ಕ್ರೈಂ ಸುದ್ದಿ:
ರಿಪ್ಪನ್ಪೇಟೆ : ಪ್ರತಾಪನಿಂದ ಯುವಕನ ಮೇಲೆ ಹಲ್ಲೆ – ಪ್ರಕರಣ ದಾಖಲು|assault
ರಿಪ್ಪನ್ಪೇಟೆ : ಸಮೀಪದ ವಡಗೆರೆಯ ಪ್ರತಾಪ್ ಎಂಬಾತನು ಕ್ಷುಲ್ಲಕ ಕಾರಣಕ್ಕೆ ಮತ್ತೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಘಟನೆಯ ಹಿನ್ನಲೆ: ಶುಕ್ರವಾರ ತಡರಾತ್ರಿ ವಡಗೆರೆ ನಿವಾಸಿ ಭರತ್ ಸಿಂಗ್ ಎಂಬಾತನು ಮನೆಯಲ್ಲಿ ಊಟಮಾಡಿಕೊಂಡು ತನ್ನ ಸ್ನೇಹಿತ ಬಾಲಾಜಿರವರ ಶುಂಠಿ ಕಾಯಲು ಮನೆಯ ಮುಂಭಾಗ ಹೋಗುತ್ತಿದ್ದಾಗ ಭರತ್ ಬೈಕ್ ಹತ್ತಿರ ಪ್ರತಾಪ್ ಸಿಂಗ್ ನಿಂತಿದ್ದು, ಯಾರು ಎಂದು ಕೇಳಿದ್ದಕೆ ಪ್ರತಾಪ್ ಸಿಂಗ್ ಏಕಾಏಕಿ ಭರತ್ ಮೇಲೆ ಅವಾಚ್ಯವಾಗಿ ನಿಂದಿಸಿ ಕೈಗಳಿಂದ ಹೊಡೆದು ನಂತರ ಅಲೆ ಇದ್ದ ದೊಣ್ಣೆಯಿಂದ…
ರಿಪ್ಪನ್ಪೇಟೆ ಸಮೀಪದ ನೆವಟೂರಿನಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಸಾವು|train
ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಗ್ರಾಮದಲ್ಲಿ ನಡೆದಿದೆ. ನೆವಟೂರು ನಿವಾಸಿ ಸುರೇಶ್ ಆಚಾರಿ (43) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ನೆವಟೂರು ಬಳಿ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ಯಾವ ರೈಲು ಹಾಗೂ ಘಟನೆಗೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ. ಮೃತದೇಹವನ್ನು ಸಾಗರದ ಉಪವಿಭಾಗೀಯ ಆಸ್ಪತೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ನೆವಟೂರಿನ ಮೃತರ ಮನೆಗೆ ರವಾನಿಸಲಾಗಿದೆ. ರೈಲ್ವೆ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ…
ರಿಪ್ಪನ್ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ವಶ|illegal mining
ರಿಪ್ಪನ್ಪೇಟೆ : ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ರಿಪ್ಪನ್ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ರಾತ್ರಿ ಕೋಟೆತಾರಿಗದಲ್ಲಿ ಗಸ್ತು ತಿರುಗುತಿದ್ದಾಗ ಕೋಟೆತಾರಿಗ ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮ ಮರಳು ತುಂಬಿಕೊಂಡು ಹೊಸನಗರದಿಂದ ಕೋಟೆತಾರಿಗ ಮಾರ್ಗವಾಗಿ ಸಾಗಿಸುತ್ತಿದ್ದ KA 42 A 4115 ನೋಂದಣಿ ಸಂಖ್ಯೆಯ ಟಿಪ್ಪರ್ ವಾಹನ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಶಿವಾನಂದ್ ಕೆ, ಹೆಚ್ ಸಿ…
ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident
ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …
ಕೊಲೆ ಮಾಡಿ ಶವವನ್ನು ಬೈಕಿನಲ್ಲಿ ಕೂರಿಸಿಕೊಂಡು ಬಂದು ಸರ್ಕಲ್ ನಲ್ಲಿ ಮಲಗಿಸಿ ಹೋದ ಆರೋಪಿಗಳು – ಅನೈತಿಕ ಸಂಬಂಧದ ಶಂಕೆ|crime news
ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯ ಶವವನ್ನು ಕೂರಿಸಿಕೊಂಡು ಬಂದು ಊರಿನ ಸರ್ಕಲ್ ನಲ್ಲಿ ಮಲಗಿಸಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪ ತಾಲೂಕಿನ ಮುತ್ತಳ್ಳಿ ಗ್ರಾಮದಲ್ಲಿ ನಡೆದಿದೆ.ಇದು ಕೊಲೆ ಎಂದು ಕುಟುಂಬ ಆರೋಪಿಸಿದೆ. ಘಟನೆಯ ಹಿನ್ನಲೆ : ಶಿರಾಳಕೊಪ್ಪ ಪೊಲೀಸ್ ಠಾಣೆಯ ಮುತ್ತಳ್ಳಿ ಗ್ರಾಮದಲ್ಲಿ ಕೃಷಿ ಕಾರ್ಮಿಕನಾಗಿರುವ ಸೋಮಪ್ಪ(30) ಈತನಿಗೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಗಂಗಮ್ಮ ಎಂಬ ಮಹಿಳೆಯೊಂದಿಗೆ ಸ್ನೇಹವಿದ್ದು, ಆಕೆಯೇ ಕರೆಯಿಸಿ ಸೋಮಪ್ಪನನ್ನ ಕೊಲೆ ಮಾಡಿ ಕಳುಹಿಸಿರುವುದಾಗಿ ಮೃತನ ಕುಟುಂಬ ಆರೋಪಿಸಿದೆ. ಸೋಮಪ್ಪ ಈ ಹಿಂದೆ ಕೆಲಸದ…
ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident
ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…
ರಿಪ್ಪನ್ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident
ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…
Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು
ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ. ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…
ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale
ಹೊಸನಗರ : ನೀರು ತುಂಬಿದ ಬಕೆಟ್ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident
ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….