Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಗೃಹ ಸಚಿವರ ಜಿಲ್ಲೆಯಲ್ಲಿ ಮಿತಿಮೀರಿದ ರೌಡಿಗಳ ಹಾವಳಿ! ಜೀವ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್

ಶಿವಮೊಗ್ಗ: ಗೃಹ ಸಚಿವ ಆರಗ ಜ್ಞಾನೇಂದ್ರರವರ ಜಿಲ್ಲೆಯಲ್ಲೇ ರೌಡಿಗಳ ಹಾವಳಿ ಮಿತಿಮೀರಿದೆ. ರೌಡಿಗಳು ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಿವಮೊಗ್ಗದ ಕುಖ್ಯಾತ ರೌಡಿ ಬಚ್ಚಾ ಅಲಿಯಾಸ್ ಜಮೀರ್ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಹಣ ನೀಡುವಂತೆ ಹೆದರಿಸಲು ಜಮೀರ್ ಸಹಚರರು ಉದ್ಯಮಿ ಮನೆ ಮೇಲೆ ದಾಳಿ ನಡೆಸಿದ್ದು, ಈ ಪ್ರಕರಣ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. ಜಮೀರ್ ಶಿವಮೊಗ್ಗದ ಶಾದ್ ನಗರದ ಉದ್ಯಮಿಯಾಗಿರುವ ಅನ್ಸರ್ ಎಂಬುವವರಿಗೆ…

Read More

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ಆಕ್ರಮ ಮರಳು ಸಾಗಾಟಕ್ಕೆ ದಿಟ್ಟ,ನಿರ್ದಾಕ್ಷಿಣ್ಯ ಕ್ರಮ:ವಿ ಎಸ್ ರಾಜೀವ್

ಹೊಸನಗರ :: ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಆಕ್ರಮವಾಗಿ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರು ದೂರುಗಳನ್ನು ನಮ್ಮ ಗಮನಕ್ಕೆ ತಂದಿದ್ದು,ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ಹೊಸನಗರ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ಕಲ್ಲು,ಮರಳು ತುಂಬಿದ ವಾಹನಗಳನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಹೊಸನಗರದ ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಾಲ್ಲೂಕಿನ ಅಧಿಕಾರಿಗಳಿಗೆ  ಸಂದೇಶ ರವಾನಿಸಿದ್ದಾರೆ. ಈ ಕುರಿತು ಹೊಸನಗರ ತಾಲೂಕು ಕಚೇರಿಯ ಸಭಾಂಗಣದಲ್ಲಿ ಮಾತನಾಡಿದ ತಹಶಿಲ್ದಾರವರು ಸಾರ್ವಜನಿಕರು ನಮ್ಮ ಅಧಿಕಾರಿಗಳ ಬಗ್ಗೆ…

Read More

ಮಾಜಿ ಸಿಎಂ ಬಂಗಾರಪ್ಪ 88ನೇ ಹುಟ್ಟು ಹಬ್ಬ: ಪುತ್ರ ಕುಮಾರ್ ಬಂಗಾರಪ್ಪರಿಂದ ಪೂಜೆ

ಶಿವಮೊಗ್ಗ: ಅಕ್ಷರ, ಅಕ್ಷಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ರಾಜ್ಯಕ್ಕೆ ನೀಡಿದ ಹಿಂದುಳಿದ ನಾಯಕ, ಮಾಜಿ ಸಿಎಂ, ದಿವಂಗತ ಎಸ್.ಬಂಗಾರಪ್ಪರ 88ನೇ ವರ್ಷದ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅತ್ಯಂತ ಅಭಿಮಾನದಿಂದ ಆಚರಿಸುತ್ತಿದ್ದಾರೆ. ಬಂಗಾರಪ್ಪ ಪುತ್ರ ಸೊರಬ ಶಾಸಕ ಕುಮಾರ ಬಂಗಾರಪ್ಪ ಇಂದು ಸೊರಬದ ಬಂಗಾರಧಾಮದಲ್ಲಿ ಇರುವ ಬಂಗಾರಪ್ಪ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಬಸ್ ನಿಲ್ದಾಣದ ಪಕ್ಕದಲ್ಲಿ ಇರುವ ಬಂಗಾರಪ್ಪ ಉದ್ಯಾನವನದಲ್ಲಿನ ಬಂಗಾರಪ್ಪ ಪುತ್ಥಳಿಗೆ ಪೂಜೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಶಿವಮೊಗ್ಗದಲ್ಲಿ ಜಿಲ್ಲಾ ಈಡಿಗರ…

