Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಿನಿಮೀಯ ರೀತಿಯಲ್ಲಿ ಸರಗಳ್ಳನನ್ನು ಬೆನ್ನತ್ತಿ ಹಿಡಿದ ಶಿವಮೊಗ್ಗದ ಟ್ರಾಫಿಕ್ ಪೊಲೀಸ್ ಮುನೇಶಪ್ಪ

ಶಿವಮೊಗ್ಗ: ಪ್ರಾಣದ ಹಂಗು ತೊರೆದು ಸರಗಳ್ಳನನ್ನು ಬಂಧಿಸುವಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ಸಿಬ್ಬಂದಿ ವಿ.ಹೆಚ್. ಮುನೇಶಪ್ಪ ಯಶಸ್ವಿಯಾಗಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನಿನ್ನೆ ಮಧ್ಯಾಹ್ನ ಸಮಯದಲ್ಲಿ ಉಷಾ ನರ್ಸಿಂಗ್ ಹೋಂ ಬಳಿ ತಾಯಿ ಮತ್ತು ಮಗಳು ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಯುವತಿಯ ಕತ್ತಿನಲ್ಲಿದ್ದ ಸರಕ್ಕೆ ಕೈಹಾಕಿದ್ದಾರೆ. ಯುವತಿ ಸರವನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಆಗ, ಯುವತಿ…

Read More

ಜಿಂಕೆ ಭೇಟೆಯಾಡಿ ಮಾಂಸ ತಯಾರಿಸುತ್ತಿದ್ದ ಇಬ್ಬರ ಬಂಧನ :

ಸಾಗರ: ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ ತಯಾರಿಸುತ್ತಿದ್ದುದನ್ನು ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯತಿ ಬಳಸಗೋಡು ಗ್ರಾಮದಲ್ಲಿ ಜಿಂಕೆ ಮಾಂಸ ಸಮೇತ ಆರೋಪಿಗಳನ್ನು ಬಂದಿಸಲಾಗಿದೆ. ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನಕುಮಾರ ಹಾಗೂ ಸಾಗರ ACF ಶ್ರೀಧರ್ ಮತ್ತು RFO ಪ್ರಮೋದ್ ರವರ ಮಾರ್ಗದರ್ಶನದಲ್ಲಿ  ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ ತಂಡ ನೇತೃತ್ವದಲ್ಲಿ ದಾಳಿ ನಡೆಸಿದಾಗ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ ಮಾಂಸ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಯಶಸ್ವಿಯಾಗಿ ನಡೆದ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ : ಪುನೀತ್ ರಾಜ್‍ಕುಮಾರ್ ರಂತವರು ಪದೇ ಪದೇ ಕನ್ನಡ ನಾಡಿನಲ್ಲಿ ಜನಿಸಬೇಕು : ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ಆರ್ ಸಿಸಿ ಆಟದ ಮೈದಾನದಲ್ಲಿ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ ಇಲೆವೆನ್ ಸ್ಟಾರ್ ಕ್ರಿಕೆಟ್ ತಂಡ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಗೆದ್ದ ಎಕೆ ಲಯನ್ಸ್ ಕ್ರಿಕೆಟ್ ಕ್ಲಬ್ ಶಿವಮೊಗ್ಗ ತಂಡಕ್ಕೆ ಪುನೀತ್ ರಾಜ್‍ಕುಮಾರ್ ಟ್ರೋಫಿಯನ್ನು ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ನಂತರ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕ ಆರೋಗ್ಯದ ಜೊತೆಗೆ ನಾಯಕತ್ವ ಗುಣ…

Read More

ಸೊರಬದಲ್ಲಿ ಎತ್ತು ತೊಳೆಯುವಾಗ ಕಾಲುಜಾರಿ ಬಿದ್ದು ವ್ಯಕ್ತಿ ಸಾವು :

ಸೊರಬ : ನದಿಯಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿ ಕಾಲು ಜಾರಿ ಮುಳುಗಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ತಾಲೂಕಿನ ಮೂಡಿ ಗ್ರಾಮದಲ್ಲಿ ನಡೆದಿದೆ. ಮೂಡಿ ಗ್ರಾಮದ ಶಶಿಧರ ಗೂಳೇರ್ (42) ಮೃತ ದುರ್ದೈವಿ. ಇಂದು ಬೆಳಗ್ಗೆ ಗ್ರಾಮದ ವರದಾ ನದಿಯಲ್ಲಿ ಎತ್ತುಗಳ ಮೈತೊಳೆಯಲು ಹೋದ ಸಂದರ್ಭದಲ್ಲಿ ಶಶಿಧರ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ….

