Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪ್ರಕಾಶ್ ಬಸ್ ಮಾಲೀಕರ ಶೋಧ ಕಾರ್ಯಾಚರಣೆ : ಕಾಫ಼ಿ ಡೇ ಸಿದ್ದಾರ್ಥ ಪ್ರಕರಣ ಮರುಕಳಿಸುವ ಆತಂಕದಲ್ಲಿ ಮಲೆನಾಡಿಗರು..!!!!!

ಶುಕ್ರವಾರ ಸಂಜೆ ಸಾಗರದಿಂದನಾಪತ್ತೆಯಾಗಿದ್ದ ಸಾಗರದ ಪ್ರಖ್ಯಾತ ಟ್ರಾವೆಲ್ಸ್ ಕಂಪನಿ ಮಾಲೀಕರಾದ ಪ್ರಕಾಶ್ ರವರ ಕಾರು, ಮೊಬೈಲ್ ಮತ್ತು ಕನ್ನಡಕ ಹೊಸನಗರ ಸಮೀಪದ ಪಟಗುಪ್ಪೆ ಸೇತುವೆ ಮೇಲೆ ಪತ್ತೆಯಾಗಿರುವ  ಹಿನ್ನಲೆಯಲ್ಲಿ ಪ್ರಕಾಶ್ ರವರ ಪತ್ತೆಗಾಗಿ ಅಗ್ನಿಶಾಮಕ ದಳ ತನ್ನ ಶೋಧಕಾರ್ಯವನ್ನು ಎರಡನೇ ದಿನಕ್ಕೆ ಮುಂದುವರೆಸಿದೆ. ಸೊರಬದಿಂದ ಒಬಿಎಂ ಬೋಟ್ ನ್ನು ತರಿಸಲಾಗಿದ್ದು ನಾಲ್ವರು ಬೋಟ್ ನಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯ ಮೀನುಗಾರರು ತೆಪ್ಪ ತಂದು ಅದರಲ್ಲಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿಯೇ ಅತೀ ಉದ್ದದ ಸೇತುವೆಯಾದ ಪಟಗುಪ್ಪ ಸೇತುವೆ ಇತ್ತೀಚೆಗಷ್ಟೇ…

Read More

ರಾಜ್ಯ ಗೃಹಮಂತ್ರಿಗಳ ಸಾಮ್ರಾಜ್ಯದಲ್ಲಿ ಇದೆಂತಹ ಪರಿಸ್ಥಿತಿ…!!

ರಿಪ್ಪನ್‌ಪೇಟೆ: ಕೋಡೂರು ಮತ್ತು ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಶಾಂತಪುರ – ಗರ್ತಿಕರೆ ಸಂಪರ್ಕಿಸುವ ಸುಮಾರು 10 ಕಿ.ಮೀ.ಉದ್ದದ ಜಿಲ್ಲಾ ಮುಖ್ಯರಸ್ತೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು, ವಿದ್ಯಾರ್ಥಿಗಳು ಮತ್ತು ರೈತನಾಗರೀಕರು ಓಡಾಡದಂತಾಗಿದ್ದರೂ ಕೂಡಾ ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಸಚಿವರ ಕಣ್ಣಿಗೆ ಇನ್ನೂ ಬಿದ್ದಿಲ್ಲವೊ..! ಎಂಬ ಅನುಮಾನ ಇಲ್ಲಿನ ಜನರನ್ನು ಕಾಡುವಂತಾಗಿದೆ. 1995 ರಲ್ಲಿ ನಬಾರ್ಡ್ ಯೋಜನೆಯಡಿ ಡಾಂಬರೀಕರಣಗೊಂಡ ಶಾಂತಪುರ-ಗರ್ತಿಕೆರೆ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ರಸ್ತೆಯಲ್ಲಿ ಹೊಂಡಗಳಿದೆಯೋ ಅಥವಾ ಹೊಂಡಗಳಲ್ಲಿ ರಸ್ತೆ…

Read More

ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಸಾವು : ವಿಧಿಯ ಕ್ರೂರತನಕ್ಕೆ ಬಲಿಯಾದ ಪುಟ್ಟ ಕಂದಮ್ಮ

