Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ”

“ಧರ್ಮ, ಹಬ್ಬ, ಕರ್ತವ್ಯ – ಎಲ್ಲವನ್ನೂ ಒಟ್ಟುಗೂಡಿಸಿದ ತೀರ್ಥಹಳ್ಳಿ ಪೊಲೀಸ್‌ ಗಣಪತಿ ವಿಸರ್ಜನೆ” “ಮೆರವಣಿಗೆಯಲ್ಲಿ ಸಿಬ್ಬಂದಿಗಳೊಂದಿಗೆ ಕುಣಿದು ಕುಪ್ಪಳಿಸಿದ ಸಿಪಿಐ ಇಮ್ರಾನ್ ಬೇಗ್  – ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾದ ತೀರ್ಥಹಳ್ಳಿ” ತೀರ್ಥಹಳ್ಳಿ : ಗಣಪತಿ ಹಬ್ಬ ಎಂದರೆ ಸದಾ ಸೌಹಾರ್ದ, ಸಂತೋಷ, ಏಕತೆ ತುಂಬಿದ ಹಬ್ಬ. ಸಾಮಾನ್ಯವಾಗಿ ವಿಸರ್ಜನೆ ವೇಳೆ ಪೊಲೀಸರು ಶಿಸ್ತಿಗಾಗಿ ಬೈಯುತ್ತಾರೆ, ನಿಯಮ ಪಾಲನೆಗೆ ಕಠಿಣವಾಗುತ್ತಾರೆ ಎಂಬ ಮಾತು ಕೇಳಿ ಬರುತ್ತದೆ. ಆದರೆ ತೀರ್ಥಹಳ್ಳಿಯ ಪೊಲೀಸರು ಈ ಬಾರಿ ತಮ್ಮ ಕಾರ್ಯ ಶೈಲಿಯಿಂದ ಜನಮನ…

Read More

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ

ಶಿಕಾರಿಪುರದ ಹೊಸೂರಿನಲ್ಲಿ ಚಿರತೆಯ ಕಳೆಬರ ಪತ್ತೆ ಶಿವಮೊಗ್ಗ, ಆಗಸ್ಟ್ : ಶಿಕಾರಿಪುರ ತಾಲ್ಲೂಕಿನ ಹೊಸೂರು ಹೋಬಳಿ, ಗೊಗ್ಗದ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಎಂಪಿಎಂ ನಡುತೋಪಿನಲ್ಲಿ ಪತ್ತೆಯಾದ ಈ ಚಿರತೆಯ ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳ ಪ್ರಕಾರ, ಸುಮಾರು ಮೂರು ವರ್ಷದ ಗಂಡು ಚಿರತೆಯ ಮೃತದೇಹ ಇದಾಗಿದೆ. ಮರಣೋತ್ತರ ಪರೀಕ್ಷಾ ವರದಿ ಬರುವವರೆಗೆ ಸಾವಿನ ಕಾರಣ ಸ್ಪಷ್ಟವಾಗುವುದಿಲ್ಲ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರಿಂದ…

Read More

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಾಯ ಶಿಕಾರಿಪುರ: ಸದಾಶಿವಪುರ ತಾಂಡದಲ್ಲಿ ಇಂದು ಮುಂಜಾನೆ ಆನವಟ್ಟಿಗೆ ಹೊರಟಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕೆರೆಯಲ್ಲಿ ಬಿದ್ದ ಅಪಘಾತ ನಡೆದಿದೆ. ಪ್ರಯಾಣಿಸುತ್ತಿದ್ದ ವೇಳೆ ಬಸ್ ಮೊದಲು ಕೆರೆಯ ದಡದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ನಂತರ ನೀರಿಗೆ ಜಾರಿದೆ. ಈ ಅವಘಡದಲ್ಲಿ ಸುಮಾರು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾರಿಗೂ ಹೆಚ್ಚಿನ ಅನಾಹುತವಾಗಿಲ್ಲ. ಗಾಯಾಳುಗಳನ್ನು ತಕ್ಷಣವೇ ಶಿಕಾರಿಪುರದ ಸರ್ಕಾರಿ…

Read More

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ

ಲಂಚದ ಆಸೆಗೆ ಬಿದ್ದ ಜನರಿಗೆ ಆಶ್ರಯ ಕೊಡಬೇಕಾದ ಅಧಿಕಾರಿ – ಲೋಕಾಯುಕ್ತ ಬಲೆಗೆ ಶಿವಮೊಗ್ಗ: ಖರೀದಿಸಿದ ಮನೆಯನ್ನು ತನ್ನ ಹೆಸರಿಗೆ ಮಾಡಿಕೊಡಲು ಮಹಾನಗರ ಪಾಲಿಕೆಯ ಆಶ್ರಯ ಮನೆ ವಿಭಾಗದ ಸಮುದಾಯ ಸಂಘಟನಾಧಿಕಾರಿ ಲಂಚ ಪಡೆಯುತ್ತಿರುವಾಗ ಲೋಕಾಯುಕ್ತರಿ ದಾಳಿ ನಡೆಸಿ ಬಂಧಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಶಿಧರ ಎ ಪಿ (೫೭) ಸಿಕ್ಕಿಬಿದ್ದ ಅಧಿಕಾರಿಯಾಗಿದ್ದಾರೆ. ಬೊಮ್ಮನಕಟ್ಟೆಯ ಆಶ್ರಯ ಬಡಾವಣೆಯ ವಾಸಿ ಮೊಹಮ್ಮದ್ ಆಸೀಫ್ ಉಲ್ಲಾ ಎನ್ನುವವರು ಬೊಮ್ಮನಕಟ್ಟೆಯಲ್ಲಿ ಅಮ್ಜದ್ ಅಲಿ ಎನ್ನುವವರಿಂದ ಮನೆಯನ್ನು ಖರೀದಿಸಿದ್ದರು. ಈ ಮನೆಯನ್ನು…

Read More

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ

ಮುಂದುವರಿದ ಭಾರಿ ಮಳೆ : ಹೊಸನಗರ , ಸಾಗರ ಮತ್ತು ತೀರ್ಥಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ಇಂದು (29-08-2025) ರಜೆ ಘೋಷಣೆ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆ ಹಾಗೂ ಪಿಯುಸಿ ಕಾಲೇಜಿಗೆ ಮಾತ್ರ ಅನ್ವಯಿಸುವಂತೆ ಇಂದು (ಆಗಸ್ಟ್ 29, ಗುರುವಾರ) ರಜೆ ಘೋಷಿಸಲಾಗಿದೆ. ಸಾಗರ ತಹಶೀಲ್ದಾರ್ ಹಾಗೂ ಹೊಸನಗರದ ತಹಸೀಲ್ದಾರ್ ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂದು ತಾಲೂಕಿನಾದ್ಯಂತ…

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ

ಗಣೇಶೋತ್ಸವ ,ಈದ್ ಮಿಲಾದ್ ಹಿನ್ನಲೆ – ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ ರಿಪ್ಪನ್‌ಪೇಟೆ : ಮುಂಬರುವ ಗಣೇಶ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF), ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಹಾಗೂ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ಶಿವಮೊಗ್ಗ ರಸ್ತೆಯಿಂದ ಪ್ರಾರಂಭಗೊಂಡ ಈ ಪಥಸಂಚಲನ ವಿನಾಯಕ ವೃತ್ತ ಸೇರಿ ಪಟ್ಟಣದ ನಾಲ್ಕು…

Read More
Exit mobile version