Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಚೆಕ್ ಡ್ಯಾಂ ನಿರ್ಮಾಣದ ವೇಳೆ ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ಪ್ರಕರಣ ಬೆಳಕಿಗೆ : ವೀಡಿಯೋ ವೈರಲ್

ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದ ಚೆಕ್ ಡ್ಯಾಂ ನಿರ್ಮಾಣದ ವೇಳೆ ಏರಿ ಹೊಯ್ಯಲು ಮಣ್ಣಿನೊಂದಿಗೆ ಸ್ಮಶಾನದಲ್ಲಿ ಹೂತಿದ್ದ ಶವಗಳನ್ನೂ ಹಾಕುತ್ತಿರುವ ಆಘಾತಕಾರಿ ದೃಶ್ಯ ವೈರಲ್ ಆಗಿದೆ. ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹಳೇಮಂಡಿಯ ನೀರು ಶುದ್ಧೀಕರಣ ಘಟಕದ ಸಮೀಪದ ತುಂಗಾ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದೆ. ನಗರಕ್ಕೆ 24 ಗಂಟೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಭಾಗವಾಗಿ ಈ ಚೆಕ್ ಡ್ಯಾಂ ನಿರ್ಮಾಣ ಮಾಡಲಾಗುತ್ತಿದ್ದು, ಅದಕ್ಕಾಗಿ ಮಣ್ಣಿನ…

Read More

ಶಿವಮೊಗ್ಗ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ 25 ಲಕ್ಷ ಪರಿಹಾರದ ಚೆಕ್ ವಿತರಿಸಿದ ಯಡಿಯೂರಪ್ಪ

ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ನಡೆದಿತ್ತು. ಕರ್ನಾಟಕ ಸರ್ಕಾರ ಹರ್ಷ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು.ಇಂದು ಪರಿಹಾರದ ಚೆಕ್ ಹಸ್ತಾಂತರ ಮಾಡಲಾಗಿದೆ. ಭಾನುವಾರ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ಹರ್ಷ ಮನೆಗೆ ಇಂದು ಭೇಟಿ ನೀಡಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ರಾಜ್ಯ ಸರ್ಕಾರದ ವತಿಯಿಂದ 25 ರೂ. ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಿದರು. ಫೆಬ್ರವರಿ 20ರಂದು ರಾತ್ರಿ ಹರ್ಷ ಕೊಲೆಯಾಗಿತ್ತು….

Read More

ಸಾಗರದ ಎಲ್ ಬಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ :

ಜೀವರಕ್ಷಣೆಗೆ  ಕಾರಣವಾಗುವ ರಕ್ತದಾನದಂತಹ ಮಹತ್ವದ ಕಾರ್ಯದಲ್ಲಿ ಭಾಗಿಯಾಗುವ ಸಾಮಾಜಿಕ ಕಾಳಜಿ ಪ್ರತಿಯೊಬ್ಬರು ಬಳಸಿಕೊಳ್ಳಬೇಕು ಎಂದು ರೋಟರಿ ರಕ್ತನಿಧಿ ವೈದ್ಯಾಧಿಕಾರಿಗಳಾದ ಬಿ ಜಿ  ಸಂಗಮ್ ಹೇಳಿದರು    ನಗರದ ಲಾಲ್ ಬಹದ್ದೂರ್ ಕಲಾ ವಿಜ್ಞಾನ ಮತ್ತು ಎಸ್ ಬಿ ಸೊಲಬಣ್ಣ ಶೆಟ್ಟಿ ವಾಣಿಜ್ಯ ಮಹಾವಿದ್ಯಾಲಯ, ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್, ಎನ್ಎಸ್ಎಸ್, ಎನ್ ಸಿಸಿ, ವಿದ್ಯಾರ್ಥಿ ವೇದಿಕೆ,ಕೆ ಎಚ್ ಶ್ರೀನಿವಾಸ್ ಸ್ನಾತಕೋತ್ತರ ಅಧ್ಯಯನ ಕೇಂದ್ರ  ಜಿ.ಎ.ನಾರಿಬೋಲಿ ಮಹಾವಿದ್ಯಾಲಯ ,  ಲಯನ್ಸ್ ಕ್ಲಬ್ ಸಾಗರ ಹಾಗೂ ರೋಟರಿ…

