Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

 ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ‌ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More

ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :

ರಿಪ್ಪನ್‌ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ 50 ವರ್ಷದ ವ್ಯಕ್ತಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್:

ಒಂಭತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಶಿವಮೊಗ್ಗದ ಮಂಜಪ್ಪ (49) ಶಿಕ್ಷೆಗೆ ಒಳಗಾದವನು. ಈತನ ವಿರುದ್ಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿತ್ತು. 2020ರ ಡಿಸೆಂಬರ್ 5ರಂದು 9 ವರ್ಷದ ಬಾಲಕಿ ಬೆಂಕಿ ಪೊಟ್ಟಣ ಕೇಳಿಕೊಂಡು ಮಂಜಪ್ಪನ ಮನೆಗೆ ಬಂದಿದ್ದಳು. ಆಕೆಯ ಮೇಲೆ ಮಂಜಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಬಾಲಕಿ ನೀಡಿದ ಹೇಳಿಕೆ ಆಧಾರದಲ್ಲಿ ಮಹಿಳಾ…

Read More

ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ

 ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…

Read More

ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ

ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….

Read More
Exit mobile version