Headlines

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು

ಶಿಕಾರಿಪುರ ಆಸ್ಪತ್ರೆಯಲ್ಲಿ ಚೂರಿ ಇರಿತ – ಮೂವರಿಗೆ ಗಾಯ, ಪ್ರಕರಣ ದಾಖಲು ಶಿವಮೊಗ್ಗ: ಶಿಕಾರಿಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮೂವರ ಮೇಲೆ ನಡೆದ ಚೂರಿ ದಾಳಿಯ ಪ್ರಕರಣದಲ್ಲಿ ಶಿಕಾರಿಪುರ ಟೌನ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಮುನ್ನಡೆದ ಜಗಳ ಸಂಬಂಧ ಇಬ್ಬರು ಪಕ್ಷಗಳು ಪರಸ್ಪರ ಹೊಡೆದಾಡಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಇದರ ಮಧ್ಯೆ ಊರಿನ ಕೆಲವರು ಸಮಸ್ಯೆ ಬಗೆಹರಿಸಲು ಆಸ್ಪತ್ರೆಗೂ ಆಗಮಿಸಿದ್ದರು. ಆದರೆ ಪರಿಸ್ಥಿತಿ ಶಾಂತಗೊಳ್ಳುವ ಬದಲು ಅಹಿತಕರ ತಿರುವು ಪಡೆದುಕೊಂಡಿತು. ಅದೇ…

Read More

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ ಮತ್ತು ಬೈಕ್ ಸಹ ಸವಾರ ಸಾವು

ಫುಟ್ ಪಾತ್ ಗೆ ನುಗ್ಗಿದ ಬೈಕ್: ಮಹಿಳೆ, ಸಹ ಸವಾರ ಸಾವು ಶಿವಮೊಗ್ಗ:ಸಾಗರ ರಸ್ತೆಯ ಮಲ್ನಾಡು ಗೇಟ್ ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ   ಘಟನೆ  ಇಂದು ನಸುಕಿನಲ್ಲಿ ಸಂಭವಿಸಿದೆ. ಫುಟ್ ಪಾತ್ ಮೇಲೆ ಪ್ಲಾಸ್ಟಿಕ್ ವಸ್ತುಗಳನ್ನು ವ್ಯಾಪಾರ ಮಾಡಿಕೊಂಡಿದ್ದ ದುರ್ಗಾ ಪ್ರಸಾದ್ ಎಂಬುವರು ಟೆಂಟ್ ಹಾಕಿಕೊಂಡು ನಾಲ್ಕು ವರ್ಷದಿಂದ ಕುಟುಂಬದ ಜೊಯೆ  ಅಲ್ಲೇ ವಾಸವಾಗಿದ್ದರು. ಆಯನೂರು ಗೇಟಿ್…

Read More

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು

ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ – ಪ್ರಕರಣ ದಾಖಲು ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೂವರು ಗ್ರಾಮಸ್ಥರ ವಿರುದ್ದ ಪ್ರಕರಣ ದಾಖಲಾದ ಘಟನೆ ನಡೆದಿದೆ. ತನ್ವೀರ್ ಹೊರಕೆರೆ (38) ಹಲ್ಲೆಗೊಳಗಾದ ಬಸ್ ಕಂಡಕ್ಟರ್ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಶಿಕಾರಿಪುರ – ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್ ನಲ್ಲಿ ಕಂಡಕ್ಟರ್ ಆಗಿದ್ದಾರೆ. ಇಬ್ಬರು…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು

ನೀರಿನ ಹೊಂಡಕ್ಕೆ ಬಿದ್ದು 14 ವರ್ಷದ ಬಾಲಕನ ಅನುಮಾನಾಸ್ಪದ ಸಾವು – ಇದು ಆಕಸ್ಮಿಕವಲ್ಲ, ಕೊಲೆ ಎಂದು ಪೋಷಕರ ಕಣ್ಣೀರಿನ ಅಳಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ದುರಂತದ ಕರಿ ನೆರಳನ್ನು ಬೀರಿದೆ. ಪೊಲೀಸರು ಇದನ್ನು “ಆಕಸ್ಮಿಕ ಸಾವು”…

Read More

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…

Read More

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ

SHIVAMOGGA | ವೈದ್ಯೆಯ ವಾಟ್ಸಪ್ ಹ್ಯಾಕ್ ಮಾಡಿ ಹಣ ವಂಚನೆ ಶಿವಮೊಗ್ಗ: ವೈದ್ಯೆಯೊಬ್ಬರ ವಾಟ್ಸಪ್ ಹ್ಯಾಕ್  ಮಾಡಿ ವೈದ್ಯರೊಬ್ಬರ ಮೊಬೈಲ್‌ಗೆ ಮೆಸೇಜ್ ಕಳುಹಿಸಿ ೯೫,೦೦೦ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಸಿ.ಇ.ಎನ್. ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಶಿವಮೊಗ್ಗದ ವೈದ್ಯೆಯೊಬ್ಬರ ವಾಟ್ಸಪ್ ನಂಬರ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ಹಣದ ತುರ್ತು ಅಗತ್ಯವಿದೆ ಎಂದು ಸಹೋದ್ಯೋಗಿಗೆ ಮೆಸೇಜ್ ಕಳುಹಿಸಿದ್ದರು. ಅದನ್ನು ನಂಬಿದ ಸಹೋದ್ಯೋಗಿ ಆ ವಾಟ್ಸಪ್ ಮೆಸೇಜ್‌ನಲ್ಲಿ ಕಳುಹಿಸಲಾಗಿದ್ದ ಮತ್ತೊಂದು ಮೊಬೈಲ್ ನಂಬರ್‌ಗೆ ಫೋನ್ ಪೇ ಮೂಲಕ ಎರಡು…

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More