Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

ಕೃಷ್ಣ ಮೃಗದ ಚರ್ಮ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯ ಮಾಲು ಸಮೇತ ಬಂಧನ

ಶಿವಮೊಗ್ಗ ಜಿಲ್ಲೆಯ ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗ ಚರ್ಮಗಳ ಮಾರಾಟದಲ್ಲಿ ತೊಡಗಿರುವ ವ್ಯಕ್ತಿಯನ್ನು ಅರಣ್ಯ ಸಂಚಾರಿದಳದ ಪೋಲೀಸರು ಬಂಧಿಸಿದ್ದಾರೆ. ಆನಂದಪುರದ ದಾಸಕೊಪ್ಪ ಬಸ್ ನಿಲ್ದಾಣದಲ್ಲಿ ಕೃಷ್ಣ ಮೃಗದ ಚರ್ಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಾಗರ ಅರಣ್ಯ ಸಂಚಾರಿ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕಿನ ಮಳವಳ್ಳಿ ತಾಂಡದ ಮುರಳೀಧರ್ ನಾಯ್ಕ್ ಬಂಧಿತ ವ್ಯಕ್ತಿ. ಈತನಿಂದ ಕೃಷ್ಣ ಮೃಗದ ಚರ್ಮಗಳನ್ನು ಮಾಲು ಸಮೇತ  ವಶಪಡಿಸಿಕೊಂಡು,ಪ್ರಕರಣ ದಾಖಲಿಸಿದ್ದಾರೆ. ಪೋಲೀಸ್ ಅರಣ್ಯ ಸಂಚಾರಿದಳದ ಸಬ್…

Read More

ಮಾ.4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇದಾಜ್ಞೆ ವಿಸ್ತರಣೆ : ಶಾಲಾ ಕಾಲೇಜು ನಾಳೆಯಿಂದ ಆರಂಭ

ಶಿವಮೊಗ್ಗ ನಗರದಲ್ಲಿ ಮಾರ್ಚ್ 4ರವರೆಗೆ ನಿಷೇಧಾಜ್ಞೆ ಮುಂದುವರೆಯಲಿದೆ. ವ್ಯಾಪಾರ, ವಹಿವಾಟಿಗೆ ಅವಧಿಯನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶದಲ್ಲಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ ಶಿವಮೊಗ್ಗ ನಗರದಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಈ ಅವಧಿಯಲ್ಲಿ ವ್ಯಾಪಾರ, ವಹಿವಾಟು ಮಾಡಿಕೊಳ್ಳಬಹುದಾಗಿದೆ. ರಾತ್ರಿ 7 ಗಂಟೆ ಬಳಿಕ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ನಾಳೆಯಿಂದ ಶಾಲೆ, ಕಾಲೇಜುಗಳು ಪ್ರಾರಂಭ ಹರ್ಷ ಹಿಂದೂ…

Read More

ಯಡಿಯೂರಪ್ಪ ಹುಟ್ಟುಹಬ್ಬ: 79 ಕೆಜಿ ಕೇಕ್​ ಕತ್ತರಿಸಿ ಅಭಿಮಾನಿಗಳ ಸಂತಸ ಹೆಚ್ಚಿಸಿದ ಯಡಿಯೂರಪ್ಪ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಜನ್ಮದಿನವನ್ನು ರಾಜ್ಯಾದ್ಯಂತ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಭಾನುವಾರ ಸರಳವಾಗಿ ಆಚರಿಸಿದರು. ಗಣ್ಯರು, ಅಭಿಮಾನಿಗಳು ಬಿಎಸ್​ವೈ ಅವರಿಗೆ ಶೂಭಕೋರಿದ್ದಾರೆ. ಬೆಂಗಳೂರಲ್ಲಿ ಬಿಎಸ್​ವೈ ಬೃಹತ್​ ಕೇಕ್​ ಕತ್ತರಿಸಿದರು. ತವರು ಕ್ಷೇತ್ರ ಶಿಕಾರಿಪುರ, ಶಿರಾಳಕೊಪ್ಪ, ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಬಿಎಸ್​ವೈ ಅಭಿಮಾನಿಗಳು ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. 79 ಕೆಜಿ ತೂಕದ ಕೇಕ್ ಕತ್ತರಿಸಿದ ಬಿಎಸ್‌ವೈ:  ಬಿಎಸ್‌ವೈ 79ನೇ ಜನ್ಮ ದಿನದ ನಿಮಿತ್ತ 79 ಕೆ.ಜಿ. ತೂಕದ ಕೇಕ್‌ ಅನ್ನು ಕಾವೇರಿ…

Read More

ಬೆಳೆಯುವ ಮಕ್ಕಳಲ್ಲಿ ಸಂಸ್ಕಾರ ಅರಳಬೇಕು: ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ: ಒಂದು ಶಾಲೆ ಮಕ್ಕಳ ವ್ಯಕ್ತಿತ್ವವನ್ನು ರೂಪಿಸುತ್ತದೆ. ಆ ಶಾಲೆಯಿಂದ ಮಕ್ಕಳ ಮನಸ್ಸಿನಲ್ಲಿ ಸಂಸ್ಕಾರ ಅರಳುವಂತಾಗಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಹೆದ್ದಾರಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ 25 ಲಕ್ಷ ರೂ ವೆಚ್ಚದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಾಲೆಗಳು ದೇವಸ್ಥಾನಕ್ಕೆ ಸಮ. ದೇವಸ್ಥಾನಕ್ಕೆ ಕೊಡುವುದನ್ನು ಶಾಲೆಗಳಿಗೆ ಕೊಟ್ಟರೆ ಅಂತಹ ದಾನಿಗಳಿಗೆ ಹತ್ತು ಪಟ್ಟು ಹೆಚ್ಚು ಪುಣ್ಯಪ್ರಾಪ್ತಿಯಾಗುತ್ತದೆ. ಭಾಷಣದಿಂದ ಸಮಾಜ ಪರಿವರ್ತನೆಯಾಗವುದಿಲ್ಲ. ಅಧ್ಯಾಪಕರ ಪ್ರಮಾಣಿಕ ಪ್ರಯತ್ನದಿಂದ ಇಲ್ಲಿನ ಹಣತೆಗಳನ್ನು ದೇಶ ಬೆಳಗಲು ಪ್ರೇರೇಪಿಸಬಹುದು…

