ಆಗುಂಬೆ ಘಾಟಿಯಲ್ಲಿ ಖಾಸಗಿ ಬಸ್ ಬ್ರೇಕ್ ವಿಫಲ – ಮರಕ್ಕೆ ಡಿಕ್ಕಿ|ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|accident

ಆಗುಂಬೆ : ಪ್ರವಾಸಿಗರನ್ನು ಕರೆದೊಯ್ಯುತಿದ್ದ ಖಾಸಗಿ ಬಸ್ ಆಗುಂಬೆ ಘಾಟಿಯ 12 ನೇ ತಿರುವಿನಲ್ಲಿ ಬ್ರೇಕ್ ವಿಫಲವಾಗಿ‌ಮರಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಘಾಟಿ ರಸ್ತೆಯ 11ನೇ ತಿರುವಿನಲ್ಲಿ ಖಾಸಗಿ ಮಿನಿ ಬಸ್ ಬ್ರೇಕ್ ವೈಫಲ್ಯಗೊಂಡಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಸಂಭವನೀಯ ದೊಡ್ಡ ದುರಂತ ತಪ್ಪಿದೆ. 12ನೇ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ ನಲ್ಲಿ ಮಹಿಳೆಯರು ಮಕ್ಕಳು ಸೇರಿ 20 ಜನರಿದ್ದು ಹಲವರಿಗೆ ಗಾಯಗಳಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಬೈಕ್ ಮೇಲೆ ಬಿದ್ದ ಬೃಹತ್ ಮರ – ಓರ್ವನ ಸ್ಥಿತಿ ಗಂಭೀರ,ಮೆಗ್ಗಾನ್ ಗೆ ದಾಖಲು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಮೂಗೂಡ್ತಿ – ತಳಲೆ ಮಾರ್ಗದಲ್ಲಿ ಬೈಕ್ ನಲ್ಲಿ ತೆರಳುತಿದ್ದ ಸುಳಗೋಡು ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರಿಗೆ ಗಂಭೀರ ಗಾಯಗಳಾಗಿದೆ.ಬೈಕ್ ಸವಾರ ಕುಮಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಳಲೆ ಮಾರ್ಗದ ಇಳಿಜಾರಿನಲ್ಲಿ ಚಲಿಸುತಿದ್ದ ಬೈಕ್ ಮೇಲೆ ಬೃಹತ್ ಮರ ಬಿದ್ದ ಹಿನ್ನಲೆಯಲ್ಲಿ ಬೈಕ್ ನಲ್ಲಿ ತೆರಳುತಿದ್ದ ಇಬ್ಬರು ಸಿಲುಕಿ ಕೊಂಡಿದ್ದಾರೆ ತಕ್ಷಣ ಸ್ಥಳೀಯರು ಹಾಗೂ…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ಹೊಸನಗರ : ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷದ ಮಗು ಸಾವು|sonale

ಹೊಸನಗರ : ನೀರು ತುಂಬಿದ ಬಕೆಟ್‌ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೋನಲೆ ಗ್ರಾ.ಪಂ ವ್ಯಾಪ್ತಿಯ ಹೊಸಕೊಪ್ಪ ಎಂಬಲ್ಲಿ ನಡೆದಿದೆ. ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಪೋಷಕರು ಬಕೆಟ್‌ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ.  ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು.ತಲೆಕೆಳಗಾಗಿ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವನ ಸ್ಥಿತಿ ಗಂಭೀರ : ಸಮಯಪ್ರಜ್ಞೆ ಮೆರೆದ ಎಸ್ಕಾರ್ಟ್ ಸಿಬ್ಬಂದಿ|Accident

ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.  ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನ ಎಸ್ಕಾರ್ಟ್ ಪೊಲೀಸರಿಬ್ಬರು ಮೆಗ್ಗಾನ್ ಗೆ ತಮ್ಮ ವಾಹನದಲ್ಲಿಯೇ ಕೂರಿಸಿಕೊಂಡು ಬಂದು ದಾಖಲಿಸಿ ಕರ್ತವ್ಯ ಮತ್ತು ಮಾನವೀಯತೆ ಮೆರೆದಿದ್ದಾರೆ. ಅಬ್ಬಲಗೆರೆಯ ದೇವಸ್ಥಾನದ ಎದುರು ಎರಡು ಬೈಕ್ ನಡುವೆ ಡಿಕ್ಕಿಯಾಗಿದ್ದು ಡಿಕ್ಕಿಯಲ್ಲಿ ಗಾಯಗೊಂಡವರನ್ನ ಜಗದೀಶ್ ನಾಯ್ಕ್ ಮತ್ತು ಮಂಜು ಎಂದು ಗುರುತಿಸಲಾಗಿದೆ. ಜಗದೀಶ್ ನಾಯ್ಕ್ ರನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ನಿಂದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ….

Read More

ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು|airport

ಶಿವಮೊಗ್ಗ : ಇಂದು ಅದ್ಧೂರಿಯಾಗಿ ನಡೆದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಸೊರಬ ತಾಲೂಕಿನ ಚಿಮ್ಮನೂರು ಗ್ರಾಮದ ಮಲ್ಲಿಕಾರ್ಜುನಪ್ಪ (50) ಎಂಬವರೇ ಮೃತಪಟ್ಟವರು. ಸೊರಬದ ಕಡೆಯಿಂದ ಭಾರಿ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಇತರರು ಕಾರ್ಯಕ್ರಮಕ್ಕೆ ಬಂದಿದ್ದರು. ಮಲ್ಲಿಕಾರ್ಜುನ ಅವರು ಬೆಳಗ್ಗೆ ಗ್ರಾಮಸ್ಥರೊಂದಿಗೆ ಬಸ್ಸಿನಲ್ಲಿ ಬಂದಿದ್ದರು. ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ಸೋಗಾನೆ ಗ್ರಾಮದ ಕೆಇಬಿ ಕಚೇರಿ ಹತ್ತಿರ ಮಲ್ಲಿಕಾರ್ಜುನ ಅವರು ಅಸ್ವಸ್ಥರಾದರು. ಬಾಯಾರಿಕೆಯಿಂದ ನೀರು ಕೇಳಿದ್ದ ಮಲ್ಲಿಕಾರ್ಜುನ ಅವರು…

Read More

ರಿಪ್ಪನ್‌ಪೇಟೆ : ದೇವಸ್ಥಾನದ ಬೀಗ ಮುರಿದು ಸಾವಿರಾರು ರೂ ಕಳ್ಳತನ|theft

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವುಣೆ ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಕಳ್ಳರು ರಾತ್ರಿಯ ವೇಳೆಯಲ್ಲಿ ದೇವಸ್ಥಾನದ ಮುಂಭಾಗಿಲಿನ ಬೀಗ ಮುರಿದು ದೇವಸ್ಥಾನದ ಒಳಭಾಗಕ್ಕೆ ಪ್ರವೇಶಿಸಿ ದೇವರ ಮುಂಭಾಗದಲಿದ್ದ ಒಂದು ಕಬ್ಬಿಣದ ಮತ್ತು ಸ್ಟೀಲ್ ನ ಕಾಣಿಕೆ ಡಬ್ಬಿಗಳನ್ನು ದೇವಸ್ಥಾನದ ಹೊರಭಾಗ ಎತ್ತಿಕೊಂಡು ಹೋಗಿ ಅಲ್ಲಿ ಅವುಗಳ ಬೀಗವನ್ನು ಮುರಿದು ಅದರ ಒಳಭಾಗದಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಕಾಣಿಕೆ ಡಬ್ಬಿಗಳು…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More
Exit mobile version