ಸಾಗರ : ಮನೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯಾ ತಪ್ಪಿ ಬಿದ್ದು ಐದು ವರ್ಷದ ಮಗು ಮೃತಪಟ್ಟಿರುವ ಘಟನೆ ನಗರದಲ್ಲಿ ಶನಿವಾರ ಸಂಜೆ ನಡೆದಿದೆ. ಶನಿವಾರ ಸಂಜೆ ಸುಮಾರು 5-00 ಗಂಟೆಯ ಸುಮಾರಿಗೆ ಸಾಗರ ನಗರಸಭೆ ವ್ಯಾಪ್ತಿಯ ಅಣಲೇಕೊಪ್ಪದಲ್ಲಿ ವಾಸವಾಗಿದ್ದ ಮೂರ್ತಿಹಾಗೂ ರಾಜೇಶ್ವರಿ ದಂಪತಿಯ ಎರಡನೆ ಮಗು ಆಟವಾಡುವಾಗ ಆಯಾ ತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕ್ರಿಶಾ (5) ಮೃತಳಾದ ದುರ್ದೈವಿ.  ಮೂರ್ತಿಹಾಗೂ ರಾಜೇಶ್ವರಿ ದಂಪತಿಗಳುಮೂಲತಃ ಸಾಗರ ತಾಲೂಕಿನ ಹೆಗ್ಗೋಡು ಗ್ರಾ.ಪಂ ವ್ಯಾಪ್ತಿಯ ಹೈತೂರಿನ ಕ್ವಾಗೇರಿರವರಗಿದ್ದಾರೆ. ಮೂರ್ತಿ…

Read More

ಸಾಹಿತ್ಯ ಪರಿಷತ್ತಿನ ಸಂಘಟನೆಗೆ ಒತ್ತು ನೀಡಲು ತೀರ್ಮಾನ :

ಹೊಸನಗರ : ಹೊಸನಗರ ತಾಲೂಕಿನಲ್ಲಿ ಸಾಹಿತ್ಯ ಪರಿಷತ್ತಿನ ಸಂಘಟನೆಗೆ ಒತ್ತು ನೀಡಲು ಕಸಾಪ ತಾಲೂಕು ಕಾರ್ಯಕಾರಿ ಸಮಿತಿ ಸರ್ವಾನುಮತದಿಂದ ತೀರ್ಮಾನಿಸಿದೆ. ಜನವರಿ 21 ನೇ ಶುಕ್ರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ತಾಲೂಕು ಅಧ್ಯಕ್ಷ ತ.ಮ. ನರಸಿಂಹ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಈ ತೀರ್ಮಾನ ಕೈಗೊಂಡಿದೆ.  ಜಿಲ್ಲಾಧ್ಯಕ್ಷ  ಡಿ ಮಂಜುನಾಥ್ ರವರ ನಿರ್ದೇಶನದಂತೆ ಪರಿಷತ್ತಿನ ಸಂಘಟನೆಗೆ ಪೂರಕವಾಗಿ ಹೋಬಳಿ ಸಮಿತಿಗಳ ರಚನೆ, ಮತ್ತು ಸಂಪನ್ಮೂಲ ಕ್ರೂಢೀಕರಣ, ಹಾಗೂ ದತ್ತಿನಿಧಿ ಕಾರ್ಯಕ್ರಮ ಮತ್ತು ಸದಸ್ಯತ್ವ…

Read More

ರಿಪ್ಪನ್ ಪೇಟೆಯ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಕೊರೊನಾ ಸೋಂಕು ನಿವಾರಣೆಗಾಗಿ ಶ್ರೀ ಸತ್ಯನಾರಾಯಣ ಪೂಜೆ.

