ಕ್ರೈಂ ಸುದ್ದಿ:
ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ..!!! ತೀರ್ಥಹಳ್ಳಿಯ ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ,57 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ
2019 ನೇ ಸಾಲಿನಲ್ಲಿ 26 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಬಗ್ಗೆ ನೊಂದ ಯುವತಿಯ ತಾಯಿ ನೀಡಿದ್ದರು. ಈ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸದ್ಯ ಪ್ರಕರಣದ ತೀರ್ಪು ಹೊರಬಿದ್ದಿದೆ. 11111 ಸಂಬಂಧ ತನಿಖಾಧಿಕಾರಿಗಳಾದ ಜಿ.ವಿ. ಗಣೇಶಪ್ಪ, ಪೊಲೀಸ್ ವೃತ್ತ ನಿರೀಕ್ಷಕರು, ತೀರ್ಥಹಳ್ಳಿ ವೃತ್ತ (ಹಾಲಿ ನಿವೃತ್ತಿ) ರವರು ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ 3ನೇ ಹೆಚ್ಚುವರಿ ಜಿಲ್ಲಾ…
ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault
ಶಿಕಾರಿಪುರ : ಪೊಲೀಸರು ಯುವಕನ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ. ಅರಶಿಣಗೆರೆ ಸಚ್ಚಿನ್ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…
ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak
ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…
ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide
ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…
ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…
ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…
ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault
ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…
OLX ನಲ್ಲಿ ಕಾರು ಖರೀದಿಸಲು ಹೋಗಿ ವಂಚನೆಗೊಳಗಾದ ಬ್ಯಾಂಕ್ ಉದ್ಯೋಗಿ
ಶಿವಮೊಗ್ಗದ ತುಂಗಾ ನಗರ ಪೊಲೀಸ್ ಸ್ಟೇಷನ್ ನಲ್ಲಿ ಪ್ರಕರಣವೊಂದು ದಾಖಲಾಗಿದ್ದು, ಬ್ಯಾಂಕ್ ಉದ್ಯೋಗಿಯೊಬ್ಬರು OLX ನಲ್ಲಿ ಕಾರೊಂದನ್ನ ಖರೀದಿಸಲು ಮುಂದಾಗಿ ಲಕ್ಷಾಂತರ ರೂ ಮೋಸವಾಗಿರುವ ಘಟನೆ ನಡೆದಿದೆ. ಕಾರಿನ ಜಾಹಿರಾತು ನೀಡಿದ್ದ ಮಾಲೀಕ ತನ್ನನ್ನ ಆಯುಶ್ ಎಂದು ಪರಿಚಯಸಿಕೊಂಡು ಅಡ್ವಾನ್ಸ್ ಮಾಡಲು ಹೇಳಿದ್ದ. ಅದರಂತೆ ಉದ್ಯೋಗಿ 6 ಸಾವಿರ ರೂಪಾಯಿ ಅಡ್ವಾನ್ಸ್ ಮಾಡಿದ್ದಾರೆ. ಆ ಬಳಿಕ ಆಯುಶ್ ಕಾರ್ ಡಿಲೇವರಿ ಇವತ್ತೆ ತೆಗೆದುಕೊಳ್ಳಿ ದೆಹಲಿಯ ಪಟೇಲ್ ನಗರದ ಮೆಟ್ರೋ ಪಿಲ್ಲರ್ ಬಳಿರುವ ಗ್ಯಾರೇಜಿನಲ್ಲಿ ಕಾರಿದೆ. ಬಾಕಿ ಹಣ…
ಮಿನಿ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಚಾಲಕ ಆಸ್ಪತ್ರೆಗೆ ದಾಖಲು|accident
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತಾಳಗುಪ್ಪದ ಸಮೀಪದ ಗೌರಿ ಕೆರೆ ಬಳಿ ಇವತ್ತು ಅಪಘಾತ ಸಂಭವಿಸಿದೆ. ಸಾಗರದಿಂದ ಸಿದ್ದಾಪುರದ ಕಡೆಗೆ ತೆರಳುತ್ತಿದ್ದ ಬೈಕ್ವೊಂದಕ್ಕೆ 407 ಲಾರಿ ಡಿಕ್ಕಿ ಹೊಡೆದಿದೆ. ಎದುರಿನಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆಯ ಬದಿಯಲ್ಲಿರುವ ಹೊಂಡಕ್ಕೆ ಉರುಳಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಆತನನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಹರಿಹರದಲ್ಲಿ ಔಷಧಿ ಸಾಗಣೆಯ ವಾಹನವೊಂದು ತೆರೆದ ಚರಂಡಿಗೆ ರಸ್ತೆಯಲ್ಲಿ ಉರುಳಿಬಿದ್ದ ಘಟನೆ ನಗರದ ಹಳೆ ಪಿ.ಬಿ.ರಸ್ತೆ ಬಳಿಯಲ್ಲಿ ಸಂಭವಿಸಿದೆ. …
ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood
ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….