Read More

ಕಾರಿನಲ್ಲಿ ಆಂಧ್ರದಿಂದ ಶಿವಮೊಗ್ಗ ಸಾಗಿಸುತ್ತಿದ್ದ 21 ಕೆ.ಜಿ ಗಾಂಜಾ ವಶಕ್ಕೆ: ನಾಲ್ವರ ಬಂಧನ

ಶಿವಮೊಗ್ಗ: ಆಂಧ್ರದಿಂದ ಶಿವಮೊಗ್ಗಕ್ಕೆ ಸಾಗಿಸಲಾಗುತ್ತಿದ್ದ 21 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆದಿರುವ ತುಂಗಾ ನಗರ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ನಗರಕ್ಕೆ ಗಾಂಜಾ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ ನಡೆದಿದೆ.‌ ಶಿವಮೊಗ್ಗ ತಾಲೂಕಿನ ಹಾಲಲಕ್ಕವಳ್ಳಿ ಗ್ರಾಮದ ಬಳಿ ಪೊಲೀಸರು ದಾಳಿ ನಡೆಸಿದ್ದಾರೆ. ಇನ್ನೋವಾ ಕಾರಿನಲ್ಲಿ ಗಾಂಜಾವನ್ನು ಶಿವಮೊಗ್ಗಕ್ಕೆ ತರಲಾಗುತ್ತಿತ್ತು. ಕಾರಿನಲ್ಲಿದ್ದ ದೌಲತ್ ಅಲಿಯಾಸ್ ಗುಂಡು, ಮುಜೀಬ್ ಖಾನ್ ಅಲಿಯಾಸ್ ಬ್ರಸ್ಟ್, ಶೋಯೆಬ್ ಅಲಿಯಾಸ್ ಚೂಡಿ ಹಾಗೂ ಜಪ್ರುಲ್ಲಾ ಎಂಬುವರನ್ನು ಬಂಧಿಸಲಾಗಿದೆ. ಗಾಂಜಾ ಮೌಲ್ಯವು ಅಂದಾಜು 6…

Read More

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಬಸ್ ನಲ್ಲಿ ಶೃಂಗೇರಿ ಮೂಲದ ಮುಸ್ಲಿಂ ಯುವಕ, ಹಿಂದೂ ಯುವತಿಯ ರೋಮ್ಯಾನ್ಸ್ ; ಸಾರ್ವಜನಿಕರಿಂದ ತರಾಟೆ

ಶೃಂಗೇರಿ : ತಾಲೂಕು ಹಾಗೂ ತೀರ್ಥಹಳ್ಳಿ ಗಡಿಭಾಗದ ಬಿದರಗೋಡು ಗ್ರಾಮದ ಯುವಕನೊಬ್ಬ ಉಡುಪಿ ಮೂಲದ ಹಿಂದೂ ಯುವತಿಯಳೊಡನೆ ಅಸಭ್ಯವಾಗಿ ವರ್ತಿಸಿ ಹಿಂದೂ ಸಂಘಟಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಬಿದರಗೋಡಿನ ಸುನೈಫ್ ಇಬ್ರಾಹಿಂ ಎಂಬಾತ ಉಡುಪಿ-ಮಂಗಳೂರು ಬಸ್ ನಲ್ಲಿ ಉಡುಪಿ ಮೂಲದ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಹಾಗೂ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಥಳಿಸಿದ್ದಾರೆ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸದ್ದು ಮಾಡಿದೆ. ಲವ್ ಜಿಹಾದ್ ಆರೋಪ;…

Read More

ಅನಂದಪುರದಲ್ಲಿ ಭರ್ಜರಿಯಾಗಿ ಆರಂಭಗೊಂಡ ಕಾಂಗ್ರೆಸ್ ಸದಸ್ಯತ್ವ ಅಭಿಯಾನ !!

ರಾಜ್ಯಾದ್ಯಂತ ಇಂದು ಡಿಕೆ ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಪ್ರಾರಂಭ ಮಾಡಲಾಗಿದೆ. ಜೂಮ್ ಆ್ಯಪ್ ನ ಮೂಲಕ ಇದೀಗ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು ರಾಜ್ಯಾದ್ಯಂತ ಯುವ ಪೀಳಿಗೆಯನ್ನು ಸೆಳೆಯುವ ಉದ್ದೇಶದಿಂದ ಭರ್ಜರಿಯಾಗಿ ಇಂದಿನಿಂದ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಚಾಲನೆ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಡಾಕ್ಟರ್  ರಾಜ ನಂದಿನಿ. ಪ್ರಧಾನ ಕಾರ್ಯದರ್ಶಿಯಾದ ಅಘ ಸುಲ್ತಾನ್ ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ರತ್ನಾಕರ…

Read More

ಯೋಧರ ಸಾವು ಸಂಭ್ರಮಿಸುತ್ತಿರುವ ವಿಕೃತರಿಗೆ ನಡು ರಸ್ತೆಯಲ್ಲಿಯೇ ಗುಂಡಿಟ್ಟರು ತಪ್ಪಿಲ್ಲ ಎಂದ ಶಿವಮೊಗ್ಗ ಗ್ರಾಮಾಂತರ ಶಾಸಕ..

ಶಿವಮೊಗ್ಗ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಸಶಸ್ತ್ರ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಇತರೆ ಯೋಧರ ಸಾವಿನ ಕುರಿತಂತೆ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಫೋಸ್ಟ್ ಮಾಡಿದವರ ವಿರುದ್ದ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕನಾಯ್ಕ್ ಗರಂ ಆಗಿದ್ದಾರೆ. ಇಂತಹ ವಿಕೃತರನ್ನು ನಡು ರಸ್ತೆಯಲ್ಲಿಯೇ ಗುಂಡಿಟ್ಟು ಕೊಂದರು ತಪ್ಪಿಲ್ಲ..! ಎಂದು ಟ್ವೀಟ್ ಮಾಡಿದ್ದಾರೆ.  ಈ ಕುರಿತಂತೆ ಶುಕ್ರವಾರ ತಮ್ಮ ಅದಿಕೃತ ಟ್ವಿಟರ್ ಖಾತೆಯಲ್ಲಿ ಕೆ.ಬಿ.ಅಶೋಕನಾಯ್ಕ್ ಪೋಸ್ಟ್ ಒಂದನ್ನು ಹಾಕಿದ್ದಾರೆ.ರಕ್ಷಣಾ ವ್ಯವಸ್ಥೆಯಲ್ಲಿ ಮಹತ್ತರವಾದ ಪಾತ್ರವಹಿಸಿ ದೇಶಕ್ಕಾಗಿ ತಮ್ಮ ಜೀವನ ಮುಡುಪಾಗಿಟ್ಟಿರುವ…

Read More
Exit mobile version