Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಭದ್ರಾವತಿ : ಕಡಜ ಹುಳುಗಳ ದಾಳಿಗೆ ಇಬ್ಬರು ಬಲಿ

ಭದ್ರಾವತಿ :  ತೋಟದಲ್ಲಿ ಅಡಿಕೆ ಗೊನೆ ಕೀಳುವಾಗ ಕಡಜ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಜಮೀನು ಮಾಲೀಕ ನಂಜಪ್ಪ(50) ಹಾಗೂ ಕಾರ್ಮಿಕ ಸಿದ್ಲಿಪುರದ ಮಲ್ಲಿಕಾರ್ಜುನ್(52) ಮೃತರು. ಭದ್ರಾವತಿಯ ಕಾಗದ ನಗರದ ಆನೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತೋಟದಲ್ಲಿ ಅಡಿಕೆ ಗೊನೆ ತೆಗೆಯುವಾಗ ಆಕಸ್ಮಿಕವಾಗಿ ಗೊನೆ ಕೋಲು ಕಡಜದ ಗೂಡಿಗೆ ತಗುಲಿ ಕಡಜ ಹುಳುಗಳು ಮಲ್ಲಿಕಾರ್ಜುನ್ ಹಾಗೂ ನಂಜಪ್ಪನ ಮೇಲೆ ಏಕಾಏಕಿ ದಾಳಿ ನಡೆಸಿದ್ದವು. ತಕ್ಷಣ ಇಬ್ಬರನ್ನು ಭದ್ರಾವತಿಯ ತಾಲೂಕು…

Read More

ತೀರ್ಥಹಳ್ಳಿ : ವ್ಯಕ್ತಿಯನ್ನು ಕಿಡ್ನ್ಯಾಪ್ ಮಾಡಿ ಜೀವ ಬೆದರಿಕೆ

ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ ವ್ಯಕ್ತಿಯನ್ನ ಕಿಡ್ನಾಪ್ ಮಾಡಿ ನಾಲ್ವರು ಆರೋಪಿಗಳು ಆಯುಧದಿಂದ ಥಳಿಸಿರುವ ಘಟನೆ ಪಟ್ಟಣದ ಬಾಳೆಬೈಲು ಸಮೀಪದ ಜಟ್ಟಟ್ ನಗರದಲ್ಲಿ ನಡೆದಿದೆ. ಪಟ್ಟಣದ ಇಂದಿರಾ ನಗರದ ನಿವಾಸಿ ಮುಜೀಬ್ (35) ಎಂಬುವರ ಮೇಲೆ ಹಲ್ಲೆ ನಡೆದಿದ್ದು ಹಲ್ಲೆ ನಡೆಸಿರುವುದು ರಾಮನ್, ರಹೀಮ್, ಶಫಿ ಹಾಗೂ ಸುಹೇಲ್ ಎಂದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸೆ. 23 ರಾತ್ರಿ ಮುಜೀಬ್ ಮೇಲೆ ಹಲ್ಲೆ ನೆಡೆಸಿ ಕಿಡ್ನಾಪ್ ಮಾಡಿದ್ದರು. ಆದರೆ ತಪ್ಪಿಸಿಕೊಂಡು ಬಂದಿದ್ದ ಮುಜೀಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ರಿಪ್ಪನ್ ಪೇಟೆಯಲ್ಲಿ ಅಕ್ಟೋಬರ್ 5 ರ ಮಂಗಳವಾರ ಉಚಿತ ಹೃದಯ ತಪಾಸಣ ಶಿಬಿರ

ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ  ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ…

Read More

ಗಾಂಜಾ ಪ್ರಿಯರಿಗೆ ಶುರುವಾಯ್ತಾ ಗ್ರಹಚಾರ : ಕ್ಷಣದಲ್ಲೆ ಪತ್ತೆ ಹಚ್ಚಲು ಶಿವಮೊಗ್ಗಕ್ಕೆ ಬಂದಾಯ್ತು ವಿಶೇಷ ಕಿಟ್

