ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More

ಮೆಗ್ಗಾನ್ ಆವರಣದಲ್ಲಿ ಮೃತ ಮಗುವನ್ನು ಎಳೆದು ತಂದ ನಾಯಿ|Shivamogga news

ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಆಗಾಗ ನಂಬಲಾಗದಂತಹ ಘಟನೆಗಳು ನಡೆಯುತ್ತಿರುತ್ತವೆ. ಬೆನ್ನಲ್ಲೆ ಮುಚ್ಚಿಹಾಕುವಂತಹ ಘಟನೆಗಳು ನಡೆಯುತ್ತಿರುತ್ತವೆ. ಸದ್ಯ ನಡೆದ ಘಟನೆಯೊಂದು ದೊಡ್ಡಪೇಟೆ ಪೊಲೀಸರು ಕೇಸ್​ ದಾಖಲಿಸಿದ್ದರಿಂದ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್​ 31 ರಂದು ಬೆಳಗಿನ ಜಾವ, ನಾಯಿಯೊಂದು ಎಳೆಮಗುವನ್ನು ಕಚ್ಚಿಕೊಂಡು ಹೆರಿಗೆ ವಾರ್ಡ್​ನ ಬಳಿಯಲ್ಲಿ ಓಡಾಡಿದೆ. ಇದನ್ನ ಕಂಡ ಸಾರ್ವಜನಿಕರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.  ಭದ್ರತಾ ಸಿಬ್ಬಂದಿಯು ನಾಯಿಯನ್ನು ಹೆದರಿಸಿ ಓಡಿಸಿ, ಮಗುವನ್ನ ಹೆರಿಗೆ ವಾರ್ಡ್​ಗೆ ತಂದು ವೈದ್ಯರ ಬಳಿ ಪರೀಕ್ಷಿಸಿದ್ದಾರೆ. ಆದರೆ ಮಗು…

Read More

ನವ ವಿವಾಹಿತ ಮಹಿಳೆ ನೇಣು ಬಿಗಿದುಕೊಂಡು ಸಾವು|crime news

ಶಿವಮೊಗ್ಗ : ಇಲ್ಲಿನ ಮಿಳಘಟ್ಟದ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಳಘಟ್ಟದ ಸಂಗೀತ (21) ಮೃತ ಮಹಿಳೆ. ಇವರು ಎರಡು ವರ್ಷಗಳ ಹಿಂದಷ್ಟೇ ಮಿಳಘಟ್ಟದ ನಿವಾಸಿ ಗುರೂಮೂರ್ತಿ ವಿವಾಹವಾಗಿದ್ದರು. ಮನೆಯಲ್ಲಿ ಒಬ್ಬರೇ ಇದ್ದಾಗ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲು ಮಾಡಿಕೊಂಡಿದ್ದು, ಕುಟುಂಬದವರ ವಿಚಾರಣೆ ಕೈಗೊಂಡಿದ್ದಾರೆ.  ಆಕೆಯ ಸಾವಿಗೆ ಸ್ಪಷ್ಟವಾದ…

Read More

ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬೈಕ್ – ಯುವಕ ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ :  ಕುಂಚೇನಹಳ್ಳಿ ಕೆರೆಯ ಬಳಿಯ ಹಳ್ಳಕ್ಕೆ ಬಿದ್ದ ಬೈಕ್ ಸವಾರನೊಬ್ಬ ಸಾವು ಕಂಡಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಸಂತೆಕಡೂರಿನ ನಿವಾಸಿಗಳಾದ ನಾಗೇಶ್ ಮತ್ತು ದರ್ಶನ್ ಎಂಬುವರು ಕುಂಚೇನಹಳ್ಳಿ ತಾಂಡದಲ್ಲಿ ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿಕೊಂಡು ವಾಪಾಸ್ ಶಿವಮೊಗ್ಗಕ್ಕೆ ಹಿಂದಿರುಗುವಾಗ ನಿಯಂತ್ರಣ ತಪ್ಪಿ ಬೈಕ್ ಹಳ್ಳಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ನಾಗೇಶ್ ಬೆನ್ನಿಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಸಹ ಸವಾರ ದರ್ಶನ್ ಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಾಗೇಶ್ ಗಾರೆ…

Read More

ಸಾಗರ : ಉಳ್ಳೂರು ಸಮೀಪದ ಕಾಡಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವು|ulluru

ಸಾಗರ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಕಾಡಿಗೆ ತೆರಳಿ ನೇಣು ಬಿಗಿದುಕೊಂಡ ಘಟನೆ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.  ಉತ್ತರ ಕನ್ನಡ ಮೂಲದ ಅಕ್ಷಯ್ (22) ಆತ್ಮಹತ್ಯೆ ಮಾಡಿಕೊಂಡವನು ಎಂದು ತಿಳಿದು ಬಂದಿದೆ. ಯುವಕ ನೇಣು ಬಿಗಿದುಕೊಂಡ ಜಾಗದಲ್ಲಿಯೇ ಬೈಕ್ ಅನಾಥವಾಗಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಮೂಲದ ಯುವಕ ಸಾಗರದ‌ ಉಳ್ಳೂರು ಬಳಿ ಬೈಕ್ ನಲ್ಲಿ ತೆರಳುವಾಗ ಜೋಗಿನಗದ್ದೆಯ ಬಳಿ ಕಾಡಿಗೆ ತೆರಳಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶವವಾಗಿ ಪತ್ತೆಯಾದ…

Read More

ಸ್ಕೂಟಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು|accident

ಕಾರು ಮತ್ತು ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ತರಿಕೆರೆ ತಾಲೂಕಿನ ಬೆಟ್ಟದಹಳ್ಳಿ ಗ್ರಾಮದ ಸಂದೀಪಿನಿ ಶಾಲೆಯ ಬಳಿ ನಡೆದಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಮೃತರನ್ನು ತರೀಕೆರೆ ಪಟ್ಟಣದ ಬಿಲಾಲ್ (26) ಮತ್ತು ಅಜೀಮ್ (24) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಯುವಕರು ಬುಧವಾರ ಬೆಳಗ್ಗೆ ಪಟ್ಟಣದಿಂದ ಸಂದೀಪಿನಿ ಶಾಲೆಯತ್ತ ಸ್ಕೂಟಿಯಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ…

Read More

ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೊಲೆ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿ : ತರಕಾರಿ ಮಾರ್ಕೆಟ್​ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.   ಮಾರ್ಚ್​ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್  ಬಳಿಯಲ್ಲಿ  ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್​ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

ಶಿವಮೊಗ್ಗ – ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ಬ್ಯಾಂಕ್ ಮ್ಯಾನೇಜರ್ ಸಾವು|Railway

ಶಿವಮೊಗ್ಗ: ಬೆಂಗಳೂರಿನಿಂದ ಹೆಂಡತಿ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದ ಬ್ಯಾಂಕ್ ಮ್ಯಾನೇಜರ್ ರೈಲ್ವೆ ಬೋಗಿಯಲ್ಲಿ ಶೌಚಾಲಯದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ದುರ್ದೈವಿ ಅಶೋಕ್ ಚೌಧರಿ ಅವರು ಶಿವಮೊಗ್ಗದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅಸ್ಸೋಂ ಮೂಲದವರಾಗಿದ್ದ ಅಶೋಕ್ ಚೌಧರಿ ಅವರು ಅಸ್ಸೋಂ ನಿಂದ ಬೆಂಗಳೂರಿಗೆ ಬಂದಿದ್ದ ತಮ್ಮ ಹೆಂಡತಿ ಹಾಗೂ ಮಕ್ಕಳನ್ನು ಕರೆ ತರಲು ನಿನ್ನೆ ಬೆಳಗ್ಗೆ ಶಿವಮೊಗ್ಗ-ಯಶವಂತಪುರದ ಇಂಟರಸಿಟಿ ರೈಲಿನ ಎಸಿ ಬೋಗಿಯಲ್ಲಿ ಪ್ರಯಾಣ ಬೆಳೆಸಿದ್ದಾರೆ‌. ರೈಲಿನಲ್ಲಿಯೇ ಶೌಚಾಲಯಕ್ಕೆ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಮಾನತ್ತಿನಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಹತ್ಯೆ – ರಕ್ತದ ಮಡುವಿನಲ್ಲಿ ಮೃತದೇಹ ಪತ್ತೆ|murder

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಪಟ್ಟಣದ ಸಮೀಪವಿರುವ ಮಾರ್ಕೆಟ್ ಬಳಿಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ನಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂದು ಗುರುತಿಸಲಾಗಿದೆ.   ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ ಎನ್ನಲಾಗಿದೆ.  ತೀರ್ಥಹಳ್ಳಿಯ ಮೀನು ಮಾರುಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮೃತನನ್ನು ಪೂರ್ಣೇಶ್ ಎಂದು ಗುರುತಿಸಲಾಗಿದೆ….

Read More