ಕ್ರೈಂ ಸುದ್ದಿ:
ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident
ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…
ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಪ್ರಕರಣ – ಓರ್ವನ ಬಂಧನ|arrested
ತೀರ್ಥಹಳ್ಳಿ : ತರಕಾರಿ ಮಾರ್ಕೆಟ್ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಾರ್ಚ್ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್ ಬಳಿಯಲ್ಲಿ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…
ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death
ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ 7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ ಸಂತೋಷ್ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….
ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway
ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ. ರೈಲಿನಲ್ಲಿಯೇ ಶೌಚಾಲಯಕ್ಕೆ…
ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್ ಎಂದು ಗುರುತಿಸಲಾಗಿದೆ. ಮದ್ಯವ್ಯಸನಿಯಾಗಿದ್ದ ಪೂರ್ಣೇಶ್, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ. ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….
ರಿಪ್ಪನ್ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news
ರಿಪ್ಪನ್ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…
ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್
ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ. ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್ ಇಲಾಖೆ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…
ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.
ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news
ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ. ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…
ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ – ಎರಡು ತುಂಡಾದ ಬೊಲೆರೊ ಪಿಕಪ್,ಮೂವರಿಗೆ ಗಾಯ|accident
ಖಾಸಗಿ ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶರ್ಮಣ್ಯಾವತಿ ನರ್ಸರಿ ಹತ್ತಿರ ಶಿವಮೊಗ್ಗದಿಂದ ಕುಂದಾಪುರಕ್ಕೆ ಕಡೆಗೆ ಹೋಗುತಿದ್ದ ದುರ್ಗಾಂಬ ಬಸ್ಸು ಹಾಗೂ ಹೊಸನಗರದಿಂದ ರಿಪ್ಪನ್ ಪೇಟೆಗೆ ಹೊರಟ ಬೊಲೆರೋ ಪಿಕಪ್ ಗಾಡಿ ನಡುವೆ ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೊಲೆರೊ ಪಿಕಪ್ ವಾಹನ ಎರಡು ತುಂಡಾಗಿದೆ. ಬೊಲೆರೊ ಪಿಕಪ್ ನಲ್ಲಿದ್ದ ಮೂವರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು ಹೊಸನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತಿದ್ದು…