ತುಂಗಾ ಸೇತುವೆಯಿಂದ ಹೊಳೆಗೆ ಹಾರಲು‌ ಮುಂದಾದ ಯುವ ಜೋಡಿ – ಯುವತಿ ಬಚಾವ್ ,ಯುವಕ ಗಂಭೀರ|tunga

ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.  ಯುವ ಜೋಡಿಗಳು ಹಳೆಸೇತುವೆ ಬಳಿ ಬಂದು ಕೆಲ ಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್​ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ.  ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ ಮೇಲೆ ಬಿದ್ದಿದ್ದ….

Read More

ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso

ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ನೊಂದ ಬಾಲಕಿಯ ದೂರಿನ ವಿವರ : ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದರ್ಶ್ ನಿಧನ|accident

ಹೊಸನಗರ: ಸೊನಲೆ ಜಂಕ್ಷನ್ ಬಳಿ  ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಟ್ಟಣದ ಯುವಕ ಆದರ್ಶ್ ನಿಧನ. ಹೊಸನಗರದ ದಿವಂಗತ ಪ್ರಕಾಶ್ ಹಾಗು ಆಶಾ ದಂಪತಿಗಳ ಪುತ್ರ ಆದರ್ಶ್ (23)ಕಳೆದ ಭಾನುವಾರದಂದು ಹೊಸನಗರ- ತೀರ್ಥಹಳ್ಳಿ ರಸ್ತೆಯ ಸೊನಲೆ ಜಂಕ್ಷನ್ ಬಳಿ ಬೈಕ್ ಅಪಘಾತದಲ್ಲಿ ಮೆದುಳಿಗೆ ಗಂಭೀರ ಗಾಯಗೊಂಡಿದ್ದರು, ಇವರನ್ನು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಸೇರಿಸಲಾಗಿತ್ತು. ಚಿಕಿತ್ಸೆ ಗೆ ಸ್ಪಂದಿಸದ ಹಿನ್ನಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಮರಳಿ ಕರೆದುಕೊಂಡು ಬಂದು ಚಿಕಿತ್ಸೆ  ನೀಡಲಾಗುತ್ತಿತ್ತು, ವಿಧಿವಶಾತ್ ಇಂದು ಬೆಳಿಗ್ಗೆ ಶಿವಮೊಗ್ಗದ ಖಾಸಗಿ…

Read More

ಹಂದಿ ಅಣ್ಣಿ ಹತ್ಯೆ ಆರೋಪಿಗಳಿಬ್ಬರ ಮೇಲೆ ಮಾರಾಣಾಂತಿಕ ದಾಳಿ – ಓರ್ವ ಸಾವು,ಇನ್ನೊಬ್ಬ ಗಂಭೀರ|attack

ಶಿವಮೊಗ್ಗದಲ್ಲಿ ಮತ್ತೊಮ್ಮೆ ರೌಡಿಗಳ ಅಟ್ಟಹಾಸ ಸದ್ದು ಮಾಡಿದೆ.ಚೀಲೂರಿನ ಬೋವಿನ ಕೋವಿಯ ಬಳಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲೆ ದಾಳಿ ನಡೆದಿದ್ದು ಈ ಪೈಕಿ ಆಂಜನೇಯ ಎಂಬಾತ ಸಾವನ್ನಪ್ಪಿದ್ದು, ಮಧು ಎಂಬಾತನ ಸ್ಥಿತಿ ಗಂಭೀರವಾಗಿದೆ. ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಕೇಸಿನಲ್ಲಿ ಕೋರ್ಟ್​ಗೆ ಅಟೆಂಡ್ ಆಗಿ ವಾಪಸ್​ ಬರುತ್ತಿದ್ದರು. ಬೈಕ್​ ನಲ್ಲಿ ಬರುತ್ತಿದ್ದ ಇವರಿಬ್ಬರನ್ನ ಸ್ಕಾರ್ಪಿಯೋ ಗಾಡಿಯೊಂದು ಫಾಲೋ ಮಾಡಿ ಬೋವಿನ ಕೋವಿ ಬಳಿ ಮಧು ಮತ್ತು ಆಂಜನೇಯನ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ….

