ಕ್ರೈಂ ಸುದ್ದಿ:
ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara
ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…
Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…
Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!
Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…
ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ |honey trap
ವಾಟ್ಸಾಪ್ ನಲ್ಲಿ ಬೆತ್ತಲಾಗಿ ಹಣಕ್ಕಾಗಿ ಬೇಡಿಕೆ ಇಟ್ಟ ಸುಂದರಿ – ಹಣ ಕೊಡದಿದ್ದಕ್ಕೆ ಕಿಡ್ನಾಪ್ : ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಐವರ ಬಂಧನ ಶಿವಮೊಗ್ಗ : ಹನಿ ಟ್ರ್ಯಾಪ್(Honey trap) ಮೂಲಕ ಹಣಕ್ಕೆ ಬೇಡಿಕೆಯಿಡುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಭದ್ರಾವತಿ(bhadravathi) ಹೊಸಮನೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮದುವೆ ನಿಶ್ಚಯವಾಗಿದ್ದ ಭದ್ರಾವತಿ ಮೂಲದ ಯುವಕನಿಗೆ ವಾಟ್ಸಾಪ್(Whatsup) ನಲ್ಲಿ ಬೆತ್ತಲೆ ಕರೆ ಮಾಡಿ ಅದನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬೇಡಿಕೆಯಿಟ್ಟು ನಂತರ ಕಿಡ್ನಾಪ್(kidnap) ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದರು.ಈ ಹಿನ್ನಲೆಯಲ್ಲಿ ಭದ್ರಾವತಿ…
ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident
ಕೋಡೂರಿನಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕಾಂತಾರ ಹೋಟೆಲ್ ಬಳಿ ನಡೆದಿದೆ. ಕೋಡೂರಿನ ಕಾಂತಾರ ಹೋಟೆಲ್ ಸಮೀಪದಲ್ಲಿ ಈ ಘಟನೆ ನಡೆದಿದ್ದು ಲಿಂಗಪ್ಪ ಕುನ್ನೂರು(55) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಗಂಭೀರ ಗಾಯಗೊಂಡಿದ್ದ ಗಾಯಾಳುವನ್ನು ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಹೊಸನಗರ ಕಡೆಯಿಂದ ಕೋಡೂರು ಕಡೆಗೆ ತೆರಳುತಿದ್ದ ಟಿವಿಎಸ್ ಎಕ್ಸೆಲ್ ಮತ್ತು ಕೋಡೂರು…
Thirthahalli | ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ
ಕುಪ್ಪಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ ತೀರ್ಥಹಳ್ಳಿ : ಅತೀ ವೇಗವಾಗಿ ಚಲಾಯಿಸಿದ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದಲ್ಲಿ ನೆಡೆದಿದೆ. ಕೊಪ್ಪದಿಂದ ತೀರ್ಥಹಳ್ಳಿ ಕಡೆಗೆ ಬರುತಿದ್ದ ಹ್ಯುಂಡಾಯ್ i 20 ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದಿದೆ. ಕಾರಿನಲ್ಲಿ ಚಾಲಕನೊಬ್ಬನೆ ಇದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ಜಖಂ ಆಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…
Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು
Missing | ಐವರು ಮಕ್ಕಳು ಓರ್ವ ಮಹಿಳೆ ನಾಪತ್ತೆ – ದೂರು ದಾಖಲು ಶಿವಮೊಗ್ಗ(shivamogga) ಜಿಲ್ಲೆ ಭದ್ರಾವತಿ ತಾಲ್ಲೂಕು ಭದ್ರಾವತಿ ಓಲ್ಡ್ ಟೌನ್(old town) ವ್ಯಾಪ್ತಿಯಲ್ಲಿ ಐವರು ಮಕ್ಕಳು ಸೇರಿದಂತೆ ಒರ್ವ ಮಹಿಳೆ ಮಿಸ್ಸಿಂಗ್(missing) ಆಗಿರುವ ಬಗ್ಗೆ ವರದಿಯಾಗಿದೆ. ಕಳೆದ ನವೆಂಬರ್ 11 ರಂದು ಕಾಣೆಯಾದ ಪ್ರಕರಣದ ಬಗ್ಗೆ ನವೆಂಬರ್ 15 ರಂದು ಸಂಜೆ ಎರಡು ದೂರು ದಾಖಲಾಗಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.. ಇಲ್ಲಿನ ಅನ್ವರ್ ಕಾಲೋನಿಯ ನೆರೆಹೊರೆಯ ಐವರು ಕಾಣೆಯಾಗಿದ್ದಾರೆ. ಓಲ್ಡ್ ಟೌನ್ ಪೊಲೀಸ್…
Accident | ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ
ಚಲಿಸುತಿದ್ದ ಬಸ್ಸಿನಿಂದ ಬಿದ್ದು ಯುವಕ ಗಂಭೀರ – ಮಣಿಪಾಲ್ ಗೆ ರವಾನೆ ತೀರ್ಥಹಳ್ಳಿ: ಪಟ್ಟಣದ ಆಗುಂಬೆ ರಸ್ತೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ ಹೋಟೆಲ್ ಸಮೀಪ ಚಲಿಸುತಿದ್ದ ಬಸ್ ನಿಂದ ಯುವಕ ಕೆಳಗೆ ಬಿದ್ದು ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಕಲ್ಮನೆ ಸಮೀಪದ ಹೆಗ್ಗೋಡಿನ ಯುವಕನಿಗೆ ಗಂಭೀರ ಗಾಯವಾಗಿದೆ.ಬೆಳಗ್ಗೆ 9 ಗಂಟೆ ಹೊತ್ತಿಗೆ ಬಸ್ಸಿನಿಂದ ಬರುವಾಗ ಡೋರ್ ಸೈಡಿನಲ್ಲಿ ನೇತಾಡಿಕೊಂಡು ಬರುತ್ತಿದ್ದಾಗ ಪೊಲೀಸ್ ಬ್ಯಾರಿಕೇಡ್ ತಲೆಗೆ ಹೊಡೆದು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ. ಗಾಯಗೊಂಡ…
Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ
Ripponpet | ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಹಾರಿದ ಕಾರು – ತಪ್ಪಿದ ಭಾರಿ ಅನಾಹುತ ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಪಟ್ಟಣದ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಬೆಂಗಳೂರಿನಿಂದ ರಿಪ್ಪನ್ಪೇಟೆ ಮಾರ್ಗವಾಗಿ ಸೊನಲೆಗೆ ತೆರಳುತಿದ್ದಾಗ ತಾವರೆಕೆರೆಯ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಉರುಳಿ ಬಿದ್ದಿದೆ. ಕಾರಿನಲ್ಲಿ ಸೊನಲೆ ಮೂಲದ ಸುರೇಶ್ ಹಾಗೂ ಅವರ ಪತ್ನಿ ಮತ್ತು…
Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!!
Hosanagara | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ..!! ಹೊಸನಗರ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪಿಎಸ್ಐ ಶಿವಾನಂದ್ ವೈ ಕೆ ರವರ ನೇತೃತ್ವದಲ್ಲಿ ಸಿಬ್ಬಂದಿಗಳ ತಂಡ ಶುಕ್ರವಾರ ರಾತ್ರಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಿಲ್ಲೋಡಿ ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ…