Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹಣದ ವಿಚಾರವಾಗಿ ಖಾರದ ಪುಡಿ ಎರಚಿ ದಾಳಿ ಸ್ಥಳದಲ್ಲಿ ಬೈಕ್ ಸುಟ್ಟು ಭಸ್ಮ!! ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲು !!

ಹಣದ ವಿಚಾರದಲ್ಲಿ ಹಾರನಹಳ್ಳಿ ರಫೀಕುಲ್ಲಾ(37) ಎಂಬುವರಿಗೆ ಖಾರದ ಪುಡಿ ಎರಚಿ ಥಳಿಸಿದ್ದು‌‌ ಬೈಕ್ ನ್ನ ಸುಟ್ಟು ಭಸ್ಮ ಮಾಡಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ನಡೆದಿದೆ. ತರಕಾರಿ, ಕಾರ್ಪೆಂಟ್ ಕೆಲಸ ಮಾಡಿಕೊಂಡಿದ್ದ ರಫೀಕುಲ್ಲಾ  ಹಾರನಹಳ್ಳಿಯಿಂದ ಶಿವಮೊಗ್ಗಕ್ಕೆ ಬಜಾಜ್ ಪ್ಲಾಟಿನ ದಲ್ಲಿ ಬರುವಾಗ ಯರೇಕೊಪ್ಪದ ಅರಣ್ಯ ಇಲಾಖೆಯ ಪ್ರವೇಶ‌ದ್ವಾರದ ಬಳಿ ಖಾರದ ಪುಡಿ ಎರಚಿ ಮೂವರು  ದಾಳಿ ನಡೆಸಿದ್ದಾರೆ ಕಳೆದ ಎರಡು ತಿಂಗಳ ಹಿಂದೆ ರಫಿಕುಲ್ಲಾ ಪತ್ನಿ ರಿಹಾನಾ ಭಾನು  ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. 13…

Read More

ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ

ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್​​ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್​ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್​​ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ  ಲಿಂಗಧಾರಣೆ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ರಾಯಭಾರ ಮತ್ತೆ ಎಂ.ಶ್ರೀಕಾಂತ್ ಹೆಗಲಿಗೆ, ಜಿಲ್ಲಾಧ್ಯಕ್ಷರು ಜೆಡಿಎಸ್ ಗೆಲುವಿಗೆ ರೂಪಿಸಿರುವ ಕಾರ್ಯತಂತ್ರಗಳೇನು!!! ಕಾರ್ಯಕರ್ತರು ಇದರ ಬಗ್ಗೆ ಏನನ್ನುತ್ತಾರೆ.?

ಶಿವಮೊಗ್ಗ: ಜಿಲ್ಲೆಯಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ. ಈ ಹಿಂದೆ ಜಿಲ್ಲಾಧ್ಯಕ್ಷರಾಗಿ ಜೆಡಿಎಸ್ ನಲ್ಲಿ ಸಂಚಲನ ಮೂಡಿಸಿದ್ದ ಎಂ. ಶ್ರೀಕಾಂತ್ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ನಂತರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಿಂದ ಸ್ವಲ್ಪ ದೂರವೇ ಉಳಿಸಿದ್ದರು. ಆದರೆ, ಮೊನ್ನೆ ನಡೆದ ಜೆಡಿಎಸ್ ವಿಷನ್-2021ರ ಸಮಾವೇಶದಲ್ಲಿ ಪಕ್ಷದ ವರಿಷ್ಟರು ಜಿಲ್ಲಾ ಜೆಡಿಎಸ್ ನ ನಾಯಕತ್ವವನ್ನು ಮತ್ತೆ ಶ್ರೀಕಾಂತ್ ಹೆಗಲಿಗೆ ಹೊರಿಸಿದ್ದಾರೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಂ. ಶ್ರೀಕಾಂತ್ 20 ಸಾವಿರಕ್ಕೂ ಹೆಚ್ಚು ಮತಗಳಿಸುವ…

