Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ

ಬಸ್ಸು ಚಲಿಸುತ್ತಿರುವಾಗಲೇ ತುಂಡಾಗಿ ಬಿದ್ದ ವಿದ್ಯುತ್ ತಂತಿ – ತಪ್ಪಿದ ಭಾರೀ ಅನಾಹುತ ಬಸ್ಸು ಚಲಿಸುತ್ತಿರುವಾಗಲೇ ವಿದ್ಯುತ್ ತಂತಿ ತುಂಡಾಗಿ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹನಿಯ ಬಳಿ ನಡೆದಿದೆ. ನಗರ ಕಡೆಯಿಂದ ಹೊಸನಗರ ಕಡೆ ದುರ್ಗಾಂಬ ಖಾಸಗಿ ಬಸ್ಸು ಹೋಗುತ್ತಿರುವಾಗ ವಿದ್ಯುತ್ ತಂತಿ ಬಿದ್ದಿದೆ. ಈ ವೇಳೆ ಚಾಲಕ ಸೇರಿದಂತೆ ಪ್ರಯಾಣಿಕರು ಆತಂಕಗೊಳ್ಳುವಂತಾಗಿತ್ತು. ಆದರೆ ವಿದ್ಯುತ್ ಇಲ್ಲದ ಕಾರಣ ಯಾವುದೇ ಅನಾಹುತವಾಗಿಲ್ಲ, ಒಂದು ವೇಳೆ ಈ ಸಂಧರ್ಭದಲ್ಲಿ ವಿದ್ಯುತ್ ಇದ್ದಿದ್ದರೆ ಭಾರಿ ಅನಾಹುತವಾಗುವ…

Read More

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ

ಮದ್ಯಪಾನ ಮಾಡಿ ಅಂಬುಲೆನ್ಸ್ ಚಾಲನೆ – ಡ್ರೈವರ್ ಗೆ ಬಿತ್ತು ಭಾರಿ ದಂಡ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಮತ್ತೊಂದು ಪ್ರಕರಣದಲ್ಲಿ ದುಬಾರಿ ದಂಡ ವಿಧಿಸಿದ್ಧಾರೆ. ಇತ್ತೀಚೆಗೆಷ್ಟೆ ಕಾರು ಮಾಲೀಕರೊಬ್ಬರಿಗೆ ವಿವಿಧ ಪ್ರಕರಣಗಳಲ್ಲಿ ಕಾಯ್ದೆ ಉಲ್ಲಂಘಿಸಿದ ಆರೋಪದ ಅಡಿಯಲ್ಲಿ 27 ಸಾವಿರ ದಂಡ ವಿಧಿಸಿದ್ದ  ಟ್ರಾಫಿಕ್ ಪೊಲೀಶರು ನಿನ್ನೆ ಅಂದರೆ ದಿನಾಂಕ ಜೂನ್ 23, 2025 ರಂದು   ವಾಹನ ತಪಾಸಣೆ ವೇಳೆ, ಆಂಬುಲೆನ್ಸ್  ಚಾಲಕನಿಗೆ ಡ್ರಂಕ್ & ಡ್ರೈವ್ ಆರೋಪದ ಅಡಿಯಲ್ಲಿ ಕೋರ್ಟ್ ಮೂಲಕ 13,000 ರೂಪಾಯಿ ದಂಡ…

Read More

ಲೈಂಗಿಕ ಕಿರುಕುಳದ ಆರೋಪ : ಮೆಗ್ಗಾನ್ ಭೋಧನಾ ಆಸ್ಪತ್ರೆಯ ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ

ಲೈಂಗಿಕ ಕಿರುಕುಳದ ಆರೋಪ: ಸಹ ಪ್ರಾಧ್ಯಾಪಕನನ್ನು ಬಂಧಿಸಿ, ಕ್ರಮ ಜರುಗಿಸಲು ಆಗ್ರಹ ಶಿವಮೊಗ್ಗ: ನಗರದ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ|| ಅಶ್ವಿನ್ ಹೆಬ್ಬಾರ್  ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ  ಆರೋಪದ ಹಿನ್ನೆಲೆಯಲ್ಲಿ  ಅವರನ್ನು ಬಂಧಿಸಿ ಕ್ರಮ ಜರುಗಿಸಬೇಕೆಂದು ಪೀಪಲ್ ಲಾಯರ್ಸ್ ಗೀಲ್ಡ್‌ನ ಮುಖ್ಯಸ್ಥ ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ. ಬುಧವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಕರಣ ದಾಖಲಾಗುತ್ತಿದ್ದಂತೆ ಡಾ|| ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಆತನನ್ನು ಹುಡುಕಿ ಬಂಧಿಸಬೇಕು. ಪೊಲೀಸರು ಕೂಡ ಸುಮ್ಮನಿದ್ದಾರೆ. ಜಿಲ್ಲಾಧಿಕಾರಿ ಮತ್ತು…

Read More

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಭಾರಿ ಮಳೆಯ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಹೊಸನಗರ ತಾಲ್ಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವ ಇಂದು (ಜೂ.25) ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲೂಕಿನಾದ್ಯಂತ ಜೂ. 25 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ಈ ದಿನದಂದು ರಜೆ ಘೋಷಿಸಲಾಗಿದೆ…

Read More

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!

ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ

RIPPONPETE | ಹಾರೋಹಿತ್ಲು ಗ್ರಾಮದಲ್ಲಿ ಕಾಣಿಸಿಕೊಂಡ ಅಳಿವಿನಂಚಿನಲ್ಲಿರುವ ಹಾರುವ ಓತಿ ರಿಪ್ಪನ್ ಪೇಟೆ : ಅಳಿವಿನಂಚಿನಲ್ಲಿರುವ ಅಪರೂಪದ ಜೀವಿ ಹಾರುವ ಓತಿ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಹಾರೋಹಿತ್ತಲು ಗ್ರಾಮದಲ್ಲಿ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಶಿಕ್ಷಕ ಮಾಲತೇಶ್ ಅವರ ಮನೆ ಸಮೀಪ ಕಾಣಿಸಿಕೊಂಡ ಓತಿ ಕೆಲಕಾಲ ಮಕ್ಕಳು ಮತ್ತು ಹಿರಿಯರಿಗೆ ಆಕರ್ಷಣೀಯವಾಗಿದ್ದು, ತನ್ನ ವಿಶಿಷ್ಟ ಸೌಂದರ್ಯದ ದರ್ಶನ ನೀಡಿತು. ಜನರ ಸದ್ದು ಗದ್ದಲ ಹೆಚ್ಚಾಗುತ್ತಿದ್ದಂತೆ ತನಗೆ ಪ್ರಾಶಸ್ಯವಾದ ಅಡವಿಯನ್ನು ಸೇರಿಕೊಂಡಿತು. ಸರಿಸೃಪಗಳ ಪ್ರಭೇದಕ್ಕೆ ಸೇರಿರುವ ಈ…

Read More

RIPPONPETE |ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ

ಗ್ರಾಮ ಒನ್ ಕೇಂದ್ರದಲ್ಲಿ ಸೇವೆಗಳಿಗೆ ಹೆಚ್ಚುವರಿ ಹಣ ವಸೂಲಿ – ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ, ಸೂಕ್ತ ಕ್ರಮದ ಭರವಸೆ ರಿಪ್ಪನ್ ಪೇಟೆ : ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಇಂತಹ ಆಘಾತಕಾರಿ ಘಟನೆಯೊಂದು ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಗ್ರಾಮ ಒನ್ ಕೇಂದ್ರದಲ್ಲಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪತ್ರಕರ್ತ ರಫ಼ಿ ರಿಪ್ಪನ್ ಪೇಟೆ…

Read More

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ

RIPPONPETE | ರಸಗೊಬ್ಬರ ದರ ಹೆಚ್ಚಳ ವಿರೋಧಿಸಿ ಯುವ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ , ಪ್ರತಿಭಟನೆ ರಿಪ್ಪನ್ ಪೇಟೆ : ಕೇಂದ್ರದ ಬಿಜೆಪಿ ಸರ್ಕಾರ ರಸಗೊಬ್ಬರ ಬೆಲೆ ಏರಿಸಿರುವುದನ್ನು ವಿರೋಧಿಸಿ ಇಂದು ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ ಮಾತನಾಡಿ, ಕೇಂದ್ರದ ಜನವಿರೋಧಿ ನೀತಿಯಿಂದಾಗಿ ಗೊಬ್ಬರ, ಗ್ಯಾಸ್ ಇಂಧನ…

Read More

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

ಹೊಸನಗರ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ಹೊಸನಗರ: ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30 ರಿಂದ 35 ಕಿಮೀ ಸಂಚರಿಸಿ ಬಳಿಕ ರಾತ್ರಿ ಕಚೇರಿ ಎದುರು ಭಾಗದಲ್ಲಿ ಲಾರಿ ನಿಲ್ಲಿಸಲಾಗಿತ್ತು. ಬೆಳಿಗ್ಗೆ ಎಂದಿನಂತೆ ಲಾರಿ ಚಾಲನೆಗೆ ಮುಂದಾದಾಗ ಡೀಸೆಲ್‌ ಖಾಲಿ ಆಗಿರುವುದು ಬೆಳಕಿಗೆ ಬಂದಿದೆ. ಕೆಎ…

Read More