Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ

ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…

Read More

ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನಾಗರೀಕರ ಕಂದಾಯ ಪಾವತಿ ಸಮಸ್ಯೆಗೆ ಮುಕ್ತಿ

ಪಟ್ಟಣ ಪಂಚಾಯತಿ ತೀರ್ಥಹಳ್ಳಿಯವರಿಂದ  ಸಾರ್ವಜನಿಕರಿಗೆ ಆಗುತ್ತಿದ್ದ ಸಮಸ್ಯೆಗಳ ಬಗ್ಗೆ ನಿನ್ನೆ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ವರದಿ ಪ್ರಕಟಿಸಲಾಗಿತ್ತು. ನೀರಿನ ಬಿಲ್ಲಿನ ಸಮಸ್ಯೆಗಳು ಹಾಗೂ ಕಂದಾಯ ಕಟ್ಟಿಸಿಕೊಳ್ಳುವ ಬಗ್ಗೆ ವರದಿ ಬಿತ್ತರಿಸಲಾಗಿತ್ತು. ಈ ವರದಿಗೆ ತಕ್ಷಣವೇ ಸ್ಪಂದಿಸಿರುವ ಅಧಿಕಾರಿಗಳು ಇಂದಿನಿಂದ ಕಂದಾಯವನ್ನು ಕಟ್ಟಿಸಿಕೊಳ್ಳುವುದರ ಜೊತೆ 5% ರಿಯಾಯಿತಿ ಸಹ ಘೋಷಿಸಿದ್ದಾರೆ.ಈ ಬಗ್ಗೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವಾಹನಗಳಲ್ಲಿ ಅನೌನ್ಸ್ ಮಾಡಲಾಗುತ್ತಿದೆ.  ಇದರಿಂದಾಗಿ ಸಾರ್ವಜನಿಕರು ಪೋಸ್ಟ್ ಮ್ಯಾನ್ ನ್ಯೂಸ್ ಮಾಧ್ಯಮ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ…

Read More

ತೀರ್ಥಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರೀಕರ ಸಮಸ್ಯೆ ಕೇಳೋರು ಯಾರು ! ?????

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ವ್ಯಾಪ್ತಿಯ ನಾಗರಿಕರ ಸಮಸ್ಯೆ ಕೇಳೋ ವ್ಯಕ್ತಿಗಳು ಯಾರು !?  ಹೀಗೊಂದು ಪ್ರೆಶ್ನೆ ಸಾರ್ವಜನಿಕರ ವಲಯದಿಂದ ಕೇಳುತ್ತಿದ್ದು ಇದಕ್ಕೆ ಚುನಾವಣೆಯಲ್ಲಿ ಗೆದ್ದವರಾಗಲಿ ಅಥವಾ ಅಲ್ಲಿನ ಅಧಿಕಾರಿಗಳಾಗಲಿ ಉತ್ತರ ನೀಡಬೇಕಿದೆ. ಸಾರ್ವಜನಿಕರ ಆಕ್ರೋಶಕ್ಕೆ ಕಾರಣ ಏನು ?    ನೀರಿನ ಬಿಲ್ಲು: ನೀರು ಬಿಲ್ಲು ಬರೀ ಆರಿಯಾರ್ಸ್ ಸೇರಿಸಿ ಬಿಲ್ಲು ಕೊಟ್ಟರೆ ಪರವಾಗಿಲ್ಲ. ಬಿಲ್ಲು ಕೊಡದೇ ಎರಡು ಮೂರು ತಿಂಗಳಿಗೊಮ್ಮೆ ಬಿಲ್ಲು ಕೊಟ್ಟು, ಸ್ಲಾಬ್ ರೇಟು ಜಾಸ್ತಿಯಾಗಿ ನಮ್ಮದಲ್ಲದ ತಪ್ಪಿಗೆ ನಾವು ದಂಡ ಕೊಡೋದು…

Read More

ಕುಂಸಿ ರೈಲ್ವೆ ಹಳಿ ಮೇಲೆ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ ಹಾಗೂ ಕುಂಸಿ ರೈಲ್ವೆ ನಿಲ್ದಾಣಗಳ ನಡುವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ವಾರಸುದಾರರು ಇದ್ದರೆ ರೈಲ್ವೆ ಪೊಲೀಸರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಶಿವಮೊಗ್ಗದಿಂದ ಕುಂಸಿಗೆ ಹೋಗುವ ರೈಲ್ವೆ ಮಾರ್ಗದ ಮಧ್ಯೆ ಇವತ್ತು ಬೆಳಗ್ಗೆ ರೈಲ್ವೆ ಇಲಾಖೆ ಸಿಬ್ಬಂದಿ ಹಳಿ ಪರಿಶೀಲನೆಗೆ ತೆರಳಿದ್ದಾಗ ಅಚ್ಚರಿ ಕಾದಿತ್ತು ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ.   ಮೃತ ವ್ಯಕ್ತಿಯು ಒಂದು ಸಿಮೆಂಟ್ ಬಣ್ಣದ ಸ್ವೆಟರ್, ಬಿಳಿ ಮತ್ತು ಕೆಂಪು ಬಣ್ಣದ ಚೆಕ್ಸ್ ಶರ್ಟ್, ಕೆಂಪ ಬಣ್ಣದ ನೈಟ್ ಪ್ಯಾಂಟ್,…

Read More

ಕುಗ್ರಾಮ ಬುಲ್ಡೋಜರ್ ಗುಡ್ಡ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿ ನಡೆ – ಹಳ್ಳಿಯ ಕಡೆ ಕಾರ್ಯಕ್ರಮ :

ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ ಮಹಾತ್ವಾಕಾಂಕ್ಷಿ ಯೋಜನೆಯೇ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ ಕಾರ್ಯಕ್ರಮದ ಮೂಲ ಉದ್ದೇಶ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಬುಲ್ಡೋಜರ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಅಯೋಜಿಸಲಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರ ಜನರ ಬಳಿಗೆ ತೆರಳಿ ಜನರ ಮೂಲಭೂತ ಸಮಸ್ಯೆಗಳನ್ನು ಸ್ಥಳದಲ್ಲಿ ಪರಿಹರಿಸುವ…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆಸಲು ಪ್ರಭಾವಿಗಳ ಸಂಚು :

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಕಿರುಕುಳದ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಮ್ ಯುವಕನ ಹತ್ಯೆ ಮಾಡುವ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದೆ.ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಸದಾಶಿವ ನಗರದ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು, ಅದರಲ್ಲಿ ದೊಡ್ಡವರು ಸದಸ್ಯರಾಗಿದ್ದಾರೆ. ಆ ಟ್ರಸ್ಟ್ ಸದಸ್ಯರು ಹಾಗೂ…

Read More
Exit mobile version