Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ

ಹೋಟೆಲ್‌ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್‌ನಲ್ಲಿ ಹೊಟೇಲ್‌ಗ‌ಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್‌ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…

Read More

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ

ANANDAPURA | ವೃದ್ದೆಯ ಮೇಲೆ ಹಲ್ಲೆ ಪ್ರಕರಣ : ಮಾಹಿತಿ ಕೇಳಿದ ಸಿಎಂ ಕಚೇರಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಗೌತಮಪುರ ಗ್ರಾಮದಲ್ಲಿ ವೃದ್ಧೆಯೊಬ್ಬರಿಗೆ ಮನೆಯ ಮುಂದೆ ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ನೆರೆಮನೆಯವರು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಅಮಾನವೀಯ ಘಟನೆ ಕುರಿತು ಮುಖ್ಯಮಂತ್ರಿಗಳ ಕಚೇರಿ (CMO) ಮಧ್ಯಪ್ರವೇಶಿಸಿದೆ. ಮಾಧ್ಯಮ ವರದಿಗಳನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು (OSD) ತಕ್ಷಣವೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಸೂಚನೆಯ…

Read More

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ  ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್  ಗುರುವಾರ  ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…

Read More

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ

PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್‌ಪೇಟೆಯಲ್ಲಿ ಸನ್ಮಾನ ರಿಪ್ಪನ್‌ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್‌ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು…

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ

ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ ರಿಪ್ಪನ್ ಪೇಟೆ : ಮನೆಯಿಂದ ಹೊರಗೆ ಹೋದ ವ್ಯಕ್ತಿ ಮೂರು ದಿನಗಳಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೋಹಿತ್ತಲು ಸಮೀಪದ ಸಾರಗನಜಡ್ಡು ಗ್ರಾಮದ ನಿವಾಸಿ ಬಸಪ್ಪ(69) ಎಂಬುವವರು 12-07-2025 ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ತಿಳಿದವರು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆ ಗೆ ಕರೆ ಮಾಡಲು ಪೊಲೀಸ್ ಪ್ರಕಟಣೆ ತಿಳಿಸಿದೆ. ಇವರು ಸುಮಾರು…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ

ಬಿಎಲ್ ಓ ಕೆಲಸದಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಕೈಬಿಡಲು ಜಿಲ್ಲಾಧಿಕಾರಿಗೆ ಮನವಿ ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರನ್ನು ಚುನಾವಣೆಯ ಕೆಲಸದಿಂದ ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಸಂಘದ ಜಿಲ್ಲಾ ಅಧ್ಯಕ್ಷೆ ಪ್ರೇಮಾ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಬಿಎಲ್‌ಓ ಕೆಲಸವನ್ನು ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮೂರರಿಂದ ಆರು ವರ್ಷದ ಮಕ್ಕಳು ಈ ಮಕ್ಕಳು ಅಂಗನವಾಡಿಗೆ ಹೊಸದಾಗಿ ಸೇರ್ಪಡೆಯಾಗುತ್ತಿದ್ದು, ಇವರಿಗೆ ಶಾಲಾ ಪೂರ್ವ…

Read More

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More