Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ

ಮಹಿಳೆ ವಿಚಾರಕ್ಕೆ ಜಗಳ – ಸ್ನೇಹಿತನಿಗೆ ಚಾಕುವಿನಿಂದ ಇರಿತ, ಒಬ್ಬನ ಬಂಧನ ಶಿವಮೊಗ್ಗ, ಜುಲೈ 24, 2025: ನಗರದ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ನಡೆದ ಜಗಳ ಉಗ್ರ ರೂಪ ಪಡೆದು, ಚಾಕು ಇರಿತದ ಹೀನಕೃತ್ಯಕ್ಕೆ ಕಾರಣವಾಯಿತು. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮಾಹಿತಿಯಂತೆ, ಇಬ್ಬರು ಸ್ನೇಹಿತರು ಬಸ್ ನಿಲ್ದಾಣದ ಬಳಿ ಭೇಟಿಯಾದ ಸಂದರ್ಭದಲ್ಲಿ, “ಅವಳ ಜೊತೆ ಮಾತನಾಡಬೇಡ” ಎಂಬ ಕಾರಣಕ್ಕೆ ಪ್ರಾರಂಭವಾದ ಜಗಳ ವಿಕೋಪಕ್ಕೆ ತೆರಳಿ…

Read More

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

ಸಿಗಂದೂರು ದೇವಸ್ಥಾನದ ಬಗ್ಗೆ ಸುಳ್ಳು ವಿಡಿಯೋ: ಮಧು ಬಂಗಾರಪ್ಪ ಭಾಷಣ ತಿರುಚಿದವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ ಶಿವಮೊಗ್ಗ : ಉಸ್ತುವಾರಿ ಸಚಿವರ ಹೇಳಿಕೆಯನ್ನು ತಿರುಚಿ, ಜನರಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಸಮಾಜದಲ್ಲಿ ಅಶಾಂತಿ  ಮೂಡಿಸಿರುವ ವಿರುದ್ದ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ನ ಜಿಡಿ ಮಂಜುನಾಥ್ ನೇತೃತ್ವದಲ್ಲಿ ಎಸ್ಪಿ ಮಿಥುನ್ ಕುಮಾರ್ ಗೆ ಮನವಿ ಸಲ್ಲಿಸಲಾಯಿತು.  ಜು.21 ರಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ…

Read More

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ

ಗ್ಯಾಸ್ ಸಿಲಿಂಡರ್ ಸ್ಪೋಟ – ಮೂವರಿಗೆ ಗಂಭೀರ ಗಾಯ, ಮನೆಗೆ ಭಾರೀ ಹಾನಿ ಶಿವಮೊಗ್ಗ, ಜುಲೈ 23 – ಇಂದು ಸಂಜೆ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಪೋಟದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶರಾವತಿ ನಗರದಲ್ಲೊ ನಡೆದಿದೆ. ಶಬ್ದದ ತೀವ್ರತೆಗೆ ನೆರೆಮನೆಯವರು ಭಯದಿಂದ ಓಡಿ ಬಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿ ವಾಸಿಸುತ್ತಿರುವ ಎಂ.ಬಿ. ಪೀರಾನ್ ಸಾಬ್ (48) ಅವರ ಮನೆಯಲ್ಲಿ…

Read More

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ

ಹೊಸನಗರ ಭೂನ್ಯಾಯ ಮಂಡಳಿ ಸದಸ್ಯರಾಗಿ ಗರ್ತಿಕೆರೆಯ ಬಷೀರ್ ಅಹಮದ್ ನೇಮಕ ರಿಪ್ಪನ್ ಪೇಟೆ – ಹೊಸನಗರ ತಾಲ್ಲೂಕು ಭೂನ್ಯಾಯ ಮಂಡಳಿ ಸದಸ್ಯ ಸ್ಥಾನಕ್ಕೆ ಗರ್ತಿಕೆರೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಬಷೀರ್ ಅಹಮದ್ ಹೆಚ್ ಎಂ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರಸ್ತುತ ಗರ್ತಿಕೆರೆ ಗ್ರಾಪಂ ಸದಸ್ಯರಾಗಿರುವ ಬಷೀರ್ ಅಹಮದ್ ಹೆಚ್ ಎಂ ಅವರು ಸ್ಥಳೀಯ ರಾಜಕಾರಣದಲ್ಲಿ ಸಕ್ರೀಯರಾಗಿದ್ದು, ಗ್ರಾಮೀಣ…

