ಕ್ರೈಂ ಸುದ್ದಿ:
HOSANAGARA | ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ನಗದು ಚಿನ್ನಾಭರಣ ವಶಕ್ಕೆ!
ನಗರದಲ್ಲಿ ಮನೆ ಕಳ್ಳತನ ಪ್ರಕರಣ – 48 ಗಂಟೆಗಳಲ್ಲಿ ಆರೋಪಿಗಳ ಪತ್ತೆ, 4 ಲಕ್ಷ ಮೌಲ್ಯದ ಚಿನ್ನ ವಶ! ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಬಳೆ ಹಾಗೂ ಮಾಸ್ತಿಕಟ್ಟೆ ಪ್ರದೇಶದಲ್ಲಿ ಆಗಸ್ಟ್ 21ರಂದು ಸಂಭವಿಸಿದ ಕಳ್ಳತನ ಪ್ರಕರಣವನ್ನು ಪಿಎಸೈ ಶಿವಾನಂದ ಕೆ ನೇತ್ರತ್ವದ ಪೊಲೀಸರು ಕೇವಲ 48 ಗಂಟೆಗಳಲ್ಲಿ ಪ್ರಕರಣ ಭೇದಿಸಿ, ಇಬ್ಬರು ಅಂತರ ಜಿಲ್ಲೆ ಆರೋಪಿಗಳನ್ನು ದಸ್ತಗಿರಿ ಮಾಡಿದೆ. ನಗರ ಹೋಬಳಿಯ ಕಬಳೆ ಗ್ರಾಮದ ರಿಚರ್ಡ್ ಡಿ ಸೋಜಾ ಹಾಗೂ ಮಾಸ್ತಿಕಟ್ಟೆ ಗ್ರಾಮದ…
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ
ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಶಿಕ್ಷಕಿ – ಮರಣದಂಡನೆ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಪತಿಯನ್ನು ಕೊಲೆಗೈದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ, ಮತ್ತೋರ್ವನಿಗೆ ಏಳು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿರುವ ಘಟನೆ ಭದ್ರಾವತಿ ನಗರದಲ್ಲಿ ನಡೆದಿದೆ. ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಶನಿವಾರ ಈ ತೀರ್ಪು ಪ್ರಕಟಿಸಿದರು. ಅಂತರಗಂಗೆಯ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಲಕ್ಷ್ಮೀ, ಗುಲ್ಬರ್ಗದಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕ ಇಮ್ತಿಯಾಜ್…
HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು ಸಾವು
HOSANAGARA | ಔಷಧಿ ಸಿಂಪಡಿಸುವಾಗ ಅಡಿಕೆ ಮರದಿಂದ ಬಿದ್ದು ಸಾವು ಹೊಸನಗರ: ತಾಲೂಕಿನ ಕಿಳಂದೂರು ಗ್ರಾಮದ ನೂಲಿ- ಗೇರಿಯ ಅಡಿಕೆ ತೋಟದಲ್ಲಿ ಔಷಧ ಸಿಂಪಡಣೆ ವೇಳೆ ಕೃಷಿ ಕಾರ್ಮಿಕ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತಿಮನೆ ನಿವಾಸಿ ಸಾದಿಕ್ (42)ಮೃತಪಟ್ಟ ಕಾರ್ಮಿಕ. ಅ. 18ರಂದು ಸಾದಿಕ್ ಮತ್ತು ಮಂಜುನಾಥ ಎಂಬುವರು ನೂಲಿಗೇರಿ ನಿವಾಸಿ ಅಬ್ಬಾಸ್ ಅವರ ಅಡಿಕೆ ತೋಟದಲ್ಲಿ ಔಷಧಿ ಸಿಂಪಡಿಸುತ್ತಿದ್ದರು. ಆಗ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು….
HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ
HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾವಿಗೆ ಹಾರಿ ಮಾಜಿ ಯೋಧ ಆತ್ಮ*ಹತ್ಯೆ
ಬಾವಿಗೆ ಹಾರಿ ಮಾಜಿ ಯೋಧ ಆತ್ಮಹತ್ಯೆ ಕುಂಸಿ: ಮಾಜಿ ಸೈನಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಂಸಿ ಸಮೀಪದ ಚಿನ್ಮನೆ ಗ್ರಾಮದ ಮಾಜಿ ಯೋಧ ಡಿ.ಆರ್.ಸುರೇಶಪ್ಪ ದೊಡ್ಮನೆ (೬೬) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ಬೆಳಗಿನ ಜಾವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಊರಿನಲ್ಲಿ ವ್ಯವಸಾಯದ ಜೊತೆಗೆ ಅಂಗಡಿ ನಡೆಸುತ್ತಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ತನ್ನ ಮನೆ ಪಕ್ಕದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಕುಂಸಿ ಠಾಣೆಯಲ್ಲಿ ಪ್ರಕರಣ…
ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು
ANANDAPURA | ಸಾಲಬಾಧೆಗೆ ಬೇಸತ್ತು ಯುವಕ ನೇ*ಣಿಗೆ ಶರಣು ಸಾಲಬಾಧೆ ಮತ್ತು ಬೆಳೆ ನಷ್ಟದಿಂದ ಮನನೊಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಜುನಾಥ್ ( 36 ) ಎಂದು ಗುರುತಿಸಲಾಗಿದೆ. ಮಂಜುನಾಥ್ ಬ್ಯಾಂಕ್ ಸೇರಿದಂತೆ ವಿವಿಧ ಮೂಲಗಳಿಂದ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದೇ ಸಮಯದಲ್ಲಿ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅವರ ಮೆಕ್ಕೆಜೋಳದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು. ಕೃಷಿ ನಷ್ಟದಿಂದ ಆರ್ಥಿಕ…
ತೀರ್ಥಹಳ್ಳಿಯಲ್ಲಿ ಲಾರಿ ಮಾಲೀಕ ನೇಣು ಬಿಗಿದುಕೊಂಡು ಸಾವು!