ಶಿವಮೊಗ್ಗ : ಗಾಂಜಾ ಗಿರಾಕಿಗಳಿಗೆ ಬಿಗ್ ಶಾಕ್ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಗಾಂಜಾ ಅಥವಾ ನಾರ್ಕೋಟಿಕ್ ವಸ್ತು ಸೇವಿಸಿದವರ ಮೂತ್ರ ಪರೀಕ್ಷೆ ನಡೆಸಿ ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ವಿಶೇಷ ಟೆಸ್ಟಿಂಗ್ ಕಿಟ್ ನ್ನ ಅಳವಡಿಸಿಕೊಳ್ಳುತ್ತಿದೆ. ಈ ಮೊದಲು ಗಾಂಜಾ ಸೇವಿಸಿದವರ ರಕ್ತಪರೀಕ್ಷೆ, ಕೂದಲು ಪರೀಕ್ಷೆಗೆ ಒಳಪಡಿಸಿ ದಿನಗಟ್ಟಲೆ ಕಾಯುವ ಸ್ಥಿತಿ ಇತ್ತು. ಆದರೆ ಈಗ  ಸಮಯವನ್ನ ಉಳಿಸುವ ಸಲುವಾಗಿ ಈ ವಿಶೇಷ ಟೆಸ್ಟಿಂಗ್ ಕಿಟ್ ನ್ನು ಬಳಸಲು ಪೊಲೀಸ್ ಇಲಾಖೆ…

Read More

ಭದ್ರಾವತಿ : ಸಕ್ರೀಯ ರಾಜಕಾರಣಕ್ಕೆ ಶಾರಾದ ಅಪ್ಪಾಜಿ ಗೌಡ ಎಂಟ್ರಿ

ಭದ್ರಾವತಿ : ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿ ಗೌಡರವರ ಪತ್ನಿ ಶಾರದ ಅಪ್ಪಾಜಿ ಗೌಡ ರವರು ಶನಿವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದರು. ಇತ್ತೀಚಿಗೆ ತಾಲೂಕಿನ ಗೋಣಿಬೀಡಿನಲ್ಲಿ ಹಮ್ಮಿಕೊಳ್ಳಲಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿ ಗೌಡ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ನಿಂದ ಶಾರದ ಅಪ್ಪಾಜಿ ಗೌಡ ಅವರನ್ನು ಭದ್ರಾವತಿಯ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು….

Read More

ಸಾಗರ : ಗಾಂಧೀಜಿ -ಶಾಸ್ತ್ರೀಜಿ ಗೆ ನಮನ ಸಲ್ಲಿಸಿದ ಶ್ರೀನಗರ ಯುವಜನ ಸಂಘ

ಸಾಗರದ : ಇಲ್ಲಿನ ಶ್ರೀನಗರದ ಎಂಟನೇ ವಾರ್ಡಿನಲ್ಲಿ ಇಂದು ಮಹಾತ್ಮಾ ಗಾಂಧೀಜಿಯವರ 152 ನೇ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ 117 ನೇ ಜನ್ಮದಿನದಂದು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ನೇತ್ರತ್ವ ವಹಿಸಿದ್ದ ಶ್ರೀನಗರ ಯುವಜನ ಸಂಘದ ಪ್ರಮುಖರಾದ ಸುಬ್ರಹ್ಮಣ್ಯ ರವರು ಮಾತನಾಡಿ ಗಾಂಧೀಜಿಯ ಜೀವನವೇ ಒಂದು ಸಂದೇಶವಾಗಿದ್ದು ಅವರ ಹೆಸರು ಭಾರತೀಯರ ಮನಸ್ಸಿನಲ್ಲಿ ಇಂದಿಗೂ ಉಳಿದಿದೆ ಭಾರತದಲ್ಲಿ ಮಾತ್ರವಲ್ಲದೇ ದಕ್ಷಿಣ ಆಫ್ರಿಕಾದಲ್ಲೂ  ವರ್ಣಭೇದ ನೀತಿಯ ವಿರುದ್ಧ ಹೋರಾಡಿ…

