Headlines

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಸ್ಥಳದಲ್ಲೆ ಇಬ್ಬರು ಸಾವು

ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಂದು ಮುಂಜಾನೆ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಚೇನಹಳ್ಳಿ ಡೈರಿ ಸಮೀಪ ನಡೆದ ಭೀಕರ ಅಪಘಾತದಲ್ಲಿ ಬೆಳ್ಳಂಬೆಳಗ್ಗೆಯೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗದಿಂದ ಭದ್ರಾವತಿ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗದ ಕಡೆಗೆ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ದಾಟಿ ಭದ್ರಾವತಿ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದಾಗಿ…

Read More

ಸಾಗರ: ನಿಗೂಢವಾಗಿ ಕಣ್ಮರೆಯಾಗಿದ್ದ “”ಪ್ರಕಾಶ್ ಟ್ರಾವೆಲ್ಸ್” ಮಾಲೀಕ ಶವವಾಗಿ ಪತ್ತೆ! ನಿಜಕ್ಕೂ ಇದು ಆತ್ಮಹತ್ಯೆಯೇ…? “ಪಟಗುಪ್ಪೆ” ಸುತ್ತಾ, ಈಗ ಅನುಮಾನದ ಹುತ್ತ…!

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ರವರ ಅಳಿಯ ಕಾಫೀ ಡೇ ಸಿದ್ಧಾರ್ಥ್ ಆತ್ಮಹತ್ಯೆಯ ಪ್ರಕರಣದಂತೆಯೇ ಸಾಗರದ ಪ್ರಕಾಶ್ ಟ್ರಾವೆಲ್ಸ್ ನ ಮಾಲೀಕರಾದ ಪ್ರಕಾಶ್ ರವರ ನಿಗೂಢ ನಾಪತ್ತೆ ಪ್ರಕರಣವೂ ಸಹ ನೋಡಲು ಒಂದೇ ರೀತಿಯಾಗಿ ಕಾಣುತ್ತಿದೆ! ಯಾಕಂದ್ರೇ, ಎಲ್ ಎನ್ ಟಿ ಇನ್ನಿತರೆ ತೀರಾ ಟಾರ್ಚರ್ ಕೊಡುವ ಸಂಸ್ಥೆಗಳಿಂದ ಸಾವಿರಾರು ಕೋಟಿ ರೂಪಾಯಿಗಳ ಸಾಲ ಮಾಡಿಕೊಂಡಿದ್ದ ಸಿದ್ಧಾರ್ಥ್ ರವರು ದಿಕ್ಕೇ ಕಾಣದಂತಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು, ಇದೇ ಪ್ರಕರಣದಂತೆಯೆ ಪ್ರಕಾಶ್ ರವರು ಸಹ ಸಾಲ ಸೋಲಕ್ಕೆ ಅಂಜಿ…

Read More

ಶವವಾಗಿ ಪತ್ತೆಯಾದ ಪ್ರಕಾಶ್ ಟ್ರಾವೆಲ್ಸ್ ಮಾಲೀಕ : ಸತತ ಮೂರು ದಿನಗಳ ಕಾರ್ಯಾಚರಣೆ ನಂತರ ಪತ್ತೆ

ಸಾಗರದ ಪ್ರಕಾಶ್ ಟ್ರಾವೆಲ್ಸ್ ಮಾಲಿಕ ಪ್ರಕಾಶ್ ರವರ ಶವ ಕೊನೆಗೂ ಪಟಗುಪ್ಪ ಹೊಳೆಯಲ್ಲಿ  ಪತ್ತೆಯಾಗಿದೆ. ಕಳೆದ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಪ್ರಕಾಶ್,ಶನಿವಾರ ಅವರ ಮೊಬೈಲ್ ಹಾಗೂ ಕಾರು ಪಟಗುಪ್ಪೆ ಸೇತುವೆ ಬಳಿ ಪತ್ತೆಯಾಗಿದ್ದವು.ಕೂಡಲೇ ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದ ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ಶೋಧ ಕಾರ್ಯ ನಡೆದಿತ್ತು.ಆದರೆ ಮೂರು ದಿನ ಸತತವಾಗಿ ಶೋಧ ಕಾರ್ಯ ನಡೆಸಿದರು ಪತ್ತೆಯಾಗಿರಲಿಲ್ಲ. ಸೋಮವಾರ ಬೆಳ್ಳಗ್ಗೆ ಪ್ರಕಾಶ್ ಅವರ ಶವ ಪಟಗುಪ್ಪೆ ಹೊಳೆಯಲ್ಲಿಯೇ ಪತ್ತೆಯಾಗಿದೆ. ಅವರ ಹಿತೈಷಿಗಳು ಮತ್ತು ಕುಟುಂಬಸ್ಥರು ಈ ಪ್ರಕರಣದ ಹಿಂದೆ…