Read More

ರಿಪ್ಪನ್ ಪೇಟೆ,ಶಿವಮೊಗ್ಗ ನಗರದಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿದಿದೆ. ವಿನಾಯಕ ವೃತ್ತ ಸೇರಿ ಹಲವೆಡೆ ಚರಂಡಿ ನೀರು ರಸ್ತೆಯ ಮೇಲೆ ಹರಿದಿದ್ದು, ಜನರ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪಟ್ಟಣದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಪಟ್ಟಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. …

Read More

ಗಾಂಜಾ ವಿಚಾರವಾಗಿ ಇಬ್ಬರ ನಡುವೆ ಮಾರಾಮಾರಿ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲು !!!

ಭದ್ರಾವತಿ : ಗಾಂಜಾ ವಿಚಾರದಲ್ಲಿ ಇಬ್ಬರ ನಡುವೆ  ಮಾರಾಮಾರಿ ಉಂಟಾಗಿದೆ. ಗಾಂಜಾ ಪ್ರಕರಣದಲ್ಲಿ ಮೊಹ್ಮದ್ ಗೌಸ್ ಎಂಬುವನನ್ನ ಪೊಲೀಸರು ಇತ್ತೀಚೆಗೆ ಅಂದರ್ ಮಾಡಿದ್ದು, ಈ ಪ್ರಕರಣದಲ್ಲಿ ಇಬ್ಬರ ನಡುವೆ ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಸಹ ಠಾಣೆಯಲ್ಲಿ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಭದ್ರಾವತಿಯ ಅನ್ವರ್ ಕಾಲೋನಿಯ ಕಾಫಿಬಾರ್ ನ ಬಳಿ ಮೊಹ್ಮದ್ ಗೌಸ್ ನ ಸಹೋದರ ಮೊಹ್ಮದ್ ಮುಸ್ತಫಾ, ಮೊಹ್ಮದ್ ಅರ್ಶನ್, ಮಾತನಾಡುತ್ತಿದ್ದ ವೇಳೆ ಮೊಹ್ಮದ್ ಅಫ್ತಾಬ್, ಜಾಫರ್ ಸಾದಿಕ್, ಹಾಗೂ ಇನ್ನಿತರೆ ಇಬ್ವರು ಸ್ನೇಹಿತರು ಬಂದು ಏಕಾಏಕಿ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ.ಶ್ರೀಕಾಂತ್ ಮರುಆಯ್ಕೆ

ಶಿವಮೊಗ್ಗ : ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಎಂ ಶ್ರೀಕಾಂತ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಹಿಂದೆ ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿದ್ದ ಶ್ರೀಕಾಂತ್ ಪಕ್ಷದ ಬಲವರ್ಧನೆಗೆ ಶ್ರಮಿಸಿದ್ದರು. ಅಪ್ಪಾಜಿಗೌಡ, ಶಾರದಾ ಪೂರ್ಯ ನಾಯಕ್, ಮಧು ಬಂಗಾರಪ್ಪ ಸೇರಿದಂತೆ ಜೆಡಿಎಸ್ ನ 3ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಯಶಸ್ವಿಯಾಗಿದ್ದರು. ವಿಧಾನಪರಿಷತ್ ಸದಸ್ಯರಾದ ಬೋರೇಗೌಡರ ಗೆಲುವಿಗೂ ಹೆಗಲಾಗಿದ್ದರು.  ಎರಡು ಬಾರಿ ಶಿವಮೊಗ್ಗ ನಗರದ ವಿಧಾನಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.ಕೇವಲ ರಾಜಕಾರಣಿ ಮಾತ್ರವಾಗಿರದೆ ಸಮಾಜ ಸೇವಕರಾಗಿದ್ದಾರೆ. ಜಿಲ್ಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು…

Read More

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ಕಾರ್ಗಲ್ ಗ್ರಾಮದಲ್ಲಿ ಕಲುಷಿತ ನೀರು,ಆಹಾರ ಸೇವನೆಯಿಂದ ಸುಮಾರು 80 ಕ್ಕೂ ಹೆಚ್ಚು ಜನ ಅಸ್ವಸ್ಥ : ಶಾಸಕ ಹರತಾಳು ಹಾಲಪ್ಪ ಭೇಟಿ