Read More

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಒಂದು ವಾರದೊಳಗೆ ಎನ್ಐಎಗೆ ಹಸ್ತಾಂತರ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹರ್ಷನ ಕೊಲೆ ಪ್ರಕರಣವನ್ನ ಇನ್ನೊಂದು ವಾರದೊಳಗೆ ಎನ್ಐಎ ತನಿಖಾ ತಂಡಕ್ಕೆ ಒಪ್ಪಿಸಲಾಗುವುದು ಎಂದು ಕೃಷಿ ಮತ್ತು ರೈತರ ಕಲ್ಯಾಣ ಕೇಂದ್ರ ಮಂತ್ರಿ ಶೋಭ ಕರದ್ಲಾಂಜೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗದ ಹರ್ಷನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳಿಗೆ ಮಾತನಾಡಿ ಹರ್ಷನ ಸಾವು ಕೇವಲ ಕುಟುಂಬಕ್ಕೆ ದುಖ ತಂದಿಲ್ಲ ಬದಲಿಗೆ ಇಡೀ ದೇಶಕ್ಕೆ ನೋವುತಂದಿದೆ ಎಂದರು. ಹರ್ಷನ ಸಾವಿನ ಹಿಂದೆ ಅಂತರಾಷ್ಟ್ರೀಯ ಷಡ್ಯಂತರ ಅಡಗಿದೆ ಎಂಬ ಶಂಕೆ ಇದೆ. ಈ ಹೇಳಿಕೆಯನ್ನ…

Read More

ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????

ಪೊಲೀಸರು‌ ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ  ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ  ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ  ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ  ಈ…

Read More

ನಿರಾಶದಾಯಕ ಬಜೆಟ್ : ಅರ್ ಎ ಚಾಬುಸಾಬ್

ರಾಜ್ಯದ ಮೂಲಭೂತ ಅಭಿವೃದ್ಧಿಗೆ ಒತ್ತು ನೀಡದೇ, ರೈತರ ಸಾಲದ ಯೋಜನೆಯನ್ನು ಹೆಚ್ಚಿನ  ರೈತರಿಗೆ ವಿಸ್ತರಿಸದೇ ರೈತರ ಪರ ಬಜೆಟ್ ಎಂದು ಪ್ರತಿಪಾದಿಸುವ ಬರೀ ಸುಳ್ಳಿನ ಲೆಕ್ಕಚಾರದ ಪೊಳ್ಳು ಹಾಗೂ ನಿರಾಶದಾಯಕ ಬಜೆಟ್ ಆಗಿದೆ ಎಂದು ಜಾತ್ಯಾತೀತ ಜನತಾದಳದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಹೇಳಿದರು‌. ಸಮಾಜ ಕಲ್ಯಾಣ ಇಲಾಖೆ, ಕೈಗಾರಿಕಾ ಇಲಾಖೆ, ಕೃಷಿ, ಶಿಕ್ಷಣ, ನೀರಾವರಿ ಯಂತಹ ಪ್ರಮುಖ ವಲಯಗಳಲ್ಲಿ ಯಾವುದೇ ಹೊಸ ಯೋಜನೆ ರೂಪಿಸಿರುವುದಿಲ್ಲ.ವಿಧವೆ ಮತ್ತು ವಯೋವೃದ್ಧರಿಗೆ ಕನಿಷ್ಠ 1ಸಾವಿರಕ್ಕೂ ಹೆಚ್ಚು…

Read More

ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು : ಪ್ರೋ.ಚಂದ್ರಶೇಖರ್.ಟಿ

ರಿಪ್ಪನ್ ಪೇಟೆ : ಇಲ್ಲಿನ  ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ಶಾಸ್ತ್ರ ವಿಭಾಗ, ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಅಯವ್ಯಯ -2022 ದ ನೇರವಿಕ್ಷಣೆ ಮತ್ತು ವಿಶ್ಲೇಷಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲರಾದ ಶ್ರೀ ಚಂದ್ರಶೇಖರ.ಟಿ ರವರು ವಿದ್ಯಾರ್ಥಿಗಳು ಬಜೆಟ್ ವಿಶ್ಲೇಷಣೆ ಮಾಡುವ ಕೌಶಲ್ಯವನ್ನು ಬೆಳೆಸಿಕೊಂಡರೆ ರಾಜ್ಯದ ವಸ್ತು ಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಸಾಮಾರ್ಥ್ಯವನ್ನು ಪಡೆದುಕೊಳ್ಳುತ್ತಾರೆ ಎಂದು ಹೇಳಿದರು. ರಾಜ್ಯ ಬಜೆಟ್ ನ ಗಾತ್ರ, ವಿಭಾಗವಾರು ಹಂಚಿಕೆ,ಹೊಸ ಕಾರ್ಯಕ್ರಮಗಳ ಘೋಷಣೆ,…

