Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್ ಪೇಟೆ : ಸಿದ್ದಪ್ಪನಗುಡಿಯ ಕಂತೆ ಸಿದ್ದೇಶ್ವರ ದೇವಸ್ಥಾನದಲ್ಲಿ ಅದ್ದೂರಿ ಮಹಾ ಶಿವರಾತ್ರಿ ವೈಭವ

ರಿಪ್ಪನ್‌ಪೇಟೆ :ಇಲ್ಲಿನ ಸಮೀಪದ ಸಿದ್ದಪ್ಪನಗುಡಿಯ ಇತಿಹಾಸ ಪ್ರಸಿದ್ದ  ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿಯ ಅಂಗವಾಗಿ ಇಂದು ಬೆಳಿಗ್ಗೆ ದೇವರಿಗೆ ರುದ್ರಾಭಿಷೇಕ, ಅಭಿಷೇಕ, ಪೂಜಾ ಕೈಂಕರ್ಯಗಳು ಸಂಭ್ರಮದೊಂದಿಗೆ ಜರುಗಿತು. ಪಟ್ಟಣದ ಹೊರವಲಯದಲ್ಲಿರುವ ಸಿದ್ದಪನಗುಡಿ ಕಂತೆ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಅಭಿಷೇಕ ಅಲಂಕಾರ ಪೂಜೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.ನಂತರ ಮಹಾಮಂಗಳಾರತಿಯೊಂದಿಗೆ ಸಾರ್ವಜನಿಕರಿಗೆ ಸಾಮೂಹಿಕ ಅನ್ನಸಂತರ್ಪಣೆ ನೆರವೇರಿತು. ಸುಮಾರು ಎರಡೂ ಸಾವಿರಕ್ಕೂ ಹೆಚ್ಚು ಭಕ್ತಾಧಿಗಳು ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಸ್ಥಾನದ…

Read More

ಆಗುಂಬೆ ಘಾಟ್ ರಸ್ತೆ ಮಾ.5 ರಿಂದ 10 ದಿನ ಬಂದ್ :

ತೀರ್ಥಹಳ್ಳಿ : ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತಹ ಆಗುಂಬೆ ರಸ್ತೆ  ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ – ಹೆಬ್ರಿಯವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ…

Read More

ಸಾಗರ ತಾಲೂಕಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಅಮಾನತು : ಪೋಕ್ಸೋ ಕಾಯ್ದೆಯಡಿ ಬಂಧನ

 ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಸಮೀಪದ ಮರತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಿ,ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪೋಷಕರು ಶಾಲಾಭಿವೃದ್ಧಿ ಸಮಿತಿಗೆ ದೂರು ನೀಡಿದ್ದರು. ನಂತರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಲಾಗಿದೆ. ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರನ್ನು ವಿಚಾರಿಸಿದ್ದಾರೆ. ಪೋಷಕರನ್ನು ಮಾತನಾಡಿಸಿದ್ದಾರೆ. ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇಂದು…

Read More

ಸಿಗಂದೂರು ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪ ರವರಿಗೆ ತರಳಿ ಶ್ರೀ ಪ್ರಶಸ್ತಿ :

ಮಲೆನಾಡಿನ ಹೆಸರಾಂತ ಶಕ್ತಿ ಕೇಂದ್ರವಾದ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರಿಗೆ ತರಳಿ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ತರಳಿ ಮಠದಿಂದ ಕಳೆದ ಹಲವು ದಶಕಗಳಿಂದ ರಾಮಪ್ಪನವರ ಸಾಮಾಜಿಕ,ಸಾಂಸ್ಕ್ರತಿಕ, ಧಾರ್ಮಿಕ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಕಾರ್ತಿಕೇಯ ಮಠದ ಯೋಗೆಂದ್ರ ಶ್ರೀಗಳ ಸಮ್ಮುಖದಲ್ಲಿ ರಾಮಪ್ಪ ನವರು ಪ್ರಶಸ್ತಿ ಪಡೆದರು. ಶಕ್ತಿ ಕೇಂದ್ರ ಸಿಗಂದೂರಿನ ಹಿನ್ನಲೆ ::  ಕರ್ನಾಟಕದಲ್ಲಿ ಬಹಳ ಪ್ರಸಿದ್ಧಿ ಪಡೆದು ಕೊಂಡಿರುವ…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ : ಒಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ

ಸಾಗರ ತಾಲೂಕಿನ ಸುರುಗುಪ್ಪೆ ಕೆರೆ ಏರಿ ಮೇಲೆ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ . ಸೊರಬ ತಾಲೂಕಿನ ಬಂದಿಗೆ ನಿವಾಸಿಗಳಾದ ನಾಗಪ್ಪ (42)ಹಾಗೂ ಅವರ ಪುತ್ರ ಲೋಹಿತ್(16) ಸಣ್ಣ ಮನೆ ಗ್ರಾಮದೇವತೆಯ ಜಾತ್ರೆಗೆ ಆಗಮಿಸುತ್ತಿರುವ ಸಂದರ್ಭದಲ್ಲಿ ಯಲಕುಂದ್ಲಿ  ನಿವಾಸಿ ಕಿರಣ್(20) ಮನೆಗೆ ಹೋಗುವ ಸಂದರ್ಭದಲ್ಲಿ ಇಬ್ಬರ ದ್ವಿಚಕ್ರವಾಹನ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಗಪ್ಪ (42) ಸ್ಥಳದಲ್ಲೇ ಮೃತಪಟ್ಟಿದ್ದು ಲೋಹಿತ್(16) ಹಾಗೂ ಕಿರಣ್(20) ರವರ ಸ್ಥಿತಿ…

Read More

ಬಿದರಹಳ್ಳಿಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯ ಕೆ ದೇವೇಂದ್ರಪ್ಪ ರವರಿಗೆ ಒಲಿದ ರಾಜ್ಯ ಮಟ್ಟದ “ಗುರು ಶ್ರೇಷ್ಠ” ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘದ ವತಿಯಿಂದ 20-02-2022 ರಂದು ಆಯೋಜಿಸಲಾಗಿದ್ದ “ಕನ್ನಡ ನುಡಿ ವೈಭವ”-೨೦೨೨ ಎಂಬ ರಾಜ್ಯ ಮಟ್ಟದ ಸಾಹಿತ್ಯ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಆಗಾಧ ಸಾಧನೆಗೈದಿರುವ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯರಾಗಿರುವ ಕೆ ದೇವಂದ್ರಪ್ಪ ಇವರಿಗೆ ರಾಜ್ಯಮಟ್ಟದ ಗುರು “ಶ್ರೇಷ್ಠ ಪ್ರಶಸ್ತಿ” ಯನ್ನು ಘೋಷಿಸಲಾಗಿತ್ತು . ಆದರೆ ಕಾರಣಾಂತರಗಳಿಂದ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯ ಗವಿಸಿದ್ದೇಶ್ವರ ಮಠದಲ್ಲಿ ನಡೆದ ರಾಜ್ಯ ಮಟ್ಟದ “ಕನ್ನಡ ನುಡಿ ವೈಭವ -2022” ಕಾರ್ಯಕ್ರಮಕ್ಕೆ ಕೆ ದೇವೆಂದ್ರಪ್ಪನವರು ಪಾಲ್ಗೊಳ್ಳದೇ…

Read More

ರಾಷ್ಟ್ರಮಟ್ಟದಲ್ಲಿ ನಡೆದ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮೆರೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು.

ರಿಪ್ಪನ್ ಪೇಟೆ :ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 5 ಸ್ಥಾನಗಳನ್ನು ಅಂದರೆ ಶೇಕಡಾ ಐವತ್ತರಷ್ಟು ಸ್ಥಾನವನ್ನು ಬಾಚಿಕೊಂಡಿದ್ದಾರೆ. ಇಂದಿನ ಉನ್ನತ ತಂತ್ರ ಜ್ಞಾನ ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು ಕೈಗಾರಿಕ ತರಬೇತಿ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್ ಸರ್ಟಿಫಿಕೇಟ್ ಕೋರ್ಸ್ ಗಳ  ಪೆಬ್ರವರಿ…