ರಿಪ್ಪನ್ ಪೇಟೆ: ಜಗತ್ತನ್ನೇ ತಲ್ಲಣಗೊಳಿಸಿದ ಕೊರೊನಾ ಸೋಂಕು ನಿವಾರಣೆಯಾಗಿ ದೇಶದ ಜನತೆ ಉತ್ತಮ ಆರೋಗ್ಯವನ್ನು ಹೊಂದಲಿ ಎಂದು ಪಟ್ಟಣದ ಕಾಲಭೈರವೇಶ್ವರ  ಮಹಿಳಾ ಒಕ್ಕಲಿಗರ ಸಂಘದ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು  ಸರಳವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗ ಸಂಘದ ಅಧ್ಯಕ್ಷ ಅಧ್ಯಕ್ಷೆ ವಾಣಿ ಗೋವಿಂದಪ್ಪ ಗೌಡ ಮಾಧ್ಯಮದವರೊಂದಿಗೆ ಮಾತನಾಡಿ ಕೋವಿಡ್ 19 ರ ಕಾರಣದಿಂದ ದೇಶದಲ್ಲಿ ಕೋಟ್ಯಂತರ ಜನರು ಸೋಂಕಿನಿಂದ ಬಳಲುವಂತಾ ಯಿತು. ಹಾಗೆಯೇ ಲಕ್ಷಾಂತರ ಜನರು ಮರಣವನ್ನು ಹೊಂದಿದರು….

Read More

ಅನಾರೋಗ್ಯ ಹಿನ್ನಲೆ : SSLC ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸನಗರ ಪಟ್ಟಣದ ಮಾರಿಗುಡ್ಡದಲ್ಲಿ ಮನೆಯೊಂದರಲ್ಲಿ ವಾಸವಾಗಿರುವ ತಾಲೂಕಿನ ಅರೋಡಿ ಕೊಡಸೆಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ರವರ ಪುತ್ರಿ ಶಮಾ ಎಲ್ ಬಂಡಿ (15) ತನ್ನ ತಾಯಿಯನ್ನು ಮಾರ್ನಿಂಗ್ ಕ್ಲಾಸ್ ಡ್ಯೂಟಿಗೆ ಕಳುಹಿಸಿ ಮನೆಗೆ ಬಂದು ನೇಣಿಗೆ ಶರಣಾದ ದುರಂತ ಘಟನೆ ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶಮಾ ಪಟ್ಟಣದ ಶ್ರೀರಾಮಕೃಷ್ಣ ವಿದ್ಯಾಲಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು ಕಳೆದ ಕೆಲ ಸಮಯದಿಂದ ಆಕೆ ಅನಾರೋಗ್ಯ ಪೀಡಿತಳಾಗಿದ್ದಳು ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿಯ…

Read More

ಪ್ರಕಾಶ್ ಬಸ್ ನ ಮಾಲೀಕರ ಮೊಬೈಲ್ ಹಾಗೂ ಕಾರು ಪಟಗುಪ್ಪ ಸೇತುವೆ ಬಳಿ ಪತ್ತೆ : ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟ ಬಸ್ ಮಾಲೀಕನ ನಡೆ

ಹೊಸನಗರ ಸಮೀಪದ ಪಟಗುಪ್ಪೆ ಸೇತುವೆಯ ಬಳಿ ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರ ಕಾರು ಹಾಗೂ ಮೊಬೈಲ್ ಪತ್ತೆಯಾಗಿರುವುದು ಹಲವು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಸಾಗರದ ಪ್ರಕಾಶ್ ಬಸ್ ನ ಮಾಲೀಕರಾದ ಪ್ರಕಾಶ್ ರವರು ಶುಕ್ರವಾರ ಸಂಜೆಯಿಂದಲೇ ಮನೆಯಿಂದ ನಾಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪಟಗುಪ್ಪ ಸೇತುವೆಯ ಬಳಿ ನೂರಾರು ಜನರು ಸೇರಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕ ದಳದವರು ಹಾಜರಿದ್ದು ಶೋಧ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ತಿಳಿದು ಬಂದಿದೆ. ಹೊಸನಗರ ಪೋಲೀಸರು ಸ್ಥಳಕ್ಕಾಗಮಿಸಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Read More

ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟ 5 ವರ್ಷದ ಪುಟ್ಟ ಮಗು :