ತೀರ್ಥಹಳ್ಳಿಯಲ್ಲಿ ಮತ್ತೊಬ್ಬ ಲಾರಿ ಮಾಲೀಕ ನೇ*ಣಿಗೆ ಶರಣು! ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಗೆ ಶರಣಾಗಿದ್ದಾರೆ. ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ. ಇತ್ತೀಚಿಗೆ ಮೇಲಿನಕುರುವಳ್ಳಿಯಲ್ಲೂ ಇದೆ ರೀತಿ ಪ್ರಕರಣ ನಡೆದಿತ್ತು. ಒಂದೇ ತಿಂಗಳಲ್ಲಿ ಇದು ಎರಡನೇ ಪ್ರಕರಣ…
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ
ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳ ದುರ್ಮರಣ ಶಿವಮೊಗ್ಗ: ನಗರದ ಸರ್ಕ್ಯೂಟ್ ಹೌಸ್ ಸರ್ಕಲ್ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಹಾಗೂ ನಂದಿನಿ ಹಾಲಿನ ವಾಹನ ಪರಸ್ಪರ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ನಡೆದಿದೆ. ಮೃತರನ್ನು ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಾದ ಆದಿತ್ಯ ಮತ್ತು ಸಂದೀಪ್ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಇಬ್ಬರೂ ತೀವ್ರವಾಗಿ ರಸ್ತೆ ಮೇಲೆ ಬಿದ್ದು…
RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ
RIPPONPETE | ಬಾವಿಗೆ ಬಿದ್ದು ಯುವಕ ಸಾವು – ಕಾಲು ಜಾರಿ ಬಿದ್ದಿರುವ ಶಂಕೆ ರಿಪ್ಪನ್ ಪೇಟೆ : ಇಲ್ಲಿನ ನೆವಟೂರು ಗ್ರಾಮದ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿದ್ದು ಆತ್ಮಹತ್ಯೆಯೋ ಅಥವಾ ಕಾಲುಜಾರಿ ಬಿದ್ದಿದ್ದಾನೋ ಎಂಬ ಶಂಕೆ ವ್ಯಕ್ತವಾಗಿದೆ. ನೆವಟೂರು ಗ್ರಾಮದ ಆನಂದ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಬೆಳಿಗ್ಗೆ ಮೃತ ಯುವಕನ ಮನೆ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ನೆವಟೂರು ಗ್ರಾಮದ ಭರ್ಮಪ್ಪ ಎಂಬುವವರ ಪುತ್ರನಾದ ಆನಂದ್ ಇಂದು…
ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಹಣಗೆರೆ ಬಳಿ ಭಯಾನಕ ರಸ್ತೆ ಅಪಘಾತ – ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು ಶಿವಮೊಗ್ಗ, ಹಣಗೆರೆಕಟ್ಟೆ ರಸ್ತೆಯ ಕುಣಜೆ ಗ್ರಾಮದ ಬಳಿ ನಿನ್ನೆ ಭಯಾನಕ ರಸ್ತೆ ಅಪಘಾತ ಸಂಭವಿಸಿದೆ. ಆದರೆ ಅದೃಷ್ಟವಶಾತ್ ಈ ದುರ್ಘಟನೆಯಲ್ಲಿ ಯಾರಿಗೂ ಪ್ರಾಣಾಪಾಯವಾಗದೇ ಪಾರಾಗಿದ್ದಾರೆ. ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಒಂದಕ್ಕೆ ಎದುರಿನಿಂದ ಬಂದ ಸ್ವಿಫ್ಟ್ ಕಾರೊಂದು ಹಿಂಬದಿ ಭಾಗದಲ್ಲಿ ಡಿಕ್ಕಿ ಹೊಡೆದ ಪರಿಣಾಮ, ಬಸ್ನ ಹಿಂಬದಿ ನಾಲ್ಕು ಟಯರ್ಗಳು ಸಂಪೂರ್ಣವಾಗಿ ಕಿತ್ತು ಹೋಗಿವೆ. ಕಾರಿನ ಮುಂಭಾಗ ತೀವ್ರವಾಗಿ ಜಕಂಗೊಂಡಿದ್ದರೂ,…