Read More

ಶಿವಮೊಗ್ಗದಲ್ಲಿ ನಿನ್ನೆ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ :

ಶಿವಮೊಗ್ಗದಲ್ಲಿ ನಿನ್ನೆ ಸಂಜೆ ಪದ್ಮ ಚಲನಚಿತ್ರದ ಮಂದಿರದ ಬಳಿ ವಾಕಿಂಗ್ ಹೋಗಿದ್ದ ವೆಂಕಟೇಶ್ ಎಂಬುವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಇಬ್ಬರನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು ಓರ್ವನ ಭೇಟೆಗೆ ಬಲೆ ಬೀಸಿದ್ದಾರೆ. ನಿನ್ನೆ ಸಂಜೆ 06-30 ಗಂಟೆಗೆ ತುಂಗಾನಗರ ಠಾಣಾ ವ್ಯಾಪ್ತಿಯ ಪದ್ಮಾ ಟಾಕೀಸ್ ಎದುರು ಗೋಪಾಳ ಶಿವಮೊಗ್ಗ ಟೌನ್ ನ ವಾಸಿ ವೆಂಕಟೇಶ್ ಎಂಬುವರು ತಮ್ಮ ನಾಯಿಯನ್ನು ಹಿಡಿದುಕೊಂಡು ವಾಕಿಂಗ್ ಗೆ ಹೋಗಿ ವಾಪಾಸ್ ಮನೆಗೆ ಹಿಂದಿರುಗುವಾಗ ವಿದ್ಯಾನಿಕೇತನ ಶಾಲೆಯ ಹತ್ತಿರ ಅವರಿಗೆ ಕಲ್ಲಿನಿಂದ…

Read More

ಹೊಸನಗರದ ದಂಪತಿಗಳಿಗೆ ಒಲಿದ VK ಜೋಡಿ ತಾರೆ “ರನ್ನರ್ ಅಪ್” ಪ್ರಶಸ್ತಿ

ಹೊಸನಗರ :ವಿಜಯ ಕರ್ನಾಟಕ ಸಂಸ್ಥೆ ಪ್ರಸ್ತುತ ಪಡಿಸುತ್ತಿರುವ VK ಜೋಡಿ ತಾರೆ ಸ್ಫರ್ಧೆಯ  ಬೆಂಗಳೂರಿನಲ್ಲಿ ನಡೆದ ವಿಜಯ ಕರ್ನಾಟಕ ಜೋಡಿ ತಾರೆ 2022 ಸೀಸನ್ 2 ರ ಗ್ರ್ಯಾಂಡ್ ಫಿನಾಲೆಯಲ್ಲಿ ಹೊಸನಗರದ ಶಿಕ್ಷಕರಾದ ವನಜಾಕ್ಷಿ ದೇವೇಂದ್ರಪ್ಪ  ದಂಪತಿಗಳಿಗೆ ರನ್ನರ್ ಅಪ್ ಪ್ರಶಸ್ತಿ ಒಲಿದಿದೆ. ಪ್ರೇಮಿಗಳ ದಿನದ ಅಂಗವಾಗಿ ವಿಜಯ ಕರ್ನಾಟಕ ಸಂಸ್ಥೆಯು ಕರ್ನಾಟಕದ ಬೆಸ್ಟ್​ ಜೋಡಿಗಳನ್ನು ಗುರುತಿಸಲು ಈ ಸ್ಪರ್ಧೆ ಹಮ್ಮಿಕೊಂಡಿದ್ದು, ರಾಜ್ಯದ ಹಲವು ಭಾಗಗಳಿಂದ ಹಲವಾರು ಸ್ಪರ್ಧಿಗಳು ಭಾಗವಹಿಸುತ್ತಾರೆ. ಬೆಂಗಳೂರಿನಲ್ಲಿ ಪೆ.27 ರಂದು ನಡೆದ ವಿಜಯ…

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More
Exit mobile version