ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷ ಸ್ಥಾನದಿಂದ ವಜಾ : ಜಾತ್ಯಾತೀತತೆ ಎಂಬ ಮಾತು ಕೇವಲ ಬಾಯಿ ಮಾತಿಗೆ ಸೀಮಿತವಾಗಿದೆಯಾ ?????
ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಮಂಗಳಾರತಿ ಪಡೆದಿದ್ದಕ್ಕೆ ಮಸೀದಿ ಅಧ್ಯಕ್ಷರನ್ನು ಸ್ಥಾನದಿಂದ ವಜಾ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಿ.ಎನ್.ಅಕ್ಮಲ್ ಜಾಮಿಯಾ ಮಸೀದಿಯ ಅಧ್ಯಕ್ಷ ಸ್ಥಾನದಿಂದ ವಜಾಗೊಂಡವರು. ಅಕ್ಮಲ್ ಅವರು ಕಿಸಾನ್ ಕಾಂಗ್ರೆಸ್ ರಾಜ್ಯ ಸಂಚಾಲಕ ಕೂಡ. ಇತ್ತೀಚೆಗೆ ನಗರದ ರಾಮನಹಳ್ಳಿಯಲ್ಲಿ ನೂತನವಾಗಿ ಆರಂಭಗೊಂಡ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರ ಮನವಿ ಮೇರೆಗೆ ಅನ್ನದಾನ ಏರ್ಪಡಿಸಿದ್ದರು. ಈ ವೇಳೆ ಅಕ್ಮಲ್ ಅವರು ದೇವಸ್ಥಾನಕ್ಕೂ ಹೋಗಿದ್ದರು. ಅಲ್ಲಿ ಪೂಜೆ ಬಳಿಕ ಮಂಗಳಾರತಿ ಪಡೆದಿದ್ದರು. ಈ ಕಾರಣಕ್ಕೆ ಅವರನ್ನು ಜಾಮೀಯ ಮಸೀದಿ ಅಧ್ಯಕ್ಷ ಸ್ಥಾನದಿಂದ…