Read More

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ:

ಶಿವಮೊಗ್ಗ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್ ಪಕ್ಕದ ಚಾನಲ್ ಏರಿ ಮೇಲ್ಭಾಗ , ನಾಗಪ್ಪ ದೇವಸ್ಥಾನ ಮತ್ತು ಮಲೆ ಮಹದೇಶ್ವರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ಮಾಡುವ ಮುಖಾಂತರ ಶ್ರಮದಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಮಹಾನಗರ…

Read More

ರಿಪ್ಪನ್ ಪೇಟೆ : ಜೇನಿ ಗ್ರಾಪಂ ಮಾಜಿ ಸದಸ್ಯರಾದ ಹೊ ಮ ಲೋಕಪ್ಪ ಗೌಡ ನಿಧನ

ರಿಪ್ಪನ್ ಪೇಟೆ : ಇಲ್ಲಿನ ಕೋಟೆತಾರಿಗ ನಿವಾಸಿ ಜೇನಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಹೊ ಮ ಲೋಕಪ್ಪಗೌಡ ರವರು ವಯೋಸಹಜ ಕಾಯಿಲೆಯಿಂದ ಮೃತರಾಗಿದ್ದಾರೆ. ಸುಮಾರು 15 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಮೃತರು ಹೊಸನಗರ ತಾಲೂಕ್ ಒಕ್ಕಲಿಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.ಜೇನಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರಾಗಿದ್ದರು. ಮೃತರು ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ…

Read More

ರಿಪ್ಪನ್ ಪೇಟೆ : ಬಿಜೆಪಿ ಘಟಕದ ವತಿಯಿಂದ ಸ್ವಚ್ಚತಾ ಅಭಿಯಾನ

ರಿಪ್ಪನ್ ಪೇಟೆ : ಪ್ರಧಾನ ಮಂತ್ರಿ  ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಪ್ರಯುಕ್ತ  ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ  ಮತ್ತು ಮಹಾತ್ಮಾ ಗಾಂಧಿ  ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ  ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ  ವತಿಯಿಂದ ಸ್ವಚ್ಚತಾ ಅಭಿಯಾನ ವನ್ನು ನಡೆಸಲಾಯಿತು.  ಪಟ್ಟಣದ ಹೊಸನಗರ ರಸ್ತೆಯ ಚಿಕ್ಕಬೀರನ ಕೆರೆ ಆವರಣದಲ್ಲಿ ಸ್ವಚ್ಚತಾ ಅಭಿಯಾನವನ್ನು ನಡೆಸಲಾಯಿತು.   ಈ ಸಂದರ್ಭದಲ್ಲಿ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ…

Read More

ರಿಪ್ಪನ್ ಪೇಟೆ : ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಹೆಚ್ ಪಟೇಲ್ ರ 91 ನೇ ಜನ್ಮ ದಿನಾಚರಣೆ ಪಕ್ಷಾತೀತವಾಗಿ ಆಚರಣೆ

ರಿಪ್ಪನ್ ಪೇಟೆ : ಸಮಾಜವಾದಿ ಚಿಂತನೆಯಲ್ಲಿ ಸಮಾಜದ ಸರ್ವ ಜನಾಂಗಕ್ಕೂ ಸಹಬಾಳ್ವೆ, ಸಾಮರಸ್ಯವನ್ನು ಸಾರಿ ಕರ್ನಾಟಕವನ್ನು ಉತ್ತುಂಗಕ್ಕೆ ಏರಿಸಿದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅನನ್ಯ ಹಾಗು ಅಪಾರ ಎಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು.          ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ 91 ನೇ…

Read More
Exit mobile version