Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಗರದ ಸಹಾಯಕ ಕೃಷಿ ನಿರ್ದೇಶಕರ ಮಧ್ಯಸ್ಥಿಕೆಯಿಂದ ಬಗೆಹರಿಯಿತು ತಾಳಗುಪ್ಪದ ಭತ್ತ ಕೊಯ್ಲು ಮಷಿನ್ ನವರ ಮತ್ತು ರೈತರ ನಡುವಿನ ಸಮಸ್ಯೆ !!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪ ದಲ್ಲಿ ಬೆಳ್ಳಂಬೆಳಿಗ್ಗೆ ರೈತರು ಹಾಗೂ ಭತ್ತದ ಕೊಯ್ಲು ಮಿಷಿನ್ ನವರ ನಡುವೆ ಅಧಿಕ ಹಣ ವಸೂಲಿ ವಿಚಾರ ಸಂಬಂಧ ಜೋರು ವಾಗ್ವಾದ ನಡೆಯುತ್ತಿತ್ತು. ಈ ವಿಚಾರವಾಗಿ ನಮ್ಮ ಸುದ್ದಿ ಸಂಸ್ಥೆ ಯ ವರದಿಗಾರರು ಸಹಾಯಕ ಕೃಷಿ ನಿರ್ದೇಶಕರಿಗೆ ದೂರವಾಣಿ ಸಂಪರ್ಕದ ಮೂಲಕ ಮಾಹಿತಿಯನ್ನು ನೀಡಿತ್ತು ಹಾಗೂ ಪಡೆದಿತ್ತು. ರೈತರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸುವುದು ನಮ್ಮ ಸುದ್ದಿ ಸಂಸ್ಥೆಯ ಮುಖ್ಯ ಯೋಚನೆಯಾಗಿತ್ತು. ಇದೀಗ ಸಾಗರದ ಸಹಾಯಕ ಕೃಷಿ ನಿರ್ದೇಶಕರಾದ ಕಾಶಿನಾಥ್ ರವರು…

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ನಾನು ಕ್ಷೇತ್ರದಲ್ಲಿ ಇರುವುದು ಕಿಮ್ಮನೆ ಅವರಿಗೆ ಸಹಿಸಲು ಆಗುತ್ತಿಲ್ಲ – ಆರಗ ಜ್ಞಾನೇಂದ್ರ

ಶಿವಮೊಗ್ಗ : ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಗೃಹಸಚಿವರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಿನ್ನೆ ಟೀಕಿಸಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ನಾನು ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವನಲ್ಲ. ಇಡೀ ರಾಜ್ಯಕ್ಕೆ ನಾನು ಗೃಹ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಂತ ಕ್ಷೇತ್ರದಲ್ಲಿ ಕೆಲಸ ಮಾಡುವುದು ಕಿಮ್ಮನೆ ಅವರಿಗೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಿಮ್ಮನೆ ಮತ್ತು ಮಂಜುನಾಥ ಗೌಡರು ನಿರಂತರ ಪಾದಾಯಾತ್ರೆ…

Read More

ಆನಂದಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಜಯ !! ವಸತಿ ಶಾಲೆ ಪ್ರಿನ್ಸಿಪಲ್ ಎತ್ತಂಗಡಿ ??

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆನೇ ಹಾಸ್ಟೆಲ್ ನಿಂದ ಹೊರ ಬಂದು ಎಡೆಹಳ್ಳಿಯ ಗಣಪತಿ ದೇವಸ್ಥಾನದ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದರು. ಹಾಸ್ಟೆಲ್ ನ ಪ್ರಿನ್ಸಿಪಾಲ್ ಬಿ ಕೆ ಚಂದ್ರಪ್ಪ ಹಾಗೂ ಕೆಲ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿದ್ದು ಬೂಟುಕಾಲಿನಿಂದ ಒದ್ದು ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಹಾಗೂ ಊಟದಲ್ಲಿ ಹುಳ ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ಉಣಬಡಿಸುತ್ತಿದ್ದು ಕೇಳಿದರೆ ವಿದ್ಯಾರ್ಥಿಗಳಿಗೆ…

Read More

ರೈಲ್ವೆ ಇಲಾಖೆ ಅಧಿಕಾರಿಗಳೇ ಬೇಜಾವಬ್ದಾರಿತನ ಬಿಡಿ:: ಆನಂದಪುರ- ಯಡೇಹಳ್ಳಿ, ಅಂದಾಸುರ ರೈಲ್ವೆ ಲೆವಲಿಂಗ್ ಕ್ರಾಸ್ ಹಂಪ್ಸ್ ನ ಸಮಸ್ಯೆಗಳತ್ತ ಗಮನ ಕೊಡಿ.!!!

ಭಾರತ ಸರ್ಕಾರದ ಬಹುಮುಖ್ಯ ಉದ್ಯಮದಲ್ಲಿ ಭಾರತೀಯ ರೈಲ್ವೆ ಬಹು ಅಗ್ರಸ್ಥಾನವನ್ನು ಪಡೆದಿದೆ.ಸುರಕ್ಷತೆಯಿಂದ ಹಿಡಿದು ಪ್ರಯಾಣಿಕರ ಅನುಕೂಲಕ್ಕಾಗಿ ಹಲವು ರೀತಿಯ ಅನುಕೂಲಗಳನ್ನು ರೈಲ್ವೆ ಇಲಾಖೆ ಭಾರತೀಯರಿಗೆ ಮಾಡಿಕೊಟ್ಟಿದೆ. ಆದರೆ ಕೆಲವೊಂದು ಸಂದರ್ಭದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನವೋ ಅಥವಾ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯತನದಿಂದಲೋ ರಸ್ತೆಯಲ್ಲಿ ಪಯಣಿಸುವ  ಪ್ರಯಾಣಿಕರಿಗೆ  ತೊಂದರೆಯೂ ಆಗುತ್ತಿದೆ. ಇಂತಹದೇ ಸಮಸ್ಯೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ- ಯಡೇಹಳ್ಳಿ ರೈಲ್ವೇ ಲೆವಲಿಂಗ್ ಕ್ರಾಸ್ ನ ಬಳಿ ರೈಲ್ವೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಬಹುದೊಡ್ಡ ಉದ್ದನೆಯ ಹಂಪ್ಸ್ ಗಳನ್ನು ಈ…

Read More

ಮಹಾಮಳೆಗೆ ಆನಂದಪುರದಲ್ಲಿ ಮನೆ ಗೋಡೆ ಕುಸಿತ : ಅದೃಷ್ಟಾವಶತ್ ಪ್ರಾಣಾಪಾಯದಿಂದ ಕುಟುಂಬಸ್ಥರು ಪಾರು.

ಮಹಾಮಳೆ ಇದೀಗ ಜನರ ಜನಜೀವನವನ್ನು ಅಸ್ತವ್ಯಸ್ಥಗೊಳಿಸುತ್ತಿದೆ ಅತ್ತ ಕಡೆ ರೈತ ಕೂಡ ಮಹಾಮಳೆಗೆ ಕಂಗಾಲಾಗಿ ದೇವರ ಮೊರೆ ಹೋಗುತ್ತಿದ್ದಾರೆ.ಮಹಾಮಳೆಯ ರೌದ್ರನರ್ತನ ಅಷ್ಟಿಷ್ಟಲ್ಲ ಮಳೆಯಿಂದ ಇದೀಗ ಅನಾಹುತಗಳೇ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಶೋಕ ರಸ್ತೆಯ ನಿವಾಸಿ ರಾಮಣ್ಣ ರವರ ಮನೆಯ ಗೋಡೆ ಕುಸಿದಿದ್ದು ಮನೆಯ  ಹೊರಮುಖದಲ್ಲಿ ಗೋಡೆ ಕುಸಿದಿದ್ದು ಕುಟುಂಬಸ್ಥರಿಗೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಆರ್ ಶಂಕರ್ ಆಗಮಿಸಿದ್ದು ಸ್ಥಳ ಪರಿಶೀಲಿಸಿ ವರದಿ ಪಡೆದಿರುತ್ತಾರೆ. ವರದಿ : ಪವನ್…

Read More

ಆರಗ ಜ್ಞಾನೇಂದ್ರ ವಿರುದ್ಧವೇ ಕೇಸುಗಳಿವೆ, ಈಗ ಅವರೇ ಗೃಹ ಮಂತ್ರಿ!!! ಹೀಗಾದರೆ ನ್ಯಾಯ ಸಿಗುತ್ತಾ? -ಕಿಮ್ಮನೆ ರತ್ನಾಕರ್ ವ್ಯಂಗ್ಯ

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ ಹಿಂದೆ ಆರಗ ಜ್ಞಾನೇಂದ್ರರ ಪಾತ್ರ ಇದೆ ಎಂದು ಮಾಜಿ ಸಚಿವ, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಟ್​ಕಾಯಿನ್ ವಿಷಯದಲ್ಲಿ ಗೃಹ ಸಚಿವರು ಬಾಲಿಷವಾಗಿ ಮಾತನಾಡುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಬಗ್ಗೆ ಲಘುವಾಗಿ ಹೇಳಿಕೆ ನೀಡುತ್ತಿದ್ದಾರೆ. ಬಿಟ್​ಕಾಯಿನ್ ವಿಷಯದ ಗಂಭೀರತೆ ಅರಿತು ಪ್ರಧಾನಿ ಮೋದಿ ರಾತ್ರೋರಾತ್ರಿ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ. ಸದ್ಯದ ಮಟ್ಟಿಗೆ ಆರಗ ಜ್ಞಾನೇಂದ್ರ ರಾಜ್ಯಕ್ಕಲ್ಲ, ತೀರ್ಥಹಳ್ಳಿಗೆ ಗೃಹ ಸಚಿವರಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಎಲ್ಲಾ ಕೋಮುಗಲಭೆಯ…

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಶಿವಮೊಗ್ಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣ: ಎಲ್ಲಾ ಆಸ್ಪತ್ರೆಗಳು ರೋಗಿಗಳಿಂದ ಹೌಸ್​ಫುಲ್​

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಭಣಗೊಂಡಿದ್ದು, ಎಲ್ಲಾ ಆಸ್ಪತ್ರೆಗಳು ಹೌಸ್​ಫುಲ್​ ಆಗಿವೆ. ರಾಜ್ಯದಲ್ಲೇ ಅತಿ ಹೆಚ್ಚು ಡೆಂಗ್ಯೂ, ಮಲೇರಿಯಾ ಪ್ರಕರಣಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಜಿಲ್ಲೆಯ ಹಲವೆಡೆ ಜನರು ಶೀತ, ಜ್ವರ, ವಾಂತಿ, ಮೈ-ಕೈ ನೋವಿನಿಂದ ಬಳಲುತ್ತಿದ್ದಾರೆ. ಒಬ್ಬರಿಂದ ಮನೆ ಮಂದಿಗೆಲ್ಲಾ ರೋಗ ಹರಡುತ್ತಿದ್ದು, ಜನರು ಆತಂಕದಲ್ಲಿದ್ದಾರೆ.  ಶಂಕಿತ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಆರೋಗ್ಯ ಇಲಾಖೆ 3,374 ರಕ್ತದ ಮಾದರಿ ಸಂಗ್ರಹಿಸಿತ್ತು. ಈ ಪೈಕಿ 407 ಜನರಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಶಂಕಿತ ಚಿಕುನ್ ಗುನ್ಯಾ ಪ್ರಕರಣಗಳ ಪತ್ತೆಗೆ 1,927…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More