Read More

ಶಿವಮೊಗ್ಗ ಗಲಭೆ ಪ್ರಕರಣದಲ್ಲಿ ಸಚಿವ ಈಶ್ವರಪ್ಪ ಮೊದಲ ಆರೋಪಿಯಾಗಬೇಕು : ಸುಂದರೇಶ್ ಆಗ್ರಹ

ಶಿವಮೊಗ್ಗದಲ್ಲಿ ಕೊಲೆಯಾದ ಹರ್ಷನ ಶವದ ಮೆರವಣಿಗೆ ದಿನ ನಡೆದ ಗಲಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್​ ಸಚಿವ ಕೆ ಎಸ್ ಈಶ್ವರಪ್ಪ ಅವರನ್ನು ಎ 1 ಆರೋಪಿ ಮಾಡಿ ಅವರ ಪ್ರಕರಣದ ಕೇಸ್​ ದಾಖಲಿಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ​ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಆಗ್ರಹಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರ್ಷ ಕೊಲೆ ಬಳಿಕ ನಡೆದ ಗಲಭೆಗೆ ನೇರವಾಗಿ ಸಚಿವ ಈಶ್ವರಪ್ಪ ಅವರೇ ಹೊಣೆ. ಹಾಗಾಗಿ…

Read More

ಹೊಸನಗರದ ಜೆಸಿಐ ಅಧ್ಯಕ್ಷೆ ಸೀಮಾ ಕಿರಣ್ ತೆಂಡೂಲ್ಕರ್ ಗೆ ಒಲಿದ ಬೆಸ್ಟ್ ಫರ್ಫಾರ್ಮೆನ್ಸ್ ಆವಾರ್ಡ್ :

ಹೊಸನಗರ : ಇದೇ ತಿಂಗಳ 26-27 ರಂದು ಬಳ್ಳಾರಿಯಲ್ಲಿ ಜೆಸಿಐ ಸಂಸ್ಥೆಯಿಂದ ರಾಜ್ಯದಲ್ಲಿನ ಜೆಸಿಐ ನ ಎಲ್ಲಾ ಅಧ್ಯಕ್ಷ ಸದಸ್ಯರಿಗೆ 24 ಜೋನ್ ಪ್ರೆಸಿಡೆಂಟ್ ಜೆಸಿ ದೀಪಿಕಾ ಎನ್ ಬಿದಿರಿ ಮತ್ತು 24 ಜೋನ್ ಡೈರೆಕ್ಟರ್ ಮ್ಯಾನೆಜ್ ಮೆಂಟ್ ಜೆಸಿ ಅನುಷ್ ಗೌಡ ಇವರುಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಸಲಾಯಿತು. ಹೊಸನಗರ ತಾಲ್ಲೂಕಿನಲ್ಲಿ ಮೊದಲ ಮಹಿಳಾ ಅಧ್ಯಕ್ಷರಾಗಿ ಕೇವಲ 1 ತಿಂಗಳಿನಲ್ಲಿ ಸಮಾಜ ಮುಖಿ ಕೆಲಸಗಳಲ್ಲಿ ತೊಡಗಿ ಉತ್ತಮ ಸಮಾಜ ಸೇವೆಯನ್ನು ಮಾಡಿದ್ದಕ್ಕೆ ಅಧ್ಯಕ್ಷೆ  ಸೀಮಾ ಕಿರಣ್…

Read More

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಲಾರಿ : ಲಾರಿ ಕ್ಲೀನರ್ ಸ್ಥಳದಲ್ಲೇ ಸಾವು…!!!

ಆನಂದಪುರ ಸಮೀಪದ ಹೊಸಗುಂದ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೀಕರ ಅಪಘಾತವಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೊಸಗುಂದ ಬಳಿ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಲಾರಿ (KA 05 AA 5068 ) ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕಕ್ಕೆ ಗುದ್ದಿದ ಪರಿಣಾಮ ಲಾರಿ ಕ್ಲೀನರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.ಮೃತರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಅಪಘಾತದಲ್ಲಿ ಲಾರಿ ಡ್ರೈವರ್ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ….

Read More
Exit mobile version