Read More

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು  ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು. ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು. ಇಂತಹ ಕೆಟ್ಟ…

Read More

ಇದೇ ತಿಂಗಳ 27ರಂದು ಅದ್ದೂರಿಯಾಗಿ “ಕೆಳದಿ ರಾಣಿ ಚೆನ್ನಮ್ಮ ಉತ್ಸವ” : ಶಾಸಕ ಹರತಾಳು ಹಾಲಪ್ಪ

ಸಾಗರ : ಈ ತಿಂಗಳ 27ರಂದು ಕೆಳದಿ ರಾಣಿ ಚೆನ್ನಮ್ಮ ಉತ್ಸವವನ್ನು ಅದ್ದೂರಿಯಾಗಿ ಆಚರಿಸುವ ವಿಚಾರವಾಗಿ ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರದ ಉಪವಿಭಾಗಧಿಕಾರಿ ಕಛೇರಿಯಲ್ಲಿ ಅಧಿಕಾರಿಗಳ ಸಭೆ ನೆಡೆಸಿದರು. ಸದರಿ ಕಾರ್ಯಕ್ರಮ ನಡೆಸಲು ಕೈಗೊಳ್ಳಬೇಕಾದ ರೂಪುರೇಷಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ನಂತರ ಸುದ್ದಿಗೋಷ್ಟಿ ನಡೆಸಿದ ಶಾಸಕರು “ಕೆಳದಿ ರಾಣಿ ಚೆನ್ನಮ್ಮ ಉತ್ಸವ” ವನ್ನು ಪ್ರತಿ ವರ್ಷ ಕನ್ನಡ ಮತ್ತು ಸಂಸ್ಕೃತಿ  ಇಲಾಖೆಯಿಂದ ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲು 25 ಲಕ್ಷ ರೂ ಅನುದಾನ ಮಂಜೂರಾತಿಯಾದ ಬಗ್ಗೆ ಮಾಹಿತಿ ನೀಡಿದ…

Read More

ಹರ್ಷನ ಕೊಲೆ ಆರೋಪಿಗಳಿಗಳಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು : ಹರತಾಳು ಹಾಲಪ್ಪ

ಶಿವಮೊಗ್ಗ : ಹರ್ಷನ ಸಾವು ವ್ಯರ್ಥವಾಗಲು ಬಿಡುವುದಿಲ್ಲ ಹಾಗೆಯೇ ಈ ತರಹದ ಕೃತ್ಯಗಳನ್ನು ಎಸಗುವವರಿಗೆ ಪೊಲೀಸರ ಗುಂಡಿನ ಮೂಲಕವೇ ಉತ್ತರ ನೀಡಬೇಕು ಎಂದು ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಇಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದ ಅವರು ನೇರವಾಗಿ ಇತ್ತೀಚೆಗೆ ದುಷ್ಕರ್ಮಿಗಳ ಕುಕೃತ್ಯದಿಂದ ಹುತಾತ್ಮರಾದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಹರ್ಷ ರವರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾತನಾಡಿದ ಅವರು ಪೊಲೀಸರು…

Read More

ಶಿವಮೊಗ್ಗ ಜಿಲ್ಲೆ ಎಸ್ಪಿ ವರ್ಗಾವಣೆ ಸುದ್ದಿ ಕೇವಲ ಊಹಾಪೋಹ : ಗೃಹ ಸಚಿವ ಆರಗ ಜ್ಞಾನೇಂದ್ರ

ಜಿಲ್ಲೆಯ ಧಕ್ಷ ರಕ್ಷಣಾಧಿಕಾರಿ ಡಾ.ಬಿ.ಎಂ.ಲಕ್ಷ್ಮೀ ಪ್ರಸಾದ್ ವಿರುದ್ಧ ಹಬ್ಬಿರುವ ಊಹಾಪೂಹಗಳಿಗೆ ಬ್ರೇಕ್ ಬಿದ್ದಿದೆ. ಹಿಂದೂ ಯುವಕ ಹರ್ಷನ ಕಗ್ಗೊಲೆಯಲ್ಲಿ ನಡೆದ‌ ಗಲಭೆ‌ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ನಗರ ಪೊಲೀಸ್ ಠಾಣೆಯ ಆಡಿಟಿಂಗ್ ವರದಿಗಳನ್ನ ಕೇಳಿರುವ ಹಿನ್ನಲೆಯಲ್ಲಿ ಎಸ್ಪಿ ತಲೆದಂಡವಾಗಲಿದೆ ಎಂಬ‌ ವದಂತಿಗೆ ಖುದ್ದು ಗೃಹಸಚಿವರೇ  ಅಲ್ಲಗೆಳೆದಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಠಾಣೆಗಳಲ್ಲಿ ಆಡಿಟಿಂಗ್ ವರದಿ ಕೇಳಿರುವುದು ಹರ್ಷನ ಕೊಲೆಯನ್ನ ಒಂದು ಗ್ಯಾಂಗ್ ನಡೆಸಿದೆ. ಶಿವಮೊಗ್ಗ ಎಂದರೆ ರೌಡಿಗಳ ಬ್ರೀಡಿಂಗ್…

Read More

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read More
Exit mobile version