Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಅಡ್ಡಿ : ಶಾಸಕರ ವಿರುದ್ಧ ಹರತಾಳು ಹಾಲಪ್ಪ ಆರೋಪ ಹೊಸನಗರ, ಜುಲೈ 25: ಅಮ್ಮನಘಟ್ಟದ ಜೇನುಕಲ್ಲಮ್ಮ ದೇವಾಲಯದ ಅಭಿವೃದ್ಧಿಗೆ ಸ್ಥಳೀಯ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು ಹಾಕಿದ್ದಾರೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಕೋಡೂರು ಸಮೀಪದ ಜೇನುಕಲ್ಲಮ್ಮ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ನಮ್ಮ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ₹1 ಕೋಟಿ ಅನುದಾನ ನೀಡಲಾಗಿತ್ತು. ಆದರೆ ಬದಲಾಗಿದ ಸರ್ಕಾರ ಹಾಗೂ ಸ್ಥಳೀಯ ಶಾಸಕರ ಅಡಚಣೆಯಿಂದ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ನೇಮಕ ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷರಾಗಿ ಶ್ವೇತಾ ಆರ್. ಬಂಡಿ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಈ ನೇಮಕಾತಿಯನ್ನು ಘೋಷಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಶ್ವೇತಾ ಬಂಡಿ ಅವರಿಗೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಅಧಿಕೃತವಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ ನೀಡಲಾಗಿದೆ. ಈ ಮೂಲಕ ಮಹಿಳಾ ಕಾಂಗ್ರೆಸ್ ಘಟಕದ ಸಂಘಟನೆಗೆ ಹೊಸ…

Read More

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ

RIPPONPETE | ಭಾರಿ ಮಳೆಗೆ ಮನೆ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಿಪ್ಪನ್ ಪೇಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ  ಬಿದ್ದು ಹಾನಿ ಸಂಭವಿಸಿದೆ. ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಮನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮಂಜುಳಾ ರಾಘವೇಂದ್ರ ಎಂಬುವರ ವಾಸದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮಕ್ಕಳು ಸೇರಿದಂತೆ ಮೂವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆಯ…

Read More

RIPPONPETE | ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು

ಕಾರು ಚಲಾಯಿಸುತಿದ್ದಾಗಲೇ ಹೃದಯಾಘಾತ – ವ್ಯಕ್ತಿ ಸಾವು ನಂತರ ಸ್ಥಳೀಯರ ನೆರವಿನಿಂದ ಆಯನೂರು ಸಮುದಾಯ ಆಸ್ಪತ್ರೆಗೆ ಕರೆತಂದು ಕೂಡಲೇ ಆಂಬುಲೆನ್ಸ್ ಮೂಲಕ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಆದರೆ ಅಷ್ಟರಲ್ಲಾಗಲೇ ಪ್ರಾಣ ಪಕ್ಷಿ ಹಾರಿಹೋಗಿದೆ. ಕಾರು ಚಲಾಯಿಸುತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ ( 54) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ…

Read More

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ: ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆಗಳಿಗೆ ನಾಳೆ (25-07-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ನಾಳೆ (ಜುಲೈ 25, ಶುಕ್ರವಾರ) ರಜೆ ಘೋಷಿಸಲಾಗಿದೆ. ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಳೆಯೂ ಮಳೆಯ ಸಾಧ್ಯತೆ ಇರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ…

Read More

ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ!

ರಿಪ್ಪನ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚುತ್ತಿದೆ ಗಾಂಜಾ ಅಮಲು – ಯುವಕರ ಭವಿಷ್ಯ ತೀವ್ರ ಆತಂಕದಲ್ಲಿ! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ , ಕೋಡೂರು ,ಬಟ್ಟೆಮಲ್ಲಪ್ಪ , ಮಾರುತಿಪುರ , ಗರ್ತಿಕೆರೆ ,ಹುಂಚ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪೋಷಕರಿಗೆ, ಶಿಕ್ಷಣ ಸಂಸ್ಥೆಗಳಿಗೆ ಮತ್ತು ಸಮಾಜಕ್ಕೆ ತೀವ್ರ ಆತಂಕ ತಂದಿಟ್ಟಿದೆ. ವಿದ್ಯಾಭ್ಯಾಸ ಹಾಗೂ ಬದುಕಿನ ಆಶಯಗಳನ್ನು ತಿರಸ್ಕರಿಸುತ್ತಾ, ಹಲವಾರು ಯುವಕರು ಗಾಂಜಾ ಸೇವನೆಯೊಂದಿಗೆ ತಮ್ಮ ಬದುಕಿಗೆ ತಾವೇ ಕೊಳ್ಳಿಯಿಟ್ಟುಕೊಳ್ಳುತಿದ್ದಾರೆ. ರಿಪ್ಪನ್ ಪೇಟೆ…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ  ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು.  ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

Read More
Exit mobile version