Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿವಮೊಗ್ಗದಲ್ಲಿ ಪ್ರಾರಂಭವಾಗದ ಆಯುಷ್ ವಿಶ್ವವಿದ್ಯಾಲಯ : ಶಾಂತವೇರಿ ಗೋಪಾಲಗೌಡ ಅಧ್ಯಯನ ಕೇಂದ್ರ ಖಂಡನೆ

ಶಿವಮೊಗ್ಗ ನಗರದಲ್ಲಿ ಆಯುಷ್ ವಿಶ್ವವಿದ್ಯಾನಿಲಯವನ್ನು ಅಂದಿನ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ಮಂಜೂರು ಮಾಡಿದ್ದು, ದಿನಾಂಕ: 17-022022ರಂದು ರಾಜ್ಯಪತ್ರದಲ್ಲಿ ಮಂಜೂರಾತಿ ಆದೇಶ ಪ್ರಕಟವಾಗಿದ್ದು, ಹಲವು ತಿಂಗಳು ಕಳೆದರೂ ಆಯುಷ್ ವಿವಿ ಪ್ರಾರಂಭವಾಗದೇ ಇರುವುದನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಮುಖಂಡರಾದ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ಸಮೀಪದ ಸೋಗಾನೆಯಲ್ಲಿ ಅಂದಿನ ಸಭಾಪತಿ ಡಿ.ಹೆಚ್.ಶಂಕರಮೂರ್ತಿಯವರ ಶಿಫಾರಸ್ಸಿನ ಮೇರೆಗೆ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More

ಶಿವಮೊಗ್ಗದ ಗಾಂಧಿಬಜಾರ್ ನಲ್ಲಿ ಚಾಕು ಇರಿತಕ್ಕೊಳಗಾಗಿದ್ದ ವ್ಯಕ್ತಿ ಸಾವು :

ಶಿವಮೊಗ್ಗ : ಗಾಂಧಿ ಬಜಾರ್​ನ ಮಾರ್ಕೆಟ್​ನಲ್ಲಿ ಚಾಕುವಿನಿಂದ ಇರಿತಕ್ಕೆ ಒಳಗಾಗಿದ್ದ ಸೆಂಧಿಲ್ ಕುಮಾರ್  ಇಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಒಂಬತ್ತು ತಿಂಗಳ ಹಿಂದೆ  ಸೆಂಧಿಲ್ ನ ಸ್ನೇಹಿತ ಸಂತೋಷ್ (ಜೋಗಿ ಸಂತು) ವಿನ ಜೊತೆಯಲ್ಲಿ ಹಣದ ವ್ಯವಹಾರದ ವಿಚಾರವಾಗಿ ಜಗಳವಾಗಿದ್ದು ಆ ಕಾರಣಕ್ಕೆ ಸೆಂಧಿಲ್ ಮೇಲೆ ಅಟ್ಯಾಕ್  ಮಾಡಲಾಗಿತ್ತು. ಈ ಅಟ್ಯಾಕ್ ನಿಂದ ಗಾಯಗೊಂಡಿದ್ದ  ಸೆಂಥಿಲ್ ನನ್ನ​ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕುಟುಂಬದವರು ಕರೆದುಕೊಂಡು ಹೋಗಿದ್ದರು….

Read More

ಸಾಗರ ನಗರಸಭೆ ವಿರುದ್ದ ಪ್ರತಿಭಟನೆ ನಡೆಸಿದ್ದ ಹೋರಾಟಗಾರನಿಗೆ ಪೌರಕಾರ್ಮಿಕ ಸಂಘದ ಅಧ್ಯಕ್ಷರಿಂದ ಧಮ್ಕಿ : ಆಡಿಯೋ ವೈರಲ್

ಸಾಗರ: ಚುನಾಯಿತ ಪ್ರತಿನಿಧಿಗೆ ಗೌರವ ಕೊಡದ ನಗರಸಭೆ ಆಡಳಿತ ವೈಖರಿಯನ್ನು ಖಂಡಿಸಿ ಬುಧವಾರ ನಗರಸಭಾ ಕಾಂಗ್ರೆಸ್ ಸದಸ್ಯೆ ಮಧುಮಾಲತಿ ಪೌರಾಯುಕ್ತರ ಕೊಠಡಿ ಎದುರು ಏಕಾಂಗಿ ಧರಣಿ ನಡೆಸಿ, ಆಡಳಿತದ ವಿರುದ್ಧ ಧಿಕ್ಕಾರ ಕೂಗಿದ್ದರು ಈ ಸಂಧರ್ಭದಲ್ಲಿ ಅವರಿಗೆ ಬೆಂಬಲಿಸಿದ ಹೋರಾಟಗಾರ ಅನ್ವರ್ ಭಾಷಾ ರವರಿಗೆ ನಗರಸಭೆ ಪೌರ ಕಾರ್ಮಿಕ ಸಂಘದ ಅಧ್ಯಕ್ಷರಾದ ನಾಗರಾಜ್ ರವರು ಕರೆ ಮಾಡಿ ಧಮ್ಕಿ ಹಾಕಿದ್ದಾರೆ ಎನ್ನುವ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕೋ ಏನೋ ಇತ್ತೀಚೆಗೆ ಸಾಗರ ನಗರಸಭೆ ಜಿಲ್ಲೆಯಲ್ಲಿ…

