ಕ್ರೈಂ ಸುದ್ದಿ:
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಅದಿರು ತುಂಬಿದ ಲಾರಿ|accident
ಚಾಲಕನ ನಿಯಂತ್ರಣ ತಪ್ಪಿ ಅದಿರು ತುಂಬಿದ ಲಾರಿಯೊದು ಮರಕ್ಕೆ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸಿಡಿಹಳ್ಳ ಸೇತುವೆ ಸಮೀಪದಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಸಿಡಿಹಳ್ಳ ಸಮೀಪದಲ್ಲಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ನಿದ್ರೆಯ ಮಂಪರಿನಿಂದ ಅಪಘಾತವಾಗಿರಬಹುದು ಎನ್ನಲಾಗುತ್ತಿದೆ. ಅಪಘಾತದ ರಭಸಕ್ಕೆ ಲಾರಿ ಸಂಪೂ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news
ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…
ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ
ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…
ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident
ಲಾರಿ ಪಲ್ಟಿ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಅರಸಾಳು 9Ms ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 16 ಚಕ್ರದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಕೆಎ -35 ಡಿ.2643 ನೇ ನಂಬರಿನ 16 ಚಕ್ರದ ಲಾರಿ ಕೋಕ್ ನ್ನು ಲೋಡು ಮಾಡಿಕೊಂಡು ರಾತ್ರಿ 12-00 ಗಂಟೆಗೆ ಹೊಸನಗರ- ಆಯನೂರು ರಸ್ತೆ ಸೂಡೂರು ರೈಲ್ವೆ ಗೇಟ್ ಹಿಂದೆ 9 ಎಂ.ಎಸ್. ಕಾಸ್ ಹತ್ತಿರ ಚಾಲಕ ಲಾರಿಯನ್ನು ಅತಿವೇಗವಾಗಿ ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಎದುರು ಭಾಗ ಯಾವುದೋ ವಾಹನ…
ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested
ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್ ಪಿ ಮಿಥುನ್ ಕುಮಾರ್ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…
KSRTC ಬಸ್ ಹಾಗೂ ಬೈಕ್ ನಡುವೆ ಅಫಘಾತ – ಯುವಕ ಸ್ಥಳದಲ್ಲಿಯೇ ಸಾವು|
ಶಿಕಾರಿಪುರ : ಕೆಎಸ್ಆರ್ಟಿಸಿ ಡಿಪೋ ಮುಂಭಾಗ ಅಪಘಾತ – ಯುವಕ ಬಲಿ..! ಶಿಕಾರಿಪುರ ಪಟ್ಟಣದ ಹೊರವಲಯದ ಕೆಎಸ್ ಆರ್ ಟಿಸಿ ಡಿಪೋ ಎದುರು ಒಂದೇ ವಾರದಲ್ಲಿ ಎರಡನೇ ಅಪಘಾತವಾಗಿದ್ದು 2ನೇ ಬಲಿಯಾಗಿದೆ. ಹೌದು ಶಿಕಾರಿಪುರ ಪಟ್ಟಣ ಹೊರವಲಯದಲ್ಲಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಡಿಪೋ ಎದುರು ಕಳೆದ ಎರಡು ದಿನಗಳ ಹಿಂದೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿಯಾಗಿ ಒರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದರು.ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದರು ಆ ಘಟನೆ ಮಾಸುವ ಮುನ್ನ ಇನ್ನೋಂದು ಅಪಘಾತವಾಗಿದೆ….
ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ ಬಂಧನ|theft
ಜೆಸಿಬಿ ಬಳಸಿ ಎಟಿಎಂ ದರೋಡೆಗೆ ಯತ್ನ ಪ್ರಕರಣ – ಶಿಕಾರಿಪುರದ ಆರೋಪಿಗಳು ಸುರತ್ಕಲ್ ನಲ್ಲಿ ಬಂಧನ|theft ಶಿವಮೊಗ್ಗದ ವಿನೋಬನಗರ ಸಮೀಪ ಜೆಸಿಬಿ ಮೂಲಕ ಎಟಿಎಂ ವೊಂದನ್ನ ದರೋಡೆ ಮಾಡಲು ಯತ್ನಿಸಿದ ಪ್ರಕರಣವೊಂದು ನಡೆದಿತ್ತು. ಈ ಪ್ರಕರಣದ ಆರೋಪಿಗಳು ಯಾರು ಎಂಬು ಕುತೂಹಲ ಮೂಡಿಸಿತ್ತು. ಇದೀಗ ಪ್ರಕರಣ ಬಯಲಾಗಿದೆ. ಆದರೆ ಪ್ರಕರಣ ಬಯಲಾಗಿದ್ದು ಶಿವಮೊಗ್ಗದಲ್ಲಿ ಅಲ್ಲ, ಬದಲಾಗಿ ಸುರತ್ಕಲ್ನಲ್ಲಿ. ಹೌದು, ಸುರತ್ಕಲ್ (Suratkal) ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಲೂಟಿ ಮಾಡುವ ಪ್ರಯತ್ನವೊಂದು ನಡೆದಿತ್ತ. ಈ ATM Robbery…
ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!!|pocso
ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ! ಶಿಕಾರಿಪುರ : ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಿಕಾರಿಪುರದ ಅಜಮತ್ತುಲ್ಲಾ ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದಾನೆ. ದೌರ್ಜನ್ಯಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ವೈದ್ಯರ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದು ಶಿರಾಳಕೊಪ್ಪ…
ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?|kimmane
ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !? ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ…