Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

ಶಿವಮೊಗ್ಗ ಕೃಷಿ ವಿವಿ 6ನೇ ಘಟಿಕೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಚಾಲನೆ.

ಶಿವಮೊಗ್ಗ : ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವಕ್ಕೆ ಚಾಲನೆ ನೀಡಿದರು. ಘಟಿಕೋತ್ಸವದಲ್ಲಿ ಹೆಸರಾಂತ ಅಣು ಜೀವಶಾಸ್ತ್ರಜ್ಞ ಭಾರತೀಯ ಸಂಜಾತ ವಿಜ್ಞಾನಿ ಡಾ.ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ನಂತರ ವಿವಿಧ ಶಿಕ್ಷಣ ವಿಭಾಗದಲ್ಲಿ 28 ವಿದ್ಯಾರ್ಥಿಗಳಿಗೆ 35 ಚಿನ್ನದ ಪದಕ ಹಾಗೂ 15 ವಿದ್ಯಾರ್ಥಿಗಳಿಗೆ ಪಿಎಚ್ ಡಿ ಪದವಿ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ…

Read More

ಅಕಾಲಿಕ ಮಳೆಗೆ ಬ್ಯಾಡರಕೊಪ್ಪದಲ್ಲಿ ಬಿದ್ದ ಮನೆಗೆ ಶಾಸಕ ಹೆಚ್ ಹರತಾಳು ಹಾಲಪ್ಪ ಭೇಟಿ. ತತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ !!

ರಾಜ್ಯದಲ್ಲಿ ಅಕಾಲಿಕ ಮಳೆಗೆ ಇದೀಗ ರಾಜ್ಯವೇ ತತ್ತರಿಸಿದೆ. ಮಳೆಯ ಅವಾಂತರ ಸೃಷ್ಟಿಸಿದ ಅವಾಂತರ ಒಂದೆರಡಲ್ಲ.  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹೊಸೂರು ಗ್ರಾ.ಪಂ ಬ್ಯಾಡರಕೊಪ್ಪದ ಹನುಮಮ್ಮ ರಂಗೇಗೌಡ ಇವರ ಮನೆ ಕುಸಿದು ಹಾನಿಗೊಳಗಾಗಿದ್ದು.ಸಂಪೂರ್ಣ ಕುಟುಂಬವೇ ಪರಿತಪಿಸುವಂತಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಹಾಲಪ್ಪ ನವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸರ್ಕಾರದಿಂದ ಪರಿಹಾರ ಕಲ್ಪಿಸಿಕೊಡುವ ಭರವಸೆ ನೀಡಿದರು.ಕೂಡಲೇ ಸಂಬಂದ ಪಟ್ಟ ಅಧಿಕಾರಿಗಳಿಗೆ ಸ್ಥಳದಿಂದಲೇ ಕರೆ ಮಾಡಿದ…

Read More

ಹೊಸಮನೆ ಪೊಲೀಸ್ ಠಾಣೆಯ ಪೇದೆಯ ವಿರುದ್ದ ಮಹಿಳೆಯಿಂದ ದೂರು ದಾಖಲು :

ಹೊಸಮನೆ ಪೊಲೀಸ್ ಠಾಣೆಯ ಪೇದೆಯೋರ್ವನ ವಿರುದ್ಧ ಮಹಿಳೆಯೋರ್ವರು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 10 ವರ್ಷದಿಂದ ನನ್ನೊಂದಿಗೆ ಮದುವೆ ಇಲ್ಲದೆ ಸಂಸಾರ ನಡೆಸಿ ಈಗ ಮತ್ತೊಂದು ಮಹಿಳೆಯನ್ನ ಮದುವೆಯಾಗುವುದಾಗಿ ಎಂಗೇಜ್ ಮೆಂಟ್ ಮಾಡಿಕೊಂಡು ನನಗೆ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಎಫ್ ಐ ಆರ್‌ ದಾಖಲಿಸಿದ್ದಾರೆ. ಹೊಸಮನೆ ಠಾಣೆಯ ಕೆಲಸ ಮಾಡುವ ಮಕ್ಸದ್ ಖಾನ್ ವಿರುದ್ಧ ಜಯಶ್ರೀ ವೃತ್ತದ ಮೊದಲನೇ ತಿರುವಿನ ನಿವಾಸಿ ಆಯೇಷಾ ಕೌಸರ್ ಎಂಬ ಮಹಿಳೆ ಇಂತಹದ್ದೊಂದು ಗಂಭೀರ ಆರೋಪ ಮಾಡಿದ್ದಾರೆ. ಅಬ್ದುಲ್…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಗಲಾಟೆ ; ಮುಂಜಾಗ್ರತೆಯಿಂದ ಬಜಾರ್ ಬಂದ್

ಶಿವಮೊಗ್ಗ : ಚೋರ್ ಬಜಾರ್ ನಲ್ಲಿ ಗಲಾಟೆ ಆಗಿದ್ದು ಬಜಾರ್ ನ್ನು ಬಂದ್ ಮಾಡಲಾಗಿದೆ. ವ್ಯಾಪಾರಸ್ಥರ ನಡುವೆಯೇ ಈ ಗಲಾಟೆ ನಡೆದಿರುವುದಾಗಿ ತಿಳಿದುಬಂದಿದೆ. ಸುಮಾರು 8-10 ಜನ ಗಲಾಟೆ ಮಾಡಿದ್ದೂ ಇವರಲ್ಲಿ ಕೆಲವರ ಬಳಿ ಹರಿತವಾದ ಆಯುಧಗಳು ಕಂಡು ಬಂದಿದೆ.  ಯಾವುದೇ  ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಬಟ್ಟೆ ಮಾರುಕಟ್ಟೆಯನ್ನ ಬಂದ್ ಮಾಡಲಾಗಿದೆ. ನಗರದ ಗಾಂಧಿ ಬಜಾರ್ ಸಮೀಪದ ಶಿವಮೊಗ್ಗ ಚೋರ್ ಬಜಾರ್ ಖ್ಯಾತಿಯ ಬಟ್ಟೆ ಮಾರುಕಟ್ಟೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ…

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ. 

Read More

ರಿಪ್ಪನ್ ಪೇಟೆ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರ ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಢೀರ್ ಭೇಟಿ :

ರಿಪ್ಪನ್ ಪೇಟೆ: ಪಟ್ಟಣದ ಹಳೆ ಸಂತೆ ಮಾರ್ಕೆಟ್ ರಸ್ತೆಯಲ್ಲಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿನಿಯರ ನಿಲಯದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ದೂರಿನ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ  ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ ನೀಡಿ ವಿದ್ಯಾರ್ಥಿಗಳ ತೊಂದರೆಗಳನ್ನು  ಕುಂದುಕೊರತೆಗಳನ್ನು ಆಲಿಸಿದರು.  ಮಾಜಿ ಶಾಸಕರು ವಿದ್ಯಾರ್ಥಿನಿಯರ ನಿಲಯಕ್ಕೆ ಭೇಟಿ ನೀಡುತ್ತಿದ್ದಂತೆ ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ಹಾಗೂ ಕಳಪೆ  ಆಹಾರದ ಬಗ್ಗೆ ಅಡುಗೆ ತಯಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.  ವಿದ್ಯಾರ್ಥಿನಿಯರ ದೂರಿನ ಆಧಾರದ ಮೇಲೆ ಮಾಜಿ ಶಾಸಕರು ವಾರ್ಡನ್ ಹಾಗೂ…

Read More

ಇಂದಿರಾಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರತಿಭಟನೆ ಸಂಬಂಧಿಸಿದಂತೆ ಪ್ರಿನ್ಸಿಪಾಲ್ ಗೆ ಮತ್ತೊಂದು ಕುತ್ತು !! ಹಾಗಾದರೆ ಅದೇನು ????

ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪ್ರಿನ್ಸಿಪಲ್ ಅನಾಗರಿಕನಂತೆ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದರು. ಬೆಳಿಗ್ಗೆಯಿಂದ ಶುರುವಾದ ಪ್ರತಿಭಟನೆಯು ಕ್ಷಣಕ್ಷಣಕ್ಕೂ ಹೆಚ್ಚಿನ ರೋಚಕತೆಯನ್ನು ಪಡೆಯುತ್ತಿತ್ತು ಕೊನೆಗೂ ಪ್ರಿನ್ಸಿಪಲ್ ಚಂದ್ರಪ್ಪರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕೇಂದ್ರ ಕಚೇರಿಗೆ ಹಾಜರಾಗುವಂತೆ     ಇಲಾಖೆಯಿಂದ ತನಿಖೆಗೆ ಆದೇಶ ಕೂಡ ಹೊರಬಿತ್ತು.ಇದರಿಂದ ನಿರಾಳ ಗೊಂಡಂತಹ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಮೊಟಕುಗೊಳಿಸಿ ಶಾಲೆಗೆ ತೆರಳಿದರು. ಆದರೆ ಪ್ರಿನ್ಸಿಪಾಲ್ ಗೆ ಮಾತ್ರ ಮತ್ತೊಂದು ಕುತ್ತು  ರೆಡಿಯಾಗಿತ್ತು. :::ವಿದ್ಯಾರ್ಥಿ ಪೋಷಕರಿಂದ ಪ್ರಿನ್ಸಿಪಲ್…

Read More