ಕ್ರೈಂ ಸುದ್ದಿ:
ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested
ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್ ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…
ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt
ಸೊರಬ: ರೈತನೊರ್ವ ಸಾಲಬಾಧೆಯಿಂದ ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….
ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime
ಶಿವಮೊಗ್ಗ: ರೌಡಿಶೀಟರ್ ಮುಜೀಬ್ (32) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದ. ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು ಮಗುವಿದೆ. ನಿನ್ನೆ ರಾತ್ರಿ 12…
ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…
ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso
ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.
ಶಾಲಾ ಮೈದಾನದಲ್ಲಿ ಜೂಜಾಟ – ಹತ್ತು ಮಂದಿ ವಶಕ್ಕೆ|arrested
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ, ಜೂಜಿನಲ್ಲಿ ತೊಡಗಿದ್ದ ಆರೋಪದ ಮೇರೆಗೆ 10 ಜನರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಬಂಧಿತರಿಂದ 25,300 ರೂ.ಹಾಗೂ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ರಂಗನಾಥ್, ಗಾದಿ ಲಿಂಗಪ್ಪ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು….
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಅಪಹರಣ ಪ್ರಕರಣ – ಯುವಜೋಡಿಯ ಪೂರ್ವನಿಯೋಜಿತ ಕೃತ್ಯ|kidnap
ಶಿವಮೊಗ್ಗ : ರಾಜ್ಯಾದ್ಯಂತ ಸಂಚಲನ ಸೃಷ್ಠಿ ಮಾಡಿದ್ದ ಶಿವಮೊಗ್ಗದ ಬಸ್ ನಿಲ್ದಾಣದ ಬಳಿ ಯುವತಿಯನ್ನ ಅಪಹರಿಸಲಾದ ಪ್ರಕರಣ ಪೊಲೀಸ್ ಠಾಣೆಯಲ್ಲಿ ಸುಖಾಂತ್ಯಗೊಂಡಿದೆ. ಘಟನೆ ಹಿನ್ನಲೆ ಏನು? ಸೋಮವಾರ ಬೆಳಗ್ಗೆ ತಾಯಿಯೊಂದಿಗೆ ಸಾಗರಕ್ಕೆ ಪೂಜೆಗೆಂದು ಶಿವಮೊಗ್ಗ ಬಸ್ ನಿಲ್ದಾಣದ ಬಳಿ ತಾಯಿ ಮಗಳು ನಡೆದುಕೊಂಡು ಹೋಗುತ್ತಿದ್ದ ವೇಳೆ ಇನ್ನೋವಾ ಕಾರೊಂದರಲ್ಲಿ ಬಂದ ಪತಿ ತನ್ನ ಪತ್ನಿಯನ್ನೇ ಅಪಹರಣ ಮಾಡಿದ್ದಾನೆ ಎಂಬ ಸುದ್ದಿ ಎಲ್ಲಡೆ ಹರಡಿತ್ತು. ಈ ವಿಚಾರವಾಗಿ ದೊಡ್ಡಪೇಟೆ ಠಾಣೆ ಮೆಟ್ಟಿಲು ಹತ್ತಿದ ತಾಯಿ ಪ್ರಕರಣ ದಾಖಲಿಸಿದ್ದರು. ಈ…
ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ|accident
ಮೇಗರವಳ್ಳಿ ಬಳಿ ಬಸ್-ಕಾರು ಆಫಘಾತ – ಓರ್ವನಿಗೆ ಗಂಭೀರ ಗಾಯ ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿ ಸಮೀಪದ ಕೊಳಿಗೆ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಹಾಲಾಡಿ ಮೂಲ ಕುಟುಂಬ ಶಿವಮೊಗ್ಗ ಆಸ್ಪತ್ರೆಗೆ ಕಾರಿನಲ್ಲಿ ಹೋಗುತ್ತಿರುವಾಗ ತೀರ್ಥಹಳ್ಳಿಯಿಂದ ಬಿದಿರು ಗೋಡು ಕಡೆಗೆ ಹೋಗುತ್ತಿರುವ ಖಾಸಗಿ ಬಸ್ ಕಾರಿಗೆ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ ಅವರನ್ನ ತೀರ್ಥಹಳ್ಳಿ…
ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested
ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – 22 ವರ್ಷದ ಯುವಕನಿಗೆ 10 ವರ್ಷ ಶಿಕ್ಷೆ,ಒಂದೂವರೆ ಲಕ್ಷ ದಂಡ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನಲ್ಲಿ ನಡೆದಿದ್ದ, ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ 10 ವರ್ಷ ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. 2022ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 22 ವರ್ಷದ ವ್ಯಕ್ತಿಯೊಬ್ಬನು, 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ಕೇಸ್ ದಾಖಲಾಗಿತ್ತು. ಈ ಸಂಬಂಧ , ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ತನಿಖೆ ಕೈಗೊಂಡಿದ್ದು, ಚಾರ್ಜ್ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು…