ಕ್ರೈಂ ಸುದ್ದಿ:
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ|crime news
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ ಶಿವಮೊಗ್ಗ : ರಸ್ತೆಯಲ್ಲಿ ನಡೆದುಕೊಂಡು ಹೋಗುತಿದ್ದ ಮಹಿಳೆಗೆ ದುಷ್ಕರ್ಮಿಯೊಬ್ಬ ಚಾಕು ಇರಿದ ಘಟನೆ ಕೆ.ಆರ್.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು…
ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident
ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…
ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ|arrested
ತೀರ್ಥಹಳ್ಳಿ : ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರ ಬಂಧನ ತೀರ್ಥಹಳ್ಳಿ: ಪಟ್ಟಣದ ಎಡೆಹಳ್ಳಿ ಕೆರೆ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಡೆಹಳ್ಳಿ ಕೆರೆ ಸರ್ಕಲ್ ಹತ್ತಿರ ಯಾರೋ ಎರಡು ಜನ ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿವೈಎಸ್ಪಿ ಗಜಾನನ ವಾಮನ ಸುತಾರ ರವರ ನೇತೃತ್ವದಲ್ಲಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಗಾಂಜಾ ಮಾರಾಟ ಮಾಡುತಿದ್ದ ಸಂಜಯ್ ಮತ್ತು ಸುದೀಪ್….
ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested
ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…
ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news
ಹಳೇ ದ್ವೇಷದ ಹಿನ್ನಲೆ ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ – ಅಪರಾಧಿಗೆ ಜೀವಾವಧಿ ಶಿಕ್ಷೆ|crime news ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ…
ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ
ಅಕ್ರಮ ಮರಳು ಸಾಗಾಣಿಕೆ: 2 ಟಿಪ್ಪರ್ ವಶ ಹೊಸನಗರ: ಖಚಿತ ಮಾಹಿತಿ ಮೇರೆಗೆ ನಗರ ವಲಯ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ನಗರ ವಲಯ ಅರಣ್ಯಾಧಿಕಾರಿ ಬಿ.ಎಸ್.ಸಂಜಯ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಸುತ್ತ ಗ್ರಾಮದ ಶರಾವತಿ ನದಿಯಿಂದ ಮರಳು ಸಾಗಣೆಕೆ ಮುಂದಾಗಿದ್ದ, ಟಿಪ್ಪರ್ ಚಾಲಕ ಜಯನಗರ ಪುನೀತ್ ಹಾಗೂ ಗೊರಗೋಡು ಮನುಜಿತ್ ವಿರುದ್ದ ಪ್ರಕರಣ ದಾಖಲಾಗಿದೆ.. ಕಾರ್ಯಚರಣೆ ಯಲ್ಲಿ ಉಪವಲಯ…
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested
ರಿಪ್ಪನ್ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…
ಐತಿಹಾಸಿಕ ಚಂದ್ರಗುತ್ತಿ ದೇವಸ್ಥಾನದಲ್ಲಿನ ಕಳ್ಳತನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮೂವರ ಬಂಧನ|CHANDRAGUTTI
SORABA : ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ನಡೆದ ಕಳ್ಳತನ ಯತ್ನ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಹೆಸರಿಗೆ ಕಳಂಕ ತರುವ ಉದ್ದೇಶದಿಂದ ಆರೋಪಿಗಳು ಕೃತ್ಯ ಎಸಗಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ.3ರಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿತ್ತು. ಹುಂಡಿ ಒಡೆಯುವ ಪ್ರಯತ್ನವಾಗಿತ್ತು. ದೇವರ ಬೆಳ್ಳಿಯ ಮುಖವಾಡವನ್ನು ಕಳಚಲಾಗಿತ್ತು. ಇದು ಭಕ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ…
ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid
ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ. ಎಸ್ಪಿ ಮಿಥುನ್ ಕುಮಾರ್ ಹಾಗೂ ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ…
ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news
ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….