Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ದ್ವಿಚಕ್ರ ವಾಹನ ತಪ್ಪಿಸಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಮೇಲೆ ಹರಿಹಾಯ್ದ ಲಗೇಜ್ ಆಟೋ :

ಸಾಗರ: ದ್ವಿಚಕ್ರ ವಾಹನವನ್ನು ಬಚಾವ್ ಮಾಡಲು ಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರೂ ಯುವತಿಯರಿಗೆ ಲಗೇಜ್ ಆಟೋ ಡಿಕ್ಕಿ ಹೊಡೆದು ಅಪಘಾತವಾಗಿರುವ ಘಟನೆ ಸಾಗರದಲ್ಲಿ ಸಂಜೆ ನಡೆದಿದೆ. ಸಾಗರ ನಗರ ಬಿಹೆಚ್ ರಸ್ತೆಯಲ್ಲಿ ಇರುವ ಸುಜುಕಿ ಶೋರೂಮ್ ಎದುರು ಶುಕ್ರವಾರ ಸಂಜೆ ಲಗೇಜ್ ಆಟೋ ಒಂದು ಅಚಾನಕ್ಕಾಗಿ ರಸ್ತೆಯ ಮಧ್ಯ ಬಂದ ದ್ವಿಚಕ್ರ ವಾಹನಕ್ಕೆ ಬಚಾವ್ ಮಾಡಲು ಹೋಗಿ ಅದೇ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಸ್ಎನ್ ನಗರದ ನಾಲ್ಕನೇ ತಿರುವಿನ ವಾಸಿಗಳಾದ ಆಫ಼್ರೀನ್ ಹಾಗೂ ಶಮ್ರೀನ್ ಎಂಬ …

Read More

ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್​ಕುಮಾರ್​ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ…

Read More

ಸಿನಿಮೀಯ ರಿತಿಯಲ್ಲಿ ದನಗಳ್ಳರನ್ನು ಮಟ್ಟ ಹಾಕಿದ ಹೊಸನಗರ ತಹಶೀಲ್ದಾರ್ ವಿ ಎಸ್ ರಾಜೀವ್ : ರಿಪ್ಪನ್ ಪೇಟೆ ಪೊಲೀಸರು ಬದುಕುಳಿದಿದ್ದೆ ಹೆಚ್ಚು

ಹೊಸನಗರ :  ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ದನಗಳ್ಳರು ಗ್ರಾಮದ ಹಸುಗಳನ್ನು ಕದ್ದು ಸಾಗಿಸುತ್ತಿದ್ದ ಎಂಟು ಗೋವುಗಳನ್ನು ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ಘಟನೆ ನಡೆದಿದೆ.  ಬುಧವಾರ ರಾತ್ರಿ ಮೇಲಿನಬೆಸಿಗೆಯ ಗ್ರಾಮಸ್ಥರು ಅಕ್ರಮ ದನಗಳ್ಳರ ವಾಹನವನ್ನು ಅಡ್ಡಗಟ್ಟಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ದನಕಳ್ಳರು ಮಾರಕಾಸ್ತ್ರಗಳಿಂದ ಬೆದರಿಸಿ ವಾಹನ ಚಲಾಯಿಸಿದ್ದಾರೆ.ಕೂಡಲೇ ಗ್ರಾಮಸ್ಥರು ತಹಸಿಲ್ದಾರ್ ವಿ.ಎಸ್. ರಾಜೀವ್‌ ಮತ್ತು ಸಿಬ್ಬಂದಿಗಳ ತಂಡಕ್ಕೆ ಮಾಹಿತಿ ಮುಟ್ಟಿಸಿದ್ದಾರೆ. ತಕ್ಷಣ ಕಾರ್ಯ ಪ್ರವೃತರಾದ ರಾಜೀವ್ ದನಗಳ್ಳರ ವಾಹನ ಹೊಸನಗರದಿಂದ ರಿಪ್ಪನ್ ಪೇಟೆ…

Read More

ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ : ಶ್ರೀ ರಂಭಾಪುರಿ ಜಗದ್ಗುರುಗಳು : ಅದ್ದೂರಿಯಾಗಿ ಜರುಗಿದ ಮಳಲಿ ಮಠದ ಕಾರ್ತಿಕ ದೀಪೋತ್ಸವ

ರಿಪ್ಪನ್‌ಪೇಟೆ: ಕತ್ತಲೆ ಅಜ್ಞಾನದ ಸಂಕೇತವಾದರೆ ಬೆಳಕು ಜ್ಞಾನದ ಸಂಕೇತ. ಬಾಹ್ಯ ಕತ್ತಲೆ ಕಳೆಯಲು ದೀಪ ಬೇಕು. ಮನದ ಅಜ್ಞಾನ ದೂರ ಮಾಡಲು ಜ್ಞಾನ ಬೋಧಾಮೃತ ಬೆಳಕಿನ ಕಿರಣ ಮುಖ್ಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಶ್ರೀಮದ್ರಂಭಾಪುರಿ ಖಾಸಾ ಶಾಖಾ ಮಳಲಿ ಸಂಸ್ಥಾನ ಮಠದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ದೀಪ ಶ್ರೀಮಂತನ ಮನೆಯಲ್ಲಿ ಎಷ್ಟು ಬೆಳಕನ್ನು ಕೊಡುತ್ತದೆಯೋ ಅಷ್ಟೇ ಬೆಳಕನ್ನು ಬಡವನ ಮನೆಯಲ್ಲೂ ಕೊಡುತ್ತದೆ. ಮನುಷ್ಯನ…

Read More

ಅಕ್ರಮ ಗೋಮಾಂಸ ಸಾಗಿಸುತ್ತಿದ್ದವನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

ಮೂಡಿಗೆರೆ : ಗೋಮಾಂಸ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಭಜರಂಗದಳದ ಕಾರ್ಯಕರ್ತರು ಸೆರೆಹಿಡಿದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಪ್ರತೀ ಶುಕ್ರವಾರದಂದು ಗೋಮಾಂಸ ಸಾಗಾಟ ನಡೆಸಿ ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಅಲಿ ಎಂಬ 35 ವರ್ಷದವನ್ನು, ಮುತ್ತಿಗೆಪುರದ ಹಂಡಗುಳಿ ದಾರಿಯಲ್ಲಿ ಭಜರಂಗದಳದ ಕಾರ್ಯಕರ್ತರು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.  ಈತನು ಈ ಹಿಂದೆ ಸಾಗಾಟ ನಡೆಸಿದ ಆರೋಪದ ಮೇರೆಗೆ ಭಜರಂಗದಳದ ಕಾರ್ಯಕರ್ತರು ಈತನನ್ನು ಬಹಳ ಸಮಯ ಕಾದು ಕಾರ್ಯಾಚರಣೆ ನಡೆಸಿ ಸೆರೆಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಆರೋಪಿಯನ್ನು…

Read More

ರಿಪ್ಪನ್ ಪೇಟೆಯಲ್ಲಿ ಇದೇ 27 ಕ್ಕೆ ಅದ್ದೂರಿ ಕನ್ನಡ ರಾಜ್ಯೋತ್ಸವ : ಪದ್ಮಶ್ರಿ ಪುರಸ್ಕೃತ ಹರೇಕಾಳ ಹಾಜಬ್ಬ ಹಾಗೂ ಮಂಜಮ್ಮ ಜೋಗತಿಗೆ ಸನ್ಮಾನ ಕಾರ್ಯಕ್ರಮ

ರಿಪ್ಪನ್ ಪೇಟೆ : ನವೆಂಬರ್ 27 ರ ಶನಿವಾರ ರಿಪ್ಪನ್ ಪೇಟೆಯಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ದಿಂದ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆರ್ ಎ ಚಾಬುಸಾಬ್ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು. ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಕುವೆಂಪು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವಂಬರ್ 27 ರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

Read More

ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಚರಣೆ : ಕಳ್ಳತನವಾಗಿದ್ದ ವಸ್ತುಗಳು ವಾರಸುದಾರರಿಗೆ ವಾಪಾಸ್

ಶಿವಮೊಗ್ಗ: 2021 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 518 ಸ್ವತ್ತು ಕಳವು ಪ್ರಕರಣ ವರದಿಯಾಗಿದ್ದು ಅಂದಾಜು ಮೌಲ್ಯ 6,23,91,2147 ರೂ. ಎಂದು ಅಂದಾಜಿಸಲಾಗಿದೆ. ಅದರಲ್ಲಿ 3,03,59,176 ರೂ. ಮೌಲ್ಯದ ಮಾಲುಗಳನ್ನು ಪತ್ತೆ ಮಾಡಲಾಗಿದ್ದು, ಸದರಿ ಮಾಲಿನ ವಾರಸುದಾರರಿಗೆ ಬಿಟ್ಟು ಕೊಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಿ ಪ್ರಸಾದ್ ಹೇಳಿದ್ದಾರೆ. ಅವರು ಇಂದು ಡಿಎಆರ್ ಸಭಾಂಗಣದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆ ಮಾಡಿದ ಮಾಲ್ ಗಳನ್ನು ವಾರಸುದಾರರಿಗೆ ಬಿಟ್ಟುಕೊಡುವ ಸಮಾರಂಭದ ಸುದ್ದಿಗಾರರೊಂದಿಗೆ ಮಾತನಾಡಿದರು….

Read More

ಆನಂದಪುರದಲ್ಲಿ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ರಸ್ತೆಯ ನಿವಾಸಿ ಮಹೇಶ್ (31)  ವರ್ಷ ಇಂದು ಮಧ್ಯಾಹ್ನ ಮನೆಯ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಮಹೇಶ್ ಕೊರೋನಾ ಲಾಕ್ ಡೌನ್  ಸಂದರ್ಭದಲ್ಲಿ ತರಕಾರಿ ಅಂಗಡಿ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ಹಾಗೂ ಕೊರೋನಾ ಸಂದರ್ಭದಲ್ಲಿ ಅವರ ತಾಯಿಯವರು ಕೂಡ ಕರೋನಾಗೆ ಬಲಿಯಾಗಿದ್ದರು ಇದರಿಂದಲೂ ತೀವ್ರ ಮಾನಸಿಕ ಜಿಗುಪ್ಸೆಯನ್ನು ಹೊಂದಿದ್ದರ ಪರಿಣಾಮ ಹಾಗೂ ಇತ್ತೀಚೆಗೆ ಕೆನರಾ ಬ್ಯಾಂಕ್ ನಲ್ಲಿ ತರಕಾರಿ ಅಂಗಡಿಗೆ ಸಾಲವನ್ನು…

Read More

ರಿಪ್ಪನ್ ಪೇಟೆಯ ಕುಕ್ಕಳಲೇ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ನಗರವೆಂದು ನಾಮಕರಣ ಮಾಡಿ ಗೌರವ ಸಲ್ಲಿಸಿದ ಗ್ರಾಮಸ್ಥರು !!!

ರಿಪ್ಪನ್ ಪೇಟೆ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್ ರಾಜಕುಮಾರ್ ನಗರ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್…

Read More

ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ವಿಚಾರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಖುದ್ದು ಎಸ್ಪಿಗೆ ಕರೆ ಮಾಡಿದ್ದೇಕೆ !!! ದೂರವಾಣಿಯಲ್ಲಿ ಹೇಳಿದ್ದಾದರೂ ಏನು ???

ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ವಿಲೇವಾರಿ ಮಾಡುವವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರ ಕಾರ್ಮಿಕರು ಜನರ ಸೇವೆ ಮಾಡುತ್ತಾರೆ. ಅವರ ಮೇಲೆ ಹಲ್ಲೆ ಮಾಡುವಷ್ಟರಮಟ್ಟಿಗೆ…

Read More