Read More

ರಿಪ್ಪನ್‌ಪೇಟೆಯ ನೂತನ ಹೈಟೆಕ್ ಶೌಚಾಲಯ ಲೋಕಾರ್ಪಣೆ :

ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದ ಸಮೀಪ ಸ್ಥಳೀಯ ಗ್ರಾಮಾಡಳಿತ ನೂತನವಾಗಿ ನಿರ್ಮಿಸಿರುವ ಸಮುದಾಯ ಶೌಚಾಲಯವನ್ನು ಗುರುವಾರ ಗ್ರಾಪಂ ಅಧ್ಯಕ್ಷರಾದ ಮಂಜುಳ ಕೇತಾರ್ಜಿ ರಾವ್ ರವರು ಸರಳ ಸಮಾರಂಭದ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷೆ  ಮಂಜುಳ ಕೇತಾರ್ಜಿ ರಾವ್ ದುರಸ್ಥಿಯಾಗಿದ್ದ ಹಳೆಯ ಶೌಚಾಲಯವನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಗ್ರಾಮ ಪಂಚಾಯತಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅನೇಕ ಅಡೆತಡೆಗಳು ಎದುರಾದವು ಎಂದರು. ಗ್ರಾಮ ಪಂಚಾಯತಿಯ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯವು ನಿರ್ಮಾಣಗೊಂಡಿದ್ದು, ಮಹಿಳೆ…

Read More

ಕಿಡ್ನಿ ಸಂಬಂಧಿತ ಚಿಕಿತ್ಸೆಗಾಗಿ ಶಿವಮೊಗ್ಗದ ವಿದ್ಯಾರ್ಥಿನಿಯನ್ನು ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ಶಿಫ್ಟ್ :

ಭದ್ರಾವತಿಯ18 ವರ್ಷದ ರಾಧಿಕ ಎಂಬ ವಿದ್ಯಾರ್ಥಿನಿಗೆ ತುರ್ತು ಲಿವರ್ ಕಸಿ ಅವಶ್ಯಕತೆ ಇದ್ದ ಹಿನ್ನಲೆಯಲ್ಲಿ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ಜೀರೋ ಟ್ರಾಫಿಕ್ ನಲ್ಲಿ ಕರೆದೊಯ್ಯಲಾಯಿತು. ಶಿವಮೊಗ್ಗ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ಮೂರು ಖಾಸಗಿ ಅಂಬ್ಯುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ಈ ಮೊದಲು ಭದ್ರಾವತಿಯ ನಿರ್ಮಲ ಆಸ್ಪತ್ರೆಗೆ ರಾಧಿಕಾರನ್ನ ಸೇರಿಸಲಾಗಿತ್ತು. ರಕ್ತ ಪರೀಕ್ಷೆ ನಡೆಸಿದ ನಂತರ ಯುವತಿಯ ಖಾಯಿಲೆ ಬಗ್ಗೆ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು. ಐದು ದಿನದ ನಂತರ…

Read More

ಕುಡಿದ ಅಮಲಿನಲ್ಲಿ ವ್ಯಕ್ತಿಯ ಮೇಲೆ ಮಾರಾಣಂತಿಕ ಹಲ್ಲೆ ಮಾಡಿದ ಯುವಕರು : ಕುಡುಕರ ಹಾವಳಿಯಿಂದ ಬೆಚ್ಚಿ ಬೀಳುತ್ತಿರುವ ಜನತೆ!!!!! ರಿಪ್ಪನ್‌ಪೇಟೆಯ ಖಾಲಿ ಲೇಔಟ್ ಗಳೇ ಕುಡುಕರ ಸಾಮ್ರಾಜ್ಯ…!!!

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಸಿದ್ದಪ್ಪನಗುಡಿಯಲ್ಲಿ ಮದ್ಯಪಾನ ಮಾಡುತ್ತಿದ್ದ ಯುವಕರಿಗೆ ಬುದ್ದಿ ಹೇಳಿದ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸಿದ್ದಪ್ಪನಗುಡಿ ಸಮೀಪದಲ್ಲಿ ಕೃಷಿಕರೊಬ್ಬರು ತನ್ನ ಜಮೀನಿನಲ್ಲಿ ಶುಂಠಿ ನೆಡುವ ಕಾರ್ಯದಲ್ಲಿದ್ದಾಗ ಅವರದೇ ಜಮೀನಿನಲ್ಲಿ ಶಿವಮೊಗ್ಗ ಮೂಲದ ಅಮಾನುಲ್ಲಾ ಮತ್ತು ಕಿರಣ್ ಎಂಬ ಯುವಕರು ಮದ್ಯಪಾನ ಮಾಡುತಿದ್ದರು.ಮದ್ಯಪಾನ ಮಾಡಿ ಬಾಟಲ್ ಜಮೀನಿನಲ್ಲಿ ಒಡೆಯಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಏಕಾಏಕಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಹಲ್ಲೆಗೊಳಗಾದ ವ್ಯಕ್ತಿಯು ಕೂಗಿಕೊಂಡ…

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More