Read More

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕರು

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ರಸ್ತೆ ಬಲಿ – ದಿವ್ಯ ಮೌನಕ್ಕೆ ಶರಣಾದ ಶಾಸಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಂ ಪಂ ವ್ಯಾಪ್ತಿಯ ಬಸವನಗದ್ದೆ ಸಮೀಪದ ಶಿರನಲ್ಲಿ ಬಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಹೊಂಡ ತೆಗೆದು ಕಳಪೆ ಕಾಮಗಾರಿ ನಡೆಸಿದ ಹಿನ್ನಲೆಯಲ್ಲಿ ಉತ್ತಮ ರಸ್ತೆ ಹದಗೆಟ್ಟು ಸಾರ್ವಜನಿಕರು ಓಡಾಡಲು ಹೆದರುವ ಪರಿಸ್ಥಿತಿ ಉಂಟಾಗಿದೆ. ತೀರ್ಥಹಳ್ಳಿ – ಹಣಗೆರೆ – ಶಿವಮೊಗ್ಗಕ್ಕೆ ಹಾದು ಹೋಗುವ ಮುಖ್ಯ ರಸ್ತೆ ಅರ್ಧಕರ್ದ ಬಿರುಕು ಬಿಟ್ಟಿದ್ದು ವಾಹನ…

Read More

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ

ಕೆಂಚನಾಲ ಮಾರಿಕಾಂಬ ಜಾತ್ರೆ ಹರಿದು ಬಂದ ಭಕ್ತ ಸಾಗರ ರಿಪ್ಪನ್ ಪೇಟೆ:ಈ ಬಾರಿಯ ಮಳೆಗಾಲದ ಕೆಂಚನಾಲ ಮಾರಿಕಾಂಬ ಜಾತ್ರೆ ಭಕ್ತಸಾಗರದೊಂದಿಗೆ ಅತ್ಯಂತ ಭಕ್ತಿ ಭಾವಪೂರ್ಣವಾಗಿ ನಡೆಯಿತು. ಮಂಗಳವಾರ ನಡೆದ ಈ ಜಾತ್ರೆಗೆ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯಗಳಿಂದ ಸಹ ಸಾವಿರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವರ್ಷಕ್ಕೆ ಎರಡು ಬಾರಿ ನಡೆಯುವ ಈ ಜಾತ್ರೆ — ಮಳೆಗಾಲದಲ್ಲಿ ಮಂಗಳವಾರ ಮತ್ತು ಬೇಸಿಗೆಯಲ್ಲಿ ಬುಧವಾರ — ಕೆಂಚನಾಲ ಗ್ರಾಮದಲ್ಲಿ ನಡೆಯುವ ಈ ಜಾತ್ರೆ  ಜನಜೀವನದ ಒಂದು ಮೂಲಭೂತ…

Read More

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ-ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್

HOSANAGARA | ಮದ್ಯದ ವಿಚಾರಕ್ಕೆ ನಡುರಸ್ತೆಯಲ್ಲಿ ಯುವಕನ ಮೇಲೆ ಹಲ್ಲೆ -ಯುವಕ ಆಸ್ಪತ್ರೆ ದಾಖಲು , ಸಿಸಿಟಿವಿ ದೃಶ್ಯಾವಳಿ ವೈರಲ್ ಆರೋಪಿಗಳೊಬ್ಬರು ಜೀಪ್‌ನ ಟಯರ್‌ ಬಿಚ್ಚುವ ರಾಡ್‌ನಿಂದ ಲಕ್ಷ್ಮೀಶನ ತಲೆಗೆ ಹೊಡೆದಿದ್ದು, ಈ ಪರಿಣಾಮವಾಗಿ ಅವರು ತೀವ್ರ ಗಾಯಗೊಂಡಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ… ಹೊಸನಗರ, ಜುಲೈ 22: ಮದ್ಯದ ವಿಚಾರವಾಗಿ ತಕರಾರು ಉಂಟಾಗಿ ನಡುರಸ್ತೆಯಲ್ಲೇ ಯುವಕನೊಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ನಿಟ್ಟೂರು ಸಮೀಪದ ಸಂಪೆಕಟ್ಟೆ ಸರ್ಕಲ್‌ನಲ್ಲಿ ನಡೆದಿದೆ….

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಧರ್ಮಸ್ಥಳ ಪ್ರಕರಣ: ನಿಷ್ಪಕ್ಷಪಾತ ತನಿಖೆ ನಡೆಯಲಿ ಶಿವಮೊಗ್ಗ : ಅನಾಮಧೇಯ ವ್ಯಕ್ತಿಯೋರ್ವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಎಸ್‌ಐಟಿ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ವಕೀಲ ಕೆ.ಪಿ. ಶ್ರೀಪಾಲ್ ಆಗ್ರಹಿಸಿದರು. ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,೮ ವರ್ಷದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ೯೮ ಪ್ರಕರಣ ಅಸಹಜ ಸಾವೆಂದು ವರದಿಯಾಗಿದೆ. ಹೂತಿಟ್ಟಿರುವ ನೂರಾರು ಶವಗಳಲ್ಲಿ ೧೨ ರಿಂದ ೧೫ ವರ್ಷದ ಹೆಣ್ಣು ಮಕ್ಕಳು, ಪುರುಷರು, ಮಹಿಳೆಯರು…

Read More