Read More

ಐದು ಕೋಟಿ ಮೌಲ್ಯದ ತಿಮಿಂಗಿಲ ವಾಂತಿ ವಶ :ಇಬ್ಬರು ಆರೋಪಿಗಳ ಬಂಧನ

ಶಿರಸಿ : ಐದು ಕೋಟಿ ಮೌಲ್ಯದ ನಿರ್ಬಂಧಿತ ತಿಮಿಂಗಿಲದ ವಾಂತಿ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ. ಡಿ.ವೈ.ಎಸ್.ಪಿ ರವಿ ಡಿ ನಾಯ್ಕ ರವರ ನೇತ್ರತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್ ,ಪಿ.ಎಸ್.ಐ ಭೀಮಾಶಂಕರ್ ,ಪಿ.ಎಸ್.ಐ ಈರಯ್ಯ ನೇತ್ರತ್ವದಲ್ಲಿ ದಾಳಿ ನಡೆದಿದ್ದು ಐದು ಕೋಟಿ ಮೌಲ್ಯದ ಐದು ಕೆಜಿ ತಿಮಿಂಗಿಲದ ವಾಂತಿ (ಅಂಬೆ ಗ್ರೀಸ್) ಅನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿ ಮೂಲದ ಸಂತೋಷ್ ಕಾಮತ್ ,ಶಿರಸಿಯ ರಾಜೇಶ್ ಪೂಜಾರಿ ಬಂಧಿತ ಆರೋಪಿಗಳಾಗಿದ್ದು,ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ….

Read More

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು…

Read More

ಸಾಗರ : ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವತಿಯಿಂದ ಅಕ್ರಮ ಗೋ ಕಳ್ಳರ ವಿರುದ್ಧ ಪ್ರತಿಭಟನೆ

ಸಾಗರ:ಗೋವು ಕಳ್ಳರನ್ನು ಬಂಧಿಸುವಂತೆ ಆಗ್ರಹಿಸಿ ಸಾಗರದ ಮಾರಿಕಾಂಬ ದೇವಸ್ಥಾನ ಎದುರು ಇಂದು ಸಾಗರದ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಸಾಗರದ ಮಾರಿಕಾಂಬ ದೇವಸ್ಥಾನದ ತವರು ಮನೆ ಎದುರು ಗೋವು ಪೂಜೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಲಾಯಿತು.   ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ಪ್ರತಿಭಟನೆಯನ್ನು ಮುಂದುವರೆಸುವ ತೀರ್ಮಾನವನ್ನು ವಿಹಿಂಪ ಮತ್ತು ಬಜರಂಗದಳ ತೆಗೆದುಕೊಂಡಿದೆ. ಸಾಗರದ ಬಿ.ಹೆಚ್.‌ರಸ್ತೆಯ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಯನ್ನು ಮಾಡಲಾಗುವುದೆಂದು    ಪ್ರತಿಭಟನಾಕಾರರು ಹೇಳಿದ್ದಾರೆ. ಸರಕಾರದ ವಿರುದ್ದ, ಪೋಲೀಸರ ವಿರುದ್ದ…

Read More

ಯುವಕನಿಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ : ಸ್ಥಳದಲ್ಲೇ ಯುವಕ ಸಾವು

ಶಿವಮೊಗ್ಗ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕ ಬಲಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕಾರೊಂದು ಗಾಡಿಕೊಪ್ಪದ ಹತ್ತಿರ ಯುವಕನಿಗೆ ಡಿಕ್ಕಿ ಹೊಡೆದ ಪರಿಣಾಮಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತನನ್ನು ಸಂತೋಷ ಜಾಧವ್ (25) ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಸಂತೋಷ ದಿನ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಗಾಡಿಕೊಪ್ಪದ ತನ್ನ ಸೋದರಮಾವನ ಮನೆಯಲ್ಲಿ ವಾಸವಾಗಿದ್ದನು. ಸ್ಥಳೀಯರ ಮಾಹಿತಿಯ ಪ್ರಕಾರ ಐ20 ಕಾರೊಂದು…

Read More

ತಾಳಗುಪ್ಪದಲ್ಲಿ ವಿದ್ಯುತ್ ಲೈನ್ ನಲ್ಲಿ ಬೆಂಕಿ : ಜನರಲ್ಲಿ ಹೆಚ್ಚಿದ ಆತಂಕ

ಸಾಗರ ತಾಲೂಕು ತಾಳಗುಪ್ಪದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ಲೈನ್ ಮರಕ್ಕೆ ತಗುಲಿ ಬೆಂಕಿ ಹೊತ್ತುಕೊಂಡಿದೆ. ಸ್ವಲ್ಪ ಹೊತ್ತು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಸ್ಪೋಟ ಸಂಭವಿಸಿದೆ.ಈ ಘಟನೆಯಿಂದ ಸುಮಾರು ಮನೆಯ ಟಿವಿ ಗಳು ಸುಟ್ಟು ಭಸ್ಮವಾಗಿದೆ. ತಾಳಗುಪ್ಪದ ರಂಗಪ್ಪ ಗುಡ್ಡದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳೀಯರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧೆಡೆಗೆ ಕೆಪಿಟಿಸಿಎಲ್ ಮೂಲಕ ಇಲ್ಲಿಂದ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದಕ್ಕಾಗಿ ಹೈಟೆನ್ಷನ್ ವಯರ್’ಗಳನ್ನು ಹಾಕಲಾಗಿದೆ. ಈ ಹೈಟೆನ್ಷನ್…

Read More

ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.  ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…

Read More
Exit mobile version