Read More

ಬೈಕ್ ಅಪಘಾತ : ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.  ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ. ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್…

Read More

ಅನಾರೋಗ್ಯ ಹಿನ್ನಲೆ : SSLC ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸನಗರ ಪಟ್ಟಣದ ಮಾರಿಗುಡ್ಡದಲ್ಲಿ ಮನೆಯೊಂದರಲ್ಲಿ ವಾಸವಾಗಿರುವ ತಾಲೂಕಿನ ಅರೋಡಿ ಕೊಡಸೆಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮಂಜುಳಾ ರವರ ಪುತ್ರಿ ಶಮಾ ಎಲ್ ಬಂಡಿ (15) ತನ್ನ ತಾಯಿಯನ್ನು ಮಾರ್ನಿಂಗ್ ಕ್ಲಾಸ್ ಡ್ಯೂಟಿಗೆ ಕಳುಹಿಸಿ ಮನೆಗೆ ಬಂದು ನೇಣಿಗೆ ಶರಣಾದ ದುರಂತ ಘಟನೆ ಇಂದು ಬೆಳಗ್ಗೆ ಸುಮಾರು 10 ಗಂಟೆ ಸಮಯದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಶಮಾ ಪಟ್ಟಣದ ಶ್ರೀರಾಮಕೃಷ್ಣ ವಿದ್ಯಾಲಯದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿದ್ದು ಕಳೆದ ಕೆಲ ಸಮಯದಿಂದ ಆಕೆ ಅನಾರೋಗ್ಯ ಪೀಡಿತಳಾಗಿದ್ದಳು ಎಂದು ತಿಳಿದುಬಂದಿದೆ. ಮೃತ ವಿದ್ಯಾರ್ಥಿನಿಯ…

Read More

ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟ 5 ವರ್ಷದ ಪುಟ್ಟ ಮಗು :

ಕುಂಸಿ : ಟ್ರಾಕ್ಟರ್ ಚಾಲಕನ ಅಜಾಗರುಕತೆಯಿಂದ 5 ವರ್ಷದ ಪುಟ್ಟ ಮಗುವು ತನ್ನ ಪೋಷಕರ ಎದುರೇ ಪ್ರಾಣ ಬಿಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದಲ್ಲಿ ನಡೆದಿದೆ. ಹಾನಗಲ್ ತಾಲ್ಲೂಕಿನ ಮಾಸನಕಟ್ಟೆ ಗ್ರಾಮದಿಂದ ರಸ್ತೆ ಕಾಮಗಾರಿಗೆ ಇಮಾಮ್ ಸಾಬ್ ಕುಟುಂಬ ಕೆಲಸಕ್ಕೆಂದು ಆಯನೂರಿನ ಕುಂಸಿಯ ರೇಚಿಕೊಪ್ಪ ಗ್ರಾಮಕ್ಕೆ ಬಂದಿತ್ತು. ನಿನ್ನೆ ಮಧ್ಯಾಹ್ನ ಮಗುವನ್ನು ಜಮೀನಿನ ಪಕ್ಕದಲ್ಲಿ ಮಲಗಿಸಿ ಪೋಷಕರು ಅಲ್ಲೇ ಅಕ್ಕಪಕ್ಕದಲ್ಲಿ ಕೆಲಸ ಮಾಡುತ್ತಿದ್ದರು. ಮಗುವಿಗೆ ಬಿಸಿಲು ಆಗಬಾರದೆಂಬ ಉದ್ದೇಶದಿಂದ ಮಗುವಿನ ಮೇಲೆ ಟುವೆಲ್  ಹಾಸಲಾಗಿತ್ತು ಅದೇ…

Read More

ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಮೊಬೈಲ್ ನಲ್ಲಿ ಚಿತ್ರಿಕರಿಸಿ ಹರಿಬಿಟ್ಟಿದ್ದ ಆರೋಪಿಗಳ ಬಂಧನ

ಕಾಲೇಜು ಮುಗಿಸಿ ಮನೆಗೆ ಹೊರಟ್ಟಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಅತ್ಯಾಚಾರ ನಡೆಸಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋವನ್ನು ಚಿತ್ರೀಕರಿಸಿ ವಾಟ್ಸಾಪ್‌ನಲ್ಲಿ ಹರಿಬಿಟ್ಟಿದ್ದ ಆರೋಪಿಗಳನ್ನು ಹೊಸನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ 17 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ಜ.15 ರಂದು ಮಧ್ಯಾಹ್ನ ತನ್ನ ಗ್ರಾಮಕ್ಕೆ ಹೋಗಲು ಹೊಸನಗರ ಬಸ್ ನಿಲ್ದಾಣದ ಬಳಿ ನಿಂತಿದ್ದಾಗ, ಈ ಹಿಂದೆ ಬಾಲಕಿಯ ಮನೆಗೆ ಜೆಸಿಬಿ ಕೆಲಸಕ್ಕೆಂದು ಬರುತ್ತಿದ್ದ ಸಮಯದಲ್ಲಿ ಪರಿಚಯವಾಗಿದ್ದ ಸಂತೋಷ ಮತ್ತು ಸುನಿಲ್ ಇಬ್ಬರು ಬಾಲಕಿಯನ್ನು…

Read More

ಜಾತ್ರೆಗೆ ತೆರಳುವಾಗ ನಡೆಯಿತು ಭೀಕರ ಅಪಘಾತ : ನಾಲ್ವರು ಸ್ಥಳದಲ್ಲಿಯೇ ಸಾವು,ಏಳು ಜನ ಗಂಭೀರ

ಉಕ್ಕಡಗಾತ್ರಿ ಜಾತ್ರೆಗೆ ಹೊರಟಿದ್ದ ಶಿಕಾರಿಪುರದ ನಾಲ್ವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು 7 ಜನರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೆನಾಲ್ಟ್ ಕ್ವಿಡ್ ಮತ್ತು ಟಾಟಾ ಇಂಡಿಕಾ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಉಕ್ಕಡಗಾತ್ರಿಯ ಬಳಿಯ ಕಡೂರು ಕ್ರಾಸ್ ಬಳಿ ಲಾರಿಗೆ ಎರಡೂ ಕಾರುಗಳು ಡಿಕ್ಕಿ ಹೊಡೆದಿದೆ.  ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿದ್ದ 7 ಜನರನ್ನು ಶಿವಮೊಗ್ಗದ ಮೆಗ್ಗಾನ್ ಗೆ ದಾಖಲಿಸಲಾಗಿದೆ. ಶಿಕಾರಿಪುರ ತಾಲೂಕಿನ ಮಾಯತಮ್ಮನ ಮುಚೂಡಿಯ ಶಾಂತ(30), ಪೃಥ್ವಿ(12) ಕರ್ನಹಳ್ಳಿಯ ಸದಾ(10)ಮತ್ತಿಕೋಟೆಯ ಶಂಕರ ಗೌಡ(37), ಈ ನಾಲ್ವರೂ…

Read More

ಮಲೆನಾಡಲ್ಲೊಂದು ಹೃದಯವಿದ್ರಾವಕ ಘಟನೆ : ವ್ಯವಹಾರದಲ್ಲಿ ನಷ್ಟಕ್ಕೊಳಗಾದ ದಂಪತಿಗಳ ಆತ್ಮಹತ್ಯೆ

ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ. ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ‌. ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ…

Read More

ಕಾರು ಮರಕ್ಕೆ ಡಿಕ್ಕಿ : ಭೀಕರ ಅಪಘಾತದಲ್ಲಿ ಓರ್ವನ ಸಾವು

ಭದ್ರಾವತಿ : ಇಲ್ಲಿನ ಬಿ.ಹೆಚ್ ರಸ್ತೆಯಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಬಳಿ ಭೀಕರ ರಸ್ತೆ‌ ಅಪಘಾತ ಸಂಭವಿಸಿದ್ದು ಓರ್ವ ವ್ಯಕ್ತಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಮೂವರು ಪ್ರಯಾಣಿಕರು ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಂಚರಿಸುತ್ತಿದ್ದಾಗ ಭದ್ರಾವತಿಯ ಡಿಎಫ್ ಒ ಕಚೇರಿ ಮುಂಭಾಗದ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶರತ್ ಎಂಬುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಉಳಿದ ಪ್ರಯಾಣಿಕರಿಗೆ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳವಾರ ಮಧ್ಯಾಹ್ನ ರಾತ್ರಿ ಈ ಅವಘಢ ಸಂಭವಿಸಿದ್ದು…

Read More