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ತಮ್ಮಡಿಕೊಪ್ಪ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಮಂಜಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ಸಿಬ್ಬಂದಿಗಳಾದ ಉಮೇಶ್ ,ಶಿವಕುಮಾರ್ ನಾಯ್ಕ್ ಮತ್ತು ಮಧುಸೂಧನ್ ಇದ್ದರು.

Read More

ಆನವಟ್ಟಿಯಲ್ಲಿ ಬೈಕ್ ಮತ್ತು ಟಿಟಿ ನಡುವೆ ಡಿಕ್ಕಿ – ಯುವಕ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಬೈಕ್‌ ಹಾಗೂ ಟಿಟಿ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಹಾನಗಲ್ ಕಡೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಟಿಟಿಗೆ ಎದುರಿನಿಂದ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಆನವಟ್ಟಿಯ ದುರ್ಗಮ್ಮ ಬೀದಿಯ ಕೀರ್ತಿರಾಜ್ (22) ಮೃತ ದುರ್ದೈವಿಯಾಗಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೀರ್ತಿರಾಜ್‌ ಅವರಿಗೆ ಆನವಟ್ಟಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್‌ಗೆ ಕರೆದೊಯ್ಯಲಾಗಿತ್ತು. ಅಷ್ಟರಲ್ಲಾಗಲೇ ಕೀರ್ತಿರಾಜ್ ಮೃತಪಟ್ಟಿದ್ದಾರೆ.  ಆನವಟ್ಟಿ ಪೊಲೀಸ್ ಠಾಣೆಯಲ್ಲಿ…

Read More

ಹೊಸನಗರ : ಬೈಕ್ ಅಪಘಾತದಲ್ಲಿ ಯುವಕನ ಸ್ಥಿತಿ ಗಂಭೀರ|accident

ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಗೆ ತಲುಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸೊನಲೆ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ. ಹೊಸನಗರ ಪಟ್ಟಣ ವ್ಯಾಪ್ತಿಯ ದಿ|| ಪ್ರಕಾಶ್ ಹಾಗೂ ಆಶಾ ದಂಪತಿಗಳ ಪುತ್ರ ಆದರ್ಶ (23) ಗಾಯಗೊಂಡಿರುವ ಬೈಕ್ ಸವಾರ. ತನ್ನ ಸ್ನೇಹಿತನನ್ನು ಹಿಂಭಾಗದಲ್ಲಿ ಕೂರಿಸಿಕೊಂಡು ಬೈಕಿನಲ್ಲಿ ಸವಾರಿ ಮಾಡಿಕೊಂಡು ಹೋಗುವಾಗ ಸೊನಲೆ – ತೀರ್ಥಹಳ್ಳಿ ರಸ್ತೆಯಲ್ಲಿ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿ ಹೊಡೆದಿದೆ. ಅಪಘಾತದ…

Read More

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಸಾವು – ಸಾವಿನ ಸುತ್ತ ಅನುಮಾನದ ಹುತ್ತ|crime news

ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಸುರೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಗರದ ರೈಲ್ವೆ ಫ್ಲೈ ಓವರ್ ಬಳಿಯ ಸಂಗೊಳ್ಳಿ ರಾಯಣ್ಣ ಬಳಿ ಸ್ನೇಹಿತರಿಬ್ಬರು ಪಾರ್ಟಿ ಮಾಡಿದ್ದರು.ಹಿಂದಿರುಗುವಾಗ ಸುರೇಶ್ ಗೆ ಅಪರಿಚಿತರು ಪಲ್ಸರ್ ಬೈಕ್ ನಲ್ಲಿ ಡಿಕ್ಕಿ  ಹೊಡೆದು ಪರಾರಿಯಾಗಿದ್ದಾರೆ.  ಈ ವೇಳೆ ಆತನಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗೆಂದು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.  ಇದೀಗ ಚಿಕಿತ್ಸೆ ಫಲಕಾರಿಯಾದೇ ಸುರೇಶ್ ಮೃತಪಟ್ಟಿದ್ದಾನೆ. ಆದರೆ ಮೃತ ಸುರೇಶ್ ಮೈಮೇಲೆ ಅಪಘಾತದ ಯಾವುದೇ ಗಾಯಗಳಿಲ್ಲ. ಈ…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More
Exit mobile version