ಸಾಗರ : ತಾಲೂಕಿನ ಕಾರ್ಗಲ್ ಮತ್ತು ಜೋಗದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಸುಮಾರು 80 ಜನ ಅಸ್ವಸ್ಥರಾಗಿ ಸಾಗರ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಾರ್ಗಲ್ ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವನೆ ಮಾಡಿದವರಲ್ಲಿ ವಾಂತಿ ಭೇದಿ, ಜ್ವರ ಕಾಣಿಸಿಕೊಂಡಿದೆ. ಜೋಗದಲ್ಲಿ ಮೆಸ್ ಮತ್ತು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿಯ ರೋಗ ಲಕ್ಷಣ ಕಂಡುಬಂದಿದೆ. ನ.11 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿ ವಾಂತಿ ಭೇದಿ ಮತ್ತು ಜ್ವರದ…

Read More

ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ಕುಳಿತು ವಿನೂತನ ರೀತಿ ಪ್ರತಿಭಟನೆ ಮಾಡಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಇರುವ ದೊಡ್ಡ ಗುಂಡಿಯನ್ನು ಕೂಡಲೇ ಮುಚ್ಚುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರಸ್ತೆ ಮಧ್ಯದಲ್ಲಿಯೇ ಕುರ್ಚಿ ಹಾಕಿ ವಿನೂತನ ರೀತಿಯಾಗಿ ಪ್ರತಿಭಟಿಸಿದ್ದಾರೆ. ರಾಜಧಾನಿ ಹಾಗೂ ಕರಾವಳಿಗೆ ನಡುವೆ ಸಂಪರ್ಕ ಕಲ್ಪಿಸುವ ಮುಖ್ಯ ವೃತ್ತ ಇದಾಗಿದ್ದು ಹಲವು ದಿನಗಳಿಂದ ರಸ್ತೆ ಹದಗೆಟ್ಟಿ,ದೊಡ್ಡ ಗುಂಡಿ ಬಿದ್ದಿದ್ದರು ಯಾವ ಅಧಿಕಾರಿಗಳು ಇದರ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಸಾಮಾಜಿಕ ಹೋರಾಟಗಾರರಾದ ಟಿ ಆರ್ ಕೃಷ್ಣಪ್ಪ ಇಂದು ಗುಂಡಿ ಬಿದ್ದ ಜಾಗದಲ್ಲಿಯೇ ಕುರ್ಚಿ…

Read More

ಅಮೃತ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ. ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ:ನ್ಯಾಯಧೀಶ ಕೆ ರವಿಕುಮಾರ್.

ರಿಪ್ಪನ್ ಪೇಟೆ :  ಅರಣ್ಯ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ ಮಾಡದಿದ್ದರೆ ಪ್ರಾಕೃತಿಕ ವಿಕೋಪಗಳು.ಭೂಕುಸಿತಗಳು ಉಂಟಾಗುತ್ತವೆ  ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಅರಣ್ಯ ಸಂರಕ್ಷಣೆಗೆ ಮುಂದಾಗಬೇಕೆಂದು ಹೊಸನಗರ ತಾಲೂಕ್ ಪ್ರಧಾನ ವ್ಯವಹಾರ ನ್ಯಾಯಧೀಶ  ಮತ್ತು ಪ್ರಾಧಿಕಾರದ  ಸದಸ್ಯ  ಕೆ.ರವಿಕುಮಾರ್ ಹೇಳಿದರು. ಅಮೃತ ಸರಕಾರಿ ಪದವಿಪೂರ್ವ ಕಾಲೇಜುನಲ್ಲಿ ನಡೆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ, ಗ್ರಾಮಆಡಳಿತ ಅಮೃತ  ಹಾಗೂ ಅಮೃತ ಸರಕಾರಿ ಪದವಿ ಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಅಜಾದಿ ಕಾ…

Read More