲ್ಲಿ ತೊಡಗಿದವರಿಗೆ…

Read More

ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ  19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು.  ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ ಇಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ಕಲಾ ಹೋಮ ನವಕಪ್ರದಾನ ಕಳಸ ಕಲಶಾಭಿಷೇಕ ಆದಿವಾಸ ಹೋಮ ಪವಮಾನ ಅಭಿಷೇಕ ಆಶ್ಲೇಷ ಬಲಿ ಹಾಗೂ ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ತೀರ್ಥಪ್ರಸಾದ ವಿನಿಯೋಗ ಜರುಗಿತು. ಈ ಸಂದರ್ಭದಲ್ಲಿ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾಪನೆಗೂ ಮೊದಲು…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮೆಸ್ಕಾಂ ಅಧಿಕಾರಿಗಳಿಗೆ ಮನವಿ :

ಹೊಸನಗರ: ಕೋಡೂರು, ಹುಂಚ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ವಿದ್ಯುತ್ ಅವ್ಯವ್ಯಸ್ಥೆಯಿಂದಾಗಿ ರೈತರ ಬೆಳೆಗಳು ಒಣಗುವಂತಾಗಿದೆ ಮತ್ತು ವಿದ್ಯುತ್ ಇಲ್ಲದೆ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅಡಚಣೆಯಾಗಿದೆ ಎಂದು ಆರೋಪಿಸಿ ಇಂದು ಕೋಡೂರು, ಹುಂಚ ವ್ಯಾಪ್ತಿಯ ರೈತರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕಲಗೋಡು ರತ್ನಾಕರ ಮತ್ತು ತಾ.ಪಂ.ಮಾಜಿ ಸದಸ್ಯ ಚಂದ್ರಮೌಳಿಗೌಡ ನೇತೃತ್ವದಲ್ಲಿ ಹೊಸನಗರದ ಮೆಸ್ಕಾಂ ಕಛೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಜಿಪಂ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ರೈತರ ಸಮಸ್ಯೆಗೆ ಮೆಸ್ಕಾಂ ಇಲಾಖೆ ಸ್ಪಂದಿಸಿ…

Read More

ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ  ಒಳಗಾದ ರೈತರಿಗೆ  ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್…

Read More

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…

Read More

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಒಕ್ಕೂಟ ಬಂದ್ ಬಹುತೇಕ ಯಶಸ್ವಿ :

ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿತ್ತು. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು. ಶಿವಮೊಗ್ಗದಲ್ಲಿಯೂ ಸಹ‌ 19 ಮುಸ್ಲಿಂ ಸಂಘನೆಗಳು ಬಂದ್ ನಡೆಸಲು ತೀರ್ಮಾನಿಸಿತ್ತು‌. ತೀರ್ಮಾನದಂತೆ ಹಲವಾರು ಉದ್ಯಮಗಳ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರು ಹಾಜರಿದ್ದರು. ಅಮೀರ್ ಅಹ್ಮದ್ ವೃತ್ತ, ಓಟಿ ರಸ್ತೆ ಕೆ.ಆರ್ ಪುರಂ,…

Read More

ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…

Read More