ಕುಂಸಿ : ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ 5 ವರ್ಷದ ಪುಟ್ಟ ಮಗುವು ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಮಾಸನಕಟ್ಟೆ ಗ್ರಾಮದಿಂದ ರಸ್ತೆ ಕಾಮಗಾರಿಗೆ ಇಮಾಮ್ ಸಾಬ್ ಕುಟುಂಬ ಕೆಲಸಕ್ಕೆಂದು ಆಯನೂರಿನ ಕುಂಸಿಯ ರೇಚಿಕೊಪ್ಪ ಗ್ರಾಮಕ್ಕೆ ಬಂದಿತ್ತು. ನಿನ್ನೆ ಮಧ್ಯಾಹ್ನ ಮಗುವನ್ನು ಜಮೀನಿನ ಪಕ್ಕದಲ್ಲಿ ಮಲಗಿಸಿ ಪೋಷಕರು ಅಲ್ಲೇ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಬಿಸಿಲು ಆಗಬಾರದೆಂಬ ಉದ್ದೇಶದಿಂದ ಮಗುವಿನ ಮೇಲೆ ಟುವೆಲ್  ಹಾಸಲಾಗಿತ್ತು ಅದೇ…

Read More

ರೈತ ಪರ ಹೋರಾಟಗಾರ ಕೆ ಸಿ ವೀರಭದ್ರಪ್ಪ ಗೌಡ ಕಗ್ಗಲಿ ನಿಧನ :

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಮೃತರು 8 ಜನ ಮಕ್ಕಳು,12 ಜನ ಮೊಮ್ಮಕ್ಕಳು ,7 ಜನ ಮರಿ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ರೈತ ಪರ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.ರೈತ ಪರ ಹೋರಾಟದಲ್ಲಿ ಇವರು ಬಳ್ಳಾರಿಯಲ್ಲಿ 21 ದಿನ ಜೈಲು ವಾಸ ಅನುಭವಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಕಗ್ಗಲಿ…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆಯ ಫೋಟೋ ತೆಗೆದಿದ್ದಕ್ಕೆ ಪತ್ರಕರ್ತನಿಗೆ ಟಾರ್ಚರ್ : ಕಣ್ಮುಚ್ಚಿ ಕುಳಿತಿವೆ ಸಂಬಂಧಪಟ್ಟ ಇಲಾಖೆಗಳು

ತೀರ್ಥಹಳ್ಳಿಯ ಹಿರಿಯ ಪತ್ರಕರ್ತ ಲಿಯೋ ಅರೋಜರವರನ್ನು ತೀರ್ಥಹಳ್ಳಿಯ ಪ್ರತಿಷ್ಠಿತ ಸಮಾಜದ ಮುಖಂಡರೆಲ್ಲಾ ಸೇರಿ ಕುಶಾವತಿ ಸೇತುವೆ ಬಳಿ ಸುಮಾರು ನಾಲ್ಕುಗಂಟೆಯ ವರೆಗೆ ಕೂರಿಸಿಕೊಂಡು ಮಾನಸಿಕ ಹಿಂಸೆ ನೀಡಿರುವ ಘಟನೆ ನಡೆದಿದೆ. ಗೃಹ ಸಚಿವರ ಕ್ಷೇತ್ರದಲ್ಲಿ ಪತ್ರಕರ್ತನೋರ್ವನಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಸಜ್ಜನರ ನಾಡಾಗಿದ್ದ ತೀರ್ಥಹಳ್ಳಿ ಮರಳು ಮಾಫಿಯಾದ ಗೂಂಡಾರಾಜ್ಯವಾಗಿ ನಿರ್ಮಾಣವಾಗಿ ಬಿಟ್ಟಿತೇ ಎಂಬ ಆತಂಕ ಎದುರಾಗಿದೆ. ಯಾವುದೇ ನದಿ ಸೇತುವೆಗಳ ಕೆಳಗಡೆ ಮರಳು ತೆಗೆಯದಂತೆ ಸುಪ್ರೀಕೋರ್ಟ್ ಆದೇಶವಿದೆ. ಆದರೆ ಕುಶಾವತಿ ಸೇತುವೆ ಕೆಳಗೆ ತೀರ್ಥಹಳ್ಳಿಯ ಪ್ರತಿಷ್ಠಿತ